Homeಮುಖಪುಟತಂಗಿ ಜೊತೆಗೆ ಸ್ನೇಹದಲ್ಲಿದ್ದಾನೆ ಎಂದು ಆರೋಪಿಸಿ ಸ್ನೇಹಿತನ ಹತ್ಯೆ ನಡೆಸಿದ ಗೆಳೆಯರು

ತಂಗಿ ಜೊತೆಗೆ ಸ್ನೇಹದಲ್ಲಿದ್ದಾನೆ ಎಂದು ಆರೋಪಿಸಿ ಸ್ನೇಹಿತನ ಹತ್ಯೆ ನಡೆಸಿದ ಗೆಳೆಯರು

- Advertisement -
- Advertisement -

ತಮ್ಮ ಸಹೋದರಿಯೊಂದಿಗೆ ಸ್ನೇಹದಲ್ಲಿದ್ದಾನೆ ಎಂದು ಆರೋಪಿಸಿ 19 ವರ್ಷದ ಯುವಕನನ್ನು ಆತನ ಇಬ್ಬರು ಸ್ನೇಹಿತರು ಸೇರಿ ಹತ್ಯೆ ನಡೆಸಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ ಎಂದು ದಿ ಸಿಯಾಸತ್‌ ಡೈಲಿ ವರದಿ ಮಾಡಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯು ರಾಜ್ಯದ ರೂಟು ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತ ಯುವಕನನ್ನು ಶಹಬಾಜ್ ಅನ್ಸಾರಿ ಎಂದು ಗುರುತಿಸಲಾಗಿದ್ದು, ಆರೋಪಿಗಳನ್ನು ಓಂಪ್ರಕಾಶ್ ಮಹೊತೊ (25) ಮತ್ತು ಸುಶಾಂತ್ ನಾಯಕ್ (25) ಎಂದು ಗುರುತಿಸಲಾಗಿದೆ. ಕೊಲೆಗೂ ಮೊದಲು ಶಹಬಾಜ್‌ ಆರೋಪಿಗಳೊಂದಿಗೆ ಹೊರಗೆ ಹೋಗಿದ್ದರು ಎಂದು ವರದಿಯಾಗಿದೆ. ಅಲ್ಲಿ ಆರೋಪಿಗಳಿಬ್ಬರೂ ಶಹಬಾಜ್ ಅವರ ತಲೆಗೆ ಹೊಡೆದಿದ್ದು, ಪರಿಣಾಮವಾಗಿ ಸ್ಥಳದಲ್ಲೆ ನಿಧನರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆಯ ಮರುದಿನ ಶಹಬಾಜ್‌‌ ಅವರ ತಂದೆ ಮಂಡರ್ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಪರಾಧವನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಓಂಪ್ರಕಾಶ್ ಮತ್ತು ಸುಶಾಂತ್‌ ಅವರನ್ನು ಸೆಪ್ಟೆಂಬರ್ 27 ರಂದು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 302 (ಕೊಲೆ), 34, 120 (ಬಿ) ಅಡಿಯಲ್ಲಿಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಶಹಬಾಜ್ ಅವರು ತನ್ನ ಸಹೋದರಿ ಶಿಖಾಳೊಂದಿಗೆ ಸ್ನೇಹ ಬೆಳೆಸಿದ್ದು ಸುಶಾಂತ್‌‌ ನಾಯಕ್‌ಗೆ ಒಪ್ಪಿಗೆ ಇರಲಿಲ್ಲ ಎಂದು ಪ್ರಕರಣದ ತನಿಖಾಧಿಕಾರಿ ಸಬ್-ಇನ್ಸ್‌ಪೆಕ್ಟರ್ ಸನ್ನಿ ಡೇವಿಸ್ ಬಾರಾ ಅವರು ಹೇಳಿದ್ದಾರೆ ಎಂದು ಸಿಯಾಸತ್‌ ಡೈಲಿ ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿಯನ್ನು ಸ್ವಾಗತಿಸುತ್ತೇನೆ’: ಭಾರತ್‌ ಜೋಡೋ ಯಾತ್ರೆಗೆ ಜೆಡಿಎಸ್‌ನ ಶಾಸಕನ ಬೆಂಬಲ

“ಸುಶಾಂತ್‌ ನಾಯಕ್‌‌ ಅವರ ಕುಟುಂಬ ಮತ್ತು ಶಹಬಾಜ್‌ ಅನ್ಸಾರಿ ಅವರ ತಾಯಿಯ ಅಜ್ಜಿ ನೆರೆಹೊರೆಯವರಾಗಿದ್ದರು. ಹೀಗಾಗಿ ಶಹಬಾಜ್‌ ಆಗಾಗ್ಗೆ ತನ್ನ ಅಜ್ಜಿಯನ್ನು ಭೇಟಿ ಮಾಡಲು ಅಲ್ಲಿಗೆ ಬರುತ್ತಿದ್ದರು. ಈ ವೇಳೆ ಅವರು ಶಿಖಾ ಅವರೊಂದಿಗೆ ಸ್ನೇಹ  ಬೆಳೆಸಿಕೊಂಡಿದ್ದರು” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

“ಶಿಖಾ ಮತ್ತು ಶಹಬಾಜ್ ಅವರ ಸ್ನೇಹ ಸುಶಾಂತ್‌‌ ನಾಯಕ್‌ಗೆ ಒಪ್ಪಿಗೆ ಇರಲಿಲ್ಲ. ಹಲವು ಸಂದರ್ಭದಲ್ಲಿ ಶಹಬಾಜ್‌ಗೆ ತನ್ನ ಸಹೋದರಿಯಿಂದ ದೂರವಿರಲು ಎಚ್ಚರಿಕೆ ನೀಡಿದ್ದನು” ಎಂದು ಸಬ್ ಇನ್ಸ್‌ಪೆಕ್ಟರ್ ಹೇಳಿದ್ದಾಗಿ ಸಿಯಾಸತ್‌.ಕಾಂ ವರದಿ ಹೇಳಿದೆ.

“ಆದರೆ ಅವರ ಎಚ್ಚರಿಕೆ ಕಡೆಗಣಿಸಿದ್ದರಿಂದ ಶಹಬಾಜ್ ಅವರನ್ನು ಕೊಲೆ ಮಾಡಲು ಸುಶಾಂತ್‌ ನಾಯಕ್‌‌ ಮತ್ತು ಓಂಪ್ರಕಾಶ್ ಮಹೊತೊ ಯೋಜನೆ ಹಾಕಿ, ತಮ್ಮೊಂದಿಗೆ ಯುವಕನನ್ನು ರೂಟು ಜಿಲ್ಲೆಗೆ ಕರೆದೊಯ್ದು ಕೊಲೆ ಮಾಡಿದ್ದಾರೆ” ಎಂದು ಸಬ್-ಇನ್ಸ್‌ಪೆಕ್ಟರ್ ಸನ್ನಿ ಡೇವಿಸ್ ಬಾರಾ ಹೇಳಿದ್ದಾರೆ.

ಇದನ್ನೂ ಓದಿ: ‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌ ಅಧಿಕಾರಿ

ಶಹಬಾಜ್ ಅನ್ಸಾರಿ ಅವರ ಕೈ, ಕಾಲುಗಳು, ಹಿಂಭಾಗ ಮತ್ತು ತಲೆಯ ಮೇಲೆ ಹಲವಾರು ತೀವ್ರವಾದ ಗಾಯಗಳು ಆಗಿವೆ. ಮಹೊತೊ ಮತ್ತು ಸುಶಾಂತ್‌ ನಾಯಕ್ ಪ್ರಸ್ತುತ ರಾಂಚಿ ಜೈಲಿನಲ್ಲಿದ್ದು, ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...