Homeಅಂಕಣಗಳುಬಿ. ಚಂದ್ರೇಗೌಡರ ಕಟ್ಟೆಪುರಾಣ - ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

ಬಿ. ಚಂದ್ರೇಗೌಡರ ಕಟ್ಟೆಪುರಾಣ – ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

- Advertisement -
- Advertisement -

‘ಅಂತು ಎಡೂರಪ್ಪ ಕಡಿಗೂ ವಸಿ ಸಡ್ಳ ಮಾಡಿದ’ ಎಂದ ವಾಟಿಸ್ಸೆ.

‘ಮೋದಿಗಿಂತ ಪರವಾಗಿಲ್ಲ ಕಣೊ ಎಡೂರಪ್ಪ’ ಎಂದ ಉಗ್ರಿ.

‘ಅಂಗರಿವುನೆ ಪ್ರಧಾನಿಯಾಗಬೇಕಿತ್ತು ಕಂಡ್ಳ’ ಎಂದಳು ಜುಮ್ಮಿ.

‘ನೀನೇಳದು ನಿಜಕಣಕ್ಕ ಎಡೂರಪ್ಪ ಪ್ರಧಾನಿಯಾಗಿದ್ರೆ ಚನ್ನಾಗಿತ್ತು’.

‘ಮೋದಿ ತರದೊನು ಪ್ರಪಂಚದಲ್ಲೇ ಇಲ್ಲ ಅಂತ ಆ ಚಡ್ಡಿ ಮಂಜ ಹೇಳಿಕಂಡು ತಿರುಗ್ತನೆ’.

‘ಅವುಂದಿರ್ಲಿ ಇನ್ಯಾವಳೊ ವಾಟ್ಸಾಪ್ ಮಾಡ್ಯವುಳೆ ಕಣೊ ಉಗ್ರೀ, ಮೋದಿ ಸಾಧನೆ ನೋಡಿದ್ರೆ ಅವುನಂಥೊನಿಲ್ಲ ಅಂದವುಳೆ’.

‘ಅವುಳ್ಯಾವಳ್ಳ’ ಎಂದಳು ಜುಮ್ಮಿ.

‘ಅವುಳ್ಯಾವಳು ಅನ್ನಕ್ಕೆ ಬರದಿಲ್ಲ ಕಣಕ್ಕ. ಒಂದೊಂದು ಸತಿ ಬಿಜೆಪಿಗಳೆ ಬೃಹನ್ನಳೆಯಾಗಿ ಮೋದಿ ಸಾಧನೆ ಒಂದು ಮಹಿಳೆ ಹೆಸರಲ್ಲಿ ವ್ಯಾಟ್ಸಾಪ್ ಮಾಡಿಬುಡ್ತವೆ. ಆಗೇನೀಸಗಂಡೀ’.

‘ಅಂಗೂ ಮಾಡ್ತವ’.

‘ಅಂಗೂ ಮಾಡ್ತವಾ ಅಂತಿಯಲ್ಲಕ್ಕ, ಅವು ಮಾಡದೆ ಅಂಗೆ’.

‘ಮೋದಿಯಾ ಅಂಗೆ ಹೊಗಳಿಬುಟ್ಟವುಳಲ್ಲ ಅವುನು ಬಂದಮ್ಯಾಲೆ ಏಟು ಜನ ಸತೃ ಗೊತ್ತೆ’ ಎಂದ ಉಗ್ರಿ.

‘ಏಟು ಜನ ಸತ್ತಿದ್ದರ್ಲ’.

‘ನೋಡೆ ಅವುನು ಗುಜರಾತಿನ ಮುಖ್ಯಮಂತ್ರಿಯಾದಾಗ ಸರಕಾರನೆ ಬಳಸಿ ಸಾವುರಾರು ಜನ ಸಾಬರು ಸಾಯಂಗೆ ಮಾಡಿದ’.

‘ನಿಜವೇನ್ಲ’.

‘ಮರತುಬುಟ್ಟೇನೆ ನೀನು, ಅದ್ಕೆ ಪೇಪರ್ ಓದದ ಕಲ್ತಕೊ ಅನ್ನದು’.

‘ಪೇಪರ್ರ ಮೋದಿನೆ ಓತ್ತನೊ ಇಲುವೊ ಅವುಳಿಗೇಳ್ತಿಯಲ್ಲೊ ಉಗ್ರಿ’.

‘ನಿಜ ಇವತ್ತಿನ ಪೇಪ್ರ ಓದ್ದೆಯಿದ್ರೂ ಆಯ್ತದೆ’ ಎಂದ ವಾಟಿಸ್ಸೆ.

‘ಟಿವಿ ನೊಡದೆಯಿದ್ರು ಆಯ್ತದೆ ಕಣೊ’ ಎಂದ ಉಗ್ರಿ.

‘ಮೋದಿಗೇನು ಹೇಳ್ಳ.

‘ಸಾರಿ ಕಣಕ್ಕ, ಮೋದಿ ರಾತ್ರೊ ರಾತ್ರಿ ನೋಟ್‍ಬ್ಯಾನ್ ಮಾಡಿದ. ಆಗ ನೂರಾರು ಜನ ಸತೃ. ನಮ್ಮ ಯಸ್ಸೆಂ ಕಿಸ್ಣನಳಿಯ ನೀರಿಗೆ ಬಿದ್ದು ತೀರೊದದ್ದು ಅದ್ಕೆಯಾ’.

‘ಪಾಪ ಅವುನ್ನ ನ್ಯನಿಸಿಗಂಡ್ರೆ ಹ್ವಟ್ಯಲ್ಲ ಉರಿತದೆ’.

‘ಅಮ್ಯಾಲೆ ಮೋದಿ ಸಿಎಎ ಅಂತ ತಂದ. ಅದರ ಗಲಾಟಿ ಗೋಲಿಬಾರಲ್ಲಿ ಜನ ಸತೃ. ಅದೂ ಸಾಬರು’.

‘ಅದ್ಕೆ ಸಾಬ್ರು ಕರೋನಾ ತಂದು ಹಬ್ಬುಸ್ತಾ ಅವುರೆ ಅಂತ ಚೆಡ್ಡಿ ಮಂಜ ಹೇಳತಿದ್ದ ಕಂಡ್ಳ’.

‘ಯಕ್ಕ ಚೆಡ್ಡಿ ಮಂಜನ ಮಾತ ಅತ್ತಗೆ ಮಡಗಿ ಯೋಚನೆ ಮಾಡು ಬಂಬಾಯಿಂದ ಸಾತೆನಳ್ಳಿಗೆ ಬಂದು ಸುತ್ಲಳ್ಳಿಗ್ಯಲ್ಲ ಕೊರೋನಾ ಹರಡಿದನಲ್ಲ ಅವುನು ಸಾಬರೋನಾ? ನಮ್ಮೋನೆ ಅಲವೇನಕ್ಕ’.

‘!?’

‘ಏನೂ ಬ್ಯಾಡವ್ವ, ತುಪ್ಪದಮಡಕ್ಕೆ ಇಬ್ರು ಬಂಬಾಯಿಂದ ಬಂದವುರೆ. ಅವು ನಮ್ಮ ಸಮಂದಿಕರೆಯ. ಅವುರು ಸಾಬರೆ’.

‘ಅದಿರ್ಲಿ ಕಣೊ ಕೆ.ಆರ್.ಪೇಟೆ ನಾರಾಯಣಗೌಡ ಬಂಬಾಯಿಂದ ಕರುಸ್ತಾ ಅವುನಲ್ಲ ಅವುರಿಗ್ಯಲ್ಲ ಕರೋನಾ ಹಟಕಾಯಿಸಿಗಂಡದೆ, ಅವುರ್ಯಾರು ಸಾಬರಲ್ಲ. ಯಲ್ಲ ನಮ್ಮೋರೆಯ ಇದಕೇನೇಳ್ತಿ’ ಎಂದ ಉಗ್ರಿ.

‘ಈ ಬಿಜೆಪಿಗಳೆ ಅಷ್ಟು ಕಣೊ. ಏನೇ ಆದ್ರು ಸಾಬರಮ್ಯಾಲಾಕ್ತರೆ. ಇಡೀ ದೇಸಕ್ಕೆ ಕರೋನಾ ಹರಡಿದೋರೆ ಅವುರು ಅಂತ ಹೇಳಿಕಂಡು ತಿರುಗ್ತ ಅವುರೆ ಏನು ಮಾಡನ’.

‘ಏನೂ ಮಾಡ ಬ್ಯಾಡ ಸುಳ್ಳೆಳೊ ಸೂಳೆ ಮಕ್ಕಳ ಬಾಯಿಮ್ಯಾಲೆ ಹ್ವಡಕಂಡೋಗಬೇಕು ಆಷ್ಟೆಯ’.

‘ಮೋದಿ ಏನೊ ಲಕ್ಷಾಂತೃಪಾಯಿ ದುಡ್ಡು ಕೊಡ್ತನಂತಲ್ಲಾ’.

‘ಯಾರಿಗೆ ಕೊಡ್ತನಕ್ಕ’.

‘ರೈತರು, ಕೂಲಿಮಾಡೋರು, ಕ್ವಟ್ಣಕುಟ್ಟೋರು ಯಲ್ಲಾರಿಗೂ ಲಕ್ಸ ಲಕ್ಸ ಕೊಡ್ತನಂತೆ’.

‘ಕೊಡ್ತನಿರು ಈಸ್ಕಳಿವೆ’.

‘ಅಂಗರೆ ಕೊಡಕಿಲ್ಲ ಅನ್ನು’.

‘ಅಕ್ಕಾ ಹಾದ್ನೆ ವರಸೆ, ಮಳೆ ವಡದು ಪ್ರವಾಹ ಬಂದು ಜನ ಮನೆ ಮಠ ಕಳಕಂಡು ಬೀದಿಗೆ ಬಿದ್ರು. ಆಗ ಸಿದ್ದರಾಮಯ್ಯ ಒಂದು ಲಕ್ಸ ಕೋಟಿ ಲಾಸಾಗ್ಯದೆ ಅಂದ. ಎಡೂರಪ್ಪ ಮುವ್ವತೆಂಟು ಸಾವುರ ಕೋಟಿ ಲಾಸು ಅಂತ ತೋರಿಸಿ ದುಡ್ಡು ಕೊಡಿ ಅಂತ ಮೋದಿಗೆ ಅರ್ಜಿ ಬರದ. ಆ ಅರ್ಜಿಗೆ ಇವತ್ತಿಗೂ ಉತ್ತರ ಕೊಟ್ಟಿಲ್ಲ ಇನ್ನ ಕೊರೋನಾಕ್ಕೆ ಕಾಸು ಕೊಡ್ತನೇನಕ್ಕ’.

‘ನಿಜವೇನ್ಲ ನೀನೇಳದು’.

‘ಮೋದಿ ತಾಯಿ ಆಣೆ ನಿಜಕಣಕ್ಕ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...