Homeಅಂಕಣಗಳುಬಿ. ಚಂದ್ರೇಗೌಡರ ಕಟ್ಟೆಪುರಾಣ - ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

ಬಿ. ಚಂದ್ರೇಗೌಡರ ಕಟ್ಟೆಪುರಾಣ – ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

- Advertisement -
- Advertisement -

‘ಅಂತು ಎಡೂರಪ್ಪ ಕಡಿಗೂ ವಸಿ ಸಡ್ಳ ಮಾಡಿದ’ ಎಂದ ವಾಟಿಸ್ಸೆ.

‘ಮೋದಿಗಿಂತ ಪರವಾಗಿಲ್ಲ ಕಣೊ ಎಡೂರಪ್ಪ’ ಎಂದ ಉಗ್ರಿ.

‘ಅಂಗರಿವುನೆ ಪ್ರಧಾನಿಯಾಗಬೇಕಿತ್ತು ಕಂಡ್ಳ’ ಎಂದಳು ಜುಮ್ಮಿ.

‘ನೀನೇಳದು ನಿಜಕಣಕ್ಕ ಎಡೂರಪ್ಪ ಪ್ರಧಾನಿಯಾಗಿದ್ರೆ ಚನ್ನಾಗಿತ್ತು’.

‘ಮೋದಿ ತರದೊನು ಪ್ರಪಂಚದಲ್ಲೇ ಇಲ್ಲ ಅಂತ ಆ ಚಡ್ಡಿ ಮಂಜ ಹೇಳಿಕಂಡು ತಿರುಗ್ತನೆ’.

‘ಅವುಂದಿರ್ಲಿ ಇನ್ಯಾವಳೊ ವಾಟ್ಸಾಪ್ ಮಾಡ್ಯವುಳೆ ಕಣೊ ಉಗ್ರೀ, ಮೋದಿ ಸಾಧನೆ ನೋಡಿದ್ರೆ ಅವುನಂಥೊನಿಲ್ಲ ಅಂದವುಳೆ’.

‘ಅವುಳ್ಯಾವಳ್ಳ’ ಎಂದಳು ಜುಮ್ಮಿ.

‘ಅವುಳ್ಯಾವಳು ಅನ್ನಕ್ಕೆ ಬರದಿಲ್ಲ ಕಣಕ್ಕ. ಒಂದೊಂದು ಸತಿ ಬಿಜೆಪಿಗಳೆ ಬೃಹನ್ನಳೆಯಾಗಿ ಮೋದಿ ಸಾಧನೆ ಒಂದು ಮಹಿಳೆ ಹೆಸರಲ್ಲಿ ವ್ಯಾಟ್ಸಾಪ್ ಮಾಡಿಬುಡ್ತವೆ. ಆಗೇನೀಸಗಂಡೀ’.

‘ಅಂಗೂ ಮಾಡ್ತವ’.

‘ಅಂಗೂ ಮಾಡ್ತವಾ ಅಂತಿಯಲ್ಲಕ್ಕ, ಅವು ಮಾಡದೆ ಅಂಗೆ’.

‘ಮೋದಿಯಾ ಅಂಗೆ ಹೊಗಳಿಬುಟ್ಟವುಳಲ್ಲ ಅವುನು ಬಂದಮ್ಯಾಲೆ ಏಟು ಜನ ಸತೃ ಗೊತ್ತೆ’ ಎಂದ ಉಗ್ರಿ.

‘ಏಟು ಜನ ಸತ್ತಿದ್ದರ್ಲ’.

‘ನೋಡೆ ಅವುನು ಗುಜರಾತಿನ ಮುಖ್ಯಮಂತ್ರಿಯಾದಾಗ ಸರಕಾರನೆ ಬಳಸಿ ಸಾವುರಾರು ಜನ ಸಾಬರು ಸಾಯಂಗೆ ಮಾಡಿದ’.

‘ನಿಜವೇನ್ಲ’.

‘ಮರತುಬುಟ್ಟೇನೆ ನೀನು, ಅದ್ಕೆ ಪೇಪರ್ ಓದದ ಕಲ್ತಕೊ ಅನ್ನದು’.

‘ಪೇಪರ್ರ ಮೋದಿನೆ ಓತ್ತನೊ ಇಲುವೊ ಅವುಳಿಗೇಳ್ತಿಯಲ್ಲೊ ಉಗ್ರಿ’.

‘ನಿಜ ಇವತ್ತಿನ ಪೇಪ್ರ ಓದ್ದೆಯಿದ್ರೂ ಆಯ್ತದೆ’ ಎಂದ ವಾಟಿಸ್ಸೆ.

‘ಟಿವಿ ನೊಡದೆಯಿದ್ರು ಆಯ್ತದೆ ಕಣೊ’ ಎಂದ ಉಗ್ರಿ.

‘ಮೋದಿಗೇನು ಹೇಳ್ಳ.

‘ಸಾರಿ ಕಣಕ್ಕ, ಮೋದಿ ರಾತ್ರೊ ರಾತ್ರಿ ನೋಟ್‍ಬ್ಯಾನ್ ಮಾಡಿದ. ಆಗ ನೂರಾರು ಜನ ಸತೃ. ನಮ್ಮ ಯಸ್ಸೆಂ ಕಿಸ್ಣನಳಿಯ ನೀರಿಗೆ ಬಿದ್ದು ತೀರೊದದ್ದು ಅದ್ಕೆಯಾ’.

‘ಪಾಪ ಅವುನ್ನ ನ್ಯನಿಸಿಗಂಡ್ರೆ ಹ್ವಟ್ಯಲ್ಲ ಉರಿತದೆ’.

‘ಅಮ್ಯಾಲೆ ಮೋದಿ ಸಿಎಎ ಅಂತ ತಂದ. ಅದರ ಗಲಾಟಿ ಗೋಲಿಬಾರಲ್ಲಿ ಜನ ಸತೃ. ಅದೂ ಸಾಬರು’.

‘ಅದ್ಕೆ ಸಾಬ್ರು ಕರೋನಾ ತಂದು ಹಬ್ಬುಸ್ತಾ ಅವುರೆ ಅಂತ ಚೆಡ್ಡಿ ಮಂಜ ಹೇಳತಿದ್ದ ಕಂಡ್ಳ’.

‘ಯಕ್ಕ ಚೆಡ್ಡಿ ಮಂಜನ ಮಾತ ಅತ್ತಗೆ ಮಡಗಿ ಯೋಚನೆ ಮಾಡು ಬಂಬಾಯಿಂದ ಸಾತೆನಳ್ಳಿಗೆ ಬಂದು ಸುತ್ಲಳ್ಳಿಗ್ಯಲ್ಲ ಕೊರೋನಾ ಹರಡಿದನಲ್ಲ ಅವುನು ಸಾಬರೋನಾ? ನಮ್ಮೋನೆ ಅಲವೇನಕ್ಕ’.

‘!?’

‘ಏನೂ ಬ್ಯಾಡವ್ವ, ತುಪ್ಪದಮಡಕ್ಕೆ ಇಬ್ರು ಬಂಬಾಯಿಂದ ಬಂದವುರೆ. ಅವು ನಮ್ಮ ಸಮಂದಿಕರೆಯ. ಅವುರು ಸಾಬರೆ’.

‘ಅದಿರ್ಲಿ ಕಣೊ ಕೆ.ಆರ್.ಪೇಟೆ ನಾರಾಯಣಗೌಡ ಬಂಬಾಯಿಂದ ಕರುಸ್ತಾ ಅವುನಲ್ಲ ಅವುರಿಗ್ಯಲ್ಲ ಕರೋನಾ ಹಟಕಾಯಿಸಿಗಂಡದೆ, ಅವುರ್ಯಾರು ಸಾಬರಲ್ಲ. ಯಲ್ಲ ನಮ್ಮೋರೆಯ ಇದಕೇನೇಳ್ತಿ’ ಎಂದ ಉಗ್ರಿ.

‘ಈ ಬಿಜೆಪಿಗಳೆ ಅಷ್ಟು ಕಣೊ. ಏನೇ ಆದ್ರು ಸಾಬರಮ್ಯಾಲಾಕ್ತರೆ. ಇಡೀ ದೇಸಕ್ಕೆ ಕರೋನಾ ಹರಡಿದೋರೆ ಅವುರು ಅಂತ ಹೇಳಿಕಂಡು ತಿರುಗ್ತ ಅವುರೆ ಏನು ಮಾಡನ’.

‘ಏನೂ ಮಾಡ ಬ್ಯಾಡ ಸುಳ್ಳೆಳೊ ಸೂಳೆ ಮಕ್ಕಳ ಬಾಯಿಮ್ಯಾಲೆ ಹ್ವಡಕಂಡೋಗಬೇಕು ಆಷ್ಟೆಯ’.

‘ಮೋದಿ ಏನೊ ಲಕ್ಷಾಂತೃಪಾಯಿ ದುಡ್ಡು ಕೊಡ್ತನಂತಲ್ಲಾ’.

‘ಯಾರಿಗೆ ಕೊಡ್ತನಕ್ಕ’.

‘ರೈತರು, ಕೂಲಿಮಾಡೋರು, ಕ್ವಟ್ಣಕುಟ್ಟೋರು ಯಲ್ಲಾರಿಗೂ ಲಕ್ಸ ಲಕ್ಸ ಕೊಡ್ತನಂತೆ’.

‘ಕೊಡ್ತನಿರು ಈಸ್ಕಳಿವೆ’.

‘ಅಂಗರೆ ಕೊಡಕಿಲ್ಲ ಅನ್ನು’.

‘ಅಕ್ಕಾ ಹಾದ್ನೆ ವರಸೆ, ಮಳೆ ವಡದು ಪ್ರವಾಹ ಬಂದು ಜನ ಮನೆ ಮಠ ಕಳಕಂಡು ಬೀದಿಗೆ ಬಿದ್ರು. ಆಗ ಸಿದ್ದರಾಮಯ್ಯ ಒಂದು ಲಕ್ಸ ಕೋಟಿ ಲಾಸಾಗ್ಯದೆ ಅಂದ. ಎಡೂರಪ್ಪ ಮುವ್ವತೆಂಟು ಸಾವುರ ಕೋಟಿ ಲಾಸು ಅಂತ ತೋರಿಸಿ ದುಡ್ಡು ಕೊಡಿ ಅಂತ ಮೋದಿಗೆ ಅರ್ಜಿ ಬರದ. ಆ ಅರ್ಜಿಗೆ ಇವತ್ತಿಗೂ ಉತ್ತರ ಕೊಟ್ಟಿಲ್ಲ ಇನ್ನ ಕೊರೋನಾಕ್ಕೆ ಕಾಸು ಕೊಡ್ತನೇನಕ್ಕ’.

‘ನಿಜವೇನ್ಲ ನೀನೇಳದು’.

‘ಮೋದಿ ತಾಯಿ ಆಣೆ ನಿಜಕಣಕ್ಕ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...