Homeಕರ್ನಾಟಕಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಅಂತ್ಯಕ್ರಿಯೆ ಚಿಕ್ಕಮಗಳೂರಿನ ಅವರ ಹುಟ್ಟೂರಲ್ಲಿ ನಡೆಯಲಿದೆ

- Advertisement -
- Advertisement -

ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (38) ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಚಿಕ್ಕಮಗಳೂರಿನ ಪಂಚನಹಳ್ಳಿಗೆ ತರಲಾಗಿದೆ. ಪ್ರತಿಭಾವಂತ ನಟನ ಅಂತಿಮ ದರ್ಶನಕ್ಕೆ ಗ್ರಾಮಸ್ಥರು ಸೇರಿದಂತೆ ನೆರೆಯ ಊರಿನವರು ಸೇರಿದ್ದಾರೆ. ಅವರ ಸ್ನೇಹಿತ ರಘು ಎಂಬವರ ತೋಟದಲ್ಲಿ ವೀರಶೈವ ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಕಳೆದ ಶನಿವಾರ ರಾತ್ರಿ ಬೈಕ್ ಅಪಘಾತಕ್ಕೀಡಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆ ಸೇರಿದ್ದ ವಿಜಯ್ ಅವರು ಮಂಗಳವಾರ ಮುಂಜಾನೆ ಮೃತಪಟ್ಟರು ಎಂದು ಆಸ್ಪತ್ರೆಯು ಅಧೀಕೃತವಾಗಿ ಘೋಷಿಸಿತ್ತು. ಅಂತಿಮ ದರ್ಶನಕ್ಕಾಗಿ ಇಂದು ಬೆಳಿಗ್ಗೆ ಮೃತ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿತ್ತು. ಅಲ್ಲಿ ಸಿನಿಮಾ ನಟರು, ರಂಗಭೂಮಿ ಕಲಾವಿದರು, ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಅಂತಿಮ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ: Sanchari Vijay | ಬೈಕ್‌ ಅಪಘಾತಕ್ಕೀಡಾಗಿದ್ದ ನಟ ಸಂಚಾರಿ ವಿಜಯ್‌ ನಿಧನ

ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಚೆನ್ನೈನಲ್ಲಿರುವ ಅಮೆರಿಕಾದ ರಾಯಭಾರ ಕಚೇರಿ ಕನ್ನಡದಲ್ಲೇ ಸಂತಾಪ ಸೂಚಿಸಿದೆ. ಅದು ತನ್ನ ಟ್ವೀಟ್‌ನಲ್ಲಿ, “ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಸಂಚಾರಿ ವಿಜಯ್‌ ಭಾಗಿಯಾಗಿದ್ದರು. #RIP” ಎಂದು ಬರೆದಿದೆ.

ಚಿಕ್ಕಮಗಳೂರು ಜಿಲ್ಲೆಯ, ಕಡೂರು ತಾಲ್ಲೂಕಿನ ರಂಗಾಪುರ ಗ್ರಾಮದ ವಿಜಯ್‌ ಅವರು ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಂಗಭೂಮಿ ಕಲಾವಿದರಾಗಿ ಸಿನೆಮಾ ಕ್ಷೇತ್ರಕ್ಕೆ ಕಾಲಿಟ್ಟ ಇವರು, ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇವರು ನಟಿಸಿದ್ದ ನಾನು ಅವನಲ್ಲ…ಅವಳು ಕನ್ನಡ ಸಿನಿಮಾ ಚಿತ್ರಕ್ಕೆ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ವಿಜಯ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು. ಈ ಚಿತ್ರದಲ್ಲಿ ಅವರು ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿದ್ದಾರೆ.

ನಾತಿಚರಾಮಿ, ದಾಸವಾಳ, ಪಾದರಸ, ವರ್ತಮಾನ, ಒಗ್ಗರಣೆ, ರಂಗಪ್ಪ ಹೋಗ್ಬಿಟ್ನ, ಉಲವಚಾರು ಬಿರಿಯಾನಿ ಮುಂತಾದ ಸಿನಿಮಾಗಳಲ್ಲಿ ಸಂಚಾರಿ ವಿಜಯ್ ನಟಿಸಿದ್ದಾರೆ.

ಇದನ್ನೂ ಓದಿ: ನಟ ಸಂಚಾರಿ ವಿಜಯ್ ನಿಧನ: ಗಣ್ಯರು, ಅಭಿಮಾನಿಗಳಿಂದ ಅಂತಿಮ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...