Homeಮುಖಪುಟಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

- Advertisement -
- Advertisement -

ವಲಸೆ ಕಾರ್ಮಿಕರ ಮೇಲಿನ ಸರ್ಕಾರದ ಶೋಷಣೆ ನಿರಂತರವಾಗಿ ಮುಂದುವರೆದಿದೆ. ಕಳೆದ ಸೋಮವಾರ ಉಚಿತ ರೈಲು ಪ್ರಯಾಣಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ ಎಂದು ಬಡಾಯಿ ಕೊಚ್ಚಿಕೊಂಡಿದ್ದ ಕೇಂದ್ರ ಸರ್ಕಾರ ಕಾರ್ಮಿಕರಿಂದ ಹಣ ವಸೂಲಿ ಮಾಡಿಯೇ ರೈಲು ಓಡಿಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ವಲಸೆ ಕಾರ್ಮಿಕರನ್ನು ಮೆಜೆಸ್ಟಿಕ್‌ನಿಂದ ಮಾಲೂರು, ಚಿಕ್ಕಬಾಣಾವರ ಸೇರಿದಂತೆ ಹಲವು ರೈಲು ನಿಲ್ದಾಣಕ್ಕೆ ಕರೆದೊಯ್ಯುವ  ಬಿಎಂಟಿಸಿ ಬಸ್‌ಗಳಿಗೂ ದುಪ್ಪಟ್ಟು/ಮೂರು ಪಟ್ಟು ಹಣ ವಸೂಲಿ ಮಾಡಿಯೇ ಅವನ್ನು ರೈಲಿಗೆ ಹತ್ತಿಸಲಾಗುತ್ತಿದ್ದು, ಈಗಾಗಲೇ ಬೆಂದು ಬಸವಳಿದಿರುವ ಕಾರ್ಮಿಕರ ಮತ್ತಷ್ಟು ಶೋಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ

ಮೇ 1 ರಂದು ರೈಲು ಸೇವೆ ಒದಗಿಸುತ್ತೇವೆ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ ಆಗ ಕಾರ್ಮಿಕರು ಟಿಕೆಟ್‌ ಖರೀದಿಸುವುದು ಕಡ್ಡಾಯವಾಗಿತ್ತು. ಇದನ್ನು ವಿರೋಧಿಸಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಾರ್ಮಿಕರ ಟಿಕೆಟ್‌ ಹಣವನ್ನು ಕಾಂಗ್ರೆಸ್‌ ಪಕ್ಷ ಭರಿಸಲಿದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ಆಗ ಸ್ಪಷ್ಟನೆ ನೀಡಿದ್ದ ಕೇಂದ್ರ ಸರ್ಕಾರ ತಾನು ಶೇ.85% ಹಣ ಒದಗಿಸುವುದಾಗಿಯೂ ರಾಜ್ಯ ಸರ್ಕಾರಗಳು ಶೇ.15% ಕಟ್ಟಿದರೆ ಸಾಕುಕ, ಉಚಿತ ರೈಲು ಪ್ರಯಾಣ ಎಂದು ಘೋಷಿಸಿತ್ತು. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ರವರು ಟ್ರೈನ್‌ ಪ್ರಯಾಣ ಉಚಿತವಾಗಿದೆ ಎಂದು ಘೋಷಿಸಿದ್ದರು. ಈಗ ನೋಡಿದರೆ ಕರ್ನಾಟಕದ ಬೆಂಗಳೂರಿನಿಂದ ಹೊರಡುತ್ತಿರುವ ಎಲ್ಲಾ ವಲಸೆ ಕಾರ್ಮಿಕರಿಂದ ಟಿಕೆಟ್‌ಗಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ಕಷ್ಟದಲ್ಲಿರುವ ವಲಸೆ ಕಾರ್ಮಿಕರು ಟಿಕೆಟ್‌ ಹಣ ಭರಿಸಲಾಗದೇ ಒಡ್ಡಾಡುವ ಪರಿಸ್ಥಿತಿ ಬಂದಿದೆ.

ಪಿಎಂ ಕೇರ್ಸ್‌ ಹಣ ಎಲ್ಲಿಗೋಗುತ್ತಿದೆ?

ವಲಸೆ ಕಾರ್ಮಿಕರು ರೈಲು ಇಲ್ಲದೇ, ಇದ್ದರೂ ದುಡ್ಡು ಇಲ್ಲದೇ ಕಾಲ್ನಡಿಗೆಯಲ್ಲಿ ತಮ್ಮ ಊರುಗಳಿಗೆ ಹೊರಟಿರುವ ದೃಶ್ಯಗಳು ಮನಕಲಕುತ್ತಿವೆ. ಇಂತಹ ಸಂದರ್ಭದಲ್ಲಿ ಅವರ ಸಹಾಯಕ್ಕೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರ ಅವರ ಬಳಿಯೇ ಲೂಟಿಗಿಳಿದಿದೆ. ಸರ್ಕಾರದ ಪಿಎಂ ಕೇರ್ಸ್‌ ನಿಧಿಗೆ ಸಾವಿರಾರು ಕೋಟಿ ಹಣ ಹರಿದುಬಂದಿದ್ದರು ಅದರ ಮಾಹಿತಿ ನೀಡುತ್ತಿಲ್ಲ ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಅದರಿಂದ ಹಣ ತೆಗೆದು ಕಾರ್ಮಿಕರ ರೈಲು ಪ್ರಯಾಣಕ್ಕೆ ನೀಡಬೇಕು ಎಂಬ ಆಗ್ರಹ ಜೋರಾಗಿ ಕೇಳಿಬಂದಿದೆ.

ಅಲ್ಲದೇ ಒಂದು ರೈಲಿನಲ್ಲಿ ಕೇವಲ 1200 ಜನರನ್ನು ಮಾತ್ರ ಕರೆದೊಯ್ಯಲಾಗುತ್ತಿದೆ. ಕರ್ನಾಟಕ ರಾಜ್ಯವೊಂದರಲ್ಲೇ ಸುಮಾರು 5-6 ಲಕ್ಷ ಜನ ವಲಸೆ ಕಾರ್ಮಿಕರು ಸಿಕ್ಕಿಕೊಂಡಿದ್ದು ಅವರೆಲ್ಲರನ್ನು ಅವರ ಸ್ವಂತ ಊರುಗಳಿಗೆ ತಲುಪಿಸಲು ಕನಿಷ್ಟ 2 ತಿಂಗಳು ಸಮಯ ಬೇಕಾಗುತ್ತದೆ. ಇದು ಕಾರ್ಮಿಕರ ಹತಾಶೆಯನ್ನು ಹೆಚ್ಚಿಸಲಿದೆ. ಹಾಗಾಗಿ ಸರ್ಕಾರ ಹೆಚ್ಚು ರೈಲುಗಳನ್ನು ಓಡಿಸಬೇಕೆಂದ ಆಗ್ರಹ ಕೇಳಿಬಂದಿದೆ.

ಒಟ್ಟಾರೆಯಾಗಿ ಲಾಕ್‌ಡೌನ್‌ ದಿಸೆಯಿಂದ ವಲಸೆ ಕಾರ್ಮಿಕರ ಬದುಕು ಅನಿಶ್ಚಿತವಾಗಿದೆ. ಸರ್ಕಾರ ದಿನಕ್ಕೊಂದು ನಿಯಮಗಳನ್ನು ತರುವ ಮೂಲಕ ವಲಸೆ ಕಾರ್ಮಿಕರನ್ನು ಇಕ್ಕಟ್ಟಿಗೆ ಸಿಉಕಿಸಿದೆ ಎಂಬ ಆರೋಪವು ಸಹ ಕೇಳಿಬಂದಿದೆ.


ಇದನ್ನೂ ಓದಿ; ಕೊರೊನ ಸಮಯದ ಮತ್ತು ಕೊರೊನೋತ್ತರ ಆರ್ಥಿಕ ಪುನಶ್ಚೇತನಕ್ಕೆ ನಮ್ಮ ಸರ್ಕಾರ ಮಾಡುತ್ತಿರುವುದೇನು? 

ವಲಸೆ ಕಾರ್ಮಿಕರನ್ನು ಊರಿಗೆ ಕಳಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏನು ಮಾಡಿವೆ? ಕರ್ನಾಟಕದ ಪರಿಸ್ಥಿತಿ ಏನು? ನಾನುಗೌರಿ.ಕಾಂ ವರದಿ

Posted by Naanu Gauri on Sunday, May 10, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...