Homeಕರ್ನಾಟಕಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!

ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!

ಮಾಂಟೆಸ್ಸರಿಯನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವುದು ನನ್ನ ಕನಸಾಗಿದೆ. ಗುಣಮಟ್ಟದ ಶಿಕ್ಷಣವು ಎಲ್ಲರಿಗೂ ಕೈಗೆಟುವಂತಾಗಬೇಕು ಎಂಬುದು ನನ್ನ ಗುರಿಯಾಗಿದೆ, ಅದನ್ನು ಸಾಧಿಸಲು ಈ ಕಾರ್ಯಕ್ರಮ ಸಹಾಯಕವಾಗಲಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಮತ್ತು ಲಾಕ್‌ಡೌನ್‌ನಿಂದ ಬಹಳಷ್ಟು ಜನರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿಯೂ ಕೂಡ ನೂರಾರು ಖಾಸಗಿ ಶಾಲೆಗಳು ಶಾಲಾ ಶುಲ್ಕ ಹೆಚ್ಚಿಸಿ ಈಗಲೇ ಕಟ್ಟುವಂತೆ ಒತ್ತಾಯಿಸುತ್ತಿರುವ ಹಲವು ವರದಿಗಳು ಬರುತ್ತಿವೆ. ಸರ್ಕಾರ ಒತ್ತಾಯ ಮಾಡಬೇಡಿ ಎಂದರೂ ಕೇಳದ ಹತ್ತಾರು ಖಾಸಗಿ ಶಾಲೆಗಳನ್ನು ನೋಡಿದ್ದೇವೆ. ಅವುಗಳೆಲ್ಲದರ ನಡುವೆ ಈ ಬೆಂಗಳೂರಿನ ಶಾಲೆಯೊಂದು ವಿಭಿನ್ನವಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ದಿ ಫ್ರೀಥಿಂಕಿಂಗ್ ಶಾಲೆಯು ತಮ್ಮ ಶಾಲೆಯ ಮಕ್ಕಳ ಪೋಷಕರಿಗೆ Freedom from Fees (ಶುಲ್ಕದಿಂದ ಸ್ವಾತಂತ್ರ್ಯ) ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಂತೆ ಪೋಷಕರು ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದು ಹೇಳುವ ಮೂಲಕ ಗಮನ ಸೆಳೆದಿದೆ.

ಮಾಂಟೆಸ್ಸರಿ ಶಿಕ್ಷಣ ವಿಧಾನವನ್ನು ಅನುಸರಿಸುತ್ತಿರುವ ಈ ಶಾಲೆಯು ಪೋಷಕರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಶಾಲಾ ಶುಲ್ಕ ಕಟ್ಟಲು ಕೇಳಿಕೊಂಡಿದೆ. ಅದು ಅಲ್ಲದೇ ತಮಗೆ ಅನುಕೂಲವಾದಾಗ ಶುಲ್ಕ ಕಟ್ಟಿ ಎಂದಿದೆ. ಇದು ಆರಂಭಿಕ ತರಗತಿಗಳಿಗೆ ಅನ್ವಯವಾಗಲಿದ್ದು, ಮಾಸಿಕ ಚಂದಾದಾರಿಕೆಯಿಂದ ಕೂಡಿದ್ದು, 2021ರ ಮಾರ್ಚ್‌ವರೆಗೂ ಕಾರ್ಯಕ್ರಮ ಚಾಲ್ತಿಯಲ್ಲಿರುತ್ತದೆ ಎಂದು ಶಾಲೆಯ ವೆಬ್‌ಸೈಟ್ ತಿಳಿಸಿದೆ.

ನಿಮ್ಮ ಮನೆಯಲ್ಲಿ ಕೆಲಸ ಮಾಡುವ ಚಾಲಕರು, ಸಹಾಯಕ ಸಿಬ್ಬಂದಿ ಸೇರಿದಂತೆ ಇತರರು ಸಹ ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಬಹುದು. ಅವರಿಗೆ ಶಿಕ್ಷಣ ಬೇಕು ಅನ್ನಿಸಿದ್ದಲ್ಲಿ ಇಲ್ಲಿ ಸೇರಿಸಿ ಎಂದು ಶಾಲೆ ಕೇಳಿಕೊಂಡಿದೆ.

“ಸೌಹಾರ್ದತೆ ಮತ್ತು ಸ್ವಾತಂತ್ರ್ಯದ ಸ್ಫೂರ್ತಿಯಲ್ಲಿ ಈ ಕಾರ್ಯಕ್ರಮವನ್ನು ಕೋವಿಡ್ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಮಿಕರು, ದಾದಿಯರು ಮತ್ತು ಇತರ ಕೋವಿಡ್ ಯೋಧರಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಮಾಂಟೆಸ್ಸರಿಯನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವುದು ನನ್ನ ಕನಸಾಗಿದೆ. ಗುಣಮಟ್ಟದ ಶಿಕ್ಷಣವು ಎಲ್ಲರಿಗೂ ಕೈಗೆಟುವಂತಾಗಬೇಕು ಎಂಬುದು ನನ್ನ ಗುರಿಯಾಗಿದೆ, ಅದನ್ನು ಸಾಧಿಸಲು ಈ ಕಾರ್ಯಕ್ರಮ ಸಹಾಯಕವಾಗಲಿದೆ” ಎಂದು ದಿ ಫ್ರೀಥಿಂಕಿಂಗ್ ಶಾಲೆಯ ನಿರ್ದೇಶಕಿ ಸ್ಯಾಂಡಿ ಫಿಲಿಪ್ಸ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ಶಾಲಾ ವೆಬ್‌ಸೈಟ್‌ನಲ್ಲಿ ತಿಳಿಯಿರಿ.


ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಶಾಲಾ ಶುಲ್ಕ ಪಾವತಿಗೆ ಕಾಲಾವಕಾಶ ಕೋರಿದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...