Homeಮುಖಪುಟಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಇದು ಮಾನವೀಯತೆ ಮೆರೆದ ಮನುಷ್ಯರ ಕತೆ

ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಇದು ಮಾನವೀಯತೆ ಮೆರೆದ ಮನುಷ್ಯರ ಕತೆ

ಕೊರೊನಾ ಭಯಕ್ಕೆ ಸ್ವತಃ ಸಂಬಂಧಿಕರು ಕೂಡಾ ಮೃತದೇಹದ ಹತ್ತಿರ ಸುಳಿಯಲು ಭಯಪಡುತ್ತಿದ್ದರೆ ಅವೆಲ್ಲವನ್ನೂ ಮೀರಿ, ಮೃತಪಟ್ಟವರ ಸಂಪ್ರಾದಾಯಕ್ಕೆ ತಕ್ಕಂತೆ, ಘನತಯಿಂದ, ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡುವ ನಿಸ್ವಾರ್ಥ ಮನುಷ್ಯರಿದ್ದಾರೆ ಇಲ್ಲಿ.

- Advertisement -
- Advertisement -

ರಾಜ್ಯದಲ್ಲಿ ಎರಡು ತಿಂಗಳ ಹಿಂದೆ ಕೊರೊನಾ ಸೋಂಕು ಪೀಡಿತ ವೃದ್ದ ಮಹಿಳೆಯ ಶವ ಸಂಸ್ಕಾರ ಮಾಡದಂತೆ ತಡೆದ ಮಂಗಳೂರಿನ ಶಾಸಕರ ನಡೆಗೆ ಇಡೀ ರಾಜ್ಯವೇ ಬೆಚ್ಚಿಬಿದ್ದು ಪಕ್ಷಾತೀತವಾಗಿ ಖಂಡಿಸಿತು. ಆದರೆ ಈಗ ಅಂತಹ ಘಟನೆಗಳು ಸಾಮಾನ್ಯವಾಗಿವೆ. ಕೊರೊನಾ ಕಾರಣಕ್ಕೆ ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಜನರು ಮೃತ ಶವಗಳಿಂದಲೂ ಕೊರೊನಾ ಹರಡಬಹುದು ಎಂಬ ಮೂಢನಂಬಿಕೆಗೆ ಒಳಗಾಗಿ ತಮ್ಮ ಪ್ರದೇಶದ ಬಳಿ ಅಂತ್ಯ ಸಂಸ್ಕಾರಕ್ಕೆ  ಅವಕಾಶ ಕೊಡದ ಘಟನೆಗಳು ಜರುಗುತ್ತಿವೆ. ಮೃತ ವ್ಯಕ್ತಿಯ ಕುಟುಂಬಸ್ಥರೇ ಶವ ಸಂಸ್ಕಾರಕ್ಕೆ ಹೆದರುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.

ಕೊರೊನಾ ಸೋಂಕಿತ ಮೃತದೇಹವನ್ನು ಅಂತ್ಯ ಸಂಸ್ಕಾರ ಮಾಡಲು ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದರೂ ಮೃತದೇಹದೊಂದಿಗೆ ನಡೆಯುತ್ತಿರುವ ಅಮಾನವೀಯ ರೀತಿ ಇನ್ನೂ ಕಡಿಮೆಯಾಗಿಲ್ಲ. ಮಾನವನೊಬ್ಬ ತನ್ನ ಸಾವಿನಲ್ಲೂ ಘನತೆಯನ್ನು ಪಡೆಯದಿದ್ದರೆ ನಮ್ಮ ವ್ಯವಸ್ಥೆ ನಮ್ಮನ್ನು ಎಂತಹ ಅಧಃಪತನಕ್ಕೆ ತಲುಪಿಸಿದೆ ನೋಡಿ. ಜನ ಹೀಗೆ ಮಾಡುವುದಕ್ಕೆ ಹೆಚ್ಚಿನ ಕಾರಣ ಮಾಧ್ಯಮಗಳು ಸೃಷ್ಟಿಸಿರುವ ಆರ್ಭಟ ಎಂದರೂ ತಪ್ಪಿಲ್ಲ.

ಕೇವಲ ಕೊರೊನಾದಿಂದ ಮೃತಪಟ್ಟವರು ಮಾತ್ರವಲ್ಲ, ಸಾಮಾನ್ಯವಾಗಿ ಸತ್ತಾಗಲೂ ಜನರು ಮೃತದೇಹದತ್ತ ಸುಳಿಯುತ್ತಿಲ್ಲ. ಹಾಸನದಲ್ಲಿ ತನ್ನ ಪತಿಯ ಶವದ ಮುಂದೆ ನಿಂತು ವೃದ್ದೆ ಪತ್ನಿ ಕಣ್ಣೀರು ಹಾಕಿದಾಗಲೂ ಸ್ವತಃ ಮೃತಪಟ್ಟವರ ಸಂಬಂಧಿಕರೂ ಮುಟ್ಟಲು ತಯಾರಿರಲಿಲ್ಲ. ಹಾವೇರಿಯಲ್ಲಿ ಕೂಡಾ ಇಂತಹದ್ದೆ ಘಟನೆ ನಡೆಯಿತು, ಅಧಿಕಾರಿಗಳು ಪಿಪಿಇ ಕಿಟ್ ಕೊಡುತ್ತೇವೆ ಬಂದು ಶವಸಂಸ್ಕಾರ ನಡೆಸಿಯೆಂದರೂ ಶವದ ಅಂತಿಮ ದರ್ಶನಕ್ಕೂ ಸಂಬಂಧಪಟ್ಟವರು ಬಂದಿಲ್ಲ.

ಇದರಾಚೆಗೂ ಹಲವಾರು ಅಪ್ಪಟ ಮನುಷ್ಯರ, ಮಾನವೀಯತೆಯ ಕತೆಗಳೂ ಹೇಳಲಿಕ್ಕಿದೆ. ಕೊರೊನಾ ಭಯಕ್ಕೆ ಸ್ವತಃ ಸಂಬಂಧಿಕರು ಕೂಡಾ ಮೃತದೇಹದ ಹತ್ತಿರ ಸುಳಿಯಲು ಭಯಪಡುತ್ತಿದ್ದರೆ ಅವೆಲ್ಲವನ್ನೂ ಮೀರಿ ಇಲ್ಲಿ ಮೃತಪಟ್ಟವರ ಸಂಪ್ರಾದಾಯಕ್ಕೆ ತಕ್ಕಂತೆ, ಘನತಯಿಂದ, ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡುವ ನಿಸ್ವಾರ್ಥ ಮನುಷ್ಯರಿದ್ದಾರೆ.

ಅಂತ್ಯ ಸಂಸ್ಕಾರಕ್ಕೆ ಜನ ಹೆದರುತ್ತಿರುವುದನ್ನು ಅರಿತ ಬೀದರ್‌ನ ಮಹ್ಮದ್ ಮಜೀದ್ ಬಿಲಾಲ್ ಹಾಗೂ ಸ್ನೇಹಿತರು ಆರೋಗ್ಯ ಇಲಾಖೆ ಮತ್ತು ನಗರಸಭೆಯ ಪರವಾನಿಗೆ ಪಡೆದು ಇದುವರೆಗೂ ಕೋವಿಡ್‌ನಿಂದ ಮೃತಪಟ್ಟ ಮೂವರ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಈ ಮೊದಲು ಸಹ ಅವರು ಹತ್ತಾರು ಅನಾಥ ಶವಗಳ ಅಂತ್ಯ ಸಂಸ್ಕಾರ ನೆರವೇರಿಸಿ ಸಾಮಾಜಿಕ ಸೇವೆಯಲ್ಲಿ ತೊಡಿಗಿಸಿಕೊಂಡಿದ್ದರು ಎನ್ನುವುದು ಹೆಮ್ಮೆಯ ಸಂಗತಿ. ತಮ್ಮ ಫೋನ್ ನಂಬರ್‌ ಅನ್ನು ಸಾರ್ವಜನಿಕವಾಗಿ ಪ್ರಕಟಿಸಿ ಅಂತ್ಯ ಸಂಸ್ಕಾರಕ್ಕೆ ಸಹಾಯ ಬೇಕಿದ್ದರೆ ತಿಳಿಸಿ ಎಂದು ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

ಅಪರಿಚಿತರಾಗಿರುವ ಜೀವಂತ ಮನುಷ್ಯರನ್ನೇ ಮುಟ್ಟಲು ಭಯಪಡುವ ಈ ಸಂಧರ್ಭದಲ್ಲಿ ಅನಾಥ ಶವವನ್ನು ಕೂಡಾ ಅಂತ್ಯಸಂಸ್ಕಾರ ಮಾಡುವ ಚೆನ್ನಪಟ್ಟಣದ ಮಹಿಳೆ ಆಶಾರಂತವರೂ ನಮ್ಮ ನಡುವೆಯಿದ್ದಾರೆ. ಕಳೆದ ಮೂರು ವರ್ಷದಿಂದ ಈ ಸೇವೆಯನ್ನು ಮಾಡುತ್ತಾ ಬರುತ್ತಿರುವ ಇವರು ಕೊರೊನಾ ಕಾಲದಲ್ಲಿಯೂ ಇನ್ನೂ ತಮ್ಮ ಸೇವೆಯನ್ನು ಮುಂದುವರೆಸಿದ್ದಾರೆ.

ಕೃಪೆ: ಪ್ರಜಾವಾಣಿ

ಮೈಸೂರಿನ ಆರೋಗ್ಯ ಇಲಾಖೆಯ ಚಾಲಕರಾದ ನಾಗರಾಜ್ ಕೂಡಾ ಕೊರೊನಾದಿಂದ ಮೃತಪಟ್ಟವನ್ನು ಘನತೆಯಿಂದ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ. ಸಾವಿರಾರು ಶವ ಸಾಗಿಸಿರುವ ಅವರು ಮೃತಪಟ್ಟವರನ್ನು ಮುಟ್ಟಲಾಗದ ಇಂದಿನ ಸ್ಥಿತಿಗೆ ಮರುಗುತ್ತಾರೆ.

ಪಿಎಫ್‌ಐ ಸಂಘಟನೆ ರಾಜ್ಯಾದ್ಯಂತ ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರಕ್ಕೆಂದೆ ತಂಡವನ್ನೇ ಕಟ್ಟಿದೆ. ಒಂದು ಫೋನ್ ಮಾಡಿದರೆ ಸಾಕು ತಮ್ಮದೇ ಖರ್ಚಿನಲ್ಲಿ ನಿಸ್ವಾರ್ಥವಾಗಿ ಅವರವರ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಇದುವರೆಗೂ ಹತ್ತಾರು ಶವಗಳ ಅಂತ್ಯಸಂಸ್ಕಾರದಲ್ಲಿ ಇವರ ಪಾಲಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿ ಕೊರೊನಾ ಕಾರಣಕ್ಕೆ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರ ಮಾಡಲು ಯಾರು ಮುಂದೆ ಬಾರದಿದ್ದಾಗ ಮಾಗಡಿ ತಾಲ್ಲೂಕಿನ ಆರೋಗ್ಯ ಅಧಿಕಾರಿಗಳು ಪಿಎಫ್‌ಐ ಪದಾಧಿಕಾರಿಗಳಿಗೆ ಪತ್ರ ಬರೆದು ಶವಸಂಸ್ಕಾರ ಮಾಡುವಂತೆ ಮನವಿ ಮಾಡಿದ್ದಾರೆ.

ಯಾದಗಿರಿಯಲ್ಲಿ ಕೊರೊನಾ ಮೃತದೇಹವನ್ನು ನೆಲದ ಮೇಲೆ ಮಲಗಿಸಿ ಎಳೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿರುವಂತಹ ಘಟನೆ ನಡೆದಿರುವಾಗ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದ ಶವ ಸಂಸ್ಕಾರ ನಮಗೆ ಮಾದರಿಯಾಗಬೇಕು. ಮಂಗಳೂರಿನಲ್ಲಿ ಜಿಲ್ಲಾಡಳಿತ ಕೊರೊನಾ ಮೃತದೇಹಗಳ ಶವಸಂಸ್ಕಾರಕ್ಕೆಂದೆ ನಿಸ್ವಾರ್ಥ ಸ್ವಯಂಸೇವಕರ ತಂಡವನ್ನು ತರಬೇತಿ ನೀಡಿ ಸಜ್ಜುಗೊಳಿಸಿದೆ. ಈ ತಂಡವು ಮೃತಪಟ್ಟವರ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತಿದೆ.

ಸರ್ಕಾರ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಕೊರೊನಾದಿಂದ ಮೃತಪಟ್ಟವರನ್ನು ಅಂತ್ಯಸಂಸ್ಕಾರವನ್ನು ಹೇಗೆ ಮಾಡಬೇಕು ಎಂಬ ಮಾರ್ಗಸೂಚಿಗಳನ್ನು ಕೊಟ್ಟಿರುವಾಗ ಜನರು ಮೃತದೇವನ್ನು ಸಂಸ್ಕಾರ ಮಾಡಲು ಹೆದರುವುದರಲ್ಲಿ ಯಾವುದೇ ಅರ್ಥವಿಲ್ಲ.

ಮೃತದೇಹದೊಂದಿಗೆ ನಡೆಯುತ್ತಿರುವ ಈ ಅಮಾನವೀಯ ನಡೆಗೆ ಕೇವಲ ಜನರನ್ನು ದೂರಿದರೆ ಪ್ರಯೋಜನವಿಲ್ಲ. ಏಕೆಂದರೆ ಕೊರೊನಾ ಓಡಿಸಲು ತಟ್ಟೆ ದೀಪ ಇತ್ಯಾದಿಗಳನ್ನು ಬಡಿಯಲು ಭಾರೀ ಪ್ರಮಾಣದಲ್ಲಿ ಪ್ರಚಾರ ಮಾಡಿದ ಸರ್ಕಾರ ಹಾಗೂ ಮಾಧ್ಯಮಗಳು ಮೃತದೇಹದಿಂದ ಸೋಂಕು ಹರಡುವುದಿಲ್ಲ ಎಂದು ಮತ್ತು ಹೇಗೆ ಸಂಸ್ಕಾರ ಮಾಡಬೇಕು ಎಂಬುದನ್ನು ಪ್ರಚಾರ ಮಾಡಲೇ ಇಲ್ಲ.

ಒಟ್ಟಿನಲ್ಲಿ ಕುಬ್ಜನಾಗಿರುವ ಮನುಷ್ಯನನ್ನು ಕೊರೊನಾ ಸಾಂಕ್ರಮಿಕ ರೋಗ ಮತ್ತಷ್ಟು ಕುಬ್ಜನನ್ನಾಗಿಸಿದೆ. ಇದು ನಿಜವಾಗಿಯೂ ಮನುಷ್ಯರು ಮತ್ತಷ್ಟು ವಿಶಾದ ದೃಷ್ಟಿಯಿಂದ, ಮಾನವೀಯತೆಯಿಂದ ವರ್ತಿಸಲು ಕಲಿಯುವುದಕ್ಕೆ ಸದಾವಕಾಶವಾಗಿತ್ತು. ಆದರೆ ಅದನ್ನು ಹೆಚ್ಚಿನವರು ಮಾಡದಿದ್ದರೂ ಕೆಲವರಾದರೂ ನಿಸ್ವಾರ್ಥವಾಗಿ ಮಾಡುತ್ತಾ ನಮಗೆಲ್ಲ ಮಾದರಿಯಾಗಿದ್ದಾರೆ.


ಓದಿ:


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....