Homeಮುಖಪುಟಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ...

ಅದಾನಿ ಗ್ರೂಪ್‌ಗೆ ಸಂಬಂಧಿಸಿದ ಕಂಪನಿಗಳಿಂದ ₹55.4 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿ: ಈ ಪೈಕಿ ₹42.4 ಕೋಟಿ ನಗದೀಕರಿಸಿದ ಬಿಜೆಪಿ

- Advertisement -
- Advertisement -

ಅದಾನಿ ಸಮೂಹದೊಂದಿಗೆ ಸಂಪರ್ಕ ಹೊಂದಿರುವ ನಾಲ್ಕು ಕಂಪನಿಗಳು ಏಪ್ರಿಲ್ 2019 ರಿಂದ ನವೆಂಬರ್ 2023ರವರೆಗೆ ಒಟ್ಟು 55.4 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಇವುಗಳಲ್ಲಿ ಎಬಿಸಿ ಇಂಡಿಯಾ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗಸಂಸ್ಥೆಗಳು ಸೇರಿವೆ.

ರೂ. 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಬಿಕೆ ಗೋಯೆಂಕಾ ಸ್ಥಾಪಿಸಿದ ಮುಂಬೈ ಮೂಲದ ವೆಲ್‌ಸ್ಪನ್ ಗ್ರೂಪ್‌ನ ಮೂರು ಅಂಗ ಸಂಸ್ಥೆಗಳು ಖರೀದಿಸಿವೆ. ಚುನಾವಣಾ ಆಯೋಗವು ನಿನ್ನೆ (ಮಾ.21) ಅಪ್ಲೋಡ್ ಮಾಡಿರುವ ಮಾಹಿತಿಯ ಪ್ರಕಾರ, ಈ ಬಾಂಡ್‌ಗಳಲ್ಲಿ 42 ಕೋಟಿ ರೂಪಾಯಿಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಬಾಂಡ್‌ಗಳನ್ನು ಖರೀದಿಸಿದ ಮೊದಲ ಅಂಗಸಂಸ್ಥೆ ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್, ಏಪ್ರಿಲ್ 2019 ರಲ್ಲಿ ರೂ. 3 ಕೋಟಿ ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಸೇರಿ ಎರಡು ಹಂತಗಳಲ್ಲಿ ರೂ. 13 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಅದಾನಿ ಸಮೂಹದೊಂದಿಗೆ ವೆಲ್‌ಸ್ಪನ್ ಗ್ರೂಪ್‌ನ ಸಂಬಂಧ: 2005ರಲ್ಲಿ, ಅದಾನಿ ಸಮೂಹ ವೆಲ್‌ಸ್ಪನ್ ಜೊತೆಗೆ ಅದಾನಿ ವೆಲ್‌ಸ್ಪನ್ ಎಕ್ಸ್‌ಪ್ಲೋರೇಷನ್ ಲಿಮಿಟೆಡ್, ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೆಟ್ ಲಿಮಿಟೆಡ್ ಎಂಬ ಜಂಟಿ ಉದ್ಯಮ ಸ್ಥಾಪಿಸಿತ್ತು.

ಪತ್ರಿಕಾ ಪ್ರಕಟಣೆಯ ಪ್ರಕಾರ, ಅದಾನಿ ಸಮೂಹ ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಮೂಲಕ 65 ಪ್ರತಿಶತ ಷೇರುಗಳನ್ನು ಹೊಂದಿದೆ. ಗೌತಮ್ ಅದಾನಿ ಅಧ್ಯಕ್ಷ ಮತ್ತು ಅವರ ಮಗ ರಾಜೇಶ್ ಅದಾನಿ ಈ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ವೆಲ್‌ಸ್ಪನ್ ಗ್ರೂಪ್ ಅದಾನಿ-ವೆಲ್‌ಸ್ಪನ್ ಎಕ್ಸ್‌ಪ್ಲೋರೇಶನ್ ಲಿಮಿಟೆಡ್‌ನಲ್ಲಿ ವೆಲ್‌ಸ್ಪನ್ ನ್ಯಾಚುರಲ್ ರಿಸೋರ್ಸಸ್ ಪ್ರೈವೇಟ್ ಲಿಮಿಟೆಡ್ ಮೂಲಕ 35 ಪ್ರತಿಶತ ಷೇರುಗಳನ್ನು ಹೊಂದಿದೆ. ಇದು ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ಎರಡನೇ ಅಂಗಸಂಸ್ಥೆ, ವೆಲ್‌ಸ್ಪನ್ ಕಾರ್ಪ್‌ ಲಿಮಿಟೆಡ್. ರೂ 27 ಕೋಟಿ ಮೌಲ್ಯದ ಬಾಂಡ್‌ಗಳನ್ನು ಇದು ಖರೀದಿಸಿದೆ. ಮೇ 2019 ರಲ್ಲಿ ರೂ. 5 ಕೋಟಿ, ಜನವರಿ 2020ರಲ್ಲಿ ರೂ. 2 ಕೋಟಿ, ಅಕ್ಟೋಬರ್ 2020ರಲ್ಲಿ ರೂ. 7 ಕೋಟಿ, ಏಪ್ರಿಲ್ 2022ರಲ್ಲಿ ರೂ. 3 ಕೋಟಿ, ಮತ್ತು ನವೆಂಬರ್ 2022ರಲ್ಲಿ ರೂ. 10 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿ ಮಾಡಿದೆ.

ಮೂರನೇ ಅಂಗಸಂಸ್ಥೆ, ವೆಲ್‌ಸ್ಪನ್ ಲೀವಿಂಗ್ ಲಿಮಿಟೆಡ್. ನವೆಂಬರ್ 2022ರಲ್ಲಿ ರೂ. 10 ಕೋಟಿ ಮತ್ತು ನವೆಂಬರ್ 2023 ರಲ್ಲಿ ರೂ. 5 ಕೋಟಿ ಸೇರಿ ಒಟ್ಟು 15 ಕೋಟಿ ಮೌಲ್ಯದ ಬಾಂಡ್‌ಗಳನ್ನು ಈ ಕಂಪನಿ ಖರೀದಿಸಿದೆ.

ಒಟ್ಟಾರೆಯಾಗಿ, ವೆಲ್‌ಸ್ಪನ್‌ನ ಮೂರು ಅಂಗಸಂಸ್ಥೆಗಳು ರೂ 55 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿವೆ.

ಕಂಪನಿಯು ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ರಾಜ್ಯ ಚುನಾವಣೆಗಳ ಸಮಯದಲ್ಲಿ, ಅಂದರೆ ನವೆಂಬರ್ 2022ರಲ್ಲಿ 30 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. 2019 ರ ಲೋಕಸಭೆ ಚುನಾವಣೆಯ ಸಮಯ ರೂ. 8 ಕೋಟಿ, 2020ರ ದೆಹಲಿ ವಿಧಾನಸಭಾ ಚುನಾವಣೆಯ ಸಮಯ ರೂ. 2 ಕೋಟಿ 2020ರ ಬಿಹಾರ ವಿಧಾನಸಭಾ ಚುನಾವಣೆಯ ಸಮಯ ರೂ. 7 ಕೋಟಿ, 2023ರ ನವೆಂಬರ್‌ನಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನಡೆದ ಚುನಾವಣೆಗಳ ಸಂದರ್ಭದಲ್ಲಿ ರೂ. 5 ಕೋಟಿ ಮತ್ತು 2022ರ ಏಪ್ರಿಲ್‌ನಲ್ಲಿ ಯಾವುದೇ ಚುನಾವಣೆ ಇಲ್ಲದೆ ಸಮಯದಲ್ಲಿ ರೂ.3 ಕೋಟಿ ಮೌಲ್ಯದ ಬಾಂಡ್‌ಗಳನ್ನು ಕಂಪನಿಯು ಖರೀದಿಸಿದೆ.

ವೆಲ್‌ಸ್ಪನ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ವೆಲ್‌ಸ್ಪನ್ ಕಾರ್ಪ್ ಲಿಮಿಟೆಡ್ 2019ರ ಲೋಕಸಭೆ ಚುನಾವಣೆಯ ಸಂದರ್ಭ ಖರೀದಿಸಿದ ರೂ. 8 ಕೋಟಿ ಮೌಲ್ಯದ ಎಲ್ಲಾ ಚುನಾವಣಾ ಬಾಂಡ್‌ಗಳನ್ನು ಕಾಂಗ್ರೆಸ್ ನಗದೀಕರಣ ಮಾಡಿಕೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಯ ಮೊದಲು ವೆಲ್‌ಸ್ಪನ್ ಲಿವಿಂಗ್ ಲಿಮಿಟೆಡ್ ಖರೀದಿಸಿದ 5 ಕೋಟಿ ರೂ. ಮೌಲ್ಯದ ಬಾಂಡ್‌ ಅನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಗದೀಕರಣ ಮಾಡಿಕೊಂಡಿದೆ.

ಜನವರಿ 2020 ಮತ್ತು ನವೆಂಬರ್ 2022 ರ ನಡುವೆ ಖರೀದಿಸಿದ ರೂ. 42 ಕೋಟಿ ಮೌಲ್ಯದ ಉಳಿದ ಎಲ್ಲಾ ಬಾಂಡ್‌ಗಳನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಅದಾನಿ ಸಮೂಹದ ಜೊತೆ ಸಂಪರ್ಕ ಹೊಂದಿರುವ ನಾಲ್ಕನೇ ಕಂಪನಿ ಎಬಿಸಿ ಇಂಡಿಯಾ ಲಿಮಿಟೆಡ್. ಇದು ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಸ್ತೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿದೆ. ಇದು 2019ರ ಏಪ್ರಿಲ್‌ನಲ್ಲಿ ರೂ. 40 ಲಕ್ಷ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. ಅವೆಲ್ಲವನ್ನು ಬಿಜೆಪಿ ನಗದೀಕರಣ ಮಾಡಿಕೊಂಡಿದೆ.

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿರುವ ದಾಖಲೆಗಳ ಪ್ರಕಾರ, ಅದಾನಿ ಪ್ರಾಪರ್ಟೀಸ್ ಪ್ರೈವೆಟ್ ಲಿಮಿಟೆಡ್ ಎಬಿಸಿ ಇಂಡಿಯಾದಲ್ಲಿ ಮಾರ್ಚ್ 2016 ರಿಂದ ಸೆಪ್ಟೆಂಬರ್ 2023 ರವರೆಗೆ ಶೇ. 1.2 ಪಾಲು ಹೊಂದಿತ್ತು. ಅದಾನಿ ಪ್ರಾಪರ್ಟೀಸ್ ತನ್ನ ಪಾಲನ್ನು ಡಿಸೆಂಬರ್ 2023ರಲ್ಲಿ ಮಾರಾಟ ಮಾಡಿದೆ.

Source Courtesy : newslaundry

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಬಾಂಡ್‌ ಖರೀದಿಸಿತ್ತು ‘ಅರಬಿಂದೋ ಫಾರ್ಮಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...