Homeಕರ್ನಾಟಕತಮ್ಮ ಮಾತಿನ ಫಲವನ್ನು ಬಿ. ಸಿ. ಪಾಟೀಲ್ ಶೀಘ್ರದಲ್ಲೇ ಅನುಭವಿಸಲಿದ್ದಾರೆ: ಕುರುಬೂರು ಶಾಂತಕುಮಾರ್‌‌

ತಮ್ಮ ಮಾತಿನ ಫಲವನ್ನು ಬಿ. ಸಿ. ಪಾಟೀಲ್ ಶೀಘ್ರದಲ್ಲೇ ಅನುಭವಿಸಲಿದ್ದಾರೆ: ಕುರುಬೂರು ಶಾಂತಕುಮಾರ್‌‌

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ನಡೆಸುತ್ತಿರುವ ಶಾಂತಿಯುತ ಹೋರಾಟ ಮೂರನೇ ತಿಂಗಳಿಗೆ ಕಾಲಿಟ್ಟಿದೆ. ಆದರೆ, ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಲಿ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿದೆ. ಈ ಬಗ್ಗೆ ಇಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿಷಾಧ ವ್ಯಕ್ತಪಡಿಸಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್​, ” ಸಮಾಜಘಾತುಕ ವ್ಯಕ್ತಿಗಳಿಂದ ರೈತರ ಹೆಸರಿಗೆ ಮಸಿಯಾಗಿದೆ. ಹೀಗಾಗಿ ದೆಹಲಿ‌ ಘಟನೆ ಬಗ್ಗೆ ಸರ್ವೋಚ್ಚನ್ಯಾಯಾಲದ ನ್ಯಾಯಾಧೀಶರಿಂದ ತನಿಖೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, “60 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾನಿರತ ರೈತರ ಹೆಸರಿಗೆ ಮಸಿ ಬಳಿಯಲು ಸರ್ಕಾರ ಷಡ್ಯಂತ್ರ ರಚಿಸಿದೆ. ಆದರೆ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಘಟನೆ ದುರಾದೃಷ್ಠಕರ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ‌ ಬೇರೆ ಬಾವುಟ ಹಾರಿಸಿದ್ದು ಪಂಜಾಬಿನ ನಟ ದೀಪ್ ಸಿಧು. ದೀಪ್ ಸಿಧು ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದ. ಅಲ್ಲದೇ ಬಾವುಟ ಹಾರಿಸಿದ್ದು ನಾನೆ ಎಂದು ದೀಪ್ ಸಿಧು ಒಪ್ಪಿಕೊಂಡಿದ್ದಾನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

“ಇದು ರೈತರ ಹೆಸರಿಗೆ ಕಳಂಕ ತರಲು ನಡೆಸಿದ ಷಡ್ಯಂತ್ರ. ಇಂತಹ ಸಮಾಜಘಾತುಕ ವ್ಯಕ್ತಿಗಳ ಮೇಲೆ ಮೊಕದ್ದಮೆ ದಾಖಲಿಸಿ ಜೀವಾವಧಿ ಶಿಕ್ಷೆ ನೀಡಬೇಕು. ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆಯಾಗಬೇಕು. ಈ ವಿಚಾರ ಬೇಹುಗಾರಿಕೆ ಸಂಸ್ಥೆ ಮೂಲಕ ಕೇಂದ್ರ ಸರ್ಕಾರಕ್ಕೆ ತಿಳಿದಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಸಿದ್ದು ಯಾಕೆ..? ಇದಕ್ಕೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕು” ಎಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

“ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧದ ರೈತ ಹೋರಾಟ ಮುಂದುವರೆಯಲಿದೆ ಎಂದು ಹೇಳಿರುವ ಅವರು, “ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮುಂದುವರೆಯುತ್ತೆ. ಗಲಭೆಯಿಂದ ಹೋರಾಟಕ್ಕೆ ಯಾವುದೇ ಹಿನ್ನಡೆಯಾಗಿಲ್ಲ. ಲಾಕ್ಡೌನ್ ಸಂದರ್ಭದಲ್ಲಿ ರೈತರನ್ನು ಮನೆಯಲ್ಲಿ ಕೂಡಿಹಾಕಿ ಈ ಕಾಯ್ದೆಯನ್ನು ತಂದಿದ್ದಾರೆ. ರೈತರ ಜೊತೆ ನಾಟಕೀಯವಾಗಿ 11 ಸಭೆ ನಡೆಸಿದ್ದಾರೆ‌. 145 ರೈತರು ಚಳುವಳಿ ಮೂಲಕ ಪ್ರಾಣ ಕಳೆದುಕೊಂಡಾಗ ರೈತರ ಬಗ್ಗೆ ಕನಿಕರ ಇರಲಿಲ್ವಾ?’’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

“ಇದು ಇಡೀ ರೈತ ಕುಲವನ್ನೇ ನಾಶ ಮಾಡುವ ಸಂಚು. ಈ ಕಾಯ್ದೆಗಳ ವಿರುದ್ಧ ನಮ್ಮ ಹೋರಾಟ ನಿಲ್ಲಲ್ಲ. ಇದೇ ಜ.30 ರಂದು ಉಪವಾಸ ನಿರಸನ ದಿನ ನಡೆಸಲು ತೀರ್ಮಾನಿಸಿದ್ದೇವೆ. ದೆಹಲಿಯ ಎಲ್ಲಾ ಗಡಿಭಾಗದಲ್ಲೂ ಉಪವಾಸ ನಿರಶನ ದಿನ ಆಚರಣೆ ಮಾಡಲಾಗುತ್ತದೆ. ನಾವು ಸಹ ರಾಜ್ಯದಿಂದ ತಂಡ ತಂಡವಾಗಿ ಚಳುವಳಿಗೆ ಹೋಗಲು ಚಿಂತನೆ ನಡೆಸಿದ್ದೇವೆ” ಎಂದು ಶಾಂತ ಕುಮಾರ್‌ ಹೇಳಿದ್ದಾರೆ.

ಇದೇ ವೇಳೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಮೇಲೆ ಶಾಂತಕುಮಾರ್‌ ಹರಿಹಾಯ್ದಿದ್ದಾರೆ. “ಬಿ.ಸಿ. ಪಾಟೀಲ್ ಕೃಷಿ ಸಚಿವರಲ್ಲ. ಅವರೊಬ್ಬ ಸಿನಮಾ ಸಚಿವರು. ಎಷ್ಟೇ ಆಗಲಿ ಅವರು ಸಿನಿಮಾ ಕ್ಷೇತ್ರದಿಂದ ಬಂದವರಲ್ಲವೇ. ಅದಕ್ಕಾಗಿ ರೈತ ಹೋರಾಟದ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ಭತ್ತ ನಾಟಿ ಮಾಡುತ್ತಾ, ಜೋಳದ ತೆನೆ ಹೊತ್ತು ರೈತನೆಂದು ಫೋಸ್ ಕೊಡ್ತಾರೆ. ಅವರು ಕೃಷಿ ಸಚಿವರಾಗಲು ನಾಲಯಕ್. ಅವರ ಮಾತಿನ ಫಲವನ್ನು ಶೀಘ್ರದಲ್ಲೆ ಅವರು ಅನುಭವಿಸಲಿದ್ದಾರೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಯ ಭಾಷಣ ಬಹಿಷ್ಕರಿಸಲಿರುವ 16 ಪ್ರಮುಖ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...