Homeಮುಖಪುಟತಂಗಿ ಜೊತೆಗೆ ಸ್ನೇಹದಲ್ಲಿದ್ದಾನೆ ಎಂದು ಆರೋಪಿಸಿ ಸ್ನೇಹಿತನ ಹತ್ಯೆ ನಡೆಸಿದ ಗೆಳೆಯರು

ತಂಗಿ ಜೊತೆಗೆ ಸ್ನೇಹದಲ್ಲಿದ್ದಾನೆ ಎಂದು ಆರೋಪಿಸಿ ಸ್ನೇಹಿತನ ಹತ್ಯೆ ನಡೆಸಿದ ಗೆಳೆಯರು

- Advertisement -
- Advertisement -

ತಮ್ಮ ಸಹೋದರಿಯೊಂದಿಗೆ ಸ್ನೇಹದಲ್ಲಿದ್ದಾನೆ ಎಂದು ಆರೋಪಿಸಿ 19 ವರ್ಷದ ಯುವಕನನ್ನು ಆತನ ಇಬ್ಬರು ಸ್ನೇಹಿತರು ಸೇರಿ ಹತ್ಯೆ ನಡೆಸಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ ಎಂದು ದಿ ಸಿಯಾಸತ್‌ ಡೈಲಿ ವರದಿ ಮಾಡಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯು ರಾಜ್ಯದ ರೂಟು ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತ ಯುವಕನನ್ನು ಶಹಬಾಜ್ ಅನ್ಸಾರಿ ಎಂದು ಗುರುತಿಸಲಾಗಿದ್ದು, ಆರೋಪಿಗಳನ್ನು ಓಂಪ್ರಕಾಶ್ ಮಹೊತೊ (25) ಮತ್ತು ಸುಶಾಂತ್ ನಾಯಕ್ (25) ಎಂದು ಗುರುತಿಸಲಾಗಿದೆ. ಕೊಲೆಗೂ ಮೊದಲು ಶಹಬಾಜ್‌ ಆರೋಪಿಗಳೊಂದಿಗೆ ಹೊರಗೆ ಹೋಗಿದ್ದರು ಎಂದು ವರದಿಯಾಗಿದೆ. ಅಲ್ಲಿ ಆರೋಪಿಗಳಿಬ್ಬರೂ ಶಹಬಾಜ್ ಅವರ ತಲೆಗೆ ಹೊಡೆದಿದ್ದು, ಪರಿಣಾಮವಾಗಿ ಸ್ಥಳದಲ್ಲೆ ನಿಧನರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆಯ ಮರುದಿನ ಶಹಬಾಜ್‌‌ ಅವರ ತಂದೆ ಮಂಡರ್ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಪರಾಧವನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಓಂಪ್ರಕಾಶ್ ಮತ್ತು ಸುಶಾಂತ್‌ ಅವರನ್ನು ಸೆಪ್ಟೆಂಬರ್ 27 ರಂದು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 302 (ಕೊಲೆ), 34, 120 (ಬಿ) ಅಡಿಯಲ್ಲಿಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಶಹಬಾಜ್ ಅವರು ತನ್ನ ಸಹೋದರಿ ಶಿಖಾಳೊಂದಿಗೆ ಸ್ನೇಹ ಬೆಳೆಸಿದ್ದು ಸುಶಾಂತ್‌‌ ನಾಯಕ್‌ಗೆ ಒಪ್ಪಿಗೆ ಇರಲಿಲ್ಲ ಎಂದು ಪ್ರಕರಣದ ತನಿಖಾಧಿಕಾರಿ ಸಬ್-ಇನ್ಸ್‌ಪೆಕ್ಟರ್ ಸನ್ನಿ ಡೇವಿಸ್ ಬಾರಾ ಅವರು ಹೇಳಿದ್ದಾರೆ ಎಂದು ಸಿಯಾಸತ್‌ ಡೈಲಿ ಹೇಳಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿಯನ್ನು ಸ್ವಾಗತಿಸುತ್ತೇನೆ’: ಭಾರತ್‌ ಜೋಡೋ ಯಾತ್ರೆಗೆ ಜೆಡಿಎಸ್‌ನ ಶಾಸಕನ ಬೆಂಬಲ

“ಸುಶಾಂತ್‌ ನಾಯಕ್‌‌ ಅವರ ಕುಟುಂಬ ಮತ್ತು ಶಹಬಾಜ್‌ ಅನ್ಸಾರಿ ಅವರ ತಾಯಿಯ ಅಜ್ಜಿ ನೆರೆಹೊರೆಯವರಾಗಿದ್ದರು. ಹೀಗಾಗಿ ಶಹಬಾಜ್‌ ಆಗಾಗ್ಗೆ ತನ್ನ ಅಜ್ಜಿಯನ್ನು ಭೇಟಿ ಮಾಡಲು ಅಲ್ಲಿಗೆ ಬರುತ್ತಿದ್ದರು. ಈ ವೇಳೆ ಅವರು ಶಿಖಾ ಅವರೊಂದಿಗೆ ಸ್ನೇಹ  ಬೆಳೆಸಿಕೊಂಡಿದ್ದರು” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

“ಶಿಖಾ ಮತ್ತು ಶಹಬಾಜ್ ಅವರ ಸ್ನೇಹ ಸುಶಾಂತ್‌‌ ನಾಯಕ್‌ಗೆ ಒಪ್ಪಿಗೆ ಇರಲಿಲ್ಲ. ಹಲವು ಸಂದರ್ಭದಲ್ಲಿ ಶಹಬಾಜ್‌ಗೆ ತನ್ನ ಸಹೋದರಿಯಿಂದ ದೂರವಿರಲು ಎಚ್ಚರಿಕೆ ನೀಡಿದ್ದನು” ಎಂದು ಸಬ್ ಇನ್ಸ್‌ಪೆಕ್ಟರ್ ಹೇಳಿದ್ದಾಗಿ ಸಿಯಾಸತ್‌.ಕಾಂ ವರದಿ ಹೇಳಿದೆ.

“ಆದರೆ ಅವರ ಎಚ್ಚರಿಕೆ ಕಡೆಗಣಿಸಿದ್ದರಿಂದ ಶಹಬಾಜ್ ಅವರನ್ನು ಕೊಲೆ ಮಾಡಲು ಸುಶಾಂತ್‌ ನಾಯಕ್‌‌ ಮತ್ತು ಓಂಪ್ರಕಾಶ್ ಮಹೊತೊ ಯೋಜನೆ ಹಾಕಿ, ತಮ್ಮೊಂದಿಗೆ ಯುವಕನನ್ನು ರೂಟು ಜಿಲ್ಲೆಗೆ ಕರೆದೊಯ್ದು ಕೊಲೆ ಮಾಡಿದ್ದಾರೆ” ಎಂದು ಸಬ್-ಇನ್ಸ್‌ಪೆಕ್ಟರ್ ಸನ್ನಿ ಡೇವಿಸ್ ಬಾರಾ ಹೇಳಿದ್ದಾರೆ.

ಇದನ್ನೂ ಓದಿ: ‘ನಾಳೆ ಕಾಂಡೋಂ ಕೂಡಾ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ ಬಗ್ಗೆ ಪ್ರಶ್ನೆ ಕೇಳಿದ ವಿದ್ಯಾರ್ಥಿನಿಯನ್ನು ಅವಮಾನಿಸಿದ ಐಎಎಸ್‌ ಅಧಿಕಾರಿ

ಶಹಬಾಜ್ ಅನ್ಸಾರಿ ಅವರ ಕೈ, ಕಾಲುಗಳು, ಹಿಂಭಾಗ ಮತ್ತು ತಲೆಯ ಮೇಲೆ ಹಲವಾರು ತೀವ್ರವಾದ ಗಾಯಗಳು ಆಗಿವೆ. ಮಹೊತೊ ಮತ್ತು ಸುಶಾಂತ್‌ ನಾಯಕ್ ಪ್ರಸ್ತುತ ರಾಂಚಿ ಜೈಲಿನಲ್ಲಿದ್ದು, ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....