Homeಮುಖಪುಟಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ...

ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

- Advertisement -
- Advertisement -

ಅದಾನಿ ಸಮೂಹದೊಂದಿಗೆ ಸಂಪರ್ಕ ಹೊಂದಿರುವ ನಾಲ್ಕು ಕಂಪನಿಗಳು ಏಪ್ರಿಲ್ 2019 ರಿಂದ ನವೆಂಬರ್ 2023ರವರೆಗೆ ಒಟ್ಟು 55.4 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಇವುಗಳಲ್ಲಿ ಎಬಿಸಿ ಇಂಡಿಯಾ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗಸಂಸ್ಥೆಗಳು ಸೇರಿವೆ.

ರೂ. 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಬಿಕೆ ಗೋಯೆಂಕಾ ಸ್ಥಾಪಿಸಿದ ಮುಂಬೈ ಮೂಲದ ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗ ಸಂಸ್ಥೆಗಳು ಖರೀದಿಸಿವೆ. ಚುನಾವಣಾ ಆಯೋಗವು ನಿನ್ನೆ (ಮಾ.21) ಅಪ್ಲೋಡ್ ಮಾಡಿರುವ ಮಾಹಿತಿಯ ಪ್ರಕಾರ, ಈ ಬಾಂಡ್‌ಗಳಲ್ಲಿ 42 ಕೋಟಿ ರೂಪಾಯಿಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಬಾಂಡ್‌ಗಳನ್ನು ಖರೀದಿಸಿದ ಮೊದಲ ಅಂಗಸಂಸ್ಥೆ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್, ಏಪ್ರಿಲ್ 2019 ರಲ್ಲಿ ರೂ. 3 ಕೋಟಿ ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಸೇರಿ ಎರಡು ಹಂತಗಳಲ್ಲಿ ರೂ. 13 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಅದಾನಿ ಸಮೂಹದೊಂದಿಗೆ ವೆಲ್‌ಸ್ಪನ್ ಗ್ರೂಪ್‌ನ ಸಂಬಂಧ: 2005ರಲ್ಲಿ, ಅದಾನಿ ಸಮೂಹ ವೆಲ್‌ಸ್ಪನ್ ಜೊತೆಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಷನ್ ಲಿಮಿಟೆಡ್, ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೆಟ್ ಲಿಮಿಟೆಡ್ ಎಂಬ ಜಂಟಿ ಉದ್ಯಮ ಸ್ಥಾಪಿಸಿತ್ತು.

ಪತ್ರಿಕಾ ಪ್ರಕಟಣೆಯ ಪ್ರಕಾರ, ಅದಾನಿ ಸಮೂಹ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಮೂಲಕ 65 ಪ್ರತಿಶತ ಷೇರುಗಳನ್ನು ಹೊಂದಿದೆ. ಗೌತಮ್ ಅದಾನಿ ಅಧ್ಯಕ್ಷ ಮತ್ತು ಅವರ ಮಗ ರಾಜೇಶ್ ಅದಾನಿ ಈ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ವೆಲ್‌ಸ್ಪನ್ ಗ್ರೂಪ್ ಅದಾನಿ-ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೇಟ್ ಲಿಮಿಟೆಡ್ ಮೂಲಕ 35 ಪ್ರತಿಶತ ಷೇರುಗಳನ್ನು ಹೊಂದಿದೆ. ಇದು ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಎರಡನೇ ಅಂಗಸಂಸ್ಥೆ, ವೆಲ್‌ಸ್ಪನ್ ಕಾರ್ಪ್‌ ಲಿಮಿಟೆಡ್. ರೂ 27 ಕೋಟಿ ಮೌಲ್ಯದ ಬಾಂಡ್‌ಗಳನ್ನು ಇದು ಖರೀದಿಸಿದೆ. ಮೇ 2019 ರಲ್ಲಿ ರೂ. 5 ಕೋಟಿ, ಜನವರಿ 2020ರಲ್ಲಿ ರೂ. 2 ಕೋಟಿ, ಅಕ್ಟೋಬರ್ 2020ರಲ್ಲಿ ರೂ. 7 ಕೋಟಿ, ಏಪ್ರಿಲ್ 2022ರಲ್ಲಿ ರೂ. 3 ಕೋಟಿ, ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿ ಮಾಡಿದೆ.

ಮೂರನೇ ಅಂಗಸಂಸ್ಥೆ, ವೆಲ್‌ಸ್ಪನ್ ಲೀವಿಂಗ್ ಲಿಮಿಟೆಡ್. ನವೆಂಬರ್ 2022ರಲ್ಲಿ ರೂ. 10 ಕೋಟಿ ಮತ್ತು ನವೆಂಬರ್ 2023 ರಲ್ಲಿ ರೂ. 5 ಕೋಟಿ ಸೇರಿ ಒಟ್ಟು 15 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಒಟ್ಟಾರೆಯಾಗಿ, ವೆಲ್‌ಸ್ಪನ್‌ನ ಮೂರು ಅಂಗಸಂಸ್ಥೆಗಳು ರೂ 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿವೆ.

ಕಂಪನಿಯು ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ರಾಜ್ಯ ಚುನಾವಣೆಗಳ ಸಮಯದಲ್ಲಿ, ಅಂದರೆ ನವೆಂಬರ್ 2022ರಲ್ಲಿ 30 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. 2019 ರ ಲೋಕಸಭೆ ಚುನಾವಣೆಯ ಸಮಯ ರೂ. 8 ಕೋಟಿ, 2020ರ ದೆಹಲಿ ವಿಧಾನಸಭಾ ಚುನಾವಣೆಯ ಸಮಯ ರೂ. 2 ಕೋಟಿ 2020ರ ಬಿಹಾರ ವಿಧಾನಸಭಾ ಚುನಾವಣೆಯ ಸಮಯ ರೂ. 7 ಕೋಟಿ, 2023ರ ನವೆಂಬರ್‌ನಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನಡೆದ ಚುನಾವಣೆಗಳ ಸಂದರ್ಭದಲ್ಲಿ ರೂ. 5 ಕೋಟಿ ಮತ್ತು 2022ರ ಏಪ್ರಿಲ್‌ನಲ್ಲಿ ಯಾವುದೇ ಚುನಾವಣೆ ಇಲ್ಲದೆ ಸಮಯದಲ್ಲಿ ರೂ.3 ಕೋಟಿ ಮೌಲ್ಯದ ಬಾಂಡ್‌ಗಳನ್ನು ಕಂಪನಿಯು ಖರೀದಿಸಿದೆ.

ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಕಾರ್ಪ್ ಲಿಮಿಟೆಡ್ 2019ರ ಲೋಕಸಭೆ ಚುನಾವಣೆಯ ಸಂದರ್ಭ ಖರೀದಿಸಿದ ರೂ. 8 ಕೋಟಿ ಮೌಲ್ಯದ ಎಲ್ಲಾ ಚುನಾವಣಾ ಬಾಂಡ್‌ಗಳನ್ನು ಕಾಂಗ್ರೆಸ್ ನಗದೀಕರಣ ಮಾಡಿಕೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮೊದಲು ವೆಲ್‌ಸ್ಪನ್ ಲಿವಿಂಗ್ ಲಿಮಿಟೆಡ್ ಖರೀದಿಸಿದ 5 ಕೋಟಿ ರೂ. ಮೌಲ್ಯದ ಬಾಂಡ್‌ ಅನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಗದೀಕರಣ ಮಾಡಿಕೊಂಡಿದೆ.

ಜನವರಿ 2020 ಮತ್ತು ನವೆಂಬರ್ 2022 ರ ನಡುವೆ ಖರೀದಿಸಿದ ರೂ. 42 ಕೋಟಿ ಮೌಲ್ಯದ ಉಳಿದ ಎಲ್ಲಾ ಬಾಂಡ್‌ಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಅದಾನಿ ಸಮೂಹದ ಜೊತೆ ಸಂಪರ್ಕ ಹೊಂದಿರುವ ನಾಲ್ಕನೇ ಕಂಪನಿ ಎಬಿಸಿ ಇಂಡಿಯಾ ಲಿಮಿಟೆಡ್. ಇದು ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಸ್ತೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿದೆ. ಇದು 2019ರ ಏಪ್ರಿಲ್‌ನಲ್ಲಿ ರೂ. 40 ಲಕ್ಷ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಅವೆಲ್ಲವನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿರುವ ದಾಖಲೆಗಳ ಪ್ರಕಾರ, ಅದಾನಿ ಪ್ರಾಪರ್ಟೀಸ್ ಪ್ರೈವೆಟ್ ಲಿಮಿಟೆಡ್ ಎಬಿಸಿ ಇಂಡಿಯಾದಲ್ಲಿ ಮಾರ್ಚ್ 2016 ರಿಂದ ಸೆಪ್ಟೆಂಬರ್ 2023 ರವರೆಗೆ ಶೇ. 1.2 ಪಾಲು ಹೊಂದಿತ್ತು. ಅದಾನಿ ಪ್ರಾಪರ್ಟೀಸ್ ತನ್ನ ಪಾಲನ್ನು ಡಿಸೆಂಬರ್ 2023ರಲ್ಲಿ ಮಾರಾಟ ಮಾಡಿದೆ.

Source Courtesy : newslaundry

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು ‘ಅರಬಿಂದೋ ಫಾರ್ಮಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...