Homeಮುಖಪುಟತಂಗಿ ಜೊತೆಗೆ ಸ್ನೇಹದಲ್ಲಿದ್ದಾನೆ ಎಂದು ಆರೋಪಿಸಿ ಸ್ನೇಹಿತನ ಹತ್ಯೆ ನಡೆಸಿದ ಗೆಳೆಯರು

ತಂಗಿ ಜೊತೆಗೆ ಸ್ನೇಹದಲ್ಲಿದ್ದಾನೆ ಎಂದು ಆರೋಪಿಸಿ ಸ್ನೇಹಿತನ ಹತ್ಯೆ ನಡೆಸಿದ ಗೆಳೆಯರು

- Advertisement -
- Advertisement -

ತಮ್ಮ ಸಹೋದರಿಯೊಂದಿಗೆ ಸ್ನೇಹದಲ್ಲಿದ್ದಾನೆ ಎಂದು ಆರೋಪಿಸಿ 19 ವರ್ಷದ ಯುವಕನನ್ನು ಆತನ ಇಬ್ಬರು ಸ್ನೇಹಿತರು ಸೇರಿ ಹತ್ಯೆ ನಡೆಸಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ ಎಂದು ದಿ ಸಿಯಾಸತ್‌ ಡೈಲಿ ವರದಿ ಮಾಡಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯು ರಾಜ್ಯದ ರೂಟು ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತ ಯುವಕನನ್ನು ಶಹಬಾಜ್ ಅನ್ಸಾರಿ ಎಂದು ಗುರುತಿಸಲಾಗಿದ್ದು, ಆರೋಪಿಗಳನ್ನು ಓಂಪ್ರಕಾಶ್ ಮಹೊತೊ (25) ಮತ್ತು ಸುಶಾಂತ್ ನಾಯಕ್ (25) ಎಂದು ಗುರುತಿಸಲಾಗಿದೆ. ಕೊಲೆಗೂ ಮೊದಲು ಶಹಬಾಜ್‌ ಆರೋಪಿಗಳೊಂದಿಗೆ ಹೊರಗೆ ಹೋಗಿದ್ದರು ಎಂದು ವರದಿಯಾಗಿದೆ. ಅಲ್ಲಿ ಆರೋಪಿಗಳಿಬ್ಬರೂ ಶಹಬಾಜ್ ಅವರ ತಲೆಗೆ ಹೊಡೆದಿದ್ದು, ಪರಿಣಾಮವಾಗಿ ಸ್ಥಳದಲ್ಲೆ ನಿಧನರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆಯ ಮರುದಿನ ಶಹಬಾಜ್‌‌ ಅವರ ತಂದೆ ಮಂಡರ್ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಪರಾಧವನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಓಂಪ್ರಕಾಶ್ ಮತ್ತು ಸುಶಾಂತ್‌ ಅವರನ್ನು ಸೆಪ್ಟೆಂಬರ್ 27 ರಂದು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 302 (ಕೊಲೆ), 34, 120 (ಬಿ) ಅಡಿಯಲ್ಲಿಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಶಹಬಾಜ್ ಅವರು ತನ್ನ ಸಹೋದರಿ ಶಿಖಾಳೊಂದಿಗೆ ಸ್ನೇಹ ಬೆಳೆಸಿದ್ದು ಸುಶಾಂತ್‌‌ ನಾಯಕ್‌ಗೆ ಒಪ್ಪಿಗೆ ಇರಲಿಲ್ಲ ಎಂದು ಪ್ರಕರಣದ ತನಿಖಾಧಿಕಾರಿ ಸಬ್-ಇನ್ಸ್‌ಪೆಕ್ಟರ್ ಸನ್ನಿ ಡೇವಿಸ್ ಬಾರಾ ಅವರು ಹೇಳಿದ್ದಾರೆ ಎಂದು ಸಿಯಾಸತ್‌ ಡೈಲಿ ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿಯನ್ನು ಸ್ವಾಗತಿಸುತ್ತೇನೆ’: ಭಾರತ್‌ ಜೋಡೋ ಯಾತ್ರೆಗೆ ಜೆಡಿಎಸ್‌ನ ಶಾಸಕನ ಬೆಂಬಲ

“ಸುಶಾಂತ್‌ ನಾಯಕ್‌‌ ಅವರ ಕುಟುಂಬ ಮತ್ತು ಶಹಬಾಜ್‌ ಅನ್ಸಾರಿ ಅವರ ತಾಯಿಯ ಅಜ್ಜಿ ನೆರೆಹೊರೆಯವರಾಗಿದ್ದರು. ಹೀಗಾಗಿ ಶಹಬಾಜ್‌ ಆಗಾಗ್ಗೆ ತನ್ನ ಅಜ್ಜಿಯನ್ನು ಭೇಟಿ ಮಾಡಲು ಅಲ್ಲಿಗೆ ಬರುತ್ತಿದ್ದರು. ಈ ವೇಳೆ ಅವರು ಶಿಖಾ ಅವರೊಂದಿಗೆ ಸ್ನೇಹ  ಬೆಳೆಸಿಕೊಂಡಿದ್ದರು” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

“ಶಿಖಾ ಮತ್ತು ಶಹಬಾಜ್ ಅವರ ಸ್ನೇಹ ಸುಶಾಂತ್‌‌ ನಾಯಕ್‌ಗೆ ಒಪ್ಪಿಗೆ ಇರಲಿಲ್ಲ. ಹಲವು ಸಂದರ್ಭದಲ್ಲಿ ಶಹಬಾಜ್‌ಗೆ ತನ್ನ ಸಹೋದರಿಯಿಂದ ದೂರವಿರಲು ಎಚ್ಚರಿಕೆ ನೀಡಿದ್ದನು” ಎಂದು ಸಬ್ ಇನ್ಸ್‌ಪೆಕ್ಟರ್ ಹೇಳಿದ್ದಾಗಿ ಸಿಯಾಸತ್‌.ಕಾಂ ವರದಿ ಹೇಳಿದೆ.

“ಆದರೆ ಅವರ ಎಚ್ಚರಿಕೆ ಕಡೆಗಣಿಸಿದ್ದರಿಂದ ಶಹಬಾಜ್ ಅವರನ್ನು ಕೊಲೆ ಮಾಡಲು ಸುಶಾಂತ್‌ ನಾಯಕ್‌‌ ಮತ್ತು ಓಂಪ್ರಕಾಶ್ ಮಹೊತೊ ಯೋಜನೆ ಹಾಕಿ, ತಮ್ಮೊಂದಿಗೆ ಯುವಕನನ್ನು ರೂಟು ಜಿಲ್ಲೆಗೆ ಕರೆದೊಯ್ದು ಕೊಲೆ ಮಾಡಿದ್ದಾರೆ” ಎಂದು ಸಬ್-ಇನ್ಸ್‌ಪೆಕ್ಟರ್ ಸನ್ನಿ ಡೇವಿಸ್ ಬಾರಾ ಹೇಳಿದ್ದಾರೆ.

ಇದನ್ನೂ ಓದಿ: ‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌ ಅಧಿಕಾರಿ

ಶಹಬಾಜ್ ಅನ್ಸಾರಿ ಅವರ ಕೈ, ಕಾಲುಗಳು, ಹಿಂಭಾಗ ಮತ್ತು ತಲೆಯ ಮೇಲೆ ಹಲವಾರು ತೀವ್ರವಾದ ಗಾಯಗಳು ಆಗಿವೆ. ಮಹೊತೊ ಮತ್ತು ಸುಶಾಂತ್‌ ನಾಯಕ್ ಪ್ರಸ್ತುತ ರಾಂಚಿ ಜೈಲಿನಲ್ಲಿದ್ದು, ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...