Homeಮುಖಪುಟಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ...

ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

- Advertisement -
- Advertisement -

ಅದಾನಿ ಸಮೂಹದೊಂದಿಗೆ ಸಂಪರ್ಕ ಹೊಂದಿರುವ ನಾಲ್ಕು ಕಂಪನಿಗಳು ಏಪ್ರಿಲ್ 2019 ರಿಂದ ನವೆಂಬರ್ 2023ರವರೆಗೆ ಒಟ್ಟು 55.4 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಇವುಗಳಲ್ಲಿ ಎಬಿಸಿ ಇಂಡಿಯಾ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗಸಂಸ್ಥೆಗಳು ಸೇರಿವೆ.

ರೂ. 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಬಿಕೆ ಗೋಯೆಂಕಾ ಸ್ಥಾಪಿಸಿದ ಮುಂಬೈ ಮೂಲದ ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗ ಸಂಸ್ಥೆಗಳು ಖರೀದಿಸಿವೆ. ಚುನಾವಣಾ ಆಯೋಗವು ನಿನ್ನೆ (ಮಾ.21) ಅಪ್ಲೋಡ್ ಮಾಡಿರುವ ಮಾಹಿತಿಯ ಪ್ರಕಾರ, ಈ ಬಾಂಡ್‌ಗಳಲ್ಲಿ 42 ಕೋಟಿ ರೂಪಾಯಿಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಬಾಂಡ್‌ಗಳನ್ನು ಖರೀದಿಸಿದ ಮೊದಲ ಅಂಗಸಂಸ್ಥೆ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್, ಏಪ್ರಿಲ್ 2019 ರಲ್ಲಿ ರೂ. 3 ಕೋಟಿ ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಸೇರಿ ಎರಡು ಹಂತಗಳಲ್ಲಿ ರೂ. 13 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಅದಾನಿ ಸಮೂಹದೊಂದಿಗೆ ವೆಲ್‌ಸ್ಪನ್ ಗ್ರೂಪ್‌ನ ಸಂಬಂಧ: 2005ರಲ್ಲಿ, ಅದಾನಿ ಸಮೂಹ ವೆಲ್‌ಸ್ಪನ್ ಜೊತೆಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಷನ್ ಲಿಮಿಟೆಡ್, ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೆಟ್ ಲಿಮಿಟೆಡ್ ಎಂಬ ಜಂಟಿ ಉದ್ಯಮ ಸ್ಥಾಪಿಸಿತ್ತು.

ಪತ್ರಿಕಾ ಪ್ರಕಟಣೆಯ ಪ್ರಕಾರ, ಅದಾನಿ ಸಮೂಹ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಮೂಲಕ 65 ಪ್ರತಿಶತ ಷೇರುಗಳನ್ನು ಹೊಂದಿದೆ. ಗೌತಮ್ ಅದಾನಿ ಅಧ್ಯಕ್ಷ ಮತ್ತು ಅವರ ಮಗ ರಾಜೇಶ್ ಅದಾನಿ ಈ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ವೆಲ್‌ಸ್ಪನ್ ಗ್ರೂಪ್ ಅದಾನಿ-ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೇಟ್ ಲಿಮಿಟೆಡ್ ಮೂಲಕ 35 ಪ್ರತಿಶತ ಷೇರುಗಳನ್ನು ಹೊಂದಿದೆ. ಇದು ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಎರಡನೇ ಅಂಗಸಂಸ್ಥೆ, ವೆಲ್‌ಸ್ಪನ್ ಕಾರ್ಪ್‌ ಲಿಮಿಟೆಡ್. ರೂ 27 ಕೋಟಿ ಮೌಲ್ಯದ ಬಾಂಡ್‌ಗಳನ್ನು ಇದು ಖರೀದಿಸಿದೆ. ಮೇ 2019 ರಲ್ಲಿ ರೂ. 5 ಕೋಟಿ, ಜನವರಿ 2020ರಲ್ಲಿ ರೂ. 2 ಕೋಟಿ, ಅಕ್ಟೋಬರ್ 2020ರಲ್ಲಿ ರೂ. 7 ಕೋಟಿ, ಏಪ್ರಿಲ್ 2022ರಲ್ಲಿ ರೂ. 3 ಕೋಟಿ, ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿ ಮಾಡಿದೆ.

ಮೂರನೇ ಅಂಗಸಂಸ್ಥೆ, ವೆಲ್‌ಸ್ಪನ್ ಲೀವಿಂಗ್ ಲಿಮಿಟೆಡ್. ನವೆಂಬರ್ 2022ರಲ್ಲಿ ರೂ. 10 ಕೋಟಿ ಮತ್ತು ನವೆಂಬರ್ 2023 ರಲ್ಲಿ ರೂ. 5 ಕೋಟಿ ಸೇರಿ ಒಟ್ಟು 15 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಒಟ್ಟಾರೆಯಾಗಿ, ವೆಲ್‌ಸ್ಪನ್‌ನ ಮೂರು ಅಂಗಸಂಸ್ಥೆಗಳು ರೂ 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿವೆ.

ಕಂಪನಿಯು ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ರಾಜ್ಯ ಚುನಾವಣೆಗಳ ಸಮಯದಲ್ಲಿ, ಅಂದರೆ ನವೆಂಬರ್ 2022ರಲ್ಲಿ 30 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. 2019 ರ ಲೋಕಸಭೆ ಚುನಾವಣೆಯ ಸಮಯ ರೂ. 8 ಕೋಟಿ, 2020ರ ದೆಹಲಿ ವಿಧಾನಸಭಾ ಚುನಾವಣೆಯ ಸಮಯ ರೂ. 2 ಕೋಟಿ 2020ರ ಬಿಹಾರ ವಿಧಾನಸಭಾ ಚುನಾವಣೆಯ ಸಮಯ ರೂ. 7 ಕೋಟಿ, 2023ರ ನವೆಂಬರ್‌ನಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನಡೆದ ಚುನಾವಣೆಗಳ ಸಂದರ್ಭದಲ್ಲಿ ರೂ. 5 ಕೋಟಿ ಮತ್ತು 2022ರ ಏಪ್ರಿಲ್‌ನಲ್ಲಿ ಯಾವುದೇ ಚುನಾವಣೆ ಇಲ್ಲದೆ ಸಮಯದಲ್ಲಿ ರೂ.3 ಕೋಟಿ ಮೌಲ್ಯದ ಬಾಂಡ್‌ಗಳನ್ನು ಕಂಪನಿಯು ಖರೀದಿಸಿದೆ.

ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಕಾರ್ಪ್ ಲಿಮಿಟೆಡ್ 2019ರ ಲೋಕಸಭೆ ಚುನಾವಣೆಯ ಸಂದರ್ಭ ಖರೀದಿಸಿದ ರೂ. 8 ಕೋಟಿ ಮೌಲ್ಯದ ಎಲ್ಲಾ ಚುನಾವಣಾ ಬಾಂಡ್‌ಗಳನ್ನು ಕಾಂಗ್ರೆಸ್ ನಗದೀಕರಣ ಮಾಡಿಕೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮೊದಲು ವೆಲ್‌ಸ್ಪನ್ ಲಿವಿಂಗ್ ಲಿಮಿಟೆಡ್ ಖರೀದಿಸಿದ 5 ಕೋಟಿ ರೂ. ಮೌಲ್ಯದ ಬಾಂಡ್‌ ಅನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಗದೀಕರಣ ಮಾಡಿಕೊಂಡಿದೆ.

ಜನವರಿ 2020 ಮತ್ತು ನವೆಂಬರ್ 2022 ರ ನಡುವೆ ಖರೀದಿಸಿದ ರೂ. 42 ಕೋಟಿ ಮೌಲ್ಯದ ಉಳಿದ ಎಲ್ಲಾ ಬಾಂಡ್‌ಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಅದಾನಿ ಸಮೂಹದ ಜೊತೆ ಸಂಪರ್ಕ ಹೊಂದಿರುವ ನಾಲ್ಕನೇ ಕಂಪನಿ ಎಬಿಸಿ ಇಂಡಿಯಾ ಲಿಮಿಟೆಡ್. ಇದು ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಸ್ತೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿದೆ. ಇದು 2019ರ ಏಪ್ರಿಲ್‌ನಲ್ಲಿ ರೂ. 40 ಲಕ್ಷ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಅವೆಲ್ಲವನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿರುವ ದಾಖಲೆಗಳ ಪ್ರಕಾರ, ಅದಾನಿ ಪ್ರಾಪರ್ಟೀಸ್ ಪ್ರೈವೆಟ್ ಲಿಮಿಟೆಡ್ ಎಬಿಸಿ ಇಂಡಿಯಾದಲ್ಲಿ ಮಾರ್ಚ್ 2016 ರಿಂದ ಸೆಪ್ಟೆಂಬರ್ 2023 ರವರೆಗೆ ಶೇ. 1.2 ಪಾಲು ಹೊಂದಿತ್ತು. ಅದಾನಿ ಪ್ರಾಪರ್ಟೀಸ್ ತನ್ನ ಪಾಲನ್ನು ಡಿಸೆಂಬರ್ 2023ರಲ್ಲಿ ಮಾರಾಟ ಮಾಡಿದೆ.

Source Courtesy : newslaundry

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು ‘ಅರಬಿಂದೋ ಫಾರ್ಮಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...