Homeಕರ್ನಾಟಕಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!

ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!

ಮಾಂಟೆಸ್ಸರಿಯನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವುದು ನನ್ನ ಕನಸಾಗಿದೆ. ಗುಣಮಟ್ಟದ ಶಿಕ್ಷಣವು ಎಲ್ಲರಿಗೂ ಕೈಗೆಟುವಂತಾಗಬೇಕು ಎಂಬುದು ನನ್ನ ಗುರಿಯಾಗಿದೆ, ಅದನ್ನು ಸಾಧಿಸಲು ಈ ಕಾರ್ಯಕ್ರಮ ಸಹಾಯಕವಾಗಲಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಮತ್ತು ಲಾಕ್‌ಡೌನ್‌ನಿಂದ ಬಹಳಷ್ಟು ಜನರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿಯೂ ಕೂಡ ನೂರಾರು ಖಾಸಗಿ ಶಾಲೆಗಳು ಶಾಲಾ ಶುಲ್ಕ ಹೆಚ್ಚಿಸಿ ಈಗಲೇ ಕಟ್ಟುವಂತೆ ಒತ್ತಾಯಿಸುತ್ತಿರುವ ಹಲವು ವರದಿಗಳು ಬರುತ್ತಿವೆ. ಸರ್ಕಾರ ಒತ್ತಾಯ ಮಾಡಬೇಡಿ ಎಂದರೂ ಕೇಳದ ಹತ್ತಾರು ಖಾಸಗಿ ಶಾಲೆಗಳನ್ನು ನೋಡಿದ್ದೇವೆ. ಅವುಗಳೆಲ್ಲದರ ನಡುವೆ ಈ ಬೆಂಗಳೂರಿನ ಶಾಲೆಯೊಂದು ವಿಭಿನ್ನವಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ದಿ ಫ್ರೀಥಿಂಕಿಂಗ್ ಶಾಲೆಯು ತಮ್ಮ ಶಾಲೆಯ ಮಕ್ಕಳ ಪೋಷಕರಿಗೆ Freedom from Fees (ಶುಲ್ಕದಿಂದ ಸ್ವಾತಂತ್ರ್ಯ) ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಂತೆ ಪೋಷಕರು ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದು ಹೇಳುವ ಮೂಲಕ ಗಮನ ಸೆಳೆದಿದೆ.

ಮಾಂಟೆಸ್ಸರಿ ಶಿಕ್ಷಣ ವಿಧಾನವನ್ನು ಅನುಸರಿಸುತ್ತಿರುವ ಈ ಶಾಲೆಯು ಪೋಷಕರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಶಾಲಾ ಶುಲ್ಕ ಕಟ್ಟಲು ಕೇಳಿಕೊಂಡಿದೆ. ಅದು ಅಲ್ಲದೇ ತಮಗೆ ಅನುಕೂಲವಾದಾಗ ಶುಲ್ಕ ಕಟ್ಟಿ ಎಂದಿದೆ. ಇದು ಆರಂಭಿಕ ತರಗತಿಗಳಿಗೆ ಅನ್ವಯವಾಗಲಿದ್ದು, ಮಾಸಿಕ ಚಂದಾದಾರಿಕೆಯಿಂದ ಕೂಡಿದ್ದು, 2021ರ ಮಾರ್ಚ್‌ವರೆಗೂ ಕಾರ್ಯಕ್ರಮ ಚಾಲ್ತಿಯಲ್ಲಿರುತ್ತದೆ ಎಂದು ಶಾಲೆಯ ವೆಬ್‌ಸೈಟ್ ತಿಳಿಸಿದೆ.

ನಿಮ್ಮ ಮನೆಯಲ್ಲಿ ಕೆಲಸ ಮಾಡುವ ಚಾಲಕರು, ಸಹಾಯಕ ಸಿಬ್ಬಂದಿ ಸೇರಿದಂತೆ ಇತರರು ಸಹ ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಬಹುದು. ಅವರಿಗೆ ಶಿಕ್ಷಣ ಬೇಕು ಅನ್ನಿಸಿದ್ದಲ್ಲಿ ಇಲ್ಲಿ ಸೇರಿಸಿ ಎಂದು ಶಾಲೆ ಕೇಳಿಕೊಂಡಿದೆ.

“ಸೌಹಾರ್ದತೆ ಮತ್ತು ಸ್ವಾತಂತ್ರ್ಯದ ಸ್ಫೂರ್ತಿಯಲ್ಲಿ ಈ ಕಾರ್ಯಕ್ರಮವನ್ನು ಕೋವಿಡ್ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಮಿಕರು, ದಾದಿಯರು ಮತ್ತು ಇತರ ಕೋವಿಡ್ ಯೋಧರಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಮಾಂಟೆಸ್ಸರಿಯನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವುದು ನನ್ನ ಕನಸಾಗಿದೆ. ಗುಣಮಟ್ಟದ ಶಿಕ್ಷಣವು ಎಲ್ಲರಿಗೂ ಕೈಗೆಟುವಂತಾಗಬೇಕು ಎಂಬುದು ನನ್ನ ಗುರಿಯಾಗಿದೆ, ಅದನ್ನು ಸಾಧಿಸಲು ಈ ಕಾರ್ಯಕ್ರಮ ಸಹಾಯಕವಾಗಲಿದೆ” ಎಂದು ದಿ ಫ್ರೀಥಿಂಕಿಂಗ್ ಶಾಲೆಯ ನಿರ್ದೇಶಕಿ ಸ್ಯಾಂಡಿ ಫಿಲಿಪ್ಸ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ಶಾಲಾ ವೆಬ್‌ಸೈಟ್‌ನಲ್ಲಿ ತಿಳಿಯಿರಿ.


ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಶಾಲಾ ಶುಲ್ಕ ಪಾವತಿಗೆ ಕಾಲಾವಕಾಶ ಕೋರಿದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...