Homeಮುಖಪುಟವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯ ಅಂತಹ ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

- Advertisement -
- Advertisement -

ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆಗೈದಿದೆ. ಒಟ್ಟು 7 ಪದಕಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಅದರಲ್ಲಿಯೂ ಭಾರತದ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟು ಇತಿಹಾಸ ನಿರ್ಮಿಸಿತ್ತು. ಪದಕ ಗೆಲ್ಲುವಲ್ಲಿ ವಿಫಲವಾದರೂ ತಮ್ಮ ಅಮೋಘ ಆಟದ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಇಂತಹ ಐತಿಹಾಸಿಕ ಸಾಧನೆಯ ಸಂದರ್ಭದಲ್ಲಿಯೂ ಕಪ್ಪು ಚುಕ್ಕೆಯೊಂದು ಉಳಿದುಹೋಯ್ತು. ಭಾರತ ತಂಡವು ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲು ಕಂಡಿತು. ಭಾರತ ತಂಡ ಸೋಲುತ್ತಿದ್ದಂತೆ ದಿಟ್ಟ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿರುವ ಜಾತಿಗ್ರಸ್ತ ಮನಸ್ಥಿತಿಯ ಯುವಕರ ಗುಂಪು ವಂದನಾ ಅವರ ಕುಟುಂಬದವರಿಗೆ ಜಾತಿ ನಿಂದನೆ ಮಾಡಿದ್ದಾರೆ.

ವಂದನಾ ಅವರ ಹರಿದ್ವಾರದ ಮನೆ ಮುಂದೆ ಪಟಾಕಿ ಸಿಡಿಸಿದ ಯುವಕರು, ‘ತಂಡದಲ್ಲಿ ದಲಿತರು ಹೆಚ್ಚು ಇದ್ದದ್ದು ಸೋಲಿಗೆ ಕಾರಣ’ ಎಂದು ರೋಧಿಸಿದ್ದಾರೆ. ಇದು ಭಾರತದ ಜಾತಿಗ್ರಸ್ತ ಮನಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಆದರೆ ಪ್ರಜ್ಞಾವಂತರು ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ವಂದನಾ ಪರವಾಗಿ ನಿಂತ ನೆಟ್ಟಿಗರು ಜಾತಿಗ್ರಸ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ? ಥೂ ನಿಮ್ಮ ಮನಸ್ಥಿತಿಗೆ ಎಂದು ಧಿಕ್ಕಾರ ಕೂಗಿದ್ದಾರೆ.

ವಂದನಾ ಅವರ ಆಟದ ವೈಖರಿಯನ್ನು ಮೆಚ್ಚಿದ ಬಹುತೇಕರು ಅವರ ಪರ ನಿಂತಿದ್ದಾರೆ. ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಕೂಡ ವಂದನಾ ಪರವಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಣಿ ರಾಂಪಾಲ್, ‘ನಾವು ದೇಶಕ್ಕಾಗಿ ಆಡುತ್ತಿದ್ದೇವೆ. ಈ ಘಟನೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಜಾತಿವಾದಿ ಹೇಳಿಕೆಗಳನ್ನು ಯಾರು ನೀಡಬಾರದು. ನೀವು ಹಾಕಿ ಬಗ್ಗೆ ಯೋಚಿಸಿ, ಅಲ್ಲಿ ಹೆಚ್ಚು ಯುವತಿಯರಿದ್ದಾರೆ. ನಾವು ದೇಶಕ್ಕಾಗಿ ಆಡುತ್ತಿದ್ದೇವೆ, ಆದ್ದರಿಂದ ನಾವು ಪ್ರತಿಯೊಂದು ವಿಷಯದಲ್ಲೂ ಒಂದಾಗಬೇಕು’ ಎಂದಿದ್ದಾರೆ.

ಯಾರಿದು ವಂದನಾ ಕಟಾರಿಯಾ?

2020ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡವನ್ನು ಸೆಮಿಫೈನಲ್ ವರೆಗೂ ಕೊಂಡೊಯ್ದದ್ದರಲ್ಲಿ ವಂದನಾ ಅವರ ಪಾತ್ರ ಬಹುಮುಖ್ಯವಾದುದು.

ಒಲಿಂಪಿಕ್ಸ್‌ನ ಪೋಲ್‌ ಎ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ತಂಡದ ಎದುರು ನಡೆದ ಪಂದ್ಯದಲ್ಲಿ ಭಾರತ ತಂಡವು 4 ಗೋಲುಗಳನ್ನು ಗಳಿಸಿತ್ತು. ಈ ಪೈಕಿ ಮೂರು ಗೋಲುಗಳನ್ನು ವಂದನಾ ಒಬ್ಬರೇ ಗಳಿಸಿದ್ದರು. ಟೋಕಿಯೋ ಒಲಿಂಪಿಕ್ಸ್ನಲ್ಲಿ ಹ್ಯಾಟ್ರಿಕ್ ಗೋಲು ಗಳಿಸಿದ ಮೊದಲ ಭಾರತೀಯ ಹಾಕಿ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ವಂದನಾ ಅವರದು.

2018 ರಲ್ಲಿ ನಡೆದ ಏಷ್ಯನ್ ಕಪ್ ಕ್ರೀಡಾಕೂಟದಲ್ಲಿ ಭಾರತದ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಈ ಟೂರ್ನಿಯಲ್ಲಿ ವಂದನಾ ಅವರು ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದರು.

ಕುಟುಂಬದವರ ಬೆಂಬಲದೊಂದಿಗೆ ತಮ್ಮ 15ನೇ ವಯಸ್ಸಿನಲ್ಲಿ ಹಾಕಿ ತಂಡಕ್ಕೆ ಪಾದಾರ್ಪಣೆ ಮಾಡಿದ ವಂದನಾ, 2013ರಲ್ಲಿ ಭಾರತದ ಹಾಕಿ ಜೂನಿಯರ್ ತಂಡಕ್ಕೆ ಆಯ್ಕೆಯಾದರು. ಅದೇ ವರ್ಷ ನಡೆದ ಮಹಿಳಾ ಹಾಕಿ ಜೂನಿಯರ್ ವಿಶ್ವಕಪ್ನಲ್ಲಿ ಹೆಚ್ಚು ಗೋಲು ಗಳಿಸಿದವರಲ್ಲಿ ಮೊದಲಿಗರಾಗಿದ್ದರು. ಆಗ ಭಾರತ ತಂಡವು ಕಂಚಿನ ಪದಕ ಗೆದ್ದಿತ್ತು.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್


ಒಲಿಂಪಿಕ್ಸ್ ನಲ್ಲಿ ತಮ್ಮ ಮಗಳು ಇರುವ ಭಾರತ ಚಿನ್ನ ಗೆಲ್ಲಬೇಕು ಎಂದು ಬಯಸುತ್ತಿದ್ದ ವಂದನಾ ತಂದೆ ಇತ್ತೀಚೆಗೆ ಸಾವನ್ನಪ್ಪಿದ್ದರು. ಆ ಸಮಯದಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ತರಬೇತಿಯಲ್ಲಿದ್ದ ವಂದನಾ ತಂದೆಯ ಶವಸಂಸ್ಕಾರಕ್ಕೂ ತೆರಳದೇ, ತಂದೆಯ ಕನಸು ನನಸು ಮಾಡಬೇಕೆಂಬ ಛಲದೊಂದಿಗೆ ಅಭ್ಯಾಸದಲ್ಲಿ ನಿರತರಾಗಿದ್ದರು.

ಇಂತಹದೊಂದು ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

ಸೋಲೇ ಇರಲಿ, ಗೆಲುವೇ ಇರಲಿ, ಉತ್ತಮವಾದ ಆಟದಿಂದ ಕ್ರೀಡಾ ಪ್ರೇಮಿಗಳ ಮನಗೆದ್ದಿರುವ ಭಾರತದ ಮಹಿಳಾ ತಂಡ ಎಂದಿಗೂ ಚಾಂಪಿಯನ್‌ಗಳೆ. ಒಲಿಂಪಿಕ್ಸ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಮ್ಮ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು. ವಂದನಾ ಅವರು ಇದೇ ರೀತಿ ಉತ್ತಮವಾದ ಪ್ರದರ್ಶನ ನೀಡಲಿ ಎಂದು ನಾವೆಲ್ಲರೂ ಆಶಿಸುತ್ತೇವೆ. ಅದೇ ರೀತಿ ಜಾತಿವಾದಿಗಳು ಹೀಗಲಾದರೂ ತಮ್ಮ ಕೊಳಕು ಪ್ರವೃತ್ತಿ ಬಿಟ್ಟು ಮನುಷ್ಯರಾಗಿ ಆಲೋಚಿಸುವುದನ್ನು ಕಲಿಯಬೇಕಿದೆ.


ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...