Homeಮುಖಪುಟಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

- Advertisement -
- Advertisement -

ವಲಸೆ ಕಾರ್ಮಿಕರ ಮೇಲಿನ ಸರ್ಕಾರದ ಶೋಷಣೆ ನಿರಂತರವಾಗಿ ಮುಂದುವರೆದಿದೆ. ಕಳೆದ ಸೋಮವಾರ ಉಚಿತ ರೈಲು ಪ್ರಯಾಣಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ ಎಂದು ಬಡಾಯಿ ಕೊಚ್ಚಿಕೊಂಡಿದ್ದ ಕೇಂದ್ರ ಸರ್ಕಾರ ಕಾರ್ಮಿಕರಿಂದ ಹಣ ವಸೂಲಿ ಮಾಡಿಯೇ ರೈಲು ಓಡಿಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ವಲಸೆ ಕಾರ್ಮಿಕರನ್ನು ಮೆಜೆಸ್ಟಿಕ್‌ನಿಂದ ಮಾಲೂರು, ಚಿಕ್ಕಬಾಣಾವರ ಸೇರಿದಂತೆ ಹಲವು ರೈಲು ನಿಲ್ದಾಣಕ್ಕೆ ಕರೆದೊಯ್ಯುವ  ಬಿಎಂಟಿಸಿ ಬಸ್‌ಗಳಿಗೂ ದುಪ್ಪಟ್ಟು/ಮೂರು ಪಟ್ಟು ಹಣ ವಸೂಲಿ ಮಾಡಿಯೇ ಅವನ್ನು ರೈಲಿಗೆ ಹತ್ತಿಸಲಾಗುತ್ತಿದ್ದು, ಈಗಾಗಲೇ ಬೆಂದು ಬಸವಳಿದಿರುವ ಕಾರ್ಮಿಕರ ಮತ್ತಷ್ಟು ಶೋಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ

ಮೇ 1 ರಂದು ರೈಲು ಸೇವೆ ಒದಗಿಸುತ್ತೇವೆ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ ಆಗ ಕಾರ್ಮಿಕರು ಟಿಕೆಟ್‌ ಖರೀದಿಸುವುದು ಕಡ್ಡಾಯವಾಗಿತ್ತು. ಇದನ್ನು ವಿರೋಧಿಸಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಾರ್ಮಿಕರ ಟಿಕೆಟ್‌ ಹಣವನ್ನು ಕಾಂಗ್ರೆಸ್‌ ಪಕ್ಷ ಭರಿಸಲಿದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ಆಗ ಸ್ಪಷ್ಟನೆ ನೀಡಿದ್ದ ಕೇಂದ್ರ ಸರ್ಕಾರ ತಾನು ಶೇ.85% ಹಣ ಒದಗಿಸುವುದಾಗಿಯೂ ರಾಜ್ಯ ಸರ್ಕಾರಗಳು ಶೇ.15% ಕಟ್ಟಿದರೆ ಸಾಕುಕ, ಉಚಿತ ರೈಲು ಪ್ರಯಾಣ ಎಂದು ಘೋಷಿಸಿತ್ತು. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ರವರು ಟ್ರೈನ್‌ ಪ್ರಯಾಣ ಉಚಿತವಾಗಿದೆ ಎಂದು ಘೋಷಿಸಿದ್ದರು. ಈಗ ನೋಡಿದರೆ ಕರ್ನಾಟಕದ ಬೆಂಗಳೂರಿನಿಂದ ಹೊರಡುತ್ತಿರುವ ಎಲ್ಲಾ ವಲಸೆ ಕಾರ್ಮಿಕರಿಂದ ಟಿಕೆಟ್‌ಗಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ಕಷ್ಟದಲ್ಲಿರುವ ವಲಸೆ ಕಾರ್ಮಿಕರು ಟಿಕೆಟ್‌ ಹಣ ಭರಿಸಲಾಗದೇ ಒಡ್ಡಾಡುವ ಪರಿಸ್ಥಿತಿ ಬಂದಿದೆ.

ಪಿಎಂ ಕೇರ್ಸ್‌ ಹಣ ಎಲ್ಲಿಗೋಗುತ್ತಿದೆ?

ವಲಸೆ ಕಾರ್ಮಿಕರು ರೈಲು ಇಲ್ಲದೇ, ಇದ್ದರೂ ದುಡ್ಡು ಇಲ್ಲದೇ ಕಾಲ್ನಡಿಗೆಯಲ್ಲಿ ತಮ್ಮ ಊರುಗಳಿಗೆ ಹೊರಟಿರುವ ದೃಶ್ಯಗಳು ಮನಕಲಕುತ್ತಿವೆ. ಇಂತಹ ಸಂದರ್ಭದಲ್ಲಿ ಅವರ ಸಹಾಯಕ್ಕೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರ ಅವರ ಬಳಿಯೇ ಲೂಟಿಗಿಳಿದಿದೆ. ಸರ್ಕಾರದ ಪಿಎಂ ಕೇರ್ಸ್‌ ನಿಧಿಗೆ ಸಾವಿರಾರು ಕೋಟಿ ಹಣ ಹರಿದುಬಂದಿದ್ದರು ಅದರ ಮಾಹಿತಿ ನೀಡುತ್ತಿಲ್ಲ ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಅದರಿಂದ ಹಣ ತೆಗೆದು ಕಾರ್ಮಿಕರ ರೈಲು ಪ್ರಯಾಣಕ್ಕೆ ನೀಡಬೇಕು ಎಂಬ ಆಗ್ರಹ ಜೋರಾಗಿ ಕೇಳಿಬಂದಿದೆ.

ಅಲ್ಲದೇ ಒಂದು ರೈಲಿನಲ್ಲಿ ಕೇವಲ 1200 ಜನರನ್ನು ಮಾತ್ರ ಕರೆದೊಯ್ಯಲಾಗುತ್ತಿದೆ. ಕರ್ನಾಟಕ ರಾಜ್ಯವೊಂದರಲ್ಲೇ ಸುಮಾರು 5-6 ಲಕ್ಷ ಜನ ವಲಸೆ ಕಾರ್ಮಿಕರು ಸಿಕ್ಕಿಕೊಂಡಿದ್ದು ಅವರೆಲ್ಲರನ್ನು ಅವರ ಸ್ವಂತ ಊರುಗಳಿಗೆ ತಲುಪಿಸಲು ಕನಿಷ್ಟ 2 ತಿಂಗಳು ಸಮಯ ಬೇಕಾಗುತ್ತದೆ. ಇದು ಕಾರ್ಮಿಕರ ಹತಾಶೆಯನ್ನು ಹೆಚ್ಚಿಸಲಿದೆ. ಹಾಗಾಗಿ ಸರ್ಕಾರ ಹೆಚ್ಚು ರೈಲುಗಳನ್ನು ಓಡಿಸಬೇಕೆಂದ ಆಗ್ರಹ ಕೇಳಿಬಂದಿದೆ.

ಒಟ್ಟಾರೆಯಾಗಿ ಲಾಕ್‌ಡೌನ್‌ ದಿಸೆಯಿಂದ ವಲಸೆ ಕಾರ್ಮಿಕರ ಬದುಕು ಅನಿಶ್ಚಿತವಾಗಿದೆ. ಸರ್ಕಾರ ದಿನಕ್ಕೊಂದು ನಿಯಮಗಳನ್ನು ತರುವ ಮೂಲಕ ವಲಸೆ ಕಾರ್ಮಿಕರನ್ನು ಇಕ್ಕಟ್ಟಿಗೆ ಸಿಉಕಿಸಿದೆ ಎಂಬ ಆರೋಪವು ಸಹ ಕೇಳಿಬಂದಿದೆ.


ಇದನ್ನೂ ಓದಿ; ಕೊರೊನ ಸಮಯದ ಮತ್ತು ಕೊರೊನೋತ್ತರ ಆರ್ಥಿಕ ಪುನಶ್ಚೇತನಕ್ಕೆ ನಮ್ಮ ಸರ್ಕಾರ ಮಾಡುತ್ತಿರುವುದೇನು? 

ವಲಸೆ ಕಾರ್ಮಿಕರನ್ನು ಊರಿಗೆ ಕಳಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏನು ಮಾಡಿವೆ? ಕರ್ನಾಟಕದ ಪರಿಸ್ಥಿತಿ ಏನು? ನಾನುಗೌರಿ.ಕಾಂ ವರದಿ

Posted by Naanu Gauri on Sunday, May 10, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...