Homeಕರ್ನಾಟಕಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

- Advertisement -
- Advertisement -

ಕೊರೊನಾ ಬಗ್ಗೆ ಇರುವ ಹಾಗೂ ಹರಡುತ್ತಿರುವ ಸುಳ್ಳು ಸುದ್ದಿಗಳಾಚೆಗೆ ಕರ್ನಾಟಕದ ಕೊರೊನಾ ಸೋಂಕಿನಿಂದ ಗುಣಮುಖರಾದ ಮೊದಲ ವ್ಯಕ್ತಿ ವೆಂಕಟ್ ಪಿ.ಕೆ. ಅವರು ತನ್ನ ಮನದ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಜೊತೆಗೆ ಕೊರೊನ ಬಗ್ಗೆ ಇರುವ ತಪ್ಪು ಅಭಿಪ್ರಾಯಗಳ ಬಗ್ಗೆ ಕೂಡಾ ಜಾಗೃತರಾಗುವಂತೆ ಹೇಳಿ ಸೋಂಕು ಬಂದರೂ ಭಯಪಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಅವರೇ ಹೇಳಿಕೊಂಡಿರುವಂತೆ ವೆಂಕಟ್ ಪಿ.ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ. ಕೊರೊನಾ ವೈರಸ್ ಸೋಂಕಿದ್ದರಿಂದ ಇವರು ರಾಜಿವ್ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಕೆಲವು ದಿನಗಳಿದ್ದ ನಂತರ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.

ಹಲವಾರು ಜನ ಇವರೊಂದಿಗೆ, ನಿಮಗೆ ಹೇಗೆ ಕೊರೊನಾ ಬಂತು ಎಂದು ಕೇಳಿದ್ದರಿಂದ ಹಾಗೂ ಸೋಂಕಿನ ಬಗ್ಗೆ ಹಲವಾರು ತಪ್ಪು ಅಭಿಪ್ರಾಯಗಳು ಇರುವುದರಿಂದ ಈ ವಿಡಿಯೊ ಮಾಡುತ್ತಿದ್ದೇನೆ ಎಂದು ವೆಂಕಟ್ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

“ನಾನು ಮಾರ್ಚ್ ಮೊದಲ ವಾರದಲ್ಲಿ ಅಮೆರಿಕಾಕ್ಕೆ ಪ್ರಯಾಣ ಬೆಳೆಸಿದ್ದೆ. ನಾನು ಆದಷ್ಟು ಜಾಗರೂಕನಾಗಿದ್ದರೂ ವಿಮಾನ ನಿಲ್ದಾಣದಲ್ಲಿ ಸೋಂಕಿರುವವರು ಬಳಸಿದ ಬಾತ್‌ರೂಮಿನಿಂದ, ಸೆಕ್ಯೂರಿಟಿಗಾಗಿ ಬಳಸುವ ಬೆರಳಚ್ಚು ಸ್ಕಾನ್‌ನಿಂದ ಅಥವಾ ಸೋಂಕಿರುವವರು ಉಸಿರಾಡಿದ ಗಾಳಿ ಕುಡಿದಿದ್ದರಿಂದಲೂ ಇದು ನನಗೆ ಬಂದಿರಬಹುದು” ಎಂದು ವೆಂಕಟ್ ಹೇಳುತ್ತಾರೆ.

ವೆಂಕಟ್ ಹೇಳುವಂತೆ “ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿರುವಾಗಲೆ ನನಗೆ ಜ್ವರ ಶುರುವಾಗಿತ್ತು. ನಾನು ಮೊದಲಿಗೆ ಸಾಧಾರಣ ಜ್ವರ ಆಗಿರಬಹುದು ಎಂದು ಭಾವಿಸಿ ಕೆಲವು ಮಾತ್ರೆಗಳನ್ನು ತೆಗೆದುಕೊಂಡೆ. ನಾನು ವಾಪಾಸು ಬಂದು ಏರ್‌ಪೋರ್ಟಿನಲ್ಲಿ ನನ್ನ ಜ್ವರದ ಬಗ್ಗೆ ಹೇಳಿದೆ. ಏರ್‌ಪೋರ್ಟಿನ ಡಾಕ್ಟರುಗಳ ಕೈಯ್ಯಲ್ಲಿ ಸಾಕಷ್ಟು ವೈದ್ಯಕೀಯ ಸಲಕರಣೆಗಳು ಇರಲಿಲ್ಲ, ಯಾಕೆಂದರೆ ಅವರಿನ್ನೂ ಅದರ ತಯಾರಿಯಲ್ಲಿದ್ದರು.” ಎನ್ನುತ್ತಾರೆ.

“ಅಲ್ಲಿಂದ ಕ್ಲಿಯರೆನ್ಸ್ ಪಡೆದು ಮನೆಗೆ ಬಂದೆನಾದರೂ ನನ್ನ ಹೆಂಡತಿಯೊಂದಿಗೆ ನನಗೆ ಏನೋ ಆಗುತ್ತಿದೆ, ನನ್ನಿಂದ ಅಂತರದಲ್ಲಿರುವಂತೆ ಹೇಳಿ ನನ್ನ ಮನೆಯ ಮಹಡಿಗೆ ಹೋದೆ. ನಂತರ ನಾನು ರಾಜೀವ್ ಗಾಂಧಿ ಆಸ್ಪತ್ರೆಗೆ ಹೋಗಿ ಪರೀಕ್ಷೆಗೆ ಒಳಗಾದೆ. ಪರೀಕ್ಷೆಗೊಳಗಾದ ಮರುದಿನ ಮಧ್ಯಾನ್ಹ ನನ್ನಲ್ಲಿ ವೈರಸ್ ಇರುವುದು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗುವಂತೆ ಆಸ್ಪತ್ರೆಯಿಂದ ಫೋನ್ ಬಂತು. ನಾನು ತಕ್ಷಣವೇ ಮನೆಯಿಂದ ಹೊರಟು ಆಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾದೆ” ಎಂದು ವೆಂಕಟ್ ಹೇಳುತ್ತರೆ.

ವಿಡಿಯೋ ನೋಡಿ

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

ಕೊರೊನಾ ಜಯಿಸಿದ ಕರ್ನಾಟಕದ ಮೊದಲ ವ್ಯಕ್ತಿಯ ಮನದ ಮಾತುಗಳು

Posted by Naanu Gauri on Thursday, April 2, 2020

“ಜ್ವರವು ಮುಂಜಾನೆ 102 ಡಿಗ್ರಿ ಹಾಗೂ ಹಗಲು ಹೊತ್ತು 100 ಡಿಗ್ರಿ ಆಗಿರುತ್ತಿತ್ತು. ನನಗೆ ಮೊದಲಿಗೆ ಅನಿಸಿದ್ದು ನನ್ನ ದೇಶಕ್ಕೆ ಕಟ್ಟಿದ್ದ ತೆರಿಗೆ ಸಾರ್ಥಕ ಆಗಿದೆ ಎಂದು. ಯಾಕೆಂದರೆ ಅಷ್ಟೊಂದು ಸೇವಾ ಮನೋಭಾವದ ವೈದ್ಯರು ಅಲ್ಲಿದ್ದರು. ಸಾಮಾನ್ಯಾಗಿ ಆಂಟಿಬಯಾಟಿಕ್ಸ್ ಕೊಡುತ್ತಿದ್ದರು. ಸುಸ್ತಾದಾಗ ಐವಿ ಕೇಳಿ ಐವಿಯನ್ನು ಹಾಕುತ್ತಿದ್ದೆ. ಎರಡು ವಾರಗಳವರೆಗೂ ಜ್ವರ ಇತ್ತು. ಸಾಮಾನ್ಯವಾಗಿ ನನಗೆ ಇಷ್ಟು ದಿನದ ಜ್ವರದ ಅನುಭವವೇ ಆಗಿರಲಿಲ್ಲ. ಎರಡು ವಾರಗಳ ನಂತರ ನನ್ನ ಜ್ವರ ನಿಂತಿತು. ಜ್ವರ ಬಿಟ್ಟು ಐದು ಪರೀಕ್ಷೆಗಳು ನಡೆಸಿದ ನಂತರ ಕೊರೊನಾ ನೆಗೆಟಿವ್ ಆಗಿರುವುದು ತಿಳಿದು ಬಂತು” ಎಂದು ಅವರು ಹೇಳುತ್ತಾರೆ.

ಸ್ವತಃ ವೆಂಕಟ್ ಕೊರೊನವನ್ನು ತಡೆಯಬಹುದಾಗಿದೆ ಎಂದು ಧೈರ್ಯ ತುಂಬುತ್ತಾರೆ. “ಸೋಂಕಿನ ಬಗ್ಗೆ ಹಲವಾರು ಸುಳ್ಳು ಸುದ್ದಿಗಳು ಹರಡುತ್ತಿವೆ. ಇದನ್ನು ಮೂರು ದಾರಿಯಲ್ಲಿ ತಡೆಗಟ್ಟಬಹುದಾಗಿದೆ. ಮೊದಲನೆಯದಾಗಿ ಮುಖಕ್ಕೆ ಮಾಸ್ಕ್ ಹಾಕುವುದರ ಮೂಲಕ ಇನ್ನೊಬ್ಬರಿಗೆ ರೋಗ ಹರಡದಿರುವಂತೆ ಮಾಡಬಹುದು. ಎರಡನೆಯದಾಗಿ ನಿಮ್ಮ ಕೈಗಳನ್ನು ತೊಳೆಯುತ್ತಿರಿ ಹಾಗೂ ನಿಮ್ಮ ಮುಖವನ್ನು ಕೈ ತೊಳೆಯದೆ ಮುಟ್ಟದಿರಿ. ಮೂರನೆಯದಾಗಿ ನಿಮ್ಮ ವಸ್ತುಗಳನ್ನು ಪ್ರತ್ಯೇಕವಾಗಿ ಇಟ್ಟು ಬಿಡಿ” ಎಂದು ವೆಂಕಟ್ ಹೇಳುತ್ತಾರೆ.

ಈ ರೋಗವು ತಡೆಗಟ್ಟುವಂತದ್ದಾಗಿದೆ ಎನ್ನುವ ವೆಂಕಟ್, “ನೀವು ಅದರಿಂದ ಹೊರಗೆ ಬರಬಹುದಾಗಿದೆ. ಸೋಂಕಿತರಿಗೆ ನನ್ನ ಶುಭ ಹಾರೈಕೆ ಇರುತ್ತದೆ. ಭಯದಿಂದ ದೂರವಿರಿ, ಇದು ನಿಮಗೆ ಬರದೇ ಇರಲಿ, ಒಂದು ವೇಳೆ ಬಂದರೂ ಅದನ್ನು ತಡೆಗಟ್ಟಬಹುದಾಗಿದೆ” ಎಂದು ಅವರ ತನ್ನ ವಿಡಿಯೊದಲ್ಲಿ ಧೈರ್ಯ ಹೇಳುತ್ತಾರೆ.

ವೆಂಕಟ್‌ರವರು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಹಾಕಿಕೊಂಡಿರುವ ವಿಡಿಯೋ ವೈರಲ್‌ ಆಗಿದ್ದು ಬಹಳಷ್ಟು ಜನ ಷೇರ್‌ ಮಾಡಿದ್ದಾರೆ. ಹಾಗೆಯೇ ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನ ಸಾಂಕ್ರಾಮಿಕ ಬಿಕ್ಕಟ್ಟಿನ ಬೆಂಕಿಗೆ ಪುಳ್ಳೆಯಿಟ್ಟ ವೈಜ್ಞಾನಿಕ ಮನೋಭಾವದ ಅಭಾವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...