Homeಮುಖಪುಟವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯ ಅಂತಹ ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

- Advertisement -
- Advertisement -

ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆಗೈದಿದೆ. ಒಟ್ಟು 7 ಪದಕಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಅದರಲ್ಲಿಯೂ ಭಾರತದ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟು ಇತಿಹಾಸ ನಿರ್ಮಿಸಿತ್ತು. ಪದಕ ಗೆಲ್ಲುವಲ್ಲಿ ವಿಫಲವಾದರೂ ತಮ್ಮ ಅಮೋಘ ಆಟದ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಇಂತಹ ಐತಿಹಾಸಿಕ ಸಾಧನೆಯ ಸಂದರ್ಭದಲ್ಲಿಯೂ ಕಪ್ಪು ಚುಕ್ಕೆಯೊಂದು ಉಳಿದುಹೋಯ್ತು. ಭಾರತ ತಂಡವು ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲು ಕಂಡಿತು. ಭಾರತ ತಂಡ ಸೋಲುತ್ತಿದ್ದಂತೆ ದಿಟ್ಟ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿರುವ ಜಾತಿಗ್ರಸ್ತ ಮನಸ್ಥಿತಿಯ ಯುವಕರ ಗುಂಪು ವಂದನಾ ಅವರ ಕುಟುಂಬದವರಿಗೆ ಜಾತಿ ನಿಂದನೆ ಮಾಡಿದ್ದಾರೆ.

ವಂದನಾ ಅವರ ಹರಿದ್ವಾರದ ಮನೆ ಮುಂದೆ ಪಟಾಕಿ ಸಿಡಿಸಿದ ಯುವಕರು, ‘ತಂಡದಲ್ಲಿ ದಲಿತರು ಹೆಚ್ಚು ಇದ್ದದ್ದು ಸೋಲಿಗೆ ಕಾರಣ’ ಎಂದು ರೋಧಿಸಿದ್ದಾರೆ. ಇದು ಭಾರತದ ಜಾತಿಗ್ರಸ್ತ ಮನಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಆದರೆ ಪ್ರಜ್ಞಾವಂತರು ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ವಂದನಾ ಪರವಾಗಿ ನಿಂತ ನೆಟ್ಟಿಗರು ಜಾತಿಗ್ರಸ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ? ಥೂ ನಿಮ್ಮ ಮನಸ್ಥಿತಿಗೆ ಎಂದು ಧಿಕ್ಕಾರ ಕೂಗಿದ್ದಾರೆ.

ವಂದನಾ ಅವರ ಆಟದ ವೈಖರಿಯನ್ನು ಮೆಚ್ಚಿದ ಬಹುತೇಕರು ಅವರ ಪರ ನಿಂತಿದ್ದಾರೆ. ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಕೂಡ ವಂದನಾ ಪರವಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಣಿ ರಾಂಪಾಲ್, ‘ನಾವು ದೇಶಕ್ಕಾಗಿ ಆಡುತ್ತಿದ್ದೇವೆ. ಈ ಘಟನೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಜಾತಿವಾದಿ ಹೇಳಿಕೆಗಳನ್ನು ಯಾರು ನೀಡಬಾರದು. ನೀವು ಹಾಕಿ ಬಗ್ಗೆ ಯೋಚಿಸಿ, ಅಲ್ಲಿ ಹೆಚ್ಚು ಯುವತಿಯರಿದ್ದಾರೆ. ನಾವು ದೇಶಕ್ಕಾಗಿ ಆಡುತ್ತಿದ್ದೇವೆ, ಆದ್ದರಿಂದ ನಾವು ಪ್ರತಿಯೊಂದು ವಿಷಯದಲ್ಲೂ ಒಂದಾಗಬೇಕು’ ಎಂದಿದ್ದಾರೆ.

ಯಾರಿದು ವಂದನಾ ಕಟಾರಿಯಾ?

2020ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡವನ್ನು ಸೆಮಿಫೈನಲ್ ವರೆಗೂ ಕೊಂಡೊಯ್ದದ್ದರಲ್ಲಿ ವಂದನಾ ಅವರ ಪಾತ್ರ ಬಹುಮುಖ್ಯವಾದುದು.

ಒಲಿಂಪಿಕ್ಸ್‌ನ ಪೋಲ್‌ ಎ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ತಂಡದ ಎದುರು ನಡೆದ ಪಂದ್ಯದಲ್ಲಿ ಭಾರತ ತಂಡವು 4 ಗೋಲುಗಳನ್ನು ಗಳಿಸಿತ್ತು. ಈ ಪೈಕಿ ಮೂರು ಗೋಲುಗಳನ್ನು ವಂದನಾ ಒಬ್ಬರೇ ಗಳಿಸಿದ್ದರು. ಟೋಕಿಯೋ ಒಲಿಂಪಿಕ್ಸ್ನಲ್ಲಿ ಹ್ಯಾಟ್ರಿಕ್ ಗೋಲು ಗಳಿಸಿದ ಮೊದಲ ಭಾರತೀಯ ಹಾಕಿ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ವಂದನಾ ಅವರದು.

2018 ರಲ್ಲಿ ನಡೆದ ಏಷ್ಯನ್ ಕಪ್ ಕ್ರೀಡಾಕೂಟದಲ್ಲಿ ಭಾರತದ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಈ ಟೂರ್ನಿಯಲ್ಲಿ ವಂದನಾ ಅವರು ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದರು.

ಕುಟುಂಬದವರ ಬೆಂಬಲದೊಂದಿಗೆ ತಮ್ಮ 15ನೇ ವಯಸ್ಸಿನಲ್ಲಿ ಹಾಕಿ ತಂಡಕ್ಕೆ ಪಾದಾರ್ಪಣೆ ಮಾಡಿದ ವಂದನಾ, 2013ರಲ್ಲಿ ಭಾರತದ ಹಾಕಿ ಜೂನಿಯರ್ ತಂಡಕ್ಕೆ ಆಯ್ಕೆಯಾದರು. ಅದೇ ವರ್ಷ ನಡೆದ ಮಹಿಳಾ ಹಾಕಿ ಜೂನಿಯರ್ ವಿಶ್ವಕಪ್ನಲ್ಲಿ ಹೆಚ್ಚು ಗೋಲು ಗಳಿಸಿದವರಲ್ಲಿ ಮೊದಲಿಗರಾಗಿದ್ದರು. ಆಗ ಭಾರತ ತಂಡವು ಕಂಚಿನ ಪದಕ ಗೆದ್ದಿತ್ತು.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್


ಒಲಿಂಪಿಕ್ಸ್ ನಲ್ಲಿ ತಮ್ಮ ಮಗಳು ಇರುವ ಭಾರತ ಚಿನ್ನ ಗೆಲ್ಲಬೇಕು ಎಂದು ಬಯಸುತ್ತಿದ್ದ ವಂದನಾ ತಂದೆ ಇತ್ತೀಚೆಗೆ ಸಾವನ್ನಪ್ಪಿದ್ದರು. ಆ ಸಮಯದಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ತರಬೇತಿಯಲ್ಲಿದ್ದ ವಂದನಾ ತಂದೆಯ ಶವಸಂಸ್ಕಾರಕ್ಕೂ ತೆರಳದೇ, ತಂದೆಯ ಕನಸು ನನಸು ಮಾಡಬೇಕೆಂಬ ಛಲದೊಂದಿಗೆ ಅಭ್ಯಾಸದಲ್ಲಿ ನಿರತರಾಗಿದ್ದರು.

ಇಂತಹದೊಂದು ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

ಸೋಲೇ ಇರಲಿ, ಗೆಲುವೇ ಇರಲಿ, ಉತ್ತಮವಾದ ಆಟದಿಂದ ಕ್ರೀಡಾ ಪ್ರೇಮಿಗಳ ಮನಗೆದ್ದಿರುವ ಭಾರತದ ಮಹಿಳಾ ತಂಡ ಎಂದಿಗೂ ಚಾಂಪಿಯನ್‌ಗಳೆ. ಒಲಿಂಪಿಕ್ಸ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಮ್ಮ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು. ವಂದನಾ ಅವರು ಇದೇ ರೀತಿ ಉತ್ತಮವಾದ ಪ್ರದರ್ಶನ ನೀಡಲಿ ಎಂದು ನಾವೆಲ್ಲರೂ ಆಶಿಸುತ್ತೇವೆ. ಅದೇ ರೀತಿ ಜಾತಿವಾದಿಗಳು ಹೀಗಲಾದರೂ ತಮ್ಮ ಕೊಳಕು ಪ್ರವೃತ್ತಿ ಬಿಟ್ಟು ಮನುಷ್ಯರಾಗಿ ಆಲೋಚಿಸುವುದನ್ನು ಕಲಿಯಬೇಕಿದೆ.


ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...