Homeಅಂಕಣಗಳುಬಹುಜನ ಭಾರತ; ಫಿರೋಜ್ ಗಾಂಧೀ ಎಂಬ ನೆಹರೂ ಅಳಿಯ ಹೀಗಿದ್ದರು...

ಬಹುಜನ ಭಾರತ; ಫಿರೋಜ್ ಗಾಂಧೀ ಎಂಬ ನೆಹರೂ ಅಳಿಯ ಹೀಗಿದ್ದರು…

- Advertisement -
- Advertisement -

ಆಗಸ್ಟ್ 20 ದಿವಂಗತ ಪ್ರಧಾನಿ ರಾಜೀವ್ ಗಾಂಧೀ ಅವರು ಹುಟ್ಟಿದ ದಿನ. ಅಲ್ಲಿಂದಾಚೆ ಇಪ್ಪತ್ತು ದಿನಗಳ ಅಂತರದಲ್ಲಿ ಎದುರಾಗುವುದು ಸೆಪ್ಟಂಬರ್ 12. ರಾಜೀವ್ ಅವರ ತಂದೆ ಮತ್ತು ಕಾಂಗ್ರೆಸ್ ಪಕ್ಷದ ಗಣ್ಯ ನಾಯಕರಲ್ಲಿ ಒಬ್ಬರಾಗಿದ್ದ ಫಿರೋಜ್ ಗಾಂಧೀ ಜನಿಸಿದ ದಿನ ಅದು. ಅವರು ಗತಿಸಿದ ದಿನ ಕೂಡ ಸೆಪ್ಟಂಬರ್ ಎಂಟು. ಈ ಎರಡೂ ದಿನಗಳು ವರ್ಷವರ್ಷವೂ ಹೇಳ ಹೆಸರಿಲ್ಲದೆ ಸರಿದುಹೋಗುತ್ತವೆ. ನೆಹರೂ ಅಳಿಯನ ಸರಳ ಸಾರ್ವಜನಿಕ ಸ್ಮರಣೆಯೂ ಕಾಂಗ್ರೆಸ್ಸಿಗೆ ಬೇಕಿಲ್ಲ.

ನೆಹರೂ ಮನೆತನಕ್ಕೆ ಗಾಂಧೀ ಎಂಬ ಕುಲನಾಮ ಅಥವಾ ಕುಟುಂಬನಾಮವು ಬಲು ದೊಡ್ಡ ಆಸ್ತಿ. ಈ ಆಸ್ತಿಯ ಕಾರಣಪುರುಷ ಫಿರೋಜ್ ಗಾಂಧೀ. ಇಂದಿರಾ ಪ್ರಿಯದರ್ಶಿನಿ ಎಂಬ ಗಟ್ಟಿಗಿತ್ತಿ ಇಂದಿರಾಗಾಂಧೀ ಎನಿಸಿಕೊಂಡದ್ದು, ಆಕೆಯ ಮಕ್ಕಳು, ಮೊಮ್ಮಕ್ಕಳಾದ ರಾಜೀವ್, ಸಂಜಯ್, ರಾಹುಲ್, ಪ್ರಿಯಾಂಕಾ, ವರುಣ್, ಸೊಸೆಯಂದಿರಾದ ಸೋನಿಯಾ ಮತ್ತು ಮೇನಕಾ ಅವರು ಹೆಸರುಗಳಿಗೆ ಗಾಂಧೀ ಎಂಬ ಕುಟುಂಬನಾಮ ಸೇರಿಕೊಂಡಿರುವ ಕಾರಣ ಫಿರೋಜ್ ಗಾಂಧಿಯೇ.

ಪಾಕಿಸ್ತಾನದ ಪ್ರಮುಖ ರಾಜಕೀಯ ಕುಟುಂಬದ ಅಳಿಯ ಆಸೀಫ್ ಅಲಿ ಜರ್ದಾರಿ. ಹತ್ಯೆಗೀಡಾಗುವ ಮುನ್ನ ಆ ದೇಶದ ಪ್ರಧಾನಿಯಾಗಿದ್ದ ಬೆನಜೀರ್ ಭುಟ್ಟೋ ಅವರ ಪತಿ. ಬೆನಜೀರ್ ಹತ್ಯೆಯ ನಂತರ ಪಾಕಿಸ್ತಾನದ ಪ್ರಧಾನಿಯಾಗಿ ಮೆರೆದರು. ಚಾಣಾಕ್ಷ ಚಂದ್ರಬಾಬು ನಾಯ್ಡು ಮಗಳ ಕೊಟ್ಟ ಮಾವ ಎನ್.ಟಿ.ಆರ್. ಅವರನ್ನೇ ನುಂಗಿ ನೀರು ಕುಡಿದು ಅಧಿಕಾರದ ಗದ್ದುಗೆಯನ್ನು ಕೈವಶ ಮಾಡಿಕೊಂಡವರು. ಶಿವಸೇನೆಯ ಮನೋಹರ ಜೋಷಿ ಅವರ ರಾಜಕೀಯ ಭವಿಷ್ಯಕ್ಕೆ ಬೆಂಕಿ ಇಕ್ಕಿದ್ದವರು ಅವರ ರಿಯಲ್ ಎಸ್ಟೇಟ್ ಉದ್ಯಮಿ ಆಳಿಯನ ಹೆಸರು ಗಿರೀಶ್ ವ್ಯಾಸ್. ಬಿಜೆಪಿಯ ಅಂತಃಪುರದಲ್ಲಿ ಗುಸುಗುಸುವಿಗೆ ಕಾರಣರಾಗಿದ್ದವರು ಅಟಲ್ ಬಿಹಾರಿ ವಾಜಪೇಯಿ ಅಳಿಯ ರಂಜನ್ ಭಟ್ಟಾಚಾರ್ಯ ಅವರು. ದೇವರಾಜ ಅರಸು ಅವರ ಅಳಿಯ ಎಂ.ಡಿ.ನಟರಾಜ್ ಮತ್ತು ರಾಮಕೃಷ್ಣ ಹೆಗಡೆ ಅಳಿಯ ಮನು ನಿಚ್ಚಾನಿ ಒಂದು ಕಾಲದಲ್ಲಿ ಸುದ್ದಿ ಮಾಡಿದ್ದ ರಾಜಕೀಯ ಕುಟುಂಬಗಳ ಅಳಿಯಂದಿರು. ಸೋನಿಯಾ ಗಾಂಧೀ ಅವರ ಅಳಿಯ ರಾಬರ್ಟ್ ವಾಡ್ರಾ ಅವರೂ ವಿವಾದದ ರಾಡಿ ಎಬ್ಬಿಸಿದ್ದವರೇ.

ಅಳಿಯಂದಿರು ರಾಜಕಾರಣದ ಕನಸು ಕಾಣುವುದನ್ನು ತಪ್ಪೆಂದು ಹೇಳಲಾಗದು. ನೆಲದ ಕಾನೂನೂ ಅದಕ್ಕೆ ಅಡ್ಡಬಾರದು. ಆದರೆ ರಾಜಕೀಯ ಅಧಿಕಾರವು ಉಳ್ಳವರಲ್ಲೇ ಹೆಪ್ಪುಗಟ್ಟಿರುವ ಪರಂಪರೆಯೊಂದು ಈ ದೇಶದಲ್ಲಿದೆ. ದೊಡ್ಡವೂ ಸಣ್ಣವೂ ಸೇರಿ 100-200 ಕುಟುಂಬಗಳೇ ಈ ದೇಶವನ್ನು ಆಳುತ್ತಿವೆ ಎಂಬುದು ಸಮೀಕ್ಷೆಯೊಂದರಿಂದ ಹೊರಬಿದ್ದಿರುವ ಸಂಗತಿ. ಜನತಂತ್ರದ ಹೆಸರಿನಲ್ಲಿ ನಡೆಯುತ್ತಿರುವ ಕುಚೋದ್ಯ. ಬಿಜೆಪಿ ಸೇರಿದಂತೆ ಯಾವ ಪಕ್ಷವೂ ಈ ಮಾತಿಗೆ ಹೊರತಲ್ಲ. ಒಂದು ಪಕ್ಷ ಹೆಚ್ಚು ಅಪರಾಧಿ ಇದ್ದೀತು, ಮತ್ತೊಂದು ಕಡಿಮೆ ಇದ್ದೀತು. ಆದರೆ ಎಲ್ಲ ಪಕ್ಷಗಳೂ ಅಪರಾಧಿಗಳೇ. ಸ್ನಾನದ ಕೋಣೆಯಲ್ಲಿ ಎಲ್ಲರೂ ಬೆತ್ತಲೆ (ಹಮಾಮ್ ಮೇಂ ಸಬ್ ನಂಗಾ) ಎಂಬ ಗಾದೆ ಮಾತಿನಂತೆ.

ವಂಶಪಾರಂಪರ್ಯ ರಾಜಕಾರಣದ ಈ ಅನಿಷ್ಟ ದಿಲ್ಲಿಯಿಂದ ಹಳ್ಳಿಯತನಕ ಬೇರು ಬಿಟ್ಟಿದೆ. ಹೇರಳ ಹಣಗಳಿಸಲು ರಾಜಕಾರಣವೇ ರಾಜಮಾರ್ಗ ಎಂಬುದು ಜನಜನಿತ ಸಂಗತಿ. ಈ ಕಾರಣದಿಂದಾಗಿಯೇ ರಾಜಕಾರಣವು ಕೌಟುಂಬಿಕ ವ್ಯಾಪಾರ-ವ್ಯವಹಾರದ ರೂಪ ತಳೆದಿದೆ.

ಅಳಿಯಂದಿರ ಮಾತಿಗೆ ಮರಳೋಣ. ಮೇಲೆ ಹೇಳಿದ ಅಳಿಯಂದಿರ ಸಾಲಿನಲ್ಲಿ ಭಿನ್ನವಾಗಿ ನಿಲ್ಲುವವರು ಜವಾಹರಲಾಲ್ ನೆಹರೂ ಅವರ ಅಳಿಯ ಫಿರೋಜ್ ಗಾಂಧೀ. ಇಂದಿರಾ ಪ್ರಿಯದರ್ಶಿನಿ ಅವರ ಪತಿ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುತ್ತಾರೆ. 1930ರಲ್ಲಿ ಫೈಜಾಬಾದ್ ಜೈಲಿನಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರೊಂದಿಗೆ 19 ತಿಂಗಳ ಕಾಲ ಜೈಲುವಾಸ ಅನುಭವಿಸಿದ್ದರು (ಯೋಗಿ ಆದಿತ್ಯನಾಥ್ ಸರ್ಕಾರ ಫೈಜಾಬಾದನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದೆ). ಇಂದಿರಾ ಪ್ರಿಯದರ್ಶಿನಿ ಅವರೊಡನೆ ವಿವಾಹದ ನಂತರ ಸ್ವತಂತ್ರ ಭಾರತದ ಲೋಕಸಭೆಯ ಸದಸ್ಯರಾಗಿ ಆರಿಸಿ ಬಂದಿದ್ದರು. ನೆಹರೂ ನೇತೃತ್ವದ ಸರ್ಕಾರದ ಹಣಕಾಸು ಮಂತ್ರಿ ಟಿ.ಟಿ.ಕೃಷ್ಣಮಾಚಾರಿ ಅವರ ಮೇಲೆ ಆರ್ಥಿಕ ಅವ್ಯವಹಾರದ ಆಪಾದನೆಗಳನ್ನು ಮಾಡಿ ಅಲ್ಲೋಲಕಲ್ಲೋಲ ಉಂಟು ಮಾಡಿದ್ದರು. ಲೋಕಸಭೆ ಬೆಕ್ಕಸ ಬೆರಗಾಗಿತ್ತು. ಕೃಷ್ಣಮಾಚಾರಿ ಅವರು ರಾಜೀನಾಮೆ ನೀಡಬೇಕಾಗಿ ಬರುತ್ತದೆ.

ಉತ್ತರಪ್ರದೇಶದ ರಾಯಬರೇಲಿಯಿಂದ ಕಾಂಗ್ರೆಸ್ ಸಂಸದನಾಗಿ 1952ರಲ್ಲಿ ಆರಿಸಿ ಬರುವ ಫಿರೋಜ್ ಗಾಂಧೀ ಮೊದಲ ಕೆಲವು ವರ್ಷಗಳ ಕಾಲ ಹಿಂದಿನ ಬೆಂಚಿನ ಸದಸ್ಯರಾಗಿ ಕಾಲ ಕಳೆಯುತ್ತಾರೆ. 1956 ಮತ್ತು 1957ರಲ್ಲಿ ಭ್ರಷ್ಟಾಚಾರ ವಿರೋಧೀ ಆಂದೋಲನದ ಮುಂಚೂಣಿಯಲ್ಲಿ ನಿಲ್ಲುತ್ತಾರೆ.

ಆಗ ತಾನೇ ಕಣ್ಣು ಬಿಟ್ಟಿದ್ದ ಸರ್ಕಾರಿ ಸಂಸ್ಥೆ ಭಾರತೀಯ ಜೀವವಿಮಾ ನಿಗಮ ತನ್ನ ಐವತ್ತೈದು ಲಕ್ಷ ಪಾಲಿಸಿದಾರರ ಹಣದ ದುರುಪಯೋಗದ ಹಗರಣದ ಕೇಂದ್ರಬಿಂದು ಆಗುತ್ತದೆ. ಷೇರು ಮಾರುಕಟ್ಟೆ ಜೂಜು ಷೋಕಿಗೆ ಕುಖ್ಯಾತನಾಗಿದ್ದ ಹರಿದಾಸ್ ಮುಂಧ್ರಾ ಎಂಬಾತನ ಕಂಪನಿಗಳ ಷೇರುಗಳನ್ನು ಮಾರುಕಟ್ಟೆ ದರಕ್ಕಿಂತಲೂ ಹೆಚ್ಚು ದರ ತೆತ್ತು ಖರೀದಿಸಲು ಎಲ್‌ಐಸಿ ಪಾಲಿಸಿದಾರರ ಕಂತುಗಳ ಹಣವಾದ 144 ಲಕ್ಷ ರುಪಾಯಿಯನ್ನು ಬಳಸಲಾಗುತ್ತದೆ.

ಆಡಳಿತ ಪಕ್ಷದ ಸದಸ್ಯನಾಗಿ ಫಿರೋಜ್ ಲೋಕಸಭೆಯಲ್ಲಿ ನಿಂತು ತಮ್ಮ ಮಾವನ ಸರ್ಕಾರದ ಹುಳುಕನ್ನು ಬಯಲಿಗೆಳೆಯುತ್ತಾರೆ. ಈ ಹಗರಣ ಸಾರ್ವಜನಿಕ ಗದ್ದಲ ಆಗುವುದು ನೆಹರೂಗೆ ಬೇಕಿರಲಿಲ್ಲ. ಸರ್ಕಾರದ ವರ್ಚಸ್ಸಿಗೆ ಹೊಡೆತ ಬೀಳುತ್ತದೆಂಬ ಆಶಂಕೆ ಅವರದು. ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಎಂ.ಸಿ.ಛಾಗ್ಲಾ ಬಹಿರಂಗ ಬೈಠಕ್ಕುಗಳಲ್ಲಿ ನಡೆಸುವ ನ್ಯಾಯಾಂಗ ತನಿಖೆಯನ್ನು ನೋಡಲು ಜನ ದೊಡ್ಡ ಸಂಖ್ಯೆಯಲ್ಲಿ ನೆರೆಯುತ್ತಾರೆ. 1958ರಲ್ಲಿ ಹಗರಣದ ಆಪಾದನೆಗಳು ಸಾಬೀತಾಗುತ್ತವೆ. ಅಂದಿನ ಹಣಕಾಸು ಸಚಿವ ಟಿ.ಟಿ.ಕೃಷ್ಣಮಾಚಾರಿ ರಾಜೀನಾಮೆ ಕೊಡಬೇಕಾಗುತ್ತದೆ. ಹರಿದಾಸ್ ಮುಂಧ್ರಾನನ್ನು ದಿಲ್ಲಿಯ ಪ್ರತಿಷ್ಠಿತ ಹೊಟೆಲ್ ಕ್ಲ್ಯಾರಿಡ್ಜಸ್‌ನ ವಿಲಾಸೀ ಕೋಣೆಯಿಂದ ಬಂಧಿಸಿ ಕಾರಾಗೃಹಕ್ಕೆ ಕಳಿಸಲಾಗುತ್ತದೆ.

ಇಂದಿರಾ-ಫಿರೋಜ್ ಬದುಕಿನಲ್ಲಿ ಆ ವೇಳೆಗಾಗಲೇ ಬಿರುಕುಗಳು ಹಿರಿದಾಗಿರುತ್ತವೆ. ಪರಸ್ಪರರ ನಿಷ್ಠೆಯ ಕುರಿತು ಒಡಕು ಮಾತುಗಳು ದಿಲ್ಲಿ ರಾಜಕಾರಣದ ಮೊಗಸಾಲೆಯಲ್ಲಿ ಆ ಹೊತ್ತಿಗಾಗಲೆ ಗಡಚಿಕ್ಕತೊಡಗಿರುತ್ತವೆ. ಫಿರೋಜ್ ಅವರನ್ನು ನೆಹರೂ ಮತ್ತು ಇಂದಿರಾ ದೂರವೇ ಇಟ್ಟಿದ್ದು ಜನಜನಿತ.

ಫಿರೋಜ್ ಗಾಂಧೀ ಹುಟ್ಟಿದ್ದು ಮುಂಬಯಿಯಲ್ಲಿ. 1912ರ ಸೆಪ್ಟಂಬರ್ 12ರಂದು. ಗುಜರಾತೀ ಅಡ್ಡಹೆಸರಿದ್ದ ಜಹಾಂಗೀರ್ ಫೆರಾದೂನ್ ಗಾಂಧೀ ಮತ್ತು ರತ್ತೀಮಾಯಿ ಗಾಂಧೀ ಫಿರೋಜ್ ತಂದೆ ತಾಯಿ. ನಾಲ್ಕು ಮಕ್ಕಳ ತಂದೆ ಫೆರಾದೂನ್ ನೌಕಾವಿಷಯದ ಎಂಜಿನಿಯರ್. ಅಕಾಲ ಮರಣಕ್ಕೆ ತುತ್ತಾಗುತ್ತಾರೆ. ಅನಾಥ ಕುಟುಂಬ ಅಲಹಾಬಾದಿನಲ್ಲಿದ್ದ ಫೆರಾದೂನ್ ಗಾಂಧೀಯ ಚಿಕ್ಕಮ್ಮನ ಆಶ್ರಯಕ್ಕೆ ಸರಿಯುತ್ತದೆ. ಅಲ್ಲಿ ಬೆಳೆಯುವ ಫಿರೋಜ್ ಮತ್ತು ಇಂದಿರಾ ಪ್ರೀತಿಸಿ ಮದುವೆ ಆಗುತ್ತಾರೆ. ಅದು 1942ರ ಮಾರ್ಚ್ 26. ರಾಮನವಮಿಯ ದಿನ. (ಯೋಗಿ ಆದಿತ್ಯನಾಥ್ ಅವರ ಸರ್ಕಾರ ಅಲಹಾಬಾದಿನ ಹೆಸರನ್ನು ಪ್ರಯಾಗರಾಜ ಎಂದು ಬದಲಾಯಿಸಿದೆ).

ಮಹಾತ್ಮಾಗಾಂಧೀ ಮುಂದೆ ನಿಂತು ಈ ಮದುವೆ ಮಾಡಿಸುತ್ತಾರೆ. ಗಾಂಧೀಜಿ ಪ್ರಭಾವಕ್ಕೊಳಗಾಗುವ ಫಿರೋಜ್ ಗಾಂಧೀ ತಮ್ಮ ಕುಲನಾಮದ ಕಾಗುಣಿತವನ್ನು Gandhyಗೆ ಬದಲಾಗಿ Gandhi ಎಂದು ಬದಲಾಯಿಸಿಕೊಳ್ಳುತ್ತಾರೆ.

ಫಿರೋಜ್ ಹೃದಯಾಘಾತದಿಂದ 1960ರ ಸೆಪ್ಟಂಬರ್ ಎಂಟರಂದು ಕಡೆಯುಸಿರೆಳೆಯುತ್ತಾರೆ. ಆಗ ಅವರಿಗೆ ವಯಸ್ಸು 48 ಕೂಡ ಆಗಿರುವುದಿಲ್ಲ. ಮೂರು ದಿನ ಬಾಕಿ ಇರುತ್ತವೆ. ಅವರ ಅಂತ್ಯಸಂಸ್ಕಾರ ಪಾರ್ಸಿ ಮತ್ತು ಹಿಂದೂ ಪದ್ಧತಿಗಳ ಪ್ರಕಾರ ನಡೆಯುತ್ತದೆ. ದಿಲ್ಲಿಯ ನಿಗಮಬೋಧ್ ಘಾಟ್‌ನಲ್ಲಿ ತಂದೆಯ ಚಿತೆಗೆ ಕೊಳ್ಳಿ ತಗುಲಿಸುತ್ತಾರೆ ಎಳೆಯ ರಾಜೀವಗಾಂಧೀ. ಚಿತಾಭಸ್ಮದ ಅರ್ಧದಷ್ಟನ್ನು ಅಲಹಾಬಾದಿನ ತ್ರಿವೇಣಿ ಸಂಗಮದಲ್ಲಿ ವಿಸರ್ಜಿಸಿದರೆ ಇನ್ನರ್ಧವನ್ನು ಅದೇ ನಗರದ ಪಾರ್ಸೀ ರುದ್ರಭೂಮಿಯಲ್ಲಿ ಹುಗಿದು ಕಟ್ಟಿದ ಸಮಾಧಿಯನ್ನು ಈಗಲೂ ಕಾಣಬಹುದು.

ನೆಹರೂ- ಗಾಂಧೀ ವಂಶದ ಮೂಲ ನೆಲೆ ಅಲಹಾಬಾದಿನ ’ಆನಂದಭವನ’. ಫಿರೋಜ್ ಗಾಂಧೀ ಸಮಾಧಿಗೆ ಅಲ್ಲಿಂದ ಕೆಲವೇ ಕಿಲೋಮೀಟರುಗಳ ದೂರ. ಈ ಸಂಗತಿ ಆನಂದಭವನಕ್ಕೆ ಹರಿಯುವ ಬಹುತೇಕ ಪ್ರವಾಸಿಗಳಿಗೆ ತಿಳಿಯದು. ತಿಳಿಯುವಂತೆ ಮಾಡುವ ಪ್ರಯತ್ನವನ್ನು ನೆಹರೂ-ಗಾಂಧೀ ಮನೆತನ ಮಾಡಿಲ್ಲ.


ಇದನ್ನೂ ಓದಿ: ಸರ್ಕಾರಿ ದರೋಡೆಗೆ ತೆರಿಗೆ ಎಂದು ಹೆಸರು: ಬೆಲೆ ಏರಿಕೆಗೆ ಕಾಂಗ್ರೆಸ್‌ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...