Homeಮುಖಪುಟವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯ ಅಂತಹ ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

- Advertisement -
- Advertisement -

ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆಗೈದಿದೆ. ಒಟ್ಟು 7 ಪದಕಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಅದರಲ್ಲಿಯೂ ಭಾರತದ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟು ಇತಿಹಾಸ ನಿರ್ಮಿಸಿತ್ತು. ಪದಕ ಗೆಲ್ಲುವಲ್ಲಿ ವಿಫಲವಾದರೂ ತಮ್ಮ ಅಮೋಘ ಆಟದ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಇಂತಹ ಐತಿಹಾಸಿಕ ಸಾಧನೆಯ ಸಂದರ್ಭದಲ್ಲಿಯೂ ಕಪ್ಪು ಚುಕ್ಕೆಯೊಂದು ಉಳಿದುಹೋಯ್ತು. ಭಾರತ ತಂಡವು ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲು ಕಂಡಿತು. ಭಾರತ ತಂಡ ಸೋಲುತ್ತಿದ್ದಂತೆ ದಿಟ್ಟ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿರುವ ಜಾತಿಗ್ರಸ್ತ ಮನಸ್ಥಿತಿಯ ಯುವಕರ ಗುಂಪು ವಂದನಾ ಅವರ ಕುಟುಂಬದವರಿಗೆ ಜಾತಿ ನಿಂದನೆ ಮಾಡಿದ್ದಾರೆ.

ವಂದನಾ ಅವರ ಹರಿದ್ವಾರದ ಮನೆ ಮುಂದೆ ಪಟಾಕಿ ಸಿಡಿಸಿದ ಯುವಕರು, ‘ತಂಡದಲ್ಲಿ ದಲಿತರು ಹೆಚ್ಚು ಇದ್ದದ್ದು ಸೋಲಿಗೆ ಕಾರಣ’ ಎಂದು ರೋಧಿಸಿದ್ದಾರೆ. ಇದು ಭಾರತದ ಜಾತಿಗ್ರಸ್ತ ಮನಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಆದರೆ ಪ್ರಜ್ಞಾವಂತರು ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ವಂದನಾ ಪರವಾಗಿ ನಿಂತ ನೆಟ್ಟಿಗರು ಜಾತಿಗ್ರಸ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ? ಥೂ ನಿಮ್ಮ ಮನಸ್ಥಿತಿಗೆ ಎಂದು ಧಿಕ್ಕಾರ ಕೂಗಿದ್ದಾರೆ.

ವಂದನಾ ಅವರ ಆಟದ ವೈಖರಿಯನ್ನು ಮೆಚ್ಚಿದ ಬಹುತೇಕರು ಅವರ ಪರ ನಿಂತಿದ್ದಾರೆ. ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಕೂಡ ವಂದನಾ ಪರವಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಣಿ ರಾಂಪಾಲ್, ‘ನಾವು ದೇಶಕ್ಕಾಗಿ ಆಡುತ್ತಿದ್ದೇವೆ. ಈ ಘಟನೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಜಾತಿವಾದಿ ಹೇಳಿಕೆಗಳನ್ನು ಯಾರು ನೀಡಬಾರದು. ನೀವು ಹಾಕಿ ಬಗ್ಗೆ ಯೋಚಿಸಿ, ಅಲ್ಲಿ ಹೆಚ್ಚು ಯುವತಿಯರಿದ್ದಾರೆ. ನಾವು ದೇಶಕ್ಕಾಗಿ ಆಡುತ್ತಿದ್ದೇವೆ, ಆದ್ದರಿಂದ ನಾವು ಪ್ರತಿಯೊಂದು ವಿಷಯದಲ್ಲೂ ಒಂದಾಗಬೇಕು’ ಎಂದಿದ್ದಾರೆ.

ಯಾರಿದು ವಂದನಾ ಕಟಾರಿಯಾ?

2020ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡವನ್ನು ಸೆಮಿಫೈನಲ್ ವರೆಗೂ ಕೊಂಡೊಯ್ದದ್ದರಲ್ಲಿ ವಂದನಾ ಅವರ ಪಾತ್ರ ಬಹುಮುಖ್ಯವಾದುದು.

ಒಲಿಂಪಿಕ್ಸ್‌ನ ಪೋಲ್‌ ಎ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ತಂಡದ ಎದುರು ನಡೆದ ಪಂದ್ಯದಲ್ಲಿ ಭಾರತ ತಂಡವು 4 ಗೋಲುಗಳನ್ನು ಗಳಿಸಿತ್ತು. ಈ ಪೈಕಿ ಮೂರು ಗೋಲುಗಳನ್ನು ವಂದನಾ ಒಬ್ಬರೇ ಗಳಿಸಿದ್ದರು. ಟೋಕಿಯೋ ಒಲಿಂಪಿಕ್ಸ್ನಲ್ಲಿ ಹ್ಯಾಟ್ರಿಕ್ ಗೋಲು ಗಳಿಸಿದ ಮೊದಲ ಭಾರತೀಯ ಹಾಕಿ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ವಂದನಾ ಅವರದು.

2018 ರಲ್ಲಿ ನಡೆದ ಏಷ್ಯನ್ ಕಪ್ ಕ್ರೀಡಾಕೂಟದಲ್ಲಿ ಭಾರತದ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಈ ಟೂರ್ನಿಯಲ್ಲಿ ವಂದನಾ ಅವರು ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದರು.

ಕುಟುಂಬದವರ ಬೆಂಬಲದೊಂದಿಗೆ ತಮ್ಮ 15ನೇ ವಯಸ್ಸಿನಲ್ಲಿ ಹಾಕಿ ತಂಡಕ್ಕೆ ಪಾದಾರ್ಪಣೆ ಮಾಡಿದ ವಂದನಾ, 2013ರಲ್ಲಿ ಭಾರತದ ಹಾಕಿ ಜೂನಿಯರ್ ತಂಡಕ್ಕೆ ಆಯ್ಕೆಯಾದರು. ಅದೇ ವರ್ಷ ನಡೆದ ಮಹಿಳಾ ಹಾಕಿ ಜೂನಿಯರ್ ವಿಶ್ವಕಪ್ನಲ್ಲಿ ಹೆಚ್ಚು ಗೋಲು ಗಳಿಸಿದವರಲ್ಲಿ ಮೊದಲಿಗರಾಗಿದ್ದರು. ಆಗ ಭಾರತ ತಂಡವು ಕಂಚಿನ ಪದಕ ಗೆದ್ದಿತ್ತು.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್


ಒಲಿಂಪಿಕ್ಸ್ ನಲ್ಲಿ ತಮ್ಮ ಮಗಳು ಇರುವ ಭಾರತ ಚಿನ್ನ ಗೆಲ್ಲಬೇಕು ಎಂದು ಬಯಸುತ್ತಿದ್ದ ವಂದನಾ ತಂದೆ ಇತ್ತೀಚೆಗೆ ಸಾವನ್ನಪ್ಪಿದ್ದರು. ಆ ಸಮಯದಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ತರಬೇತಿಯಲ್ಲಿದ್ದ ವಂದನಾ ತಂದೆಯ ಶವಸಂಸ್ಕಾರಕ್ಕೂ ತೆರಳದೇ, ತಂದೆಯ ಕನಸು ನನಸು ಮಾಡಬೇಕೆಂಬ ಛಲದೊಂದಿಗೆ ಅಭ್ಯಾಸದಲ್ಲಿ ನಿರತರಾಗಿದ್ದರು.

ಇಂತಹದೊಂದು ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

ಸೋಲೇ ಇರಲಿ, ಗೆಲುವೇ ಇರಲಿ, ಉತ್ತಮವಾದ ಆಟದಿಂದ ಕ್ರೀಡಾ ಪ್ರೇಮಿಗಳ ಮನಗೆದ್ದಿರುವ ಭಾರತದ ಮಹಿಳಾ ತಂಡ ಎಂದಿಗೂ ಚಾಂಪಿಯನ್‌ಗಳೆ. ಒಲಿಂಪಿಕ್ಸ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಮ್ಮ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು. ವಂದನಾ ಅವರು ಇದೇ ರೀತಿ ಉತ್ತಮವಾದ ಪ್ರದರ್ಶನ ನೀಡಲಿ ಎಂದು ನಾವೆಲ್ಲರೂ ಆಶಿಸುತ್ತೇವೆ. ಅದೇ ರೀತಿ ಜಾತಿವಾದಿಗಳು ಹೀಗಲಾದರೂ ತಮ್ಮ ಕೊಳಕು ಪ್ರವೃತ್ತಿ ಬಿಟ್ಟು ಮನುಷ್ಯರಾಗಿ ಆಲೋಚಿಸುವುದನ್ನು ಕಲಿಯಬೇಕಿದೆ.


ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...