Homeಮುಖಪುಟವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯ ಅಂತಹ ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

- Advertisement -
- Advertisement -

ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆಗೈದಿದೆ. ಒಟ್ಟು 7 ಪದಕಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಅದರಲ್ಲಿಯೂ ಭಾರತದ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟು ಇತಿಹಾಸ ನಿರ್ಮಿಸಿತ್ತು. ಪದಕ ಗೆಲ್ಲುವಲ್ಲಿ ವಿಫಲವಾದರೂ ತಮ್ಮ ಅಮೋಘ ಆಟದ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಇಂತಹ ಐತಿಹಾಸಿಕ ಸಾಧನೆಯ ಸಂದರ್ಭದಲ್ಲಿಯೂ ಕಪ್ಪು ಚುಕ್ಕೆಯೊಂದು ಉಳಿದುಹೋಯ್ತು. ಭಾರತ ತಂಡವು ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲು ಕಂಡಿತು. ಭಾರತ ತಂಡ ಸೋಲುತ್ತಿದ್ದಂತೆ ದಿಟ್ಟ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿರುವ ಜಾತಿಗ್ರಸ್ತ ಮನಸ್ಥಿತಿಯ ಯುವಕರ ಗುಂಪು ವಂದನಾ ಅವರ ಕುಟುಂಬದವರಿಗೆ ಜಾತಿ ನಿಂದನೆ ಮಾಡಿದ್ದಾರೆ.

ವಂದನಾ ಅವರ ಹರಿದ್ವಾರದ ಮನೆ ಮುಂದೆ ಪಟಾಕಿ ಸಿಡಿಸಿದ ಯುವಕರು, ‘ತಂಡದಲ್ಲಿ ದಲಿತರು ಹೆಚ್ಚು ಇದ್ದದ್ದು ಸೋಲಿಗೆ ಕಾರಣ’ ಎಂದು ರೋಧಿಸಿದ್ದಾರೆ. ಇದು ಭಾರತದ ಜಾತಿಗ್ರಸ್ತ ಮನಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಆದರೆ ಪ್ರಜ್ಞಾವಂತರು ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ವಂದನಾ ಪರವಾಗಿ ನಿಂತ ನೆಟ್ಟಿಗರು ಜಾತಿಗ್ರಸ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ? ಥೂ ನಿಮ್ಮ ಮನಸ್ಥಿತಿಗೆ ಎಂದು ಧಿಕ್ಕಾರ ಕೂಗಿದ್ದಾರೆ.

ವಂದನಾ ಅವರ ಆಟದ ವೈಖರಿಯನ್ನು ಮೆಚ್ಚಿದ ಬಹುತೇಕರು ಅವರ ಪರ ನಿಂತಿದ್ದಾರೆ. ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಕೂಡ ವಂದನಾ ಪರವಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಣಿ ರಾಂಪಾಲ್, ‘ನಾವು ದೇಶಕ್ಕಾಗಿ ಆಡುತ್ತಿದ್ದೇವೆ. ಈ ಘಟನೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಜಾತಿವಾದಿ ಹೇಳಿಕೆಗಳನ್ನು ಯಾರು ನೀಡಬಾರದು. ನೀವು ಹಾಕಿ ಬಗ್ಗೆ ಯೋಚಿಸಿ, ಅಲ್ಲಿ ಹೆಚ್ಚು ಯುವತಿಯರಿದ್ದಾರೆ. ನಾವು ದೇಶಕ್ಕಾಗಿ ಆಡುತ್ತಿದ್ದೇವೆ, ಆದ್ದರಿಂದ ನಾವು ಪ್ರತಿಯೊಂದು ವಿಷಯದಲ್ಲೂ ಒಂದಾಗಬೇಕು’ ಎಂದಿದ್ದಾರೆ.

ಯಾರಿದು ವಂದನಾ ಕಟಾರಿಯಾ?

2020ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡವನ್ನು ಸೆಮಿಫೈನಲ್ ವರೆಗೂ ಕೊಂಡೊಯ್ದದ್ದರಲ್ಲಿ ವಂದನಾ ಅವರ ಪಾತ್ರ ಬಹುಮುಖ್ಯವಾದುದು.

ಒಲಿಂಪಿಕ್ಸ್‌ನ ಪೋಲ್‌ ಎ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ತಂಡದ ಎದುರು ನಡೆದ ಪಂದ್ಯದಲ್ಲಿ ಭಾರತ ತಂಡವು 4 ಗೋಲುಗಳನ್ನು ಗಳಿಸಿತ್ತು. ಈ ಪೈಕಿ ಮೂರು ಗೋಲುಗಳನ್ನು ವಂದನಾ ಒಬ್ಬರೇ ಗಳಿಸಿದ್ದರು. ಟೋಕಿಯೋ ಒಲಿಂಪಿಕ್ಸ್ನಲ್ಲಿ ಹ್ಯಾಟ್ರಿಕ್ ಗೋಲು ಗಳಿಸಿದ ಮೊದಲ ಭಾರತೀಯ ಹಾಕಿ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ವಂದನಾ ಅವರದು.

2018 ರಲ್ಲಿ ನಡೆದ ಏಷ್ಯನ್ ಕಪ್ ಕ್ರೀಡಾಕೂಟದಲ್ಲಿ ಭಾರತದ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಈ ಟೂರ್ನಿಯಲ್ಲಿ ವಂದನಾ ಅವರು ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದರು.

ಕುಟುಂಬದವರ ಬೆಂಬಲದೊಂದಿಗೆ ತಮ್ಮ 15ನೇ ವಯಸ್ಸಿನಲ್ಲಿ ಹಾಕಿ ತಂಡಕ್ಕೆ ಪಾದಾರ್ಪಣೆ ಮಾಡಿದ ವಂದನಾ, 2013ರಲ್ಲಿ ಭಾರತದ ಹಾಕಿ ಜೂನಿಯರ್ ತಂಡಕ್ಕೆ ಆಯ್ಕೆಯಾದರು. ಅದೇ ವರ್ಷ ನಡೆದ ಮಹಿಳಾ ಹಾಕಿ ಜೂನಿಯರ್ ವಿಶ್ವಕಪ್ನಲ್ಲಿ ಹೆಚ್ಚು ಗೋಲು ಗಳಿಸಿದವರಲ್ಲಿ ಮೊದಲಿಗರಾಗಿದ್ದರು. ಆಗ ಭಾರತ ತಂಡವು ಕಂಚಿನ ಪದಕ ಗೆದ್ದಿತ್ತು.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್


ಒಲಿಂಪಿಕ್ಸ್ ನಲ್ಲಿ ತಮ್ಮ ಮಗಳು ಇರುವ ಭಾರತ ಚಿನ್ನ ಗೆಲ್ಲಬೇಕು ಎಂದು ಬಯಸುತ್ತಿದ್ದ ವಂದನಾ ತಂದೆ ಇತ್ತೀಚೆಗೆ ಸಾವನ್ನಪ್ಪಿದ್ದರು. ಆ ಸಮಯದಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ತರಬೇತಿಯಲ್ಲಿದ್ದ ವಂದನಾ ತಂದೆಯ ಶವಸಂಸ್ಕಾರಕ್ಕೂ ತೆರಳದೇ, ತಂದೆಯ ಕನಸು ನನಸು ಮಾಡಬೇಕೆಂಬ ಛಲದೊಂದಿಗೆ ಅಭ್ಯಾಸದಲ್ಲಿ ನಿರತರಾಗಿದ್ದರು.

ಇಂತಹದೊಂದು ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

ಸೋಲೇ ಇರಲಿ, ಗೆಲುವೇ ಇರಲಿ, ಉತ್ತಮವಾದ ಆಟದಿಂದ ಕ್ರೀಡಾ ಪ್ರೇಮಿಗಳ ಮನಗೆದ್ದಿರುವ ಭಾರತದ ಮಹಿಳಾ ತಂಡ ಎಂದಿಗೂ ಚಾಂಪಿಯನ್‌ಗಳೆ. ಒಲಿಂಪಿಕ್ಸ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಮ್ಮ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು. ವಂದನಾ ಅವರು ಇದೇ ರೀತಿ ಉತ್ತಮವಾದ ಪ್ರದರ್ಶನ ನೀಡಲಿ ಎಂದು ನಾವೆಲ್ಲರೂ ಆಶಿಸುತ್ತೇವೆ. ಅದೇ ರೀತಿ ಜಾತಿವಾದಿಗಳು ಹೀಗಲಾದರೂ ತಮ್ಮ ಕೊಳಕು ಪ್ರವೃತ್ತಿ ಬಿಟ್ಟು ಮನುಷ್ಯರಾಗಿ ಆಲೋಚಿಸುವುದನ್ನು ಕಲಿಯಬೇಕಿದೆ.


ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...