Homeಮುಖಪುಟವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯ ಅಂತಹ ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

- Advertisement -
- Advertisement -

ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆಗೈದಿದೆ. ಒಟ್ಟು 7 ಪದಕಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಅದರಲ್ಲಿಯೂ ಭಾರತದ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟು ಇತಿಹಾಸ ನಿರ್ಮಿಸಿತ್ತು. ಪದಕ ಗೆಲ್ಲುವಲ್ಲಿ ವಿಫಲವಾದರೂ ತಮ್ಮ ಅಮೋಘ ಆಟದ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಇಂತಹ ಐತಿಹಾಸಿಕ ಸಾಧನೆಯ ಸಂದರ್ಭದಲ್ಲಿಯೂ ಕಪ್ಪು ಚುಕ್ಕೆಯೊಂದು ಉಳಿದುಹೋಯ್ತು. ಭಾರತ ತಂಡವು ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲು ಕಂಡಿತು. ಭಾರತ ತಂಡ ಸೋಲುತ್ತಿದ್ದಂತೆ ದಿಟ್ಟ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿರುವ ಜಾತಿಗ್ರಸ್ತ ಮನಸ್ಥಿತಿಯ ಯುವಕರ ಗುಂಪು ವಂದನಾ ಅವರ ಕುಟುಂಬದವರಿಗೆ ಜಾತಿ ನಿಂದನೆ ಮಾಡಿದ್ದಾರೆ.

ವಂದನಾ ಅವರ ಹರಿದ್ವಾರದ ಮನೆ ಮುಂದೆ ಪಟಾಕಿ ಸಿಡಿಸಿದ ಯುವಕರು, ‘ತಂಡದಲ್ಲಿ ದಲಿತರು ಹೆಚ್ಚು ಇದ್ದದ್ದು ಸೋಲಿಗೆ ಕಾರಣ’ ಎಂದು ರೋಧಿಸಿದ್ದಾರೆ. ಇದು ಭಾರತದ ಜಾತಿಗ್ರಸ್ತ ಮನಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಆದರೆ ಪ್ರಜ್ಞಾವಂತರು ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ವಂದನಾ ಪರವಾಗಿ ನಿಂತ ನೆಟ್ಟಿಗರು ಜಾತಿಗ್ರಸ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ? ಥೂ ನಿಮ್ಮ ಮನಸ್ಥಿತಿಗೆ ಎಂದು ಧಿಕ್ಕಾರ ಕೂಗಿದ್ದಾರೆ.

ವಂದನಾ ಅವರ ಆಟದ ವೈಖರಿಯನ್ನು ಮೆಚ್ಚಿದ ಬಹುತೇಕರು ಅವರ ಪರ ನಿಂತಿದ್ದಾರೆ. ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಕೂಡ ವಂದನಾ ಪರವಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಣಿ ರಾಂಪಾಲ್, ‘ನಾವು ದೇಶಕ್ಕಾಗಿ ಆಡುತ್ತಿದ್ದೇವೆ. ಈ ಘಟನೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಜಾತಿವಾದಿ ಹೇಳಿಕೆಗಳನ್ನು ಯಾರು ನೀಡಬಾರದು. ನೀವು ಹಾಕಿ ಬಗ್ಗೆ ಯೋಚಿಸಿ, ಅಲ್ಲಿ ಹೆಚ್ಚು ಯುವತಿಯರಿದ್ದಾರೆ. ನಾವು ದೇಶಕ್ಕಾಗಿ ಆಡುತ್ತಿದ್ದೇವೆ, ಆದ್ದರಿಂದ ನಾವು ಪ್ರತಿಯೊಂದು ವಿಷಯದಲ್ಲೂ ಒಂದಾಗಬೇಕು’ ಎಂದಿದ್ದಾರೆ.

ಯಾರಿದು ವಂದನಾ ಕಟಾರಿಯಾ?

2020ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡವನ್ನು ಸೆಮಿಫೈನಲ್ ವರೆಗೂ ಕೊಂಡೊಯ್ದದ್ದರಲ್ಲಿ ವಂದನಾ ಅವರ ಪಾತ್ರ ಬಹುಮುಖ್ಯವಾದುದು.

ಒಲಿಂಪಿಕ್ಸ್‌ನ ಪೋಲ್‌ ಎ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ತಂಡದ ಎದುರು ನಡೆದ ಪಂದ್ಯದಲ್ಲಿ ಭಾರತ ತಂಡವು 4 ಗೋಲುಗಳನ್ನು ಗಳಿಸಿತ್ತು. ಈ ಪೈಕಿ ಮೂರು ಗೋಲುಗಳನ್ನು ವಂದನಾ ಒಬ್ಬರೇ ಗಳಿಸಿದ್ದರು. ಟೋಕಿಯೋ ಒಲಿಂಪಿಕ್ಸ್ನಲ್ಲಿ ಹ್ಯಾಟ್ರಿಕ್ ಗೋಲು ಗಳಿಸಿದ ಮೊದಲ ಭಾರತೀಯ ಹಾಕಿ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ವಂದನಾ ಅವರದು.

2018 ರಲ್ಲಿ ನಡೆದ ಏಷ್ಯನ್ ಕಪ್ ಕ್ರೀಡಾಕೂಟದಲ್ಲಿ ಭಾರತದ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಈ ಟೂರ್ನಿಯಲ್ಲಿ ವಂದನಾ ಅವರು ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದರು.

ಕುಟುಂಬದವರ ಬೆಂಬಲದೊಂದಿಗೆ ತಮ್ಮ 15ನೇ ವಯಸ್ಸಿನಲ್ಲಿ ಹಾಕಿ ತಂಡಕ್ಕೆ ಪಾದಾರ್ಪಣೆ ಮಾಡಿದ ವಂದನಾ, 2013ರಲ್ಲಿ ಭಾರತದ ಹಾಕಿ ಜೂನಿಯರ್ ತಂಡಕ್ಕೆ ಆಯ್ಕೆಯಾದರು. ಅದೇ ವರ್ಷ ನಡೆದ ಮಹಿಳಾ ಹಾಕಿ ಜೂನಿಯರ್ ವಿಶ್ವಕಪ್ನಲ್ಲಿ ಹೆಚ್ಚು ಗೋಲು ಗಳಿಸಿದವರಲ್ಲಿ ಮೊದಲಿಗರಾಗಿದ್ದರು. ಆಗ ಭಾರತ ತಂಡವು ಕಂಚಿನ ಪದಕ ಗೆದ್ದಿತ್ತು.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್


ಒಲಿಂಪಿಕ್ಸ್ ನಲ್ಲಿ ತಮ್ಮ ಮಗಳು ಇರುವ ಭಾರತ ಚಿನ್ನ ಗೆಲ್ಲಬೇಕು ಎಂದು ಬಯಸುತ್ತಿದ್ದ ವಂದನಾ ತಂದೆ ಇತ್ತೀಚೆಗೆ ಸಾವನ್ನಪ್ಪಿದ್ದರು. ಆ ಸಮಯದಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ತರಬೇತಿಯಲ್ಲಿದ್ದ ವಂದನಾ ತಂದೆಯ ಶವಸಂಸ್ಕಾರಕ್ಕೂ ತೆರಳದೇ, ತಂದೆಯ ಕನಸು ನನಸು ಮಾಡಬೇಕೆಂಬ ಛಲದೊಂದಿಗೆ ಅಭ್ಯಾಸದಲ್ಲಿ ನಿರತರಾಗಿದ್ದರು.

ಇಂತಹದೊಂದು ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

ಸೋಲೇ ಇರಲಿ, ಗೆಲುವೇ ಇರಲಿ, ಉತ್ತಮವಾದ ಆಟದಿಂದ ಕ್ರೀಡಾ ಪ್ರೇಮಿಗಳ ಮನಗೆದ್ದಿರುವ ಭಾರತದ ಮಹಿಳಾ ತಂಡ ಎಂದಿಗೂ ಚಾಂಪಿಯನ್‌ಗಳೆ. ಒಲಿಂಪಿಕ್ಸ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಮ್ಮ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು. ವಂದನಾ ಅವರು ಇದೇ ರೀತಿ ಉತ್ತಮವಾದ ಪ್ರದರ್ಶನ ನೀಡಲಿ ಎಂದು ನಾವೆಲ್ಲರೂ ಆಶಿಸುತ್ತೇವೆ. ಅದೇ ರೀತಿ ಜಾತಿವಾದಿಗಳು ಹೀಗಲಾದರೂ ತಮ್ಮ ಕೊಳಕು ಪ್ರವೃತ್ತಿ ಬಿಟ್ಟು ಮನುಷ್ಯರಾಗಿ ಆಲೋಚಿಸುವುದನ್ನು ಕಲಿಯಬೇಕಿದೆ.


ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...