Homeಅಂಕಣಗಳುಬಿ. ಚಂದ್ರೇಗೌಡರ ಕಟ್ಟೆಪುರಾಣ - ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

ಬಿ. ಚಂದ್ರೇಗೌಡರ ಕಟ್ಟೆಪುರಾಣ – ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

- Advertisement -
- Advertisement -

‘ಅಂತು ಎಡೂರಪ್ಪ ಕಡಿಗೂ ವಸಿ ಸಡ್ಳ ಮಾಡಿದ’ ಎಂದ ವಾಟಿಸ್ಸೆ.

‘ಮೋದಿಗಿಂತ ಪರವಾಗಿಲ್ಲ ಕಣೊ ಎಡೂರಪ್ಪ’ ಎಂದ ಉಗ್ರಿ.

‘ಅಂಗರಿವುನೆ ಪ್ರಧಾನಿಯಾಗಬೇಕಿತ್ತು ಕಂಡ್ಳ’ ಎಂದಳು ಜುಮ್ಮಿ.

‘ನೀನೇಳದು ನಿಜಕಣಕ್ಕ ಎಡೂರಪ್ಪ ಪ್ರಧಾನಿಯಾಗಿದ್ರೆ ಚನ್ನಾಗಿತ್ತು’.

‘ಮೋದಿ ತರದೊನು ಪ್ರಪಂಚದಲ್ಲೇ ಇಲ್ಲ ಅಂತ ಆ ಚಡ್ಡಿ ಮಂಜ ಹೇಳಿಕಂಡು ತಿರುಗ್ತನೆ’.

‘ಅವುಂದಿರ್ಲಿ ಇನ್ಯಾವಳೊ ವಾಟ್ಸಾಪ್ ಮಾಡ್ಯವುಳೆ ಕಣೊ ಉಗ್ರೀ, ಮೋದಿ ಸಾಧನೆ ನೋಡಿದ್ರೆ ಅವುನಂಥೊನಿಲ್ಲ ಅಂದವುಳೆ’.

‘ಅವುಳ್ಯಾವಳ್ಳ’ ಎಂದಳು ಜುಮ್ಮಿ.

‘ಅವುಳ್ಯಾವಳು ಅನ್ನಕ್ಕೆ ಬರದಿಲ್ಲ ಕಣಕ್ಕ. ಒಂದೊಂದು ಸತಿ ಬಿಜೆಪಿಗಳೆ ಬೃಹನ್ನಳೆಯಾಗಿ ಮೋದಿ ಸಾಧನೆ ಒಂದು ಮಹಿಳೆ ಹೆಸರಲ್ಲಿ ವ್ಯಾಟ್ಸಾಪ್ ಮಾಡಿಬುಡ್ತವೆ. ಆಗೇನೀಸಗಂಡೀ’.

‘ಅಂಗೂ ಮಾಡ್ತವ’.

‘ಅಂಗೂ ಮಾಡ್ತವಾ ಅಂತಿಯಲ್ಲಕ್ಕ, ಅವು ಮಾಡದೆ ಅಂಗೆ’.

‘ಮೋದಿಯಾ ಅಂಗೆ ಹೊಗಳಿಬುಟ್ಟವುಳಲ್ಲ ಅವುನು ಬಂದಮ್ಯಾಲೆ ಏಟು ಜನ ಸತೃ ಗೊತ್ತೆ’ ಎಂದ ಉಗ್ರಿ.

‘ಏಟು ಜನ ಸತ್ತಿದ್ದರ್ಲ’.

‘ನೋಡೆ ಅವುನು ಗುಜರಾತಿನ ಮುಖ್ಯಮಂತ್ರಿಯಾದಾಗ ಸರಕಾರನೆ ಬಳಸಿ ಸಾವುರಾರು ಜನ ಸಾಬರು ಸಾಯಂಗೆ ಮಾಡಿದ’.

‘ನಿಜವೇನ್ಲ’.

‘ಮರತುಬುಟ್ಟೇನೆ ನೀನು, ಅದ್ಕೆ ಪೇಪರ್ ಓದದ ಕಲ್ತಕೊ ಅನ್ನದು’.

‘ಪೇಪರ್ರ ಮೋದಿನೆ ಓತ್ತನೊ ಇಲುವೊ ಅವುಳಿಗೇಳ್ತಿಯಲ್ಲೊ ಉಗ್ರಿ’.

‘ನಿಜ ಇವತ್ತಿನ ಪೇಪ್ರ ಓದ್ದೆಯಿದ್ರೂ ಆಯ್ತದೆ’ ಎಂದ ವಾಟಿಸ್ಸೆ.

‘ಟಿವಿ ನೊಡದೆಯಿದ್ರು ಆಯ್ತದೆ ಕಣೊ’ ಎಂದ ಉಗ್ರಿ.

‘ಮೋದಿಗೇನು ಹೇಳ್ಳ.

‘ಸಾರಿ ಕಣಕ್ಕ, ಮೋದಿ ರಾತ್ರೊ ರಾತ್ರಿ ನೋಟ್‍ಬ್ಯಾನ್ ಮಾಡಿದ. ಆಗ ನೂರಾರು ಜನ ಸತೃ. ನಮ್ಮ ಯಸ್ಸೆಂ ಕಿಸ್ಣನಳಿಯ ನೀರಿಗೆ ಬಿದ್ದು ತೀರೊದದ್ದು ಅದ್ಕೆಯಾ’.

‘ಪಾಪ ಅವುನ್ನ ನ್ಯನಿಸಿಗಂಡ್ರೆ ಹ್ವಟ್ಯಲ್ಲ ಉರಿತದೆ’.

‘ಅಮ್ಯಾಲೆ ಮೋದಿ ಸಿಎಎ ಅಂತ ತಂದ. ಅದರ ಗಲಾಟಿ ಗೋಲಿಬಾರಲ್ಲಿ ಜನ ಸತೃ. ಅದೂ ಸಾಬರು’.

‘ಅದ್ಕೆ ಸಾಬ್ರು ಕರೋನಾ ತಂದು ಹಬ್ಬುಸ್ತಾ ಅವುರೆ ಅಂತ ಚೆಡ್ಡಿ ಮಂಜ ಹೇಳತಿದ್ದ ಕಂಡ್ಳ’.

‘ಯಕ್ಕ ಚೆಡ್ಡಿ ಮಂಜನ ಮಾತ ಅತ್ತಗೆ ಮಡಗಿ ಯೋಚನೆ ಮಾಡು ಬಂಬಾಯಿಂದ ಸಾತೆನಳ್ಳಿಗೆ ಬಂದು ಸುತ್ಲಳ್ಳಿಗ್ಯಲ್ಲ ಕೊರೋನಾ ಹರಡಿದನಲ್ಲ ಅವುನು ಸಾಬರೋನಾ? ನಮ್ಮೋನೆ ಅಲವೇನಕ್ಕ’.

‘!?’

‘ಏನೂ ಬ್ಯಾಡವ್ವ, ತುಪ್ಪದಮಡಕ್ಕೆ ಇಬ್ರು ಬಂಬಾಯಿಂದ ಬಂದವುರೆ. ಅವು ನಮ್ಮ ಸಮಂದಿಕರೆಯ. ಅವುರು ಸಾಬರೆ’.

‘ಅದಿರ್ಲಿ ಕಣೊ ಕೆ.ಆರ್.ಪೇಟೆ ನಾರಾಯಣಗೌಡ ಬಂಬಾಯಿಂದ ಕರುಸ್ತಾ ಅವುನಲ್ಲ ಅವುರಿಗ್ಯಲ್ಲ ಕರೋನಾ ಹಟಕಾಯಿಸಿಗಂಡದೆ, ಅವುರ್ಯಾರು ಸಾಬರಲ್ಲ. ಯಲ್ಲ ನಮ್ಮೋರೆಯ ಇದಕೇನೇಳ್ತಿ’ ಎಂದ ಉಗ್ರಿ.

‘ಈ ಬಿಜೆಪಿಗಳೆ ಅಷ್ಟು ಕಣೊ. ಏನೇ ಆದ್ರು ಸಾಬರಮ್ಯಾಲಾಕ್ತರೆ. ಇಡೀ ದೇಸಕ್ಕೆ ಕರೋನಾ ಹರಡಿದೋರೆ ಅವುರು ಅಂತ ಹೇಳಿಕಂಡು ತಿರುಗ್ತ ಅವುರೆ ಏನು ಮಾಡನ’.

‘ಏನೂ ಮಾಡ ಬ್ಯಾಡ ಸುಳ್ಳೆಳೊ ಸೂಳೆ ಮಕ್ಕಳ ಬಾಯಿಮ್ಯಾಲೆ ಹ್ವಡಕಂಡೋಗಬೇಕು ಆಷ್ಟೆಯ’.

‘ಮೋದಿ ಏನೊ ಲಕ್ಷಾಂತೃಪಾಯಿ ದುಡ್ಡು ಕೊಡ್ತನಂತಲ್ಲಾ’.

‘ಯಾರಿಗೆ ಕೊಡ್ತನಕ್ಕ’.

‘ರೈತರು, ಕೂಲಿಮಾಡೋರು, ಕ್ವಟ್ಣಕುಟ್ಟೋರು ಯಲ್ಲಾರಿಗೂ ಲಕ್ಸ ಲಕ್ಸ ಕೊಡ್ತನಂತೆ’.

‘ಕೊಡ್ತನಿರು ಈಸ್ಕಳಿವೆ’.

‘ಅಂಗರೆ ಕೊಡಕಿಲ್ಲ ಅನ್ನು’.

‘ಅಕ್ಕಾ ಹಾದ್ನೆ ವರಸೆ, ಮಳೆ ವಡದು ಪ್ರವಾಹ ಬಂದು ಜನ ಮನೆ ಮಠ ಕಳಕಂಡು ಬೀದಿಗೆ ಬಿದ್ರು. ಆಗ ಸಿದ್ದರಾಮಯ್ಯ ಒಂದು ಲಕ್ಸ ಕೋಟಿ ಲಾಸಾಗ್ಯದೆ ಅಂದ. ಎಡೂರಪ್ಪ ಮುವ್ವತೆಂಟು ಸಾವುರ ಕೋಟಿ ಲಾಸು ಅಂತ ತೋರಿಸಿ ದುಡ್ಡು ಕೊಡಿ ಅಂತ ಮೋದಿಗೆ ಅರ್ಜಿ ಬರದ. ಆ ಅರ್ಜಿಗೆ ಇವತ್ತಿಗೂ ಉತ್ತರ ಕೊಟ್ಟಿಲ್ಲ ಇನ್ನ ಕೊರೋನಾಕ್ಕೆ ಕಾಸು ಕೊಡ್ತನೇನಕ್ಕ’.

‘ನಿಜವೇನ್ಲ ನೀನೇಳದು’.

‘ಮೋದಿ ತಾಯಿ ಆಣೆ ನಿಜಕಣಕ್ಕ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...