Homeಮುಖಪುಟಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ...

ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

- Advertisement -
- Advertisement -

ಅದಾನಿ ಸಮೂಹದೊಂದಿಗೆ ಸಂಪರ್ಕ ಹೊಂದಿರುವ ನಾಲ್ಕು ಕಂಪನಿಗಳು ಏಪ್ರಿಲ್ 2019 ರಿಂದ ನವೆಂಬರ್ 2023ರವರೆಗೆ ಒಟ್ಟು 55.4 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಇವುಗಳಲ್ಲಿ ಎಬಿಸಿ ಇಂಡಿಯಾ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗಸಂಸ್ಥೆಗಳು ಸೇರಿವೆ.

ರೂ. 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಬಿಕೆ ಗೋಯೆಂಕಾ ಸ್ಥಾಪಿಸಿದ ಮುಂಬೈ ಮೂಲದ ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗ ಸಂಸ್ಥೆಗಳು ಖರೀದಿಸಿವೆ. ಚುನಾವಣಾ ಆಯೋಗವು ನಿನ್ನೆ (ಮಾ.21) ಅಪ್ಲೋಡ್ ಮಾಡಿರುವ ಮಾಹಿತಿಯ ಪ್ರಕಾರ, ಈ ಬಾಂಡ್‌ಗಳಲ್ಲಿ 42 ಕೋಟಿ ರೂಪಾಯಿಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಬಾಂಡ್‌ಗಳನ್ನು ಖರೀದಿಸಿದ ಮೊದಲ ಅಂಗಸಂಸ್ಥೆ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್, ಏಪ್ರಿಲ್ 2019 ರಲ್ಲಿ ರೂ. 3 ಕೋಟಿ ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಸೇರಿ ಎರಡು ಹಂತಗಳಲ್ಲಿ ರೂ. 13 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಅದಾನಿ ಸಮೂಹದೊಂದಿಗೆ ವೆಲ್‌ಸ್ಪನ್ ಗ್ರೂಪ್‌ನ ಸಂಬಂಧ: 2005ರಲ್ಲಿ, ಅದಾನಿ ಸಮೂಹ ವೆಲ್‌ಸ್ಪನ್ ಜೊತೆಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಷನ್ ಲಿಮಿಟೆಡ್, ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೆಟ್ ಲಿಮಿಟೆಡ್ ಎಂಬ ಜಂಟಿ ಉದ್ಯಮ ಸ್ಥಾಪಿಸಿತ್ತು.

ಪತ್ರಿಕಾ ಪ್ರಕಟಣೆಯ ಪ್ರಕಾರ, ಅದಾನಿ ಸಮೂಹ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಮೂಲಕ 65 ಪ್ರತಿಶತ ಷೇರುಗಳನ್ನು ಹೊಂದಿದೆ. ಗೌತಮ್ ಅದಾನಿ ಅಧ್ಯಕ್ಷ ಮತ್ತು ಅವರ ಮಗ ರಾಜೇಶ್ ಅದಾನಿ ಈ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ವೆಲ್‌ಸ್ಪನ್ ಗ್ರೂಪ್ ಅದಾನಿ-ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೇಟ್ ಲಿಮಿಟೆಡ್ ಮೂಲಕ 35 ಪ್ರತಿಶತ ಷೇರುಗಳನ್ನು ಹೊಂದಿದೆ. ಇದು ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಎರಡನೇ ಅಂಗಸಂಸ್ಥೆ, ವೆಲ್‌ಸ್ಪನ್ ಕಾರ್ಪ್‌ ಲಿಮಿಟೆಡ್. ರೂ 27 ಕೋಟಿ ಮೌಲ್ಯದ ಬಾಂಡ್‌ಗಳನ್ನು ಇದು ಖರೀದಿಸಿದೆ. ಮೇ 2019 ರಲ್ಲಿ ರೂ. 5 ಕೋಟಿ, ಜನವರಿ 2020ರಲ್ಲಿ ರೂ. 2 ಕೋಟಿ, ಅಕ್ಟೋಬರ್ 2020ರಲ್ಲಿ ರೂ. 7 ಕೋಟಿ, ಏಪ್ರಿಲ್ 2022ರಲ್ಲಿ ರೂ. 3 ಕೋಟಿ, ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿ ಮಾಡಿದೆ.

ಮೂರನೇ ಅಂಗಸಂಸ್ಥೆ, ವೆಲ್‌ಸ್ಪನ್ ಲೀವಿಂಗ್ ಲಿಮಿಟೆಡ್. ನವೆಂಬರ್ 2022ರಲ್ಲಿ ರೂ. 10 ಕೋಟಿ ಮತ್ತು ನವೆಂಬರ್ 2023 ರಲ್ಲಿ ರೂ. 5 ಕೋಟಿ ಸೇರಿ ಒಟ್ಟು 15 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಒಟ್ಟಾರೆಯಾಗಿ, ವೆಲ್‌ಸ್ಪನ್‌ನ ಮೂರು ಅಂಗಸಂಸ್ಥೆಗಳು ರೂ 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿವೆ.

ಕಂಪನಿಯು ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ರಾಜ್ಯ ಚುನಾವಣೆಗಳ ಸಮಯದಲ್ಲಿ, ಅಂದರೆ ನವೆಂಬರ್ 2022ರಲ್ಲಿ 30 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. 2019 ರ ಲೋಕಸಭೆ ಚುನಾವಣೆಯ ಸಮಯ ರೂ. 8 ಕೋಟಿ, 2020ರ ದೆಹಲಿ ವಿಧಾನಸಭಾ ಚುನಾವಣೆಯ ಸಮಯ ರೂ. 2 ಕೋಟಿ 2020ರ ಬಿಹಾರ ವಿಧಾನಸಭಾ ಚುನಾವಣೆಯ ಸಮಯ ರೂ. 7 ಕೋಟಿ, 2023ರ ನವೆಂಬರ್‌ನಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನಡೆದ ಚುನಾವಣೆಗಳ ಸಂದರ್ಭದಲ್ಲಿ ರೂ. 5 ಕೋಟಿ ಮತ್ತು 2022ರ ಏಪ್ರಿಲ್‌ನಲ್ಲಿ ಯಾವುದೇ ಚುನಾವಣೆ ಇಲ್ಲದೆ ಸಮಯದಲ್ಲಿ ರೂ.3 ಕೋಟಿ ಮೌಲ್ಯದ ಬಾಂಡ್‌ಗಳನ್ನು ಕಂಪನಿಯು ಖರೀದಿಸಿದೆ.

ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಕಾರ್ಪ್ ಲಿಮಿಟೆಡ್ 2019ರ ಲೋಕಸಭೆ ಚುನಾವಣೆಯ ಸಂದರ್ಭ ಖರೀದಿಸಿದ ರೂ. 8 ಕೋಟಿ ಮೌಲ್ಯದ ಎಲ್ಲಾ ಚುನಾವಣಾ ಬಾಂಡ್‌ಗಳನ್ನು ಕಾಂಗ್ರೆಸ್ ನಗದೀಕರಣ ಮಾಡಿಕೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮೊದಲು ವೆಲ್‌ಸ್ಪನ್ ಲಿವಿಂಗ್ ಲಿಮಿಟೆಡ್ ಖರೀದಿಸಿದ 5 ಕೋಟಿ ರೂ. ಮೌಲ್ಯದ ಬಾಂಡ್‌ ಅನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಗದೀಕರಣ ಮಾಡಿಕೊಂಡಿದೆ.

ಜನವರಿ 2020 ಮತ್ತು ನವೆಂಬರ್ 2022 ರ ನಡುವೆ ಖರೀದಿಸಿದ ರೂ. 42 ಕೋಟಿ ಮೌಲ್ಯದ ಉಳಿದ ಎಲ್ಲಾ ಬಾಂಡ್‌ಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಅದಾನಿ ಸಮೂಹದ ಜೊತೆ ಸಂಪರ್ಕ ಹೊಂದಿರುವ ನಾಲ್ಕನೇ ಕಂಪನಿ ಎಬಿಸಿ ಇಂಡಿಯಾ ಲಿಮಿಟೆಡ್. ಇದು ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಸ್ತೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿದೆ. ಇದು 2019ರ ಏಪ್ರಿಲ್‌ನಲ್ಲಿ ರೂ. 40 ಲಕ್ಷ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಅವೆಲ್ಲವನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿರುವ ದಾಖಲೆಗಳ ಪ್ರಕಾರ, ಅದಾನಿ ಪ್ರಾಪರ್ಟೀಸ್ ಪ್ರೈವೆಟ್ ಲಿಮಿಟೆಡ್ ಎಬಿಸಿ ಇಂಡಿಯಾದಲ್ಲಿ ಮಾರ್ಚ್ 2016 ರಿಂದ ಸೆಪ್ಟೆಂಬರ್ 2023 ರವರೆಗೆ ಶೇ. 1.2 ಪಾಲು ಹೊಂದಿತ್ತು. ಅದಾನಿ ಪ್ರಾಪರ್ಟೀಸ್ ತನ್ನ ಪಾಲನ್ನು ಡಿಸೆಂಬರ್ 2023ರಲ್ಲಿ ಮಾರಾಟ ಮಾಡಿದೆ.

Source Courtesy : newslaundry

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು ‘ಅರಬಿಂದೋ ಫಾರ್ಮಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...