Homeಕರ್ನಾಟಕಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

- Advertisement -
- Advertisement -

ಕೊರೊನಾ ಬಗ್ಗೆ ಇರುವ ಹಾಗೂ ಹರಡುತ್ತಿರುವ ಸುಳ್ಳು ಸುದ್ದಿಗಳಾಚೆಗೆ ಕರ್ನಾಟಕದ ಕೊರೊನಾ ಸೋಂಕಿನಿಂದ ಗುಣಮುಖರಾದ ಮೊದಲ ವ್ಯಕ್ತಿ ವೆಂಕಟ್ ಪಿ.ಕೆ. ಅವರು ತನ್ನ ಮನದ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಜೊತೆಗೆ ಕೊರೊನ ಬಗ್ಗೆ ಇರುವ ತಪ್ಪು ಅಭಿಪ್ರಾಯಗಳ ಬಗ್ಗೆ ಕೂಡಾ ಜಾಗೃತರಾಗುವಂತೆ ಹೇಳಿ ಸೋಂಕು ಬಂದರೂ ಭಯಪಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಅವರೇ ಹೇಳಿಕೊಂಡಿರುವಂತೆ ವೆಂಕಟ್ ಪಿ.ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ. ಕೊರೊನಾ ವೈರಸ್ ಸೋಂಕಿದ್ದರಿಂದ ಇವರು ರಾಜಿವ್ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಕೆಲವು ದಿನಗಳಿದ್ದ ನಂತರ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.

ಹಲವಾರು ಜನ ಇವರೊಂದಿಗೆ, ನಿಮಗೆ ಹೇಗೆ ಕೊರೊನಾ ಬಂತು ಎಂದು ಕೇಳಿದ್ದರಿಂದ ಹಾಗೂ ಸೋಂಕಿನ ಬಗ್ಗೆ ಹಲವಾರು ತಪ್ಪು ಅಭಿಪ್ರಾಯಗಳು ಇರುವುದರಿಂದ ಈ ವಿಡಿಯೊ ಮಾಡುತ್ತಿದ್ದೇನೆ ಎಂದು ವೆಂಕಟ್ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

“ನಾನು ಮಾರ್ಚ್ ಮೊದಲ ವಾರದಲ್ಲಿ ಅಮೆರಿಕಾಕ್ಕೆ ಪ್ರಯಾಣ ಬೆಳೆಸಿದ್ದೆ. ನಾನು ಆದಷ್ಟು ಜಾಗರೂಕನಾಗಿದ್ದರೂ ವಿಮಾನ ನಿಲ್ದಾಣದಲ್ಲಿ ಸೋಂಕಿರುವವರು ಬಳಸಿದ ಬಾತ್‌ರೂಮಿನಿಂದ, ಸೆಕ್ಯೂರಿಟಿಗಾಗಿ ಬಳಸುವ ಬೆರಳಚ್ಚು ಸ್ಕಾನ್‌ನಿಂದ ಅಥವಾ ಸೋಂಕಿರುವವರು ಉಸಿರಾಡಿದ ಗಾಳಿ ಕುಡಿದಿದ್ದರಿಂದಲೂ ಇದು ನನಗೆ ಬಂದಿರಬಹುದು” ಎಂದು ವೆಂಕಟ್ ಹೇಳುತ್ತಾರೆ.

ವೆಂಕಟ್ ಹೇಳುವಂತೆ “ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿರುವಾಗಲೆ ನನಗೆ ಜ್ವರ ಶುರುವಾಗಿತ್ತು. ನಾನು ಮೊದಲಿಗೆ ಸಾಧಾರಣ ಜ್ವರ ಆಗಿರಬಹುದು ಎಂದು ಭಾವಿಸಿ ಕೆಲವು ಮಾತ್ರೆಗಳನ್ನು ತೆಗೆದುಕೊಂಡೆ. ನಾನು ವಾಪಾಸು ಬಂದು ಏರ್‌ಪೋರ್ಟಿನಲ್ಲಿ ನನ್ನ ಜ್ವರದ ಬಗ್ಗೆ ಹೇಳಿದೆ. ಏರ್‌ಪೋರ್ಟಿನ ಡಾಕ್ಟರುಗಳ ಕೈಯ್ಯಲ್ಲಿ ಸಾಕಷ್ಟು ವೈದ್ಯಕೀಯ ಸಲಕರಣೆಗಳು ಇರಲಿಲ್ಲ, ಯಾಕೆಂದರೆ ಅವರಿನ್ನೂ ಅದರ ತಯಾರಿಯಲ್ಲಿದ್ದರು.” ಎನ್ನುತ್ತಾರೆ.

“ಅಲ್ಲಿಂದ ಕ್ಲಿಯರೆನ್ಸ್ ಪಡೆದು ಮನೆಗೆ ಬಂದೆನಾದರೂ ನನ್ನ ಹೆಂಡತಿಯೊಂದಿಗೆ ನನಗೆ ಏನೋ ಆಗುತ್ತಿದೆ, ನನ್ನಿಂದ ಅಂತರದಲ್ಲಿರುವಂತೆ ಹೇಳಿ ನನ್ನ ಮನೆಯ ಮಹಡಿಗೆ ಹೋದೆ. ನಂತರ ನಾನು ರಾಜೀವ್ ಗಾಂಧಿ ಆಸ್ಪತ್ರೆಗೆ ಹೋಗಿ ಪರೀಕ್ಷೆಗೆ ಒಳಗಾದೆ. ಪರೀಕ್ಷೆಗೊಳಗಾದ ಮರುದಿನ ಮಧ್ಯಾನ್ಹ ನನ್ನಲ್ಲಿ ವೈರಸ್ ಇರುವುದು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗುವಂತೆ ಆಸ್ಪತ್ರೆಯಿಂದ ಫೋನ್ ಬಂತು. ನಾನು ತಕ್ಷಣವೇ ಮನೆಯಿಂದ ಹೊರಟು ಆಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾದೆ” ಎಂದು ವೆಂಕಟ್ ಹೇಳುತ್ತರೆ.

ವಿಡಿಯೋ ನೋಡಿ

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

Posted by Naanu Gauri on Thursday, April 2, 2020

“ಜ್ವರವು ಮುಂಜಾನೆ 102 ಡಿಗ್ರಿ ಹಾಗೂ ಹಗಲು ಹೊತ್ತು 100 ಡಿಗ್ರಿ ಆಗಿರುತ್ತಿತ್ತು. ನನಗೆ ಮೊದಲಿಗೆ ಅನಿಸಿದ್ದು ನನ್ನ ದೇಶಕ್ಕೆ ಕಟ್ಟಿದ್ದ ತೆರಿಗೆ ಸಾರ್ಥಕ ಆಗಿದೆ ಎಂದು. ಯಾಕೆಂದರೆ ಅಷ್ಟೊಂದು ಸೇವಾ ಮನೋಭಾವದ ವೈದ್ಯರು ಅಲ್ಲಿದ್ದರು. ಸಾಮಾನ್ಯಾಗಿ ಆಂಟಿಬಯಾಟಿಕ್ಸ್ ಕೊಡುತ್ತಿದ್ದರು. ಸುಸ್ತಾದಾಗ ಐವಿ ಕೇಳಿ ಐವಿಯನ್ನು ಹಾಕುತ್ತಿದ್ದೆ. ಎರಡು ವಾರಗಳವರೆಗೂ ಜ್ವರ ಇತ್ತು. ಸಾಮಾನ್ಯವಾಗಿ ನನಗೆ ಇಷ್ಟು ದಿನದ ಜ್ವರದ ಅನುಭವವೇ ಆಗಿರಲಿಲ್ಲ. ಎರಡು ವಾರಗಳ ನಂತರ ನನ್ನ ಜ್ವರ ನಿಂತಿತು. ಜ್ವರ ಬಿಟ್ಟು ಐದು ಪರೀಕ್ಷೆಗಳು ನಡೆಸಿದ ನಂತರ ಕೊರೊನಾ ನೆಗೆಟಿವ್ ಆಗಿರುವುದು ತಿಳಿದು ಬಂತು” ಎಂದು ಅವರು ಹೇಳುತ್ತಾರೆ.

ಸ್ವತಃ ವೆಂಕಟ್ ಕೊರೊನವನ್ನು ತಡೆಯಬಹುದಾಗಿದೆ ಎಂದು ಧೈರ್ಯ ತುಂಬುತ್ತಾರೆ. “ಸೋಂಕಿನ ಬಗ್ಗೆ ಹಲವಾರು ಸುಳ್ಳು ಸುದ್ದಿಗಳು ಹರಡುತ್ತಿವೆ. ಇದನ್ನು ಮೂರು ದಾರಿಯಲ್ಲಿ ತಡೆಗಟ್ಟಬಹುದಾಗಿದೆ. ಮೊದಲನೆಯದಾಗಿ ಮುಖಕ್ಕೆ ಮಾಸ್ಕ್ ಹಾಕುವುದರ ಮೂಲಕ ಇನ್ನೊಬ್ಬರಿಗೆ ರೋಗ ಹರಡದಿರುವಂತೆ ಮಾಡಬಹುದು. ಎರಡನೆಯದಾಗಿ ನಿಮ್ಮ ಕೈಗಳನ್ನು ತೊಳೆಯುತ್ತಿರಿ ಹಾಗೂ ನಿಮ್ಮ ಮುಖವನ್ನು ಕೈ ತೊಳೆಯದೆ ಮುಟ್ಟದಿರಿ. ಮೂರನೆಯದಾಗಿ ನಿಮ್ಮ ವಸ್ತುಗಳನ್ನು ಪ್ರತ್ಯೇಕವಾಗಿ ಇಟ್ಟು ಬಿಡಿ” ಎಂದು ವೆಂಕಟ್ ಹೇಳುತ್ತಾರೆ.

ಈ ರೋಗವು ತಡೆಗಟ್ಟುವಂತದ್ದಾಗಿದೆ ಎನ್ನುವ ವೆಂಕಟ್, “ನೀವು ಅದರಿಂದ ಹೊರಗೆ ಬರಬಹುದಾಗಿದೆ. ಸೋಂಕಿತರಿಗೆ ನನ್ನ ಶುಭ ಹಾರೈಕೆ ಇರುತ್ತದೆ. ಭಯದಿಂದ ದೂರವಿರಿ, ಇದು ನಿಮಗೆ ಬರದೇ ಇರಲಿ, ಒಂದು ವೇಳೆ ಬಂದರೂ ಅದನ್ನು ತಡೆಗಟ್ಟಬಹುದಾಗಿದೆ” ಎಂದು ಅವರ ತನ್ನ ವಿಡಿಯೊದಲ್ಲಿ ಧೈರ್ಯ ಹೇಳುತ್ತಾರೆ.

ವೆಂಕಟ್‌ರವರು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಹಾಕಿಕೊಂಡಿರುವ ವಿಡಿಯೋ ವೈರಲ್‌ ಆಗಿದ್ದು ಬಹಳಷ್ಟು ಜನ ಷೇರ್‌ ಮಾಡಿದ್ದಾರೆ. ಹಾಗೆಯೇ ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನ ಸಾಂಕ್ರಾಮಿಕ ಬಿಕ್ಕಟ್ಟಿನ ಬೆಂಕಿಗೆ ಪುಳ್ಳೆಯಿಟ್ಟ ವೈಜ್ಞಾನಿಕ ಮನೋಭಾವದ ಅಭಾವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...