Homeಕರ್ನಾಟಕಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

- Advertisement -
- Advertisement -

ಕೊರೊನಾ ಬಗ್ಗೆ ಇರುವ ಹಾಗೂ ಹರಡುತ್ತಿರುವ ಸುಳ್ಳು ಸುದ್ದಿಗಳಾಚೆಗೆ ಕರ್ನಾಟಕದ ಕೊರೊನಾ ಸೋಂಕಿನಿಂದ ಗುಣಮುಖರಾದ ಮೊದಲ ವ್ಯಕ್ತಿ ವೆಂಕಟ್ ಪಿ.ಕೆ. ಅವರು ತನ್ನ ಮನದ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಜೊತೆಗೆ ಕೊರೊನ ಬಗ್ಗೆ ಇರುವ ತಪ್ಪು ಅಭಿಪ್ರಾಯಗಳ ಬಗ್ಗೆ ಕೂಡಾ ಜಾಗೃತರಾಗುವಂತೆ ಹೇಳಿ ಸೋಂಕು ಬಂದರೂ ಭಯಪಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಅವರೇ ಹೇಳಿಕೊಂಡಿರುವಂತೆ ವೆಂಕಟ್ ಪಿ.ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ. ಕೊರೊನಾ ವೈರಸ್ ಸೋಂಕಿದ್ದರಿಂದ ಇವರು ರಾಜಿವ್ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಕೆಲವು ದಿನಗಳಿದ್ದ ನಂತರ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.

ಹಲವಾರು ಜನ ಇವರೊಂದಿಗೆ, ನಿಮಗೆ ಹೇಗೆ ಕೊರೊನಾ ಬಂತು ಎಂದು ಕೇಳಿದ್ದರಿಂದ ಹಾಗೂ ಸೋಂಕಿನ ಬಗ್ಗೆ ಹಲವಾರು ತಪ್ಪು ಅಭಿಪ್ರಾಯಗಳು ಇರುವುದರಿಂದ ಈ ವಿಡಿಯೊ ಮಾಡುತ್ತಿದ್ದೇನೆ ಎಂದು ವೆಂಕಟ್ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

“ನಾನು ಮಾರ್ಚ್ ಮೊದಲ ವಾರದಲ್ಲಿ ಅಮೆರಿಕಾಕ್ಕೆ ಪ್ರಯಾಣ ಬೆಳೆಸಿದ್ದೆ. ನಾನು ಆದಷ್ಟು ಜಾಗರೂಕನಾಗಿದ್ದರೂ ವಿಮಾನ ನಿಲ್ದಾಣದಲ್ಲಿ ಸೋಂಕಿರುವವರು ಬಳಸಿದ ಬಾತ್‌ರೂಮಿನಿಂದ, ಸೆಕ್ಯೂರಿಟಿಗಾಗಿ ಬಳಸುವ ಬೆರಳಚ್ಚು ಸ್ಕಾನ್‌ನಿಂದ ಅಥವಾ ಸೋಂಕಿರುವವರು ಉಸಿರಾಡಿದ ಗಾಳಿ ಕುಡಿದಿದ್ದರಿಂದಲೂ ಇದು ನನಗೆ ಬಂದಿರಬಹುದು” ಎಂದು ವೆಂಕಟ್ ಹೇಳುತ್ತಾರೆ.

ವೆಂಕಟ್ ಹೇಳುವಂತೆ “ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿರುವಾಗಲೆ ನನಗೆ ಜ್ವರ ಶುರುವಾಗಿತ್ತು. ನಾನು ಮೊದಲಿಗೆ ಸಾಧಾರಣ ಜ್ವರ ಆಗಿರಬಹುದು ಎಂದು ಭಾವಿಸಿ ಕೆಲವು ಮಾತ್ರೆಗಳನ್ನು ತೆಗೆದುಕೊಂಡೆ. ನಾನು ವಾಪಾಸು ಬಂದು ಏರ್‌ಪೋರ್ಟಿನಲ್ಲಿ ನನ್ನ ಜ್ವರದ ಬಗ್ಗೆ ಹೇಳಿದೆ. ಏರ್‌ಪೋರ್ಟಿನ ಡಾಕ್ಟರುಗಳ ಕೈಯ್ಯಲ್ಲಿ ಸಾಕಷ್ಟು ವೈದ್ಯಕೀಯ ಸಲಕರಣೆಗಳು ಇರಲಿಲ್ಲ, ಯಾಕೆಂದರೆ ಅವರಿನ್ನೂ ಅದರ ತಯಾರಿಯಲ್ಲಿದ್ದರು.” ಎನ್ನುತ್ತಾರೆ.

“ಅಲ್ಲಿಂದ ಕ್ಲಿಯರೆನ್ಸ್ ಪಡೆದು ಮನೆಗೆ ಬಂದೆನಾದರೂ ನನ್ನ ಹೆಂಡತಿಯೊಂದಿಗೆ ನನಗೆ ಏನೋ ಆಗುತ್ತಿದೆ, ನನ್ನಿಂದ ಅಂತರದಲ್ಲಿರುವಂತೆ ಹೇಳಿ ನನ್ನ ಮನೆಯ ಮಹಡಿಗೆ ಹೋದೆ. ನಂತರ ನಾನು ರಾಜೀವ್ ಗಾಂಧಿ ಆಸ್ಪತ್ರೆಗೆ ಹೋಗಿ ಪರೀಕ್ಷೆಗೆ ಒಳಗಾದೆ. ಪರೀಕ್ಷೆಗೊಳಗಾದ ಮರುದಿನ ಮಧ್ಯಾನ್ಹ ನನ್ನಲ್ಲಿ ವೈರಸ್ ಇರುವುದು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗುವಂತೆ ಆಸ್ಪತ್ರೆಯಿಂದ ಫೋನ್ ಬಂತು. ನಾನು ತಕ್ಷಣವೇ ಮನೆಯಿಂದ ಹೊರಟು ಆಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾದೆ” ಎಂದು ವೆಂಕಟ್ ಹೇಳುತ್ತರೆ.

ವಿಡಿಯೋ ನೋಡಿ

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

Posted by Naanu Gauri on Thursday, April 2, 2020

“ಜ್ವರವು ಮುಂಜಾನೆ 102 ಡಿಗ್ರಿ ಹಾಗೂ ಹಗಲು ಹೊತ್ತು 100 ಡಿಗ್ರಿ ಆಗಿರುತ್ತಿತ್ತು. ನನಗೆ ಮೊದಲಿಗೆ ಅನಿಸಿದ್ದು ನನ್ನ ದೇಶಕ್ಕೆ ಕಟ್ಟಿದ್ದ ತೆರಿಗೆ ಸಾರ್ಥಕ ಆಗಿದೆ ಎಂದು. ಯಾಕೆಂದರೆ ಅಷ್ಟೊಂದು ಸೇವಾ ಮನೋಭಾವದ ವೈದ್ಯರು ಅಲ್ಲಿದ್ದರು. ಸಾಮಾನ್ಯಾಗಿ ಆಂಟಿಬಯಾಟಿಕ್ಸ್ ಕೊಡುತ್ತಿದ್ದರು. ಸುಸ್ತಾದಾಗ ಐವಿ ಕೇಳಿ ಐವಿಯನ್ನು ಹಾಕುತ್ತಿದ್ದೆ. ಎರಡು ವಾರಗಳವರೆಗೂ ಜ್ವರ ಇತ್ತು. ಸಾಮಾನ್ಯವಾಗಿ ನನಗೆ ಇಷ್ಟು ದಿನದ ಜ್ವರದ ಅನುಭವವೇ ಆಗಿರಲಿಲ್ಲ. ಎರಡು ವಾರಗಳ ನಂತರ ನನ್ನ ಜ್ವರ ನಿಂತಿತು. ಜ್ವರ ಬಿಟ್ಟು ಐದು ಪರೀಕ್ಷೆಗಳು ನಡೆಸಿದ ನಂತರ ಕೊರೊನಾ ನೆಗೆಟಿವ್ ಆಗಿರುವುದು ತಿಳಿದು ಬಂತು” ಎಂದು ಅವರು ಹೇಳುತ್ತಾರೆ.

ಸ್ವತಃ ವೆಂಕಟ್ ಕೊರೊನವನ್ನು ತಡೆಯಬಹುದಾಗಿದೆ ಎಂದು ಧೈರ್ಯ ತುಂಬುತ್ತಾರೆ. “ಸೋಂಕಿನ ಬಗ್ಗೆ ಹಲವಾರು ಸುಳ್ಳು ಸುದ್ದಿಗಳು ಹರಡುತ್ತಿವೆ. ಇದನ್ನು ಮೂರು ದಾರಿಯಲ್ಲಿ ತಡೆಗಟ್ಟಬಹುದಾಗಿದೆ. ಮೊದಲನೆಯದಾಗಿ ಮುಖಕ್ಕೆ ಮಾಸ್ಕ್ ಹಾಕುವುದರ ಮೂಲಕ ಇನ್ನೊಬ್ಬರಿಗೆ ರೋಗ ಹರಡದಿರುವಂತೆ ಮಾಡಬಹುದು. ಎರಡನೆಯದಾಗಿ ನಿಮ್ಮ ಕೈಗಳನ್ನು ತೊಳೆಯುತ್ತಿರಿ ಹಾಗೂ ನಿಮ್ಮ ಮುಖವನ್ನು ಕೈ ತೊಳೆಯದೆ ಮುಟ್ಟದಿರಿ. ಮೂರನೆಯದಾಗಿ ನಿಮ್ಮ ವಸ್ತುಗಳನ್ನು ಪ್ರತ್ಯೇಕವಾಗಿ ಇಟ್ಟು ಬಿಡಿ” ಎಂದು ವೆಂಕಟ್ ಹೇಳುತ್ತಾರೆ.

ಈ ರೋಗವು ತಡೆಗಟ್ಟುವಂತದ್ದಾಗಿದೆ ಎನ್ನುವ ವೆಂಕಟ್, “ನೀವು ಅದರಿಂದ ಹೊರಗೆ ಬರಬಹುದಾಗಿದೆ. ಸೋಂಕಿತರಿಗೆ ನನ್ನ ಶುಭ ಹಾರೈಕೆ ಇರುತ್ತದೆ. ಭಯದಿಂದ ದೂರವಿರಿ, ಇದು ನಿಮಗೆ ಬರದೇ ಇರಲಿ, ಒಂದು ವೇಳೆ ಬಂದರೂ ಅದನ್ನು ತಡೆಗಟ್ಟಬಹುದಾಗಿದೆ” ಎಂದು ಅವರ ತನ್ನ ವಿಡಿಯೊದಲ್ಲಿ ಧೈರ್ಯ ಹೇಳುತ್ತಾರೆ.

ವೆಂಕಟ್‌ರವರು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಹಾಕಿಕೊಂಡಿರುವ ವಿಡಿಯೋ ವೈರಲ್‌ ಆಗಿದ್ದು ಬಹಳಷ್ಟು ಜನ ಷೇರ್‌ ಮಾಡಿದ್ದಾರೆ. ಹಾಗೆಯೇ ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನ ಸಾಂಕ್ರಾಮಿಕ ಬಿಕ್ಕಟ್ಟಿನ ಬೆಂಕಿಗೆ ಪುಳ್ಳೆಯಿಟ್ಟ ವೈಜ್ಞಾನಿಕ ಮನೋಭಾವದ ಅಭಾವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...