Homeಮುಖಪುಟವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯ ಅಂತಹ ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

- Advertisement -
- Advertisement -

ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆಗೈದಿದೆ. ಒಟ್ಟು 7 ಪದಕಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಅದರಲ್ಲಿಯೂ ಭಾರತದ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟು ಇತಿಹಾಸ ನಿರ್ಮಿಸಿತ್ತು. ಪದಕ ಗೆಲ್ಲುವಲ್ಲಿ ವಿಫಲವಾದರೂ ತಮ್ಮ ಅಮೋಘ ಆಟದ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಇಂತಹ ಐತಿಹಾಸಿಕ ಸಾಧನೆಯ ಸಂದರ್ಭದಲ್ಲಿಯೂ ಕಪ್ಪು ಚುಕ್ಕೆಯೊಂದು ಉಳಿದುಹೋಯ್ತು. ಭಾರತ ತಂಡವು ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲು ಕಂಡಿತು. ಭಾರತ ತಂಡ ಸೋಲುತ್ತಿದ್ದಂತೆ ದಿಟ್ಟ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿರುವ ಜಾತಿಗ್ರಸ್ತ ಮನಸ್ಥಿತಿಯ ಯುವಕರ ಗುಂಪು ವಂದನಾ ಅವರ ಕುಟುಂಬದವರಿಗೆ ಜಾತಿ ನಿಂದನೆ ಮಾಡಿದ್ದಾರೆ.

ವಂದನಾ ಅವರ ಹರಿದ್ವಾರದ ಮನೆ ಮುಂದೆ ಪಟಾಕಿ ಸಿಡಿಸಿದ ಯುವಕರು, ‘ತಂಡದಲ್ಲಿ ದಲಿತರು ಹೆಚ್ಚು ಇದ್ದದ್ದು ಸೋಲಿಗೆ ಕಾರಣ’ ಎಂದು ರೋಧಿಸಿದ್ದಾರೆ. ಇದು ಭಾರತದ ಜಾತಿಗ್ರಸ್ತ ಮನಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಆದರೆ ಪ್ರಜ್ಞಾವಂತರು ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ವಂದನಾ ಪರವಾಗಿ ನಿಂತ ನೆಟ್ಟಿಗರು ಜಾತಿಗ್ರಸ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ? ಥೂ ನಿಮ್ಮ ಮನಸ್ಥಿತಿಗೆ ಎಂದು ಧಿಕ್ಕಾರ ಕೂಗಿದ್ದಾರೆ.

ವಂದನಾ ಅವರ ಆಟದ ವೈಖರಿಯನ್ನು ಮೆಚ್ಚಿದ ಬಹುತೇಕರು ಅವರ ಪರ ನಿಂತಿದ್ದಾರೆ. ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಕೂಡ ವಂದನಾ ಪರವಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಣಿ ರಾಂಪಾಲ್, ‘ನಾವು ದೇಶಕ್ಕಾಗಿ ಆಡುತ್ತಿದ್ದೇವೆ. ಈ ಘಟನೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಜಾತಿವಾದಿ ಹೇಳಿಕೆಗಳನ್ನು ಯಾರು ನೀಡಬಾರದು. ನೀವು ಹಾಕಿ ಬಗ್ಗೆ ಯೋಚಿಸಿ, ಅಲ್ಲಿ ಹೆಚ್ಚು ಯುವತಿಯರಿದ್ದಾರೆ. ನಾವು ದೇಶಕ್ಕಾಗಿ ಆಡುತ್ತಿದ್ದೇವೆ, ಆದ್ದರಿಂದ ನಾವು ಪ್ರತಿಯೊಂದು ವಿಷಯದಲ್ಲೂ ಒಂದಾಗಬೇಕು’ ಎಂದಿದ್ದಾರೆ.

ಯಾರಿದು ವಂದನಾ ಕಟಾರಿಯಾ?

2020ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡವನ್ನು ಸೆಮಿಫೈನಲ್ ವರೆಗೂ ಕೊಂಡೊಯ್ದದ್ದರಲ್ಲಿ ವಂದನಾ ಅವರ ಪಾತ್ರ ಬಹುಮುಖ್ಯವಾದುದು.

ಒಲಿಂಪಿಕ್ಸ್‌ನ ಪೋಲ್‌ ಎ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ತಂಡದ ಎದುರು ನಡೆದ ಪಂದ್ಯದಲ್ಲಿ ಭಾರತ ತಂಡವು 4 ಗೋಲುಗಳನ್ನು ಗಳಿಸಿತ್ತು. ಈ ಪೈಕಿ ಮೂರು ಗೋಲುಗಳನ್ನು ವಂದನಾ ಒಬ್ಬರೇ ಗಳಿಸಿದ್ದರು. ಟೋಕಿಯೋ ಒಲಿಂಪಿಕ್ಸ್ನಲ್ಲಿ ಹ್ಯಾಟ್ರಿಕ್ ಗೋಲು ಗಳಿಸಿದ ಮೊದಲ ಭಾರತೀಯ ಹಾಕಿ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ವಂದನಾ ಅವರದು.

2018 ರಲ್ಲಿ ನಡೆದ ಏಷ್ಯನ್ ಕಪ್ ಕ್ರೀಡಾಕೂಟದಲ್ಲಿ ಭಾರತದ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಈ ಟೂರ್ನಿಯಲ್ಲಿ ವಂದನಾ ಅವರು ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದರು.

ಕುಟುಂಬದವರ ಬೆಂಬಲದೊಂದಿಗೆ ತಮ್ಮ 15ನೇ ವಯಸ್ಸಿನಲ್ಲಿ ಹಾಕಿ ತಂಡಕ್ಕೆ ಪಾದಾರ್ಪಣೆ ಮಾಡಿದ ವಂದನಾ, 2013ರಲ್ಲಿ ಭಾರತದ ಹಾಕಿ ಜೂನಿಯರ್ ತಂಡಕ್ಕೆ ಆಯ್ಕೆಯಾದರು. ಅದೇ ವರ್ಷ ನಡೆದ ಮಹಿಳಾ ಹಾಕಿ ಜೂನಿಯರ್ ವಿಶ್ವಕಪ್ನಲ್ಲಿ ಹೆಚ್ಚು ಗೋಲು ಗಳಿಸಿದವರಲ್ಲಿ ಮೊದಲಿಗರಾಗಿದ್ದರು. ಆಗ ಭಾರತ ತಂಡವು ಕಂಚಿನ ಪದಕ ಗೆದ್ದಿತ್ತು.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್


ಒಲಿಂಪಿಕ್ಸ್ ನಲ್ಲಿ ತಮ್ಮ ಮಗಳು ಇರುವ ಭಾರತ ಚಿನ್ನ ಗೆಲ್ಲಬೇಕು ಎಂದು ಬಯಸುತ್ತಿದ್ದ ವಂದನಾ ತಂದೆ ಇತ್ತೀಚೆಗೆ ಸಾವನ್ನಪ್ಪಿದ್ದರು. ಆ ಸಮಯದಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ತರಬೇತಿಯಲ್ಲಿದ್ದ ವಂದನಾ ತಂದೆಯ ಶವಸಂಸ್ಕಾರಕ್ಕೂ ತೆರಳದೇ, ತಂದೆಯ ಕನಸು ನನಸು ಮಾಡಬೇಕೆಂಬ ಛಲದೊಂದಿಗೆ ಅಭ್ಯಾಸದಲ್ಲಿ ನಿರತರಾಗಿದ್ದರು.

ಇಂತಹದೊಂದು ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

ಸೋಲೇ ಇರಲಿ, ಗೆಲುವೇ ಇರಲಿ, ಉತ್ತಮವಾದ ಆಟದಿಂದ ಕ್ರೀಡಾ ಪ್ರೇಮಿಗಳ ಮನಗೆದ್ದಿರುವ ಭಾರತದ ಮಹಿಳಾ ತಂಡ ಎಂದಿಗೂ ಚಾಂಪಿಯನ್‌ಗಳೆ. ಒಲಿಂಪಿಕ್ಸ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಮ್ಮ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು. ವಂದನಾ ಅವರು ಇದೇ ರೀತಿ ಉತ್ತಮವಾದ ಪ್ರದರ್ಶನ ನೀಡಲಿ ಎಂದು ನಾವೆಲ್ಲರೂ ಆಶಿಸುತ್ತೇವೆ. ಅದೇ ರೀತಿ ಜಾತಿವಾದಿಗಳು ಹೀಗಲಾದರೂ ತಮ್ಮ ಕೊಳಕು ಪ್ರವೃತ್ತಿ ಬಿಟ್ಟು ಮನುಷ್ಯರಾಗಿ ಆಲೋಚಿಸುವುದನ್ನು ಕಲಿಯಬೇಕಿದೆ.


ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...