Homeಎಲೆಮರೆಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

ಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

- Advertisement -
- Advertisement -
ಎಲೆಮರೆ – 24

ಮಾರ್ಚ್ 13 ರಿಂದ 15 ರ ತನಕ ಬಳ್ಳಾರಿಯ ರಂಗತೋರಣ ಸಂಸ್ಥೆಯು 13ನೇ `ರಾಜ್ಯ ವಿದ್ಯಾರ್ಥಿ ನಾಟಕೋತ್ಸವ’ ಆಯೋಜಿಸಿತ್ತು. ಬಳ್ಳಾರಿ ಭಾಗದಲ್ಲಿ ರಂಗಭೂಮಿ ಕುರಿತು ವಿಶೇಷ ಅರಿವು ಮತ್ತು ಕಾಳಜಿ ಮೂಡಿಸುತ್ತ ನಿರಂತರ ಕ್ರಿಯಾಶೀಲವಾಗಿರುವ ರಂಗತೋರಣ ಸಂಸ್ಥೆಯು ಈ ನಾಟಕೋತ್ಸವಕ್ಕೆ ಸರ್ವಾಧ್ಯಕ್ಷರನ್ನಾಗಿ ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿಯ ರಂಗಜಂಗಮ ಪಿಂಜಾರ ಅಬ್ದುಲ್ಲ ಅವರನ್ನು ಆಯ್ಕೆ ಮಾಡಿತ್ತು. ಇದು ತೆರೆಮರೆಯಲ್ಲಿ ಪಿ.ಅಬ್ದುಲ್ ಅವರು ನಡೆಸುತ್ತಿರುವ ರಂಗಚಟುವಟಿಕೆಗಳಿಗೆ ಸಾರ್ಥಕ ಗೌರವ ಸಲ್ಲಿಕೆಯಾಗಿತ್ತು.

ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿಯ ಕೊಳಗೇರಿಯಲ್ಲಿ `ಶಿಶುನಾಳ ಶರೀಫ’ ರ ಹೆಸರಿನ ಪುಟ್ಟ ರಂಗಮಂದಿರವಿದೆ. ಈ ವೇದಿಕೆಯ ಹಿಂದಣ ಬೆಳಕು `ಭಾವೈಕ್ಯತಾ ವೇದಿಕೆ’. ಈ ವೇದಿಕೆ ರೂಪುಗೊಂಡದ್ದು ಹೇಗೆ ಎನ್ನುವ ಪ್ರಶ್ನೆಯನ್ನು ಮುಂದಿಟ್ಟುಕೊಂಡರೆ, ವೇದಿಕೆಯನ್ನು ರೂಪಿಸುವಲ್ಲಿ ತನ್ನನ್ನೇ ತೇಯ್ದುಕೊಂಡ ಪಿ.ಅಬ್ದುಲ್ ಅವರು ತಮ್ಮದೇ ಆತ್ಮಕಥನದ ಮುಖ್ಯ ಎಳೆ ಎಂಬಂತೆ `ಪಯಣ’ದ ಹೆಜ್ಜೆಗಳನ್ನು ವಿವರಿಸುತ್ತಾರೆ. ಇದು ವೇದಿಕೆಯ ಆತ್ಮಕಥನದಂತೆಯೂ ಕೇಳಿಸತೊಡಗುತ್ತದೆ.

ಅಬ್ದುಲ್ ಅವರು `ಪಿಂಜಾರ’ ಸಮುದಾಯದವರು. ಹತ್ತಿಯನ್ನು ಹದಗೊಳಿಸಿ ದಿಂಬು, ಗಾದಿಯನ್ನು ಹೊಲಿಯುವ `ಪಿಂಜಾರ’ ಸಮುದಾಯ ಮೂಲತಃ ಧಾರ್ಮಿಕ ಸಂಕರತೆಯ ಸೃಷ್ಟಿ. ಅಂತೆಯೇ ಇವರು ಹಿಂದೂಮುಸ್ಲಿಂ ಬೆಸುಗೆಯ ಸಾಂಸ್ಕೃತಿಕ ವಕ್ತಾರರಂತೆ ಕಾಣುತ್ತಾರೆ. ಹಾಗಾಗಿ ಮುಸ್ಲಿಂ ಧರ್ಮದಲ್ಲಿ ಪಿಂಜಾರರು ಒಂದು ಬಗೆಯಲ್ಲಿ ಅಸ್ಪೃಶ್ಯರು. ಮೂಲತಃ ಎರಡು ಸಂಗತಿಗಳನ್ನು ಹೊಲಿದು ಜೋಡಿಸುವ ಈ ಸಮುದಾಯ ಎರಡು ಧರ್ಮಗಳ ಜನರನ್ನು `ಬಂಧುತ್ವ’ `ಸಾಮರಸ್ಯ’ದ ನೆಲೆಯಲ್ಲಿ ಹೊಲಿಯುವ ಕೆಲಸವನ್ನೂ ಮಾಡುತ್ತಿದೆ. ಅಬ್ದುರ್ ಅವರ ಕುಟುಂಬದವರು `ಅಮೀನ್ ಬೆಡ್ಸ್’ ಮೂಲಕ ಮೂಲ ಕುಲವೃತ್ತಿಯನ್ನೂ, ಜತೆಗೆ ಸಾಮರಸ್ಯದ ಸಮುದಾಯಿಕ ಪ್ರಜ್ಞೆಯ `ಭಾವೈಕ್ಯತಾ ವೇದಿಕೆ’ಯನ್ನೂ ಕಾಪಿಟ್ಟುಕೊಂಡಿದ್ದಾರೆ.

ಈ ವೇದಿಕೆಯ ಕನಸು ಅಬ್ದುಲ್ ಅವರದಾದರೂ, ಈ ಕನಸಿನ ಬೇರುಗಳು ರೂಪುಗೊಂಡಿದ್ದು ಶಿವಮೊಗ್ಗದ ಹೆಚ್.ಇಬ್ರಾಹಿಂ ಸಾಹೇಬರ ಮನೆಯ ಸಾಂಸ್ಕೃತಿಕ ವಾತಾವರಣದಲ್ಲಿ. ಸ್ವತಃ ಇಬ್ರಾಹಿಂ ಸಾಹೇಬರು ರೂಪುಗೊಂಡ ಕತೆಯೂ ಕುತೂಹಲಕಾರಿಯಾಗಿದೆ. ಪ್ಲೇಗ್ ಭೀಕರತೆಗೆ ಹೆದರಿ ಬಾಲಕ ಇಬ್ರಾಹಿಂ ತಂದೆ ಹುಸೇನಪ್ಪ ತನ್ನೂರು ತೊರೆದು ಬಳ್ಳಾರಿ ಸಮೀಪದ ದಂಡಿನ ಹಿರೇಹಾಳು ಗ್ರಾಮಕ್ಕೆ ಬರಿಗೈಯಲ್ಲಿ ಬರುತ್ತಾರೆ. ತನ್ನ ಪ್ರಾಮಾಣಿಕತೆ ಮತ್ತು ಅವಿರತ ದುಡಿಮೆಯ ಕಾರಣಕ್ಕೆ ಊರಜನರ ಮನಸ್ಸು ಗೆಲ್ಲುತ್ತಾರೆ. ಅಲ್ಲಿನ ನೀಲಕಂಠೇಶ್ವರ ದೇವಾಲಯದ ಎದುರು ಮನೆ ಕಟ್ಟಿಕೊಂಡು ನೆಲೆಯೂರುತ್ತಾರೆ. ವ್ಯವಹಾರದ ಸೋಲುಗೆಲುವಿನ ಆಟದಲ್ಲಿ ಹುಸೇನಪ್ಪ ತನ್ನ ಕುಲವೃತ್ತಿಯಾದ ಗಾದಿ ಹೊಲಿಯುವುದನ್ನು ಬಿಟ್ಟು, ಆಕಸ್ಮಿಕವಾಗಿ ಅಬಕಾರಿ ಗುತ್ತಿಗೆ ಕ್ಷೇತ್ರಕ್ಕೆ ಪ್ರವೇಶಿಸುತ್ತಾರೆ. ಇದು ಇವರನ್ನು ಹಿರೇಹಾಳಿನಿಂದ ಶಿವಮೊಗ್ಗಕ್ಕೆ ತೆರಳುವಂತೆ ಮಾಡುತ್ತದೆ. ಮಗ ಇಬ್ರಾಹಿಂನನ್ನು ಹೆಚ್ಚು ಓದಿಸಬೇಕೆಂಬ ಕನಸಿದ್ದರೂ, ಮಗನೂ ಅಬಕಾರಿ ವ್ಯವಹಾರದಲ್ಲೆ ಮುಂದುವರಿಯುತ್ತಾನೆ. ಈ ಕ್ಷೇತ್ರದಲ್ಲಿ ದುಡಿದು ದೊಡ್ಡ ಉದ್ಯಮಿಯಾಗುತ್ತಾರೆ. ಮುಂದೆ ವೃತ್ತಿಗೆ ವಿರುದ್ಧವೆಂಬಂತೆ ಸಾಂಸ್ಕೃತಿಕ ವಲಯದ ಒಡನಾಡಿಯಾಗಿ ಬದಲಾಗುತ್ತಾರೆ.

ಕತೆಗಾರ್ತಿ ವೈದೇಹಿಯವರು ಹೇಳುವಂತೆ, `ಎಚ್. ಇಬ್ರಾಹಿಂ ಎಲ್ಲಿಂದಲೋ ಬಂದವರು ಎಲ್ಲರ ಮನ ಗೆದ್ದರು, ಎಲ್ಲದಕ್ಕೂ ಬೇಕಾದವರಾದರು. ಸಂಗೀತಕಛೇರಿ, ವಿಚಾರಸಂಕಿರಣ, ಸಾಹಿತ್ಯ ಸಮ್ಮೇಳನ, ನಾಟಕೋತ್ಸವ, ಪುಸ್ತಕ ಬಿಡುಗಡೆ, ಗಣೇಶೋತ್ಸವ, ಈದ್ ಮಿಲಾದ್ ಶಿವಮೊಗ್ಗೆಯಲ್ಲಿ ಏನೇ ನಡೆಯಲಿ, ಅಲ್ಲಿ ಎದುರಿಗೆ ಕಾಣಿಸದೆ, ಹಿಂದೆಯೇ ಇದ್ದು ಎಲ್ಲವನ್ನೂ ಸಾಂಗವಾಗಿ ನಡೆವಂತೆ ಸಹಕಾರ, ಸಹಯೋಗವಿತ್ತು ಕಣ್ಣಿಡುವ ದಾಕ್ಷಿಣ್ಯವಂತ ಈ ಇಬ್ರಾಹಿಂ’ ಎನ್ನುತ್ತಾರೆ.

ಹೀಗೆ ಇಬ್ರಾಹಿಂ ಅವರ ಮನೆಯೆಂದರೆ ಸಾಹಿತಿಗಳು, ನಾಟಕಕಾರರು, ಸಂಸ್ಕøತಿ ಚಿಂತಕರು, ಜನಪದ ಕಲಾವಿದರು ಒಡನಾಡುವ ಸಾಂಸ್ಕೃತಿಕ ಕೇಂದ್ರವಾಗಿ ಬದಲಾಯಿತು. ಸಾಹಿತ್ಯದ ಚರ್ಚೆಗಳು, ನಾಟಕದ ಅಭಿನಯಗಳು ಶಿವಮೊಗ್ಗದಲ್ಲಿ ಗರಿಗೆದರಲು ಇಬ್ರಾಹಿಂ ಸಾಹೇಬರು ಒತ್ತಾಸೆಯಾದರು. ಹಿಂದು ಮುಸ್ಲಿಂ ಎನ್ನುವ ಗಡಿರೇಖೆಗಳು ಅಳಿಸಿ ಸೌಹಾರ್ದದ ಸಾಂಸ್ಕೃತಿಕ ಪರಿಸರವೊಂದು ಸದ್ದಿಲ್ಲದೆ ಅರಳತೊಡಗಿತು. ಇಂತಹ ಪರಿಸರದ ಭಾಗವಾಗಿ ಚಿಕ್ಕಪ್ಪನ ಮನೆಯಲ್ಲಿ ಅಬ್ದುಲ್ ಅವರ ಬಾಲ್ಯ ರೂಪುಗೊಂಡಿತು. ಆಗಲೆ ಅವರ ಒಳಗೊಂದು ಸೌಹಾರ್ದದ ಕನಸಿನ ಕೂಸು ಮೊಳಕೆಯೊಡೆಯಿತು. ರಂಗಭೂಮಿಯ ಜತೆಗಿನ ನಂಟು ಗಾಢವಾಯಿತು, ಹೋರಾಟದ ಪ್ರಾಥಮಿಕ ಪಾಠವೆಂಬಂತೆ ಗೋಕಾಕ್ ಚಳವಳಿಯಲ್ಲಿ ಉಪವಾಸ ಕೈಗೊಂಡು ಜೈಲುವಾಸವನ್ನೂ ಅನುಭವಿಸಿದರು. ಹೀಗೆ ಅಬ್ದುಲ್ ಅವರಿಗೆ ಪ್ರೇರಕಶಕ್ತಿಯಾಗಿದ್ದ ಹೆಚ್.ಇಬ್ರಾಹಿಂ ಸಾಹೇಬರು ಆಗಸ್ಟ್ 1, 2014 ರಲ್ಲಿ ದೇಹ ತ್ಯಜಿಸಿದರು. ಆ ಹೊತ್ತಿಗೆ ಅವರ ಸೌಹಾರ್ದದ ಕನಸು ಭಾವೈಕ್ಯತಾ ವೇದಿಕೆ 23 ವರ್ಷ ಪೂರೈಸಿ ಬೆಳ್ಳಿಹಬ್ಬದತ್ತ ಹೆಜ್ಜೆ ಇಟ್ಟಿತ್ತು.

ಹೀಗೆ ಅಬ್ದುಲ್ ಅವರು ಇಂತಹ ಸಾಂಸ್ಕೃತಿಕ ವಾತಾವರಣದಲ್ಲಿ ಬೆಳೆದು, ಪದವಿವರೆಗೂ ಓದಿ ಕ್ರಾಂತಿಯ ಕನಸೊತ್ತು, ಸಮಾಜವನ್ನು ಬದಲಿಸಬೇಕೆಂಬ ಉತ್ಸಾಹದಲ್ಲಿ ತಾನು ಹುಟ್ಟಿದ ಇದೇ ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿಗೆ ವಾಪಸಾದರು. ಮಹಿಳೆಯರ ಕಳ್ಳ ಸಾಗಣೆ ವಿರುದ್ಧ ಸಮುದಾಯದವರು ಹೇಳಿದ ದೂರನ್ನು ದಾಖಲಿಸಿದ್ದಕ್ಕೆ ಹಲ್ಲೆಗೆ ಒಳಗಾದರು, ಊರು ಬಿಟ್ಟು ಓಡಿದರು. ಸುಳ್ಳು ಕೇಸುಗಳ ಜಾಲದಲ್ಲಿ ಸಿಲುಕಿ ಕೆಲಕಾಲ ತಲೆಮರೆಸಿಕೊಂಡರು, ಕುಟುಂಬ ನಲುಗಿತು. ಇಷ್ಟಾಗಿಯೂ ಇದೇ ಚೌಕಿಯಲ್ಲಿ ಏನನ್ನಾದರೂ ಮಾಡಬೇಕೆಂದು ಪಣತೊಟ್ಟರು.

1991 ರಲ್ಲಿ ಹೊಸಪೇಟೆ ಭಾಗದಲ್ಲಿ ನಡೆದ ಕೋಮುಗಲಭೆಯಿಂದಾಗಿ ಇಡೀ ನಗರ ಮತ್ತು ಸುತ್ತಮುತ್ತಣ ಹಳ್ಳಿಗಳಲ್ಲಿ ಆತಂಕದ ಛಾಯೆಯಿತ್ತು. ಸೌಹಾರ್ದದಿಂದ ಬದುಕುವ ಜನಬದುಕಿನಲ್ಲಿ ದೊಡ್ಡದೊಂದು ಗಾಯವಾಗಿ ನೋಯತೊಡಗಿತ್ತು. ಇಂತಹದ್ದೊಂದು ಗಾಯಕ್ಕೆ ಮುಲಾಮು ಹುಡುಕುವ ಯೋಚನೆ ಅಬ್ದುಲ್ ಅವರನ್ನು ನಿದ್ದೆಗೆಡಿಸಿತು. ಫಲವಾಗಿ ಹೊಸಪೇಟೆಯ ಜಂಬಯ್ಯ ನಾಯಕ, ನಾರಾಯಣಭಟ್, ಕಲ್ಲಂಭಟ್, ಪರುಷರಾಮ ಕಲಾಲ್ ಮೊದಲಾದವರು ಸೇರಿ ಚರ್ಚಿಸಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಕುರುಹಾದ ಮೊಹರಂ ಹಾಡುಗಳ ಸ್ಪರ್ಧೆಯನ್ನು ಆಯೋಜಿಸಿದರು. ಈ ಸಮಾವೇಶಕ್ಕೆ ಹೆಸರಿಡುವ ಚರ್ಚೆ ಬಂದಾಗ ಕನ್ನಡ ವಿಶ್ವವಿದ್ಯಾಲಯದಿಂದ ಬರುತ್ತಿದ್ದ ಕಿರಂ ನಾಗರಾಜ ಅವರು ಸೂಚಿಸಿದ `ಭಾವೈಕ್ಯತೆ’ ಎನ್ನುವ ಹೆಸರು ಅಂತಿಮವಾಯ್ತು. ಮುಂದೆ ಅದೇ ಹೆಸರಿನ ವೇದಿಕೆಯೊಂದು ರೂಪುಗೊಂಡಿತು. ಅಬ್ದುಲ್ ವೇದಿಕೆಯ ಖಜಾನ್ಸಿಯಾದರು. ಇದೀಗ ಇಪ್ಪತ್ತೆಂಟರ ಹರೆಯದಲ್ಲಿ ವೇದಿಗೆ ತನ್ನದೇ ಆದ ಛಾಪು ಮೂಡಿಸುತ್ತಾ ಹೊಸ ಶೋಧಗಳಿಗೆ ಮುಖಮಾಡಿದೆ.

ಒಮ್ಮೆ ಚೌಕಿಯಲ್ಲಿ ಹೆಣ್ಣೊಬ್ಬಳ ಅಸಹಜ ಸಾವು ಕೊಲೆಯಾಗಿರಬಹುದೆಂಬ ಪಿಸುಮಾತುಗಳು ಧ್ವನಿಗೂಡಿದಾಗ, ಈ ಘಟನೆ ಅಬ್ದುಲ್‍ರನ್ನು ಕಾಡುತ್ತದೆ. ಕೂಡಲೆ ತಮ್ಮ ಓಣಿಯ ಹುಡುಗರಿಂದ ಜಾಗೃತಿ ಮೂಡಿಸಲು ಬೀದಿ ನಾಟಕ ರೂಪಿಸುತ್ತಾರೆ. ಅದು ಮನೆಯಿಂದ ಮನೆಗೆ ಹಬ್ಬುತ್ತದೆ. `ಈ ಸಾವು ನ್ಯಾಯವೇ? ಎನ್ನುವ ಪ್ರತಿಧ್ವನಿಯನ್ನು ಮೂಡಿಸುತ್ತದೆ. ಪರಿಣಾಮವಾಗಿ ಇಡೀ ಚೌಕಿಯಲ್ಲಿ ಮಹಿಳೆಯ ಸಾವಿನ ಬಗ್ಗೆ ತಳೆದಿದ್ದ ಮೌನದ ಕಟ್ಟೊಡೆದು, ಪೊಲೀಸರಿಗೆ ದೂರು ಕೊಡಲು ಜನರು ಮುಂದಾಗುತ್ತಾರೆ. ಈ ಪ್ರಯೋಗ ಹೆಣ್ಣಿನ ದಾರುಣ ಅಂತ್ಯಕ್ಕೆ ಹೋರಾಟದ ಆಯಾಮ ನೀಡುತ್ತದೆ. ಈ ಘಟನೆಯೇ ಭಾವೈಕ್ಯತಾ ವೇದಿಕೆಯ ಬಹುಮುಖ್ಯ ಸಂವಹನದ ಗುರುತಾಗಿ `ಬೀದಿನಾಟಕ’ ಮುನ್ನಲೆಗೆ ಬರುತ್ತದೆ.

ಅಬ್ದುಲ್ ಅವರು ಮಾತನಾಡುತ್ತ `ರಂಗಭೂಮಿಗೆ ಜನರನ್ನು ಕರೆಯುವ ಬದಲು ಜನರ ಬಳಿಗೆ ಹೋಗುವ ಮಾಧ್ಯಮವಾದ ಬೀದಿನಾಟಕವನ್ನು ಮೊದಲಿಗೆ ಆಯ್ದುಕೊಂಡೆವು. ತೀರಾ ಕಡಿಮೆ ಖರ್ಚಿನಲ್ಲಿ ಹೆಚ್ಚು ಜನರನ್ನು ಮುಟ್ಟುವ ತಟ್ಟುವ ಮಾಧ್ಯಮ ಇದಾಗಿದೆ. ಅಂತೆಯೇ ವಿಷಯಗಳನ್ನು ಸರಳವಾಗಿಯೂ, ನೇರವಾಗಿಯೂ ಜನರಿಗೆ ತಲುಪಿಸಲು ಸಾಧ್ಯವಾಗುತ್ತದೆ. ಈ ಕಾರಣದಿಂದ ಭಾವೈಕ್ಯತಾ ವೇದಿಕೆಯ ಮುಖ್ಯ ಮಾಧ್ಯಮ ಬೀದಿ ನಾಟಕವಾಯಿತು’ ಎನ್ನುತ್ತಾರೆ. ಹೀಗೆ ನಿರಂತರವಾಗಿ ರಂಗಭೂಮಿಯನ್ನು ಉಸಿರಾಡುತ್ತಾ ಪ್ರಚಾರ ಬಯಸದೆ, ಪದವಿ ಹುದ್ದೆಗಳಿಗಾಗಿ ಅಂಗಲಾಚದೆ ತಮ್ಮದೇ ಕಾಲುದಾರಿಯಲ್ಲಿ ಬೀದಿ ನಾಟಕದ ಕನಸು ಕಾಣುವ ಪಿ.ಅಬ್ದುಲ್ ಅವರ ಕನಸುಗಳು ನನಸಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...