Homeಅಂಕಣಗಳುಬಿ. ಚಂದ್ರೇಗೌಡರ ಕಟ್ಟೆಪುರಾಣ - ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

ಬಿ. ಚಂದ್ರೇಗೌಡರ ಕಟ್ಟೆಪುರಾಣ – ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

- Advertisement -
- Advertisement -

‘ಅಂತು ಎಡೂರಪ್ಪ ಕಡಿಗೂ ವಸಿ ಸಡ್ಳ ಮಾಡಿದ’ ಎಂದ ವಾಟಿಸ್ಸೆ.

‘ಮೋದಿಗಿಂತ ಪರವಾಗಿಲ್ಲ ಕಣೊ ಎಡೂರಪ್ಪ’ ಎಂದ ಉಗ್ರಿ.

‘ಅಂಗರಿವುನೆ ಪ್ರಧಾನಿಯಾಗಬೇಕಿತ್ತು ಕಂಡ್ಳ’ ಎಂದಳು ಜುಮ್ಮಿ.

‘ನೀನೇಳದು ನಿಜಕಣಕ್ಕ ಎಡೂರಪ್ಪ ಪ್ರಧಾನಿಯಾಗಿದ್ರೆ ಚನ್ನಾಗಿತ್ತು’.

‘ಮೋದಿ ತರದೊನು ಪ್ರಪಂಚದಲ್ಲೇ ಇಲ್ಲ ಅಂತ ಆ ಚಡ್ಡಿ ಮಂಜ ಹೇಳಿಕಂಡು ತಿರುಗ್ತನೆ’.

‘ಅವುಂದಿರ್ಲಿ ಇನ್ಯಾವಳೊ ವಾಟ್ಸಾಪ್ ಮಾಡ್ಯವುಳೆ ಕಣೊ ಉಗ್ರೀ, ಮೋದಿ ಸಾಧನೆ ನೋಡಿದ್ರೆ ಅವುನಂಥೊನಿಲ್ಲ ಅಂದವುಳೆ’.

‘ಅವುಳ್ಯಾವಳ್ಳ’ ಎಂದಳು ಜುಮ್ಮಿ.

‘ಅವುಳ್ಯಾವಳು ಅನ್ನಕ್ಕೆ ಬರದಿಲ್ಲ ಕಣಕ್ಕ. ಒಂದೊಂದು ಸತಿ ಬಿಜೆಪಿಗಳೆ ಬೃಹನ್ನಳೆಯಾಗಿ ಮೋದಿ ಸಾಧನೆ ಒಂದು ಮಹಿಳೆ ಹೆಸರಲ್ಲಿ ವ್ಯಾಟ್ಸಾಪ್ ಮಾಡಿಬುಡ್ತವೆ. ಆಗೇನೀಸಗಂಡೀ’.

‘ಅಂಗೂ ಮಾಡ್ತವ’.

‘ಅಂಗೂ ಮಾಡ್ತವಾ ಅಂತಿಯಲ್ಲಕ್ಕ, ಅವು ಮಾಡದೆ ಅಂಗೆ’.

‘ಮೋದಿಯಾ ಅಂಗೆ ಹೊಗಳಿಬುಟ್ಟವುಳಲ್ಲ ಅವುನು ಬಂದಮ್ಯಾಲೆ ಏಟು ಜನ ಸತೃ ಗೊತ್ತೆ’ ಎಂದ ಉಗ್ರಿ.

‘ಏಟು ಜನ ಸತ್ತಿದ್ದರ್ಲ’.

‘ನೋಡೆ ಅವುನು ಗುಜರಾತಿನ ಮುಖ್ಯಮಂತ್ರಿಯಾದಾಗ ಸರಕಾರನೆ ಬಳಸಿ ಸಾವುರಾರು ಜನ ಸಾಬರು ಸಾಯಂಗೆ ಮಾಡಿದ’.

‘ನಿಜವೇನ್ಲ’.

‘ಮರತುಬುಟ್ಟೇನೆ ನೀನು, ಅದ್ಕೆ ಪೇಪರ್ ಓದದ ಕಲ್ತಕೊ ಅನ್ನದು’.

‘ಪೇಪರ್ರ ಮೋದಿನೆ ಓತ್ತನೊ ಇಲುವೊ ಅವುಳಿಗೇಳ್ತಿಯಲ್ಲೊ ಉಗ್ರಿ’.

‘ನಿಜ ಇವತ್ತಿನ ಪೇಪ್ರ ಓದ್ದೆಯಿದ್ರೂ ಆಯ್ತದೆ’ ಎಂದ ವಾಟಿಸ್ಸೆ.

‘ಟಿವಿ ನೊಡದೆಯಿದ್ರು ಆಯ್ತದೆ ಕಣೊ’ ಎಂದ ಉಗ್ರಿ.

‘ಮೋದಿಗೇನು ಹೇಳ್ಳ.

‘ಸಾರಿ ಕಣಕ್ಕ, ಮೋದಿ ರಾತ್ರೊ ರಾತ್ರಿ ನೋಟ್‍ಬ್ಯಾನ್ ಮಾಡಿದ. ಆಗ ನೂರಾರು ಜನ ಸತೃ. ನಮ್ಮ ಯಸ್ಸೆಂ ಕಿಸ್ಣನಳಿಯ ನೀರಿಗೆ ಬಿದ್ದು ತೀರೊದದ್ದು ಅದ್ಕೆಯಾ’.

‘ಪಾಪ ಅವುನ್ನ ನ್ಯನಿಸಿಗಂಡ್ರೆ ಹ್ವಟ್ಯಲ್ಲ ಉರಿತದೆ’.

‘ಅಮ್ಯಾಲೆ ಮೋದಿ ಸಿಎಎ ಅಂತ ತಂದ. ಅದರ ಗಲಾಟಿ ಗೋಲಿಬಾರಲ್ಲಿ ಜನ ಸತೃ. ಅದೂ ಸಾಬರು’.

‘ಅದ್ಕೆ ಸಾಬ್ರು ಕರೋನಾ ತಂದು ಹಬ್ಬುಸ್ತಾ ಅವುರೆ ಅಂತ ಚೆಡ್ಡಿ ಮಂಜ ಹೇಳತಿದ್ದ ಕಂಡ್ಳ’.

‘ಯಕ್ಕ ಚೆಡ್ಡಿ ಮಂಜನ ಮಾತ ಅತ್ತಗೆ ಮಡಗಿ ಯೋಚನೆ ಮಾಡು ಬಂಬಾಯಿಂದ ಸಾತೆನಳ್ಳಿಗೆ ಬಂದು ಸುತ್ಲಳ್ಳಿಗ್ಯಲ್ಲ ಕೊರೋನಾ ಹರಡಿದನಲ್ಲ ಅವುನು ಸಾಬರೋನಾ? ನಮ್ಮೋನೆ ಅಲವೇನಕ್ಕ’.

‘!?’

‘ಏನೂ ಬ್ಯಾಡವ್ವ, ತುಪ್ಪದಮಡಕ್ಕೆ ಇಬ್ರು ಬಂಬಾಯಿಂದ ಬಂದವುರೆ. ಅವು ನಮ್ಮ ಸಮಂದಿಕರೆಯ. ಅವುರು ಸಾಬರೆ’.

‘ಅದಿರ್ಲಿ ಕಣೊ ಕೆ.ಆರ್.ಪೇಟೆ ನಾರಾಯಣಗೌಡ ಬಂಬಾಯಿಂದ ಕರುಸ್ತಾ ಅವುನಲ್ಲ ಅವುರಿಗ್ಯಲ್ಲ ಕರೋನಾ ಹಟಕಾಯಿಸಿಗಂಡದೆ, ಅವುರ್ಯಾರು ಸಾಬರಲ್ಲ. ಯಲ್ಲ ನಮ್ಮೋರೆಯ ಇದಕೇನೇಳ್ತಿ’ ಎಂದ ಉಗ್ರಿ.

‘ಈ ಬಿಜೆಪಿಗಳೆ ಅಷ್ಟು ಕಣೊ. ಏನೇ ಆದ್ರು ಸಾಬರಮ್ಯಾಲಾಕ್ತರೆ. ಇಡೀ ದೇಸಕ್ಕೆ ಕರೋನಾ ಹರಡಿದೋರೆ ಅವುರು ಅಂತ ಹೇಳಿಕಂಡು ತಿರುಗ್ತ ಅವುರೆ ಏನು ಮಾಡನ’.

‘ಏನೂ ಮಾಡ ಬ್ಯಾಡ ಸುಳ್ಳೆಳೊ ಸೂಳೆ ಮಕ್ಕಳ ಬಾಯಿಮ್ಯಾಲೆ ಹ್ವಡಕಂಡೋಗಬೇಕು ಆಷ್ಟೆಯ’.

‘ಮೋದಿ ಏನೊ ಲಕ್ಷಾಂತೃಪಾಯಿ ದುಡ್ಡು ಕೊಡ್ತನಂತಲ್ಲಾ’.

‘ಯಾರಿಗೆ ಕೊಡ್ತನಕ್ಕ’.

‘ರೈತರು, ಕೂಲಿಮಾಡೋರು, ಕ್ವಟ್ಣಕುಟ್ಟೋರು ಯಲ್ಲಾರಿಗೂ ಲಕ್ಸ ಲಕ್ಸ ಕೊಡ್ತನಂತೆ’.

‘ಕೊಡ್ತನಿರು ಈಸ್ಕಳಿವೆ’.

‘ಅಂಗರೆ ಕೊಡಕಿಲ್ಲ ಅನ್ನು’.

‘ಅಕ್ಕಾ ಹಾದ್ನೆ ವರಸೆ, ಮಳೆ ವಡದು ಪ್ರವಾಹ ಬಂದು ಜನ ಮನೆ ಮಠ ಕಳಕಂಡು ಬೀದಿಗೆ ಬಿದ್ರು. ಆಗ ಸಿದ್ದರಾಮಯ್ಯ ಒಂದು ಲಕ್ಸ ಕೋಟಿ ಲಾಸಾಗ್ಯದೆ ಅಂದ. ಎಡೂರಪ್ಪ ಮುವ್ವತೆಂಟು ಸಾವುರ ಕೋಟಿ ಲಾಸು ಅಂತ ತೋರಿಸಿ ದುಡ್ಡು ಕೊಡಿ ಅಂತ ಮೋದಿಗೆ ಅರ್ಜಿ ಬರದ. ಆ ಅರ್ಜಿಗೆ ಇವತ್ತಿಗೂ ಉತ್ತರ ಕೊಟ್ಟಿಲ್ಲ ಇನ್ನ ಕೊರೋನಾಕ್ಕೆ ಕಾಸು ಕೊಡ್ತನೇನಕ್ಕ’.

‘ನಿಜವೇನ್ಲ ನೀನೇಳದು’.

‘ಮೋದಿ ತಾಯಿ ಆಣೆ ನಿಜಕಣಕ್ಕ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...