Homeಮುಖಪುಟಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

- Advertisement -
- Advertisement -

ವಲಸೆ ಕಾರ್ಮಿಕರ ಮೇಲಿನ ಸರ್ಕಾರದ ಶೋಷಣೆ ನಿರಂತರವಾಗಿ ಮುಂದುವರೆದಿದೆ. ಕಳೆದ ಸೋಮವಾರ ಉಚಿತ ರೈಲು ಪ್ರಯಾಣಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ ಎಂದು ಬಡಾಯಿ ಕೊಚ್ಚಿಕೊಂಡಿದ್ದ ಕೇಂದ್ರ ಸರ್ಕಾರ ಕಾರ್ಮಿಕರಿಂದ ಹಣ ವಸೂಲಿ ಮಾಡಿಯೇ ರೈಲು ಓಡಿಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ವಲಸೆ ಕಾರ್ಮಿಕರನ್ನು ಮೆಜೆಸ್ಟಿಕ್‌ನಿಂದ ಮಾಲೂರು, ಚಿಕ್ಕಬಾಣಾವರ ಸೇರಿದಂತೆ ಹಲವು ರೈಲು ನಿಲ್ದಾಣಕ್ಕೆ ಕರೆದೊಯ್ಯುವ  ಬಿಎಂಟಿಸಿ ಬಸ್‌ಗಳಿಗೂ ದುಪ್ಪಟ್ಟು/ಮೂರು ಪಟ್ಟು ಹಣ ವಸೂಲಿ ಮಾಡಿಯೇ ಅವನ್ನು ರೈಲಿಗೆ ಹತ್ತಿಸಲಾಗುತ್ತಿದ್ದು, ಈಗಾಗಲೇ ಬೆಂದು ಬಸವಳಿದಿರುವ ಕಾರ್ಮಿಕರ ಮತ್ತಷ್ಟು ಶೋಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ

ಮೇ 1 ರಂದು ರೈಲು ಸೇವೆ ಒದಗಿಸುತ್ತೇವೆ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ ಆಗ ಕಾರ್ಮಿಕರು ಟಿಕೆಟ್‌ ಖರೀದಿಸುವುದು ಕಡ್ಡಾಯವಾಗಿತ್ತು. ಇದನ್ನು ವಿರೋಧಿಸಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಾರ್ಮಿಕರ ಟಿಕೆಟ್‌ ಹಣವನ್ನು ಕಾಂಗ್ರೆಸ್‌ ಪಕ್ಷ ಭರಿಸಲಿದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ಆಗ ಸ್ಪಷ್ಟನೆ ನೀಡಿದ್ದ ಕೇಂದ್ರ ಸರ್ಕಾರ ತಾನು ಶೇ.85% ಹಣ ಒದಗಿಸುವುದಾಗಿಯೂ ರಾಜ್ಯ ಸರ್ಕಾರಗಳು ಶೇ.15% ಕಟ್ಟಿದರೆ ಸಾಕುಕ, ಉಚಿತ ರೈಲು ಪ್ರಯಾಣ ಎಂದು ಘೋಷಿಸಿತ್ತು. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ರವರು ಟ್ರೈನ್‌ ಪ್ರಯಾಣ ಉಚಿತವಾಗಿದೆ ಎಂದು ಘೋಷಿಸಿದ್ದರು. ಈಗ ನೋಡಿದರೆ ಕರ್ನಾಟಕದ ಬೆಂಗಳೂರಿನಿಂದ ಹೊರಡುತ್ತಿರುವ ಎಲ್ಲಾ ವಲಸೆ ಕಾರ್ಮಿಕರಿಂದ ಟಿಕೆಟ್‌ಗಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ಕಷ್ಟದಲ್ಲಿರುವ ವಲಸೆ ಕಾರ್ಮಿಕರು ಟಿಕೆಟ್‌ ಹಣ ಭರಿಸಲಾಗದೇ ಒಡ್ಡಾಡುವ ಪರಿಸ್ಥಿತಿ ಬಂದಿದೆ.

ಪಿಎಂ ಕೇರ್ಸ್‌ ಹಣ ಎಲ್ಲಿಗೋಗುತ್ತಿದೆ?

ವಲಸೆ ಕಾರ್ಮಿಕರು ರೈಲು ಇಲ್ಲದೇ, ಇದ್ದರೂ ದುಡ್ಡು ಇಲ್ಲದೇ ಕಾಲ್ನಡಿಗೆಯಲ್ಲಿ ತಮ್ಮ ಊರುಗಳಿಗೆ ಹೊರಟಿರುವ ದೃಶ್ಯಗಳು ಮನಕಲಕುತ್ತಿವೆ. ಇಂತಹ ಸಂದರ್ಭದಲ್ಲಿ ಅವರ ಸಹಾಯಕ್ಕೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರ ಅವರ ಬಳಿಯೇ ಲೂಟಿಗಿಳಿದಿದೆ. ಸರ್ಕಾರದ ಪಿಎಂ ಕೇರ್ಸ್‌ ನಿಧಿಗೆ ಸಾವಿರಾರು ಕೋಟಿ ಹಣ ಹರಿದುಬಂದಿದ್ದರು ಅದರ ಮಾಹಿತಿ ನೀಡುತ್ತಿಲ್ಲ ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಅದರಿಂದ ಹಣ ತೆಗೆದು ಕಾರ್ಮಿಕರ ರೈಲು ಪ್ರಯಾಣಕ್ಕೆ ನೀಡಬೇಕು ಎಂಬ ಆಗ್ರಹ ಜೋರಾಗಿ ಕೇಳಿಬಂದಿದೆ.

ಅಲ್ಲದೇ ಒಂದು ರೈಲಿನಲ್ಲಿ ಕೇವಲ 1200 ಜನರನ್ನು ಮಾತ್ರ ಕರೆದೊಯ್ಯಲಾಗುತ್ತಿದೆ. ಕರ್ನಾಟಕ ರಾಜ್ಯವೊಂದರಲ್ಲೇ ಸುಮಾರು 5-6 ಲಕ್ಷ ಜನ ವಲಸೆ ಕಾರ್ಮಿಕರು ಸಿಕ್ಕಿಕೊಂಡಿದ್ದು ಅವರೆಲ್ಲರನ್ನು ಅವರ ಸ್ವಂತ ಊರುಗಳಿಗೆ ತಲುಪಿಸಲು ಕನಿಷ್ಟ 2 ತಿಂಗಳು ಸಮಯ ಬೇಕಾಗುತ್ತದೆ. ಇದು ಕಾರ್ಮಿಕರ ಹತಾಶೆಯನ್ನು ಹೆಚ್ಚಿಸಲಿದೆ. ಹಾಗಾಗಿ ಸರ್ಕಾರ ಹೆಚ್ಚು ರೈಲುಗಳನ್ನು ಓಡಿಸಬೇಕೆಂದ ಆಗ್ರಹ ಕೇಳಿಬಂದಿದೆ.

ಒಟ್ಟಾರೆಯಾಗಿ ಲಾಕ್‌ಡೌನ್‌ ದಿಸೆಯಿಂದ ವಲಸೆ ಕಾರ್ಮಿಕರ ಬದುಕು ಅನಿಶ್ಚಿತವಾಗಿದೆ. ಸರ್ಕಾರ ದಿನಕ್ಕೊಂದು ನಿಯಮಗಳನ್ನು ತರುವ ಮೂಲಕ ವಲಸೆ ಕಾರ್ಮಿಕರನ್ನು ಇಕ್ಕಟ್ಟಿಗೆ ಸಿಉಕಿಸಿದೆ ಎಂಬ ಆರೋಪವು ಸಹ ಕೇಳಿಬಂದಿದೆ.


ಇದನ್ನೂ ಓದಿ; ಕೊರೊನ ಸಮಯದ ಮತ್ತು ಕೊರೊನೋತ್ತರ ಆರ್ಥಿಕ ಪುನಶ್ಚೇತನಕ್ಕೆ ನಮ್ಮ ಸರ್ಕಾರ ಮಾಡುತ್ತಿರುವುದೇನು? 

ವಲಸೆ ಕಾರ್ಮಿಕರನ್ನು ಊರಿಗೆ ಕಳಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏನು ಮಾಡಿವೆ? ಕರ್ನಾಟಕದ ಪರಿಸ್ಥಿತಿ ಏನು? ನಾನುಗೌರಿ.ಕಾಂ ವರದಿ

Posted by Naanu Gauri on Sunday, May 10, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...