Homeಮುಖಪುಟಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಇದು ಮಾನವೀಯತೆ ಮೆರೆದ ಮನುಷ್ಯರ ಕತೆ

ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಇದು ಮಾನವೀಯತೆ ಮೆರೆದ ಮನುಷ್ಯರ ಕತೆ

ಕೊರೊನಾ ಭಯಕ್ಕೆ ಸ್ವತಃ ಸಂಬಂಧಿಕರು ಕೂಡಾ ಮೃತದೇಹದ ಹತ್ತಿರ ಸುಳಿಯಲು ಭಯಪಡುತ್ತಿದ್ದರೆ ಅವೆಲ್ಲವನ್ನೂ ಮೀರಿ, ಮೃತಪಟ್ಟವರ ಸಂಪ್ರಾದಾಯಕ್ಕೆ ತಕ್ಕಂತೆ, ಘನತಯಿಂದ, ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡುವ ನಿಸ್ವಾರ್ಥ ಮನುಷ್ಯರಿದ್ದಾರೆ ಇಲ್ಲಿ.

- Advertisement -
- Advertisement -

ರಾಜ್ಯದಲ್ಲಿ ಎರಡು ತಿಂಗಳ ಹಿಂದೆ ಕೊರೊನಾ ಸೋಂಕು ಪೀಡಿತ ವೃದ್ದ ಮಹಿಳೆಯ ಶವ ಸಂಸ್ಕಾರ ಮಾಡದಂತೆ ತಡೆದ ಮಂಗಳೂರಿನ ಶಾಸಕರ ನಡೆಗೆ ಇಡೀ ರಾಜ್ಯವೇ ಬೆಚ್ಚಿಬಿದ್ದು ಪಕ್ಷಾತೀತವಾಗಿ ಖಂಡಿಸಿತು. ಆದರೆ ಈಗ ಅಂತಹ ಘಟನೆಗಳು ಸಾಮಾನ್ಯವಾಗಿವೆ. ಕೊರೊನಾ ಕಾರಣಕ್ಕೆ ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಜನರು ಮೃತ ಶವಗಳಿಂದಲೂ ಕೊರೊನಾ ಹರಡಬಹುದು ಎಂಬ ಮೂಢನಂಬಿಕೆಗೆ ಒಳಗಾಗಿ ತಮ್ಮ ಪ್ರದೇಶದ ಬಳಿ ಅಂತ್ಯ ಸಂಸ್ಕಾರಕ್ಕೆ  ಅವಕಾಶ ಕೊಡದ ಘಟನೆಗಳು ಜರುಗುತ್ತಿವೆ. ಮೃತ ವ್ಯಕ್ತಿಯ ಕುಟುಂಬಸ್ಥರೇ ಶವ ಸಂಸ್ಕಾರಕ್ಕೆ ಹೆದರುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.

ಕೊರೊನಾ ಸೋಂಕಿತ ಮೃತದೇಹವನ್ನು ಅಂತ್ಯ ಸಂಸ್ಕಾರ ಮಾಡಲು ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದರೂ ಮೃತದೇಹದೊಂದಿಗೆ ನಡೆಯುತ್ತಿರುವ ಅಮಾನವೀಯ ರೀತಿ ಇನ್ನೂ ಕಡಿಮೆಯಾಗಿಲ್ಲ. ಮಾನವನೊಬ್ಬ ತನ್ನ ಸಾವಿನಲ್ಲೂ ಘನತೆಯನ್ನು ಪಡೆಯದಿದ್ದರೆ ನಮ್ಮ ವ್ಯವಸ್ಥೆ ನಮ್ಮನ್ನು ಎಂತಹ ಅಧಃಪತನಕ್ಕೆ ತಲುಪಿಸಿದೆ ನೋಡಿ. ಜನ ಹೀಗೆ ಮಾಡುವುದಕ್ಕೆ ಹೆಚ್ಚಿನ ಕಾರಣ ಮಾಧ್ಯಮಗಳು ಸೃಷ್ಟಿಸಿರುವ ಆರ್ಭಟ ಎಂದರೂ ತಪ್ಪಿಲ್ಲ.

ಕೇವಲ ಕೊರೊನಾದಿಂದ ಮೃತಪಟ್ಟವರು ಮಾತ್ರವಲ್ಲ, ಸಾಮಾನ್ಯವಾಗಿ ಸತ್ತಾಗಲೂ ಜನರು ಮೃತದೇಹದತ್ತ ಸುಳಿಯುತ್ತಿಲ್ಲ. ಹಾಸನದಲ್ಲಿ ತನ್ನ ಪತಿಯ ಶವದ ಮುಂದೆ ನಿಂತು ವೃದ್ದೆ ಪತ್ನಿ ಕಣ್ಣೀರು ಹಾಕಿದಾಗಲೂ ಸ್ವತಃ ಮೃತಪಟ್ಟವರ ಸಂಬಂಧಿಕರೂ ಮುಟ್ಟಲು ತಯಾರಿರಲಿಲ್ಲ. ಹಾವೇರಿಯಲ್ಲಿ ಕೂಡಾ ಇಂತಹದ್ದೆ ಘಟನೆ ನಡೆಯಿತು, ಅಧಿಕಾರಿಗಳು ಪಿಪಿಇ ಕಿಟ್ ಕೊಡುತ್ತೇವೆ ಬಂದು ಶವಸಂಸ್ಕಾರ ನಡೆಸಿಯೆಂದರೂ ಶವದ ಅಂತಿಮ ದರ್ಶನಕ್ಕೂ ಸಂಬಂಧಪಟ್ಟವರು ಬಂದಿಲ್ಲ.

ಇದರಾಚೆಗೂ ಹಲವಾರು ಅಪ್ಪಟ ಮನುಷ್ಯರ, ಮಾನವೀಯತೆಯ ಕತೆಗಳೂ ಹೇಳಲಿಕ್ಕಿದೆ. ಕೊರೊನಾ ಭಯಕ್ಕೆ ಸ್ವತಃ ಸಂಬಂಧಿಕರು ಕೂಡಾ ಮೃತದೇಹದ ಹತ್ತಿರ ಸುಳಿಯಲು ಭಯಪಡುತ್ತಿದ್ದರೆ ಅವೆಲ್ಲವನ್ನೂ ಮೀರಿ ಇಲ್ಲಿ ಮೃತಪಟ್ಟವರ ಸಂಪ್ರಾದಾಯಕ್ಕೆ ತಕ್ಕಂತೆ, ಘನತಯಿಂದ, ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡುವ ನಿಸ್ವಾರ್ಥ ಮನುಷ್ಯರಿದ್ದಾರೆ.

ಅಂತ್ಯ ಸಂಸ್ಕಾರಕ್ಕೆ ಜನ ಹೆದರುತ್ತಿರುವುದನ್ನು ಅರಿತ ಬೀದರ್‌ನ ಮಹ್ಮದ್ ಮಜೀದ್ ಬಿಲಾಲ್ ಹಾಗೂ ಸ್ನೇಹಿತರು ಆರೋಗ್ಯ ಇಲಾಖೆ ಮತ್ತು ನಗರಸಭೆಯ ಪರವಾನಿಗೆ ಪಡೆದು ಇದುವರೆಗೂ ಕೋವಿಡ್‌ನಿಂದ ಮೃತಪಟ್ಟ ಮೂವರ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಈ ಮೊದಲು ಸಹ ಅವರು ಹತ್ತಾರು ಅನಾಥ ಶವಗಳ ಅಂತ್ಯ ಸಂಸ್ಕಾರ ನೆರವೇರಿಸಿ ಸಾಮಾಜಿಕ ಸೇವೆಯಲ್ಲಿ ತೊಡಿಗಿಸಿಕೊಂಡಿದ್ದರು ಎನ್ನುವುದು ಹೆಮ್ಮೆಯ ಸಂಗತಿ. ತಮ್ಮ ಫೋನ್ ನಂಬರ್‌ ಅನ್ನು ಸಾರ್ವಜನಿಕವಾಗಿ ಪ್ರಕಟಿಸಿ ಅಂತ್ಯ ಸಂಸ್ಕಾರಕ್ಕೆ ಸಹಾಯ ಬೇಕಿದ್ದರೆ ತಿಳಿಸಿ ಎಂದು ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

ಅಪರಿಚಿತರಾಗಿರುವ ಜೀವಂತ ಮನುಷ್ಯರನ್ನೇ ಮುಟ್ಟಲು ಭಯಪಡುವ ಈ ಸಂಧರ್ಭದಲ್ಲಿ ಅನಾಥ ಶವವನ್ನು ಕೂಡಾ ಅಂತ್ಯಸಂಸ್ಕಾರ ಮಾಡುವ ಚೆನ್ನಪಟ್ಟಣದ ಮಹಿಳೆ ಆಶಾರಂತವರೂ ನಮ್ಮ ನಡುವೆಯಿದ್ದಾರೆ. ಕಳೆದ ಮೂರು ವರ್ಷದಿಂದ ಈ ಸೇವೆಯನ್ನು ಮಾಡುತ್ತಾ ಬರುತ್ತಿರುವ ಇವರು ಕೊರೊನಾ ಕಾಲದಲ್ಲಿಯೂ ಇನ್ನೂ ತಮ್ಮ ಸೇವೆಯನ್ನು ಮುಂದುವರೆಸಿದ್ದಾರೆ.

ಕೃಪೆ: ಪ್ರಜಾವಾಣಿ

ಮೈಸೂರಿನ ಆರೋಗ್ಯ ಇಲಾಖೆಯ ಚಾಲಕರಾದ ನಾಗರಾಜ್ ಕೂಡಾ ಕೊರೊನಾದಿಂದ ಮೃತಪಟ್ಟವನ್ನು ಘನತೆಯಿಂದ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ. ಸಾವಿರಾರು ಶವ ಸಾಗಿಸಿರುವ ಅವರು ಮೃತಪಟ್ಟವರನ್ನು ಮುಟ್ಟಲಾಗದ ಇಂದಿನ ಸ್ಥಿತಿಗೆ ಮರುಗುತ್ತಾರೆ.

ಪಿಎಫ್‌ಐ ಸಂಘಟನೆ ರಾಜ್ಯಾದ್ಯಂತ ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರಕ್ಕೆಂದೆ ತಂಡವನ್ನೇ ಕಟ್ಟಿದೆ. ಒಂದು ಫೋನ್ ಮಾಡಿದರೆ ಸಾಕು ತಮ್ಮದೇ ಖರ್ಚಿನಲ್ಲಿ ನಿಸ್ವಾರ್ಥವಾಗಿ ಅವರವರ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಇದುವರೆಗೂ ಹತ್ತಾರು ಶವಗಳ ಅಂತ್ಯಸಂಸ್ಕಾರದಲ್ಲಿ ಇವರ ಪಾಲಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿ ಕೊರೊನಾ ಕಾರಣಕ್ಕೆ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರ ಮಾಡಲು ಯಾರು ಮುಂದೆ ಬಾರದಿದ್ದಾಗ ಮಾಗಡಿ ತಾಲ್ಲೂಕಿನ ಆರೋಗ್ಯ ಅಧಿಕಾರಿಗಳು ಪಿಎಫ್‌ಐ ಪದಾಧಿಕಾರಿಗಳಿಗೆ ಪತ್ರ ಬರೆದು ಶವಸಂಸ್ಕಾರ ಮಾಡುವಂತೆ ಮನವಿ ಮಾಡಿದ್ದಾರೆ.

ಯಾದಗಿರಿಯಲ್ಲಿ ಕೊರೊನಾ ಮೃತದೇಹವನ್ನು ನೆಲದ ಮೇಲೆ ಮಲಗಿಸಿ ಎಳೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿರುವಂತಹ ಘಟನೆ ನಡೆದಿರುವಾಗ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದ ಶವ ಸಂಸ್ಕಾರ ನಮಗೆ ಮಾದರಿಯಾಗಬೇಕು. ಮಂಗಳೂರಿನಲ್ಲಿ ಜಿಲ್ಲಾಡಳಿತ ಕೊರೊನಾ ಮೃತದೇಹಗಳ ಶವಸಂಸ್ಕಾರಕ್ಕೆಂದೆ ನಿಸ್ವಾರ್ಥ ಸ್ವಯಂಸೇವಕರ ತಂಡವನ್ನು ತರಬೇತಿ ನೀಡಿ ಸಜ್ಜುಗೊಳಿಸಿದೆ. ಈ ತಂಡವು ಮೃತಪಟ್ಟವರ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತಿದೆ.

ಸರ್ಕಾರ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಕೊರೊನಾದಿಂದ ಮೃತಪಟ್ಟವರನ್ನು ಅಂತ್ಯಸಂಸ್ಕಾರವನ್ನು ಹೇಗೆ ಮಾಡಬೇಕು ಎಂಬ ಮಾರ್ಗಸೂಚಿಗಳನ್ನು ಕೊಟ್ಟಿರುವಾಗ ಜನರು ಮೃತದೇವನ್ನು ಸಂಸ್ಕಾರ ಮಾಡಲು ಹೆದರುವುದರಲ್ಲಿ ಯಾವುದೇ ಅರ್ಥವಿಲ್ಲ.

ಮೃತದೇಹದೊಂದಿಗೆ ನಡೆಯುತ್ತಿರುವ ಈ ಅಮಾನವೀಯ ನಡೆಗೆ ಕೇವಲ ಜನರನ್ನು ದೂರಿದರೆ ಪ್ರಯೋಜನವಿಲ್ಲ. ಏಕೆಂದರೆ ಕೊರೊನಾ ಓಡಿಸಲು ತಟ್ಟೆ ದೀಪ ಇತ್ಯಾದಿಗಳನ್ನು ಬಡಿಯಲು ಭಾರೀ ಪ್ರಮಾಣದಲ್ಲಿ ಪ್ರಚಾರ ಮಾಡಿದ ಸರ್ಕಾರ ಹಾಗೂ ಮಾಧ್ಯಮಗಳು ಮೃತದೇಹದಿಂದ ಸೋಂಕು ಹರಡುವುದಿಲ್ಲ ಎಂದು ಮತ್ತು ಹೇಗೆ ಸಂಸ್ಕಾರ ಮಾಡಬೇಕು ಎಂಬುದನ್ನು ಪ್ರಚಾರ ಮಾಡಲೇ ಇಲ್ಲ.

ಒಟ್ಟಿನಲ್ಲಿ ಕುಬ್ಜನಾಗಿರುವ ಮನುಷ್ಯನನ್ನು ಕೊರೊನಾ ಸಾಂಕ್ರಮಿಕ ರೋಗ ಮತ್ತಷ್ಟು ಕುಬ್ಜನನ್ನಾಗಿಸಿದೆ. ಇದು ನಿಜವಾಗಿಯೂ ಮನುಷ್ಯರು ಮತ್ತಷ್ಟು ವಿಶಾದ ದೃಷ್ಟಿಯಿಂದ, ಮಾನವೀಯತೆಯಿಂದ ವರ್ತಿಸಲು ಕಲಿಯುವುದಕ್ಕೆ ಸದಾವಕಾಶವಾಗಿತ್ತು. ಆದರೆ ಅದನ್ನು ಹೆಚ್ಚಿನವರು ಮಾಡದಿದ್ದರೂ ಕೆಲವರಾದರೂ ನಿಸ್ವಾರ್ಥವಾಗಿ ಮಾಡುತ್ತಾ ನಮಗೆಲ್ಲ ಮಾದರಿಯಾಗಿದ್ದಾರೆ.


ಓದಿ:


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...