Homeಮುಖಪುಟಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

- Advertisement -
- Advertisement -

ವಲಸೆ ಕಾರ್ಮಿಕರ ಮೇಲಿನ ಸರ್ಕಾರದ ಶೋಷಣೆ ನಿರಂತರವಾಗಿ ಮುಂದುವರೆದಿದೆ. ಕಳೆದ ಸೋಮವಾರ ಉಚಿತ ರೈಲು ಪ್ರಯಾಣಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ ಎಂದು ಬಡಾಯಿ ಕೊಚ್ಚಿಕೊಂಡಿದ್ದ ಕೇಂದ್ರ ಸರ್ಕಾರ ಕಾರ್ಮಿಕರಿಂದ ಹಣ ವಸೂಲಿ ಮಾಡಿಯೇ ರೈಲು ಓಡಿಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ವಲಸೆ ಕಾರ್ಮಿಕರನ್ನು ಮೆಜೆಸ್ಟಿಕ್‌ನಿಂದ ಮಾಲೂರು, ಚಿಕ್ಕಬಾಣಾವರ ಸೇರಿದಂತೆ ಹಲವು ರೈಲು ನಿಲ್ದಾಣಕ್ಕೆ ಕರೆದೊಯ್ಯುವ  ಬಿಎಂಟಿಸಿ ಬಸ್‌ಗಳಿಗೂ ದುಪ್ಪಟ್ಟು/ಮೂರು ಪಟ್ಟು ಹಣ ವಸೂಲಿ ಮಾಡಿಯೇ ಅವನ್ನು ರೈಲಿಗೆ ಹತ್ತಿಸಲಾಗುತ್ತಿದ್ದು, ಈಗಾಗಲೇ ಬೆಂದು ಬಸವಳಿದಿರುವ ಕಾರ್ಮಿಕರ ಮತ್ತಷ್ಟು ಶೋಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ

ಮೇ 1 ರಂದು ರೈಲು ಸೇವೆ ಒದಗಿಸುತ್ತೇವೆ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ ಆಗ ಕಾರ್ಮಿಕರು ಟಿಕೆಟ್‌ ಖರೀದಿಸುವುದು ಕಡ್ಡಾಯವಾಗಿತ್ತು. ಇದನ್ನು ವಿರೋಧಿಸಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಾರ್ಮಿಕರ ಟಿಕೆಟ್‌ ಹಣವನ್ನು ಕಾಂಗ್ರೆಸ್‌ ಪಕ್ಷ ಭರಿಸಲಿದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ಆಗ ಸ್ಪಷ್ಟನೆ ನೀಡಿದ್ದ ಕೇಂದ್ರ ಸರ್ಕಾರ ತಾನು ಶೇ.85% ಹಣ ಒದಗಿಸುವುದಾಗಿಯೂ ರಾಜ್ಯ ಸರ್ಕಾರಗಳು ಶೇ.15% ಕಟ್ಟಿದರೆ ಸಾಕುಕ, ಉಚಿತ ರೈಲು ಪ್ರಯಾಣ ಎಂದು ಘೋಷಿಸಿತ್ತು. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ರವರು ಟ್ರೈನ್‌ ಪ್ರಯಾಣ ಉಚಿತವಾಗಿದೆ ಎಂದು ಘೋಷಿಸಿದ್ದರು. ಈಗ ನೋಡಿದರೆ ಕರ್ನಾಟಕದ ಬೆಂಗಳೂರಿನಿಂದ ಹೊರಡುತ್ತಿರುವ ಎಲ್ಲಾ ವಲಸೆ ಕಾರ್ಮಿಕರಿಂದ ಟಿಕೆಟ್‌ಗಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ಕಷ್ಟದಲ್ಲಿರುವ ವಲಸೆ ಕಾರ್ಮಿಕರು ಟಿಕೆಟ್‌ ಹಣ ಭರಿಸಲಾಗದೇ ಒಡ್ಡಾಡುವ ಪರಿಸ್ಥಿತಿ ಬಂದಿದೆ.

ಪಿಎಂ ಕೇರ್ಸ್‌ ಹಣ ಎಲ್ಲಿಗೋಗುತ್ತಿದೆ?

ವಲಸೆ ಕಾರ್ಮಿಕರು ರೈಲು ಇಲ್ಲದೇ, ಇದ್ದರೂ ದುಡ್ಡು ಇಲ್ಲದೇ ಕಾಲ್ನಡಿಗೆಯಲ್ಲಿ ತಮ್ಮ ಊರುಗಳಿಗೆ ಹೊರಟಿರುವ ದೃಶ್ಯಗಳು ಮನಕಲಕುತ್ತಿವೆ. ಇಂತಹ ಸಂದರ್ಭದಲ್ಲಿ ಅವರ ಸಹಾಯಕ್ಕೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರ ಅವರ ಬಳಿಯೇ ಲೂಟಿಗಿಳಿದಿದೆ. ಸರ್ಕಾರದ ಪಿಎಂ ಕೇರ್ಸ್‌ ನಿಧಿಗೆ ಸಾವಿರಾರು ಕೋಟಿ ಹಣ ಹರಿದುಬಂದಿದ್ದರು ಅದರ ಮಾಹಿತಿ ನೀಡುತ್ತಿಲ್ಲ ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಅದರಿಂದ ಹಣ ತೆಗೆದು ಕಾರ್ಮಿಕರ ರೈಲು ಪ್ರಯಾಣಕ್ಕೆ ನೀಡಬೇಕು ಎಂಬ ಆಗ್ರಹ ಜೋರಾಗಿ ಕೇಳಿಬಂದಿದೆ.

ಅಲ್ಲದೇ ಒಂದು ರೈಲಿನಲ್ಲಿ ಕೇವಲ 1200 ಜನರನ್ನು ಮಾತ್ರ ಕರೆದೊಯ್ಯಲಾಗುತ್ತಿದೆ. ಕರ್ನಾಟಕ ರಾಜ್ಯವೊಂದರಲ್ಲೇ ಸುಮಾರು 5-6 ಲಕ್ಷ ಜನ ವಲಸೆ ಕಾರ್ಮಿಕರು ಸಿಕ್ಕಿಕೊಂಡಿದ್ದು ಅವರೆಲ್ಲರನ್ನು ಅವರ ಸ್ವಂತ ಊರುಗಳಿಗೆ ತಲುಪಿಸಲು ಕನಿಷ್ಟ 2 ತಿಂಗಳು ಸಮಯ ಬೇಕಾಗುತ್ತದೆ. ಇದು ಕಾರ್ಮಿಕರ ಹತಾಶೆಯನ್ನು ಹೆಚ್ಚಿಸಲಿದೆ. ಹಾಗಾಗಿ ಸರ್ಕಾರ ಹೆಚ್ಚು ರೈಲುಗಳನ್ನು ಓಡಿಸಬೇಕೆಂದ ಆಗ್ರಹ ಕೇಳಿಬಂದಿದೆ.

ಒಟ್ಟಾರೆಯಾಗಿ ಲಾಕ್‌ಡೌನ್‌ ದಿಸೆಯಿಂದ ವಲಸೆ ಕಾರ್ಮಿಕರ ಬದುಕು ಅನಿಶ್ಚಿತವಾಗಿದೆ. ಸರ್ಕಾರ ದಿನಕ್ಕೊಂದು ನಿಯಮಗಳನ್ನು ತರುವ ಮೂಲಕ ವಲಸೆ ಕಾರ್ಮಿಕರನ್ನು ಇಕ್ಕಟ್ಟಿಗೆ ಸಿಉಕಿಸಿದೆ ಎಂಬ ಆರೋಪವು ಸಹ ಕೇಳಿಬಂದಿದೆ.


ಇದನ್ನೂ ಓದಿ; ಕೊರೊನ ಸಮಯದ ಮತ್ತು ಕೊರೊನೋತ್ತರ ಆರ್ಥಿಕ ಪುನಶ್ಚೇತನಕ್ಕೆ ನಮ್ಮ ಸರ್ಕಾರ ಮಾಡುತ್ತಿರುವುದೇನು? 

ವಲಸೆ ಕಾರ್ಮಿಕರನ್ನು ಊರಿಗೆ ಕಳಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏನು ಮಾಡಿವೆ? ಕರ್ನಾಟಕದ ಪರಿಸ್ಥಿತಿ ಏನು? ನಾನುಗೌರಿ.ಕಾಂ ವರದಿ

Posted by Naanu Gauri on Sunday, May 10, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...