Homeಕರ್ನಾಟಕಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಅಂತ್ಯಕ್ರಿಯೆ ಚಿಕ್ಕಮಗಳೂರಿನ ಅವರ ಹುಟ್ಟೂರಲ್ಲಿ ನಡೆಯಲಿದೆ

- Advertisement -
- Advertisement -

ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (38) ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಚಿಕ್ಕಮಗಳೂರಿನ ಪಂಚನಹಳ್ಳಿಗೆ ತರಲಾಗಿದೆ. ಪ್ರತಿಭಾವಂತ ನಟನ ಅಂತಿಮ ದರ್ಶನಕ್ಕೆ ಗ್ರಾಮಸ್ಥರು ಸೇರಿದಂತೆ ನೆರೆಯ ಊರಿನವರು ಸೇರಿದ್ದಾರೆ. ಅವರ ಸ್ನೇಹಿತ ರಘು ಎಂಬವರ ತೋಟದಲ್ಲಿ ವೀರಶೈವ ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಕಳೆದ ಶನಿವಾರ ರಾತ್ರಿ ಬೈಕ್ ಅಪಘಾತಕ್ಕೀಡಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆ ಸೇರಿದ್ದ ವಿಜಯ್ ಅವರು ಮಂಗಳವಾರ ಮುಂಜಾನೆ ಮೃತಪಟ್ಟರು ಎಂದು ಆಸ್ಪತ್ರೆಯು ಅಧೀಕೃತವಾಗಿ ಘೋಷಿಸಿತ್ತು. ಅಂತಿಮ ದರ್ಶನಕ್ಕಾಗಿ ಇಂದು ಬೆಳಿಗ್ಗೆ ಮೃತ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿತ್ತು. ಅಲ್ಲಿ ಸಿನಿಮಾ ನಟರು, ರಂಗಭೂಮಿ ಕಲಾವಿದರು, ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಅಂತಿಮ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ: Sanchari Vijay | ಬೈಕ್‌ ಅಪಘಾತಕ್ಕೀಡಾಗಿದ್ದ ನಟ ಸಂಚಾರಿ ವಿಜಯ್‌ ನಿಧನ

ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಚೆನ್ನೈನಲ್ಲಿರುವ ಅಮೆರಿಕಾದ ರಾಯಭಾರ ಕಚೇರಿ ಕನ್ನಡದಲ್ಲೇ ಸಂತಾಪ ಸೂಚಿಸಿದೆ. ಅದು ತನ್ನ ಟ್ವೀಟ್‌ನಲ್ಲಿ, “ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಸಂಚಾರಿ ವಿಜಯ್‌ ಭಾಗಿಯಾಗಿದ್ದರು. #RIP” ಎಂದು ಬರೆದಿದೆ.

ಚಿಕ್ಕಮಗಳೂರು ಜಿಲ್ಲೆಯ, ಕಡೂರು ತಾಲ್ಲೂಕಿನ ರಂಗಾಪುರ ಗ್ರಾಮದ ವಿಜಯ್‌ ಅವರು ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಂಗಭೂಮಿ ಕಲಾವಿದರಾಗಿ ಸಿನೆಮಾ ಕ್ಷೇತ್ರಕ್ಕೆ ಕಾಲಿಟ್ಟ ಇವರು, ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇವರು ನಟಿಸಿದ್ದ ನಾನು ಅವನಲ್ಲ…ಅವಳು ಕನ್ನಡ ಸಿನಿಮಾ ಚಿತ್ರಕ್ಕೆ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ವಿಜಯ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು. ಈ ಚಿತ್ರದಲ್ಲಿ ಅವರು ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿದ್ದಾರೆ.

ನಾತಿಚರಾಮಿ, ದಾಸವಾಳ, ಪಾದರಸ, ವರ್ತಮಾನ, ಒಗ್ಗರಣೆ, ರಂಗಪ್ಪ ಹೋಗ್ಬಿಟ್ನ, ಉಲವಚಾರು ಬಿರಿಯಾನಿ ಮುಂತಾದ ಸಿನಿಮಾಗಳಲ್ಲಿ ಸಂಚಾರಿ ವಿಜಯ್ ನಟಿಸಿದ್ದಾರೆ.

ಇದನ್ನೂ ಓದಿ: ನಟ ಸಂಚಾರಿ ವಿಜಯ್ ನಿಧನ: ಗಣ್ಯರು, ಅಭಿಮಾನಿಗಳಿಂದ ಅಂತಿಮ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...