Homeಮುಖಪುಟಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ...

ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

- Advertisement -
- Advertisement -

ಅದಾನಿ ಸಮೂಹದೊಂದಿಗೆ ಸಂಪರ್ಕ ಹೊಂದಿರುವ ನಾಲ್ಕು ಕಂಪನಿಗಳು ಏಪ್ರಿಲ್ 2019 ರಿಂದ ನವೆಂಬರ್ 2023ರವರೆಗೆ ಒಟ್ಟು 55.4 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಇವುಗಳಲ್ಲಿ ಎಬಿಸಿ ಇಂಡಿಯಾ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗಸಂಸ್ಥೆಗಳು ಸೇರಿವೆ.

ರೂ. 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಬಿಕೆ ಗೋಯೆಂಕಾ ಸ್ಥಾಪಿಸಿದ ಮುಂಬೈ ಮೂಲದ ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗ ಸಂಸ್ಥೆಗಳು ಖರೀದಿಸಿವೆ. ಚುನಾವಣಾ ಆಯೋಗವು ನಿನ್ನೆ (ಮಾ.21) ಅಪ್ಲೋಡ್ ಮಾಡಿರುವ ಮಾಹಿತಿಯ ಪ್ರಕಾರ, ಈ ಬಾಂಡ್‌ಗಳಲ್ಲಿ 42 ಕೋಟಿ ರೂಪಾಯಿಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಬಾಂಡ್‌ಗಳನ್ನು ಖರೀದಿಸಿದ ಮೊದಲ ಅಂಗಸಂಸ್ಥೆ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್, ಏಪ್ರಿಲ್ 2019 ರಲ್ಲಿ ರೂ. 3 ಕೋಟಿ ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಸೇರಿ ಎರಡು ಹಂತಗಳಲ್ಲಿ ರೂ. 13 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಅದಾನಿ ಸಮೂಹದೊಂದಿಗೆ ವೆಲ್‌ಸ್ಪನ್ ಗ್ರೂಪ್‌ನ ಸಂಬಂಧ: 2005ರಲ್ಲಿ, ಅದಾನಿ ಸಮೂಹ ವೆಲ್‌ಸ್ಪನ್ ಜೊತೆಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಷನ್ ಲಿಮಿಟೆಡ್, ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೆಟ್ ಲಿಮಿಟೆಡ್ ಎಂಬ ಜಂಟಿ ಉದ್ಯಮ ಸ್ಥಾಪಿಸಿತ್ತು.

ಪತ್ರಿಕಾ ಪ್ರಕಟಣೆಯ ಪ್ರಕಾರ, ಅದಾನಿ ಸಮೂಹ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಮೂಲಕ 65 ಪ್ರತಿಶತ ಷೇರುಗಳನ್ನು ಹೊಂದಿದೆ. ಗೌತಮ್ ಅದಾನಿ ಅಧ್ಯಕ್ಷ ಮತ್ತು ಅವರ ಮಗ ರಾಜೇಶ್ ಅದಾನಿ ಈ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ವೆಲ್‌ಸ್ಪನ್ ಗ್ರೂಪ್ ಅದಾನಿ-ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೇಟ್ ಲಿಮಿಟೆಡ್ ಮೂಲಕ 35 ಪ್ರತಿಶತ ಷೇರುಗಳನ್ನು ಹೊಂದಿದೆ. ಇದು ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಎರಡನೇ ಅಂಗಸಂಸ್ಥೆ, ವೆಲ್‌ಸ್ಪನ್ ಕಾರ್ಪ್‌ ಲಿಮಿಟೆಡ್. ರೂ 27 ಕೋಟಿ ಮೌಲ್ಯದ ಬಾಂಡ್‌ಗಳನ್ನು ಇದು ಖರೀದಿಸಿದೆ. ಮೇ 2019 ರಲ್ಲಿ ರೂ. 5 ಕೋಟಿ, ಜನವರಿ 2020ರಲ್ಲಿ ರೂ. 2 ಕೋಟಿ, ಅಕ್ಟೋಬರ್ 2020ರಲ್ಲಿ ರೂ. 7 ಕೋಟಿ, ಏಪ್ರಿಲ್ 2022ರಲ್ಲಿ ರೂ. 3 ಕೋಟಿ, ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿ ಮಾಡಿದೆ.

ಮೂರನೇ ಅಂಗಸಂಸ್ಥೆ, ವೆಲ್‌ಸ್ಪನ್ ಲೀವಿಂಗ್ ಲಿಮಿಟೆಡ್. ನವೆಂಬರ್ 2022ರಲ್ಲಿ ರೂ. 10 ಕೋಟಿ ಮತ್ತು ನವೆಂಬರ್ 2023 ರಲ್ಲಿ ರೂ. 5 ಕೋಟಿ ಸೇರಿ ಒಟ್ಟು 15 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಒಟ್ಟಾರೆಯಾಗಿ, ವೆಲ್‌ಸ್ಪನ್‌ನ ಮೂರು ಅಂಗಸಂಸ್ಥೆಗಳು ರೂ 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿವೆ.

ಕಂಪನಿಯು ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ರಾಜ್ಯ ಚುನಾವಣೆಗಳ ಸಮಯದಲ್ಲಿ, ಅಂದರೆ ನವೆಂಬರ್ 2022ರಲ್ಲಿ 30 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. 2019 ರ ಲೋಕಸಭೆ ಚುನಾವಣೆಯ ಸಮಯ ರೂ. 8 ಕೋಟಿ, 2020ರ ದೆಹಲಿ ವಿಧಾನಸಭಾ ಚುನಾವಣೆಯ ಸಮಯ ರೂ. 2 ಕೋಟಿ 2020ರ ಬಿಹಾರ ವಿಧಾನಸಭಾ ಚುನಾವಣೆಯ ಸಮಯ ರೂ. 7 ಕೋಟಿ, 2023ರ ನವೆಂಬರ್‌ನಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನಡೆದ ಚುನಾವಣೆಗಳ ಸಂದರ್ಭದಲ್ಲಿ ರೂ. 5 ಕೋಟಿ ಮತ್ತು 2022ರ ಏಪ್ರಿಲ್‌ನಲ್ಲಿ ಯಾವುದೇ ಚುನಾವಣೆ ಇಲ್ಲದೆ ಸಮಯದಲ್ಲಿ ರೂ.3 ಕೋಟಿ ಮೌಲ್ಯದ ಬಾಂಡ್‌ಗಳನ್ನು ಕಂಪನಿಯು ಖರೀದಿಸಿದೆ.

ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಕಾರ್ಪ್ ಲಿಮಿಟೆಡ್ 2019ರ ಲೋಕಸಭೆ ಚುನಾವಣೆಯ ಸಂದರ್ಭ ಖರೀದಿಸಿದ ರೂ. 8 ಕೋಟಿ ಮೌಲ್ಯದ ಎಲ್ಲಾ ಚುನಾವಣಾ ಬಾಂಡ್‌ಗಳನ್ನು ಕಾಂಗ್ರೆಸ್ ನಗದೀಕರಣ ಮಾಡಿಕೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮೊದಲು ವೆಲ್‌ಸ್ಪನ್ ಲಿವಿಂಗ್ ಲಿಮಿಟೆಡ್ ಖರೀದಿಸಿದ 5 ಕೋಟಿ ರೂ. ಮೌಲ್ಯದ ಬಾಂಡ್‌ ಅನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಗದೀಕರಣ ಮಾಡಿಕೊಂಡಿದೆ.

ಜನವರಿ 2020 ಮತ್ತು ನವೆಂಬರ್ 2022 ರ ನಡುವೆ ಖರೀದಿಸಿದ ರೂ. 42 ಕೋಟಿ ಮೌಲ್ಯದ ಉಳಿದ ಎಲ್ಲಾ ಬಾಂಡ್‌ಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಅದಾನಿ ಸಮೂಹದ ಜೊತೆ ಸಂಪರ್ಕ ಹೊಂದಿರುವ ನಾಲ್ಕನೇ ಕಂಪನಿ ಎಬಿಸಿ ಇಂಡಿಯಾ ಲಿಮಿಟೆಡ್. ಇದು ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಸ್ತೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿದೆ. ಇದು 2019ರ ಏಪ್ರಿಲ್‌ನಲ್ಲಿ ರೂ. 40 ಲಕ್ಷ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಅವೆಲ್ಲವನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿರುವ ದಾಖಲೆಗಳ ಪ್ರಕಾರ, ಅದಾನಿ ಪ್ರಾಪರ್ಟೀಸ್ ಪ್ರೈವೆಟ್ ಲಿಮಿಟೆಡ್ ಎಬಿಸಿ ಇಂಡಿಯಾದಲ್ಲಿ ಮಾರ್ಚ್ 2016 ರಿಂದ ಸೆಪ್ಟೆಂಬರ್ 2023 ರವರೆಗೆ ಶೇ. 1.2 ಪಾಲು ಹೊಂದಿತ್ತು. ಅದಾನಿ ಪ್ರಾಪರ್ಟೀಸ್ ತನ್ನ ಪಾಲನ್ನು ಡಿಸೆಂಬರ್ 2023ರಲ್ಲಿ ಮಾರಾಟ ಮಾಡಿದೆ.

Source Courtesy : newslaundry

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು ‘ಅರಬಿಂದೋ ಫಾರ್ಮಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...