Homeಮುಖಪುಟಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

- Advertisement -
- Advertisement -

ವಲಸೆ ಕಾರ್ಮಿಕರ ಮೇಲಿನ ಸರ್ಕಾರದ ಶೋಷಣೆ ನಿರಂತರವಾಗಿ ಮುಂದುವರೆದಿದೆ. ಕಳೆದ ಸೋಮವಾರ ಉಚಿತ ರೈಲು ಪ್ರಯಾಣಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ ಎಂದು ಬಡಾಯಿ ಕೊಚ್ಚಿಕೊಂಡಿದ್ದ ಕೇಂದ್ರ ಸರ್ಕಾರ ಕಾರ್ಮಿಕರಿಂದ ಹಣ ವಸೂಲಿ ಮಾಡಿಯೇ ರೈಲು ಓಡಿಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ವಲಸೆ ಕಾರ್ಮಿಕರನ್ನು ಮೆಜೆಸ್ಟಿಕ್‌ನಿಂದ ಮಾಲೂರು, ಚಿಕ್ಕಬಾಣಾವರ ಸೇರಿದಂತೆ ಹಲವು ರೈಲು ನಿಲ್ದಾಣಕ್ಕೆ ಕರೆದೊಯ್ಯುವ  ಬಿಎಂಟಿಸಿ ಬಸ್‌ಗಳಿಗೂ ದುಪ್ಪಟ್ಟು/ಮೂರು ಪಟ್ಟು ಹಣ ವಸೂಲಿ ಮಾಡಿಯೇ ಅವನ್ನು ರೈಲಿಗೆ ಹತ್ತಿಸಲಾಗುತ್ತಿದ್ದು, ಈಗಾಗಲೇ ಬೆಂದು ಬಸವಳಿದಿರುವ ಕಾರ್ಮಿಕರ ಮತ್ತಷ್ಟು ಶೋಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ

ಮೇ 1 ರಂದು ರೈಲು ಸೇವೆ ಒದಗಿಸುತ್ತೇವೆ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ ಆಗ ಕಾರ್ಮಿಕರು ಟಿಕೆಟ್‌ ಖರೀದಿಸುವುದು ಕಡ್ಡಾಯವಾಗಿತ್ತು. ಇದನ್ನು ವಿರೋಧಿಸಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಾರ್ಮಿಕರ ಟಿಕೆಟ್‌ ಹಣವನ್ನು ಕಾಂಗ್ರೆಸ್‌ ಪಕ್ಷ ಭರಿಸಲಿದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ಆಗ ಸ್ಪಷ್ಟನೆ ನೀಡಿದ್ದ ಕೇಂದ್ರ ಸರ್ಕಾರ ತಾನು ಶೇ.85% ಹಣ ಒದಗಿಸುವುದಾಗಿಯೂ ರಾಜ್ಯ ಸರ್ಕಾರಗಳು ಶೇ.15% ಕಟ್ಟಿದರೆ ಸಾಕುಕ, ಉಚಿತ ರೈಲು ಪ್ರಯಾಣ ಎಂದು ಘೋಷಿಸಿತ್ತು. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ರವರು ಟ್ರೈನ್‌ ಪ್ರಯಾಣ ಉಚಿತವಾಗಿದೆ ಎಂದು ಘೋಷಿಸಿದ್ದರು. ಈಗ ನೋಡಿದರೆ ಕರ್ನಾಟಕದ ಬೆಂಗಳೂರಿನಿಂದ ಹೊರಡುತ್ತಿರುವ ಎಲ್ಲಾ ವಲಸೆ ಕಾರ್ಮಿಕರಿಂದ ಟಿಕೆಟ್‌ಗಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ಕಷ್ಟದಲ್ಲಿರುವ ವಲಸೆ ಕಾರ್ಮಿಕರು ಟಿಕೆಟ್‌ ಹಣ ಭರಿಸಲಾಗದೇ ಒಡ್ಡಾಡುವ ಪರಿಸ್ಥಿತಿ ಬಂದಿದೆ.

ಪಿಎಂ ಕೇರ್ಸ್‌ ಹಣ ಎಲ್ಲಿಗೋಗುತ್ತಿದೆ?

ವಲಸೆ ಕಾರ್ಮಿಕರು ರೈಲು ಇಲ್ಲದೇ, ಇದ್ದರೂ ದುಡ್ಡು ಇಲ್ಲದೇ ಕಾಲ್ನಡಿಗೆಯಲ್ಲಿ ತಮ್ಮ ಊರುಗಳಿಗೆ ಹೊರಟಿರುವ ದೃಶ್ಯಗಳು ಮನಕಲಕುತ್ತಿವೆ. ಇಂತಹ ಸಂದರ್ಭದಲ್ಲಿ ಅವರ ಸಹಾಯಕ್ಕೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರ ಅವರ ಬಳಿಯೇ ಲೂಟಿಗಿಳಿದಿದೆ. ಸರ್ಕಾರದ ಪಿಎಂ ಕೇರ್ಸ್‌ ನಿಧಿಗೆ ಸಾವಿರಾರು ಕೋಟಿ ಹಣ ಹರಿದುಬಂದಿದ್ದರು ಅದರ ಮಾಹಿತಿ ನೀಡುತ್ತಿಲ್ಲ ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಅದರಿಂದ ಹಣ ತೆಗೆದು ಕಾರ್ಮಿಕರ ರೈಲು ಪ್ರಯಾಣಕ್ಕೆ ನೀಡಬೇಕು ಎಂಬ ಆಗ್ರಹ ಜೋರಾಗಿ ಕೇಳಿಬಂದಿದೆ.

ಅಲ್ಲದೇ ಒಂದು ರೈಲಿನಲ್ಲಿ ಕೇವಲ 1200 ಜನರನ್ನು ಮಾತ್ರ ಕರೆದೊಯ್ಯಲಾಗುತ್ತಿದೆ. ಕರ್ನಾಟಕ ರಾಜ್ಯವೊಂದರಲ್ಲೇ ಸುಮಾರು 5-6 ಲಕ್ಷ ಜನ ವಲಸೆ ಕಾರ್ಮಿಕರು ಸಿಕ್ಕಿಕೊಂಡಿದ್ದು ಅವರೆಲ್ಲರನ್ನು ಅವರ ಸ್ವಂತ ಊರುಗಳಿಗೆ ತಲುಪಿಸಲು ಕನಿಷ್ಟ 2 ತಿಂಗಳು ಸಮಯ ಬೇಕಾಗುತ್ತದೆ. ಇದು ಕಾರ್ಮಿಕರ ಹತಾಶೆಯನ್ನು ಹೆಚ್ಚಿಸಲಿದೆ. ಹಾಗಾಗಿ ಸರ್ಕಾರ ಹೆಚ್ಚು ರೈಲುಗಳನ್ನು ಓಡಿಸಬೇಕೆಂದ ಆಗ್ರಹ ಕೇಳಿಬಂದಿದೆ.

ಒಟ್ಟಾರೆಯಾಗಿ ಲಾಕ್‌ಡೌನ್‌ ದಿಸೆಯಿಂದ ವಲಸೆ ಕಾರ್ಮಿಕರ ಬದುಕು ಅನಿಶ್ಚಿತವಾಗಿದೆ. ಸರ್ಕಾರ ದಿನಕ್ಕೊಂದು ನಿಯಮಗಳನ್ನು ತರುವ ಮೂಲಕ ವಲಸೆ ಕಾರ್ಮಿಕರನ್ನು ಇಕ್ಕಟ್ಟಿಗೆ ಸಿಉಕಿಸಿದೆ ಎಂಬ ಆರೋಪವು ಸಹ ಕೇಳಿಬಂದಿದೆ.


ಇದನ್ನೂ ಓದಿ; ಕೊರೊನ ಸಮಯದ ಮತ್ತು ಕೊರೊನೋತ್ತರ ಆರ್ಥಿಕ ಪುನಶ್ಚೇತನಕ್ಕೆ ನಮ್ಮ ಸರ್ಕಾರ ಮಾಡುತ್ತಿರುವುದೇನು? 

ವಲಸೆ ಕಾರ್ಮಿಕರನ್ನು ಊರಿಗೆ ಕಳಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏನು ಮಾಡಿವೆ? ಕರ್ನಾಟಕದ ಪರಿಸ್ಥಿತಿ ಏನು? ನಾನುಗೌರಿ.ಕಾಂ ವರದಿ

Posted by Naanu Gauri on Sunday, May 10, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...