Homeಅಂಕಣಗಳುಬಿ. ಚಂದ್ರೇಗೌಡರ ಕಟ್ಟೆಪುರಾಣ - ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

ಬಿ. ಚಂದ್ರೇಗೌಡರ ಕಟ್ಟೆಪುರಾಣ – ಪ್ರವಾಹಕ್ಕೆ ಕಾಸು ಕೊಡದೋನು ಕೊರೋನಾಕ್ಕೆ ಕೊಟ್ಟನೆ

- Advertisement -
- Advertisement -

‘ಅಂತು ಎಡೂರಪ್ಪ ಕಡಿಗೂ ವಸಿ ಸಡ್ಳ ಮಾಡಿದ’ ಎಂದ ವಾಟಿಸ್ಸೆ.

‘ಮೋದಿಗಿಂತ ಪರವಾಗಿಲ್ಲ ಕಣೊ ಎಡೂರಪ್ಪ’ ಎಂದ ಉಗ್ರಿ.

‘ಅಂಗರಿವುನೆ ಪ್ರಧಾನಿಯಾಗಬೇಕಿತ್ತು ಕಂಡ್ಳ’ ಎಂದಳು ಜುಮ್ಮಿ.

‘ನೀನೇಳದು ನಿಜಕಣಕ್ಕ ಎಡೂರಪ್ಪ ಪ್ರಧಾನಿಯಾಗಿದ್ರೆ ಚನ್ನಾಗಿತ್ತು’.

‘ಮೋದಿ ತರದೊನು ಪ್ರಪಂಚದಲ್ಲೇ ಇಲ್ಲ ಅಂತ ಆ ಚಡ್ಡಿ ಮಂಜ ಹೇಳಿಕಂಡು ತಿರುಗ್ತನೆ’.

‘ಅವುಂದಿರ್ಲಿ ಇನ್ಯಾವಳೊ ವಾಟ್ಸಾಪ್ ಮಾಡ್ಯವುಳೆ ಕಣೊ ಉಗ್ರೀ, ಮೋದಿ ಸಾಧನೆ ನೋಡಿದ್ರೆ ಅವುನಂಥೊನಿಲ್ಲ ಅಂದವುಳೆ’.

‘ಅವುಳ್ಯಾವಳ್ಳ’ ಎಂದಳು ಜುಮ್ಮಿ.

‘ಅವುಳ್ಯಾವಳು ಅನ್ನಕ್ಕೆ ಬರದಿಲ್ಲ ಕಣಕ್ಕ. ಒಂದೊಂದು ಸತಿ ಬಿಜೆಪಿಗಳೆ ಬೃಹನ್ನಳೆಯಾಗಿ ಮೋದಿ ಸಾಧನೆ ಒಂದು ಮಹಿಳೆ ಹೆಸರಲ್ಲಿ ವ್ಯಾಟ್ಸಾಪ್ ಮಾಡಿಬುಡ್ತವೆ. ಆಗೇನೀಸಗಂಡೀ’.

‘ಅಂಗೂ ಮಾಡ್ತವ’.

‘ಅಂಗೂ ಮಾಡ್ತವಾ ಅಂತಿಯಲ್ಲಕ್ಕ, ಅವು ಮಾಡದೆ ಅಂಗೆ’.

‘ಮೋದಿಯಾ ಅಂಗೆ ಹೊಗಳಿಬುಟ್ಟವುಳಲ್ಲ ಅವುನು ಬಂದಮ್ಯಾಲೆ ಏಟು ಜನ ಸತೃ ಗೊತ್ತೆ’ ಎಂದ ಉಗ್ರಿ.

‘ಏಟು ಜನ ಸತ್ತಿದ್ದರ್ಲ’.

‘ನೋಡೆ ಅವುನು ಗುಜರಾತಿನ ಮುಖ್ಯಮಂತ್ರಿಯಾದಾಗ ಸರಕಾರನೆ ಬಳಸಿ ಸಾವುರಾರು ಜನ ಸಾಬರು ಸಾಯಂಗೆ ಮಾಡಿದ’.

‘ನಿಜವೇನ್ಲ’.

‘ಮರತುಬುಟ್ಟೇನೆ ನೀನು, ಅದ್ಕೆ ಪೇಪರ್ ಓದದ ಕಲ್ತಕೊ ಅನ್ನದು’.

‘ಪೇಪರ್ರ ಮೋದಿನೆ ಓತ್ತನೊ ಇಲುವೊ ಅವುಳಿಗೇಳ್ತಿಯಲ್ಲೊ ಉಗ್ರಿ’.

‘ನಿಜ ಇವತ್ತಿನ ಪೇಪ್ರ ಓದ್ದೆಯಿದ್ರೂ ಆಯ್ತದೆ’ ಎಂದ ವಾಟಿಸ್ಸೆ.

‘ಟಿವಿ ನೊಡದೆಯಿದ್ರು ಆಯ್ತದೆ ಕಣೊ’ ಎಂದ ಉಗ್ರಿ.

‘ಮೋದಿಗೇನು ಹೇಳ್ಳ.

‘ಸಾರಿ ಕಣಕ್ಕ, ಮೋದಿ ರಾತ್ರೊ ರಾತ್ರಿ ನೋಟ್‍ಬ್ಯಾನ್ ಮಾಡಿದ. ಆಗ ನೂರಾರು ಜನ ಸತೃ. ನಮ್ಮ ಯಸ್ಸೆಂ ಕಿಸ್ಣನಳಿಯ ನೀರಿಗೆ ಬಿದ್ದು ತೀರೊದದ್ದು ಅದ್ಕೆಯಾ’.

‘ಪಾಪ ಅವುನ್ನ ನ್ಯನಿಸಿಗಂಡ್ರೆ ಹ್ವಟ್ಯಲ್ಲ ಉರಿತದೆ’.

‘ಅಮ್ಯಾಲೆ ಮೋದಿ ಸಿಎಎ ಅಂತ ತಂದ. ಅದರ ಗಲಾಟಿ ಗೋಲಿಬಾರಲ್ಲಿ ಜನ ಸತೃ. ಅದೂ ಸಾಬರು’.

‘ಅದ್ಕೆ ಸಾಬ್ರು ಕರೋನಾ ತಂದು ಹಬ್ಬುಸ್ತಾ ಅವುರೆ ಅಂತ ಚೆಡ್ಡಿ ಮಂಜ ಹೇಳತಿದ್ದ ಕಂಡ್ಳ’.

‘ಯಕ್ಕ ಚೆಡ್ಡಿ ಮಂಜನ ಮಾತ ಅತ್ತಗೆ ಮಡಗಿ ಯೋಚನೆ ಮಾಡು ಬಂಬಾಯಿಂದ ಸಾತೆನಳ್ಳಿಗೆ ಬಂದು ಸುತ್ಲಳ್ಳಿಗ್ಯಲ್ಲ ಕೊರೋನಾ ಹರಡಿದನಲ್ಲ ಅವುನು ಸಾಬರೋನಾ? ನಮ್ಮೋನೆ ಅಲವೇನಕ್ಕ’.

‘!?’

‘ಏನೂ ಬ್ಯಾಡವ್ವ, ತುಪ್ಪದಮಡಕ್ಕೆ ಇಬ್ರು ಬಂಬಾಯಿಂದ ಬಂದವುರೆ. ಅವು ನಮ್ಮ ಸಮಂದಿಕರೆಯ. ಅವುರು ಸಾಬರೆ’.

‘ಅದಿರ್ಲಿ ಕಣೊ ಕೆ.ಆರ್.ಪೇಟೆ ನಾರಾಯಣಗೌಡ ಬಂಬಾಯಿಂದ ಕರುಸ್ತಾ ಅವುನಲ್ಲ ಅವುರಿಗ್ಯಲ್ಲ ಕರೋನಾ ಹಟಕಾಯಿಸಿಗಂಡದೆ, ಅವುರ್ಯಾರು ಸಾಬರಲ್ಲ. ಯಲ್ಲ ನಮ್ಮೋರೆಯ ಇದಕೇನೇಳ್ತಿ’ ಎಂದ ಉಗ್ರಿ.

‘ಈ ಬಿಜೆಪಿಗಳೆ ಅಷ್ಟು ಕಣೊ. ಏನೇ ಆದ್ರು ಸಾಬರಮ್ಯಾಲಾಕ್ತರೆ. ಇಡೀ ದೇಸಕ್ಕೆ ಕರೋನಾ ಹರಡಿದೋರೆ ಅವುರು ಅಂತ ಹೇಳಿಕಂಡು ತಿರುಗ್ತ ಅವುರೆ ಏನು ಮಾಡನ’.

‘ಏನೂ ಮಾಡ ಬ್ಯಾಡ ಸುಳ್ಳೆಳೊ ಸೂಳೆ ಮಕ್ಕಳ ಬಾಯಿಮ್ಯಾಲೆ ಹ್ವಡಕಂಡೋಗಬೇಕು ಆಷ್ಟೆಯ’.

‘ಮೋದಿ ಏನೊ ಲಕ್ಷಾಂತೃಪಾಯಿ ದುಡ್ಡು ಕೊಡ್ತನಂತಲ್ಲಾ’.

‘ಯಾರಿಗೆ ಕೊಡ್ತನಕ್ಕ’.

‘ರೈತರು, ಕೂಲಿಮಾಡೋರು, ಕ್ವಟ್ಣಕುಟ್ಟೋರು ಯಲ್ಲಾರಿಗೂ ಲಕ್ಸ ಲಕ್ಸ ಕೊಡ್ತನಂತೆ’.

‘ಕೊಡ್ತನಿರು ಈಸ್ಕಳಿವೆ’.

‘ಅಂಗರೆ ಕೊಡಕಿಲ್ಲ ಅನ್ನು’.

‘ಅಕ್ಕಾ ಹಾದ್ನೆ ವರಸೆ, ಮಳೆ ವಡದು ಪ್ರವಾಹ ಬಂದು ಜನ ಮನೆ ಮಠ ಕಳಕಂಡು ಬೀದಿಗೆ ಬಿದ್ರು. ಆಗ ಸಿದ್ದರಾಮಯ್ಯ ಒಂದು ಲಕ್ಸ ಕೋಟಿ ಲಾಸಾಗ್ಯದೆ ಅಂದ. ಎಡೂರಪ್ಪ ಮುವ್ವತೆಂಟು ಸಾವುರ ಕೋಟಿ ಲಾಸು ಅಂತ ತೋರಿಸಿ ದುಡ್ಡು ಕೊಡಿ ಅಂತ ಮೋದಿಗೆ ಅರ್ಜಿ ಬರದ. ಆ ಅರ್ಜಿಗೆ ಇವತ್ತಿಗೂ ಉತ್ತರ ಕೊಟ್ಟಿಲ್ಲ ಇನ್ನ ಕೊರೋನಾಕ್ಕೆ ಕಾಸು ಕೊಡ್ತನೇನಕ್ಕ’.

‘ನಿಜವೇನ್ಲ ನೀನೇಳದು’.

‘ಮೋದಿ ತಾಯಿ ಆಣೆ ನಿಜಕಣಕ್ಕ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...