Homeಮುಖಪುಟಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಇದು ಮಾನವೀಯತೆ ಮೆರೆದ ಮನುಷ್ಯರ ಕತೆ

ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ: ಇದು ಮಾನವೀಯತೆ ಮೆರೆದ ಮನುಷ್ಯರ ಕತೆ

ಕೊರೊನಾ ಭಯಕ್ಕೆ ಸ್ವತಃ ಸಂಬಂಧಿಕರು ಕೂಡಾ ಮೃತದೇಹದ ಹತ್ತಿರ ಸುಳಿಯಲು ಭಯಪಡುತ್ತಿದ್ದರೆ ಅವೆಲ್ಲವನ್ನೂ ಮೀರಿ, ಮೃತಪಟ್ಟವರ ಸಂಪ್ರಾದಾಯಕ್ಕೆ ತಕ್ಕಂತೆ, ಘನತಯಿಂದ, ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡುವ ನಿಸ್ವಾರ್ಥ ಮನುಷ್ಯರಿದ್ದಾರೆ ಇಲ್ಲಿ.

- Advertisement -
- Advertisement -

ರಾಜ್ಯದಲ್ಲಿ ಎರಡು ತಿಂಗಳ ಹಿಂದೆ ಕೊರೊನಾ ಸೋಂಕು ಪೀಡಿತ ವೃದ್ದ ಮಹಿಳೆಯ ಶವ ಸಂಸ್ಕಾರ ಮಾಡದಂತೆ ತಡೆದ ಮಂಗಳೂರಿನ ಶಾಸಕರ ನಡೆಗೆ ಇಡೀ ರಾಜ್ಯವೇ ಬೆಚ್ಚಿಬಿದ್ದು ಪಕ್ಷಾತೀತವಾಗಿ ಖಂಡಿಸಿತು. ಆದರೆ ಈಗ ಅಂತಹ ಘಟನೆಗಳು ಸಾಮಾನ್ಯವಾಗಿವೆ. ಕೊರೊನಾ ಕಾರಣಕ್ಕೆ ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಜನರು ಮೃತ ಶವಗಳಿಂದಲೂ ಕೊರೊನಾ ಹರಡಬಹುದು ಎಂಬ ಮೂಢನಂಬಿಕೆಗೆ ಒಳಗಾಗಿ ತಮ್ಮ ಪ್ರದೇಶದ ಬಳಿ ಅಂತ್ಯ ಸಂಸ್ಕಾರಕ್ಕೆ  ಅವಕಾಶ ಕೊಡದ ಘಟನೆಗಳು ಜರುಗುತ್ತಿವೆ. ಮೃತ ವ್ಯಕ್ತಿಯ ಕುಟುಂಬಸ್ಥರೇ ಶವ ಸಂಸ್ಕಾರಕ್ಕೆ ಹೆದರುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.

ಕೊರೊನಾ ಸೋಂಕಿತ ಮೃತದೇಹವನ್ನು ಅಂತ್ಯ ಸಂಸ್ಕಾರ ಮಾಡಲು ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದರೂ ಮೃತದೇಹದೊಂದಿಗೆ ನಡೆಯುತ್ತಿರುವ ಅಮಾನವೀಯ ರೀತಿ ಇನ್ನೂ ಕಡಿಮೆಯಾಗಿಲ್ಲ. ಮಾನವನೊಬ್ಬ ತನ್ನ ಸಾವಿನಲ್ಲೂ ಘನತೆಯನ್ನು ಪಡೆಯದಿದ್ದರೆ ನಮ್ಮ ವ್ಯವಸ್ಥೆ ನಮ್ಮನ್ನು ಎಂತಹ ಅಧಃಪತನಕ್ಕೆ ತಲುಪಿಸಿದೆ ನೋಡಿ. ಜನ ಹೀಗೆ ಮಾಡುವುದಕ್ಕೆ ಹೆಚ್ಚಿನ ಕಾರಣ ಮಾಧ್ಯಮಗಳು ಸೃಷ್ಟಿಸಿರುವ ಆರ್ಭಟ ಎಂದರೂ ತಪ್ಪಿಲ್ಲ.

ಕೇವಲ ಕೊರೊನಾದಿಂದ ಮೃತಪಟ್ಟವರು ಮಾತ್ರವಲ್ಲ, ಸಾಮಾನ್ಯವಾಗಿ ಸತ್ತಾಗಲೂ ಜನರು ಮೃತದೇಹದತ್ತ ಸುಳಿಯುತ್ತಿಲ್ಲ. ಹಾಸನದಲ್ಲಿ ತನ್ನ ಪತಿಯ ಶವದ ಮುಂದೆ ನಿಂತು ವೃದ್ದೆ ಪತ್ನಿ ಕಣ್ಣೀರು ಹಾಕಿದಾಗಲೂ ಸ್ವತಃ ಮೃತಪಟ್ಟವರ ಸಂಬಂಧಿಕರೂ ಮುಟ್ಟಲು ತಯಾರಿರಲಿಲ್ಲ. ಹಾವೇರಿಯಲ್ಲಿ ಕೂಡಾ ಇಂತಹದ್ದೆ ಘಟನೆ ನಡೆಯಿತು, ಅಧಿಕಾರಿಗಳು ಪಿಪಿಇ ಕಿಟ್ ಕೊಡುತ್ತೇವೆ ಬಂದು ಶವಸಂಸ್ಕಾರ ನಡೆಸಿಯೆಂದರೂ ಶವದ ಅಂತಿಮ ದರ್ಶನಕ್ಕೂ ಸಂಬಂಧಪಟ್ಟವರು ಬಂದಿಲ್ಲ.

ಇದರಾಚೆಗೂ ಹಲವಾರು ಅಪ್ಪಟ ಮನುಷ್ಯರ, ಮಾನವೀಯತೆಯ ಕತೆಗಳೂ ಹೇಳಲಿಕ್ಕಿದೆ. ಕೊರೊನಾ ಭಯಕ್ಕೆ ಸ್ವತಃ ಸಂಬಂಧಿಕರು ಕೂಡಾ ಮೃತದೇಹದ ಹತ್ತಿರ ಸುಳಿಯಲು ಭಯಪಡುತ್ತಿದ್ದರೆ ಅವೆಲ್ಲವನ್ನೂ ಮೀರಿ ಇಲ್ಲಿ ಮೃತಪಟ್ಟವರ ಸಂಪ್ರಾದಾಯಕ್ಕೆ ತಕ್ಕಂತೆ, ಘನತಯಿಂದ, ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡುವ ನಿಸ್ವಾರ್ಥ ಮನುಷ್ಯರಿದ್ದಾರೆ.

ಅಂತ್ಯ ಸಂಸ್ಕಾರಕ್ಕೆ ಜನ ಹೆದರುತ್ತಿರುವುದನ್ನು ಅರಿತ ಬೀದರ್‌ನ ಮಹ್ಮದ್ ಮಜೀದ್ ಬಿಲಾಲ್ ಹಾಗೂ ಸ್ನೇಹಿತರು ಆರೋಗ್ಯ ಇಲಾಖೆ ಮತ್ತು ನಗರಸಭೆಯ ಪರವಾನಿಗೆ ಪಡೆದು ಇದುವರೆಗೂ ಕೋವಿಡ್‌ನಿಂದ ಮೃತಪಟ್ಟ ಮೂವರ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಈ ಮೊದಲು ಸಹ ಅವರು ಹತ್ತಾರು ಅನಾಥ ಶವಗಳ ಅಂತ್ಯ ಸಂಸ್ಕಾರ ನೆರವೇರಿಸಿ ಸಾಮಾಜಿಕ ಸೇವೆಯಲ್ಲಿ ತೊಡಿಗಿಸಿಕೊಂಡಿದ್ದರು ಎನ್ನುವುದು ಹೆಮ್ಮೆಯ ಸಂಗತಿ. ತಮ್ಮ ಫೋನ್ ನಂಬರ್‌ ಅನ್ನು ಸಾರ್ವಜನಿಕವಾಗಿ ಪ್ರಕಟಿಸಿ ಅಂತ್ಯ ಸಂಸ್ಕಾರಕ್ಕೆ ಸಹಾಯ ಬೇಕಿದ್ದರೆ ತಿಳಿಸಿ ಎಂದು ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

ಅಪರಿಚಿತರಾಗಿರುವ ಜೀವಂತ ಮನುಷ್ಯರನ್ನೇ ಮುಟ್ಟಲು ಭಯಪಡುವ ಈ ಸಂಧರ್ಭದಲ್ಲಿ ಅನಾಥ ಶವವನ್ನು ಕೂಡಾ ಅಂತ್ಯಸಂಸ್ಕಾರ ಮಾಡುವ ಚೆನ್ನಪಟ್ಟಣದ ಮಹಿಳೆ ಆಶಾರಂತವರೂ ನಮ್ಮ ನಡುವೆಯಿದ್ದಾರೆ. ಕಳೆದ ಮೂರು ವರ್ಷದಿಂದ ಈ ಸೇವೆಯನ್ನು ಮಾಡುತ್ತಾ ಬರುತ್ತಿರುವ ಇವರು ಕೊರೊನಾ ಕಾಲದಲ್ಲಿಯೂ ಇನ್ನೂ ತಮ್ಮ ಸೇವೆಯನ್ನು ಮುಂದುವರೆಸಿದ್ದಾರೆ.

ಕೃಪೆ: ಪ್ರಜಾವಾಣಿ

ಮೈಸೂರಿನ ಆರೋಗ್ಯ ಇಲಾಖೆಯ ಚಾಲಕರಾದ ನಾಗರಾಜ್ ಕೂಡಾ ಕೊರೊನಾದಿಂದ ಮೃತಪಟ್ಟವನ್ನು ಘನತೆಯಿಂದ ಅಂತ್ಯ ಸಂಸ್ಕಾರ ಮಾಡುತ್ತಿದ್ದಾರೆ. ಸಾವಿರಾರು ಶವ ಸಾಗಿಸಿರುವ ಅವರು ಮೃತಪಟ್ಟವರನ್ನು ಮುಟ್ಟಲಾಗದ ಇಂದಿನ ಸ್ಥಿತಿಗೆ ಮರುಗುತ್ತಾರೆ.

ಪಿಎಫ್‌ಐ ಸಂಘಟನೆ ರಾಜ್ಯಾದ್ಯಂತ ಕೊರೊನಾ ಮೃತದೇಹಗಳ ಅಂತ್ಯಸಂಸ್ಕಾರಕ್ಕೆಂದೆ ತಂಡವನ್ನೇ ಕಟ್ಟಿದೆ. ಒಂದು ಫೋನ್ ಮಾಡಿದರೆ ಸಾಕು ತಮ್ಮದೇ ಖರ್ಚಿನಲ್ಲಿ ನಿಸ್ವಾರ್ಥವಾಗಿ ಅವರವರ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಇದುವರೆಗೂ ಹತ್ತಾರು ಶವಗಳ ಅಂತ್ಯಸಂಸ್ಕಾರದಲ್ಲಿ ಇವರ ಪಾಲಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿ ಕೊರೊನಾ ಕಾರಣಕ್ಕೆ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರ ಮಾಡಲು ಯಾರು ಮುಂದೆ ಬಾರದಿದ್ದಾಗ ಮಾಗಡಿ ತಾಲ್ಲೂಕಿನ ಆರೋಗ್ಯ ಅಧಿಕಾರಿಗಳು ಪಿಎಫ್‌ಐ ಪದಾಧಿಕಾರಿಗಳಿಗೆ ಪತ್ರ ಬರೆದು ಶವಸಂಸ್ಕಾರ ಮಾಡುವಂತೆ ಮನವಿ ಮಾಡಿದ್ದಾರೆ.

ಯಾದಗಿರಿಯಲ್ಲಿ ಕೊರೊನಾ ಮೃತದೇಹವನ್ನು ನೆಲದ ಮೇಲೆ ಮಲಗಿಸಿ ಎಳೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿರುವಂತಹ ಘಟನೆ ನಡೆದಿರುವಾಗ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದ ಶವ ಸಂಸ್ಕಾರ ನಮಗೆ ಮಾದರಿಯಾಗಬೇಕು. ಮಂಗಳೂರಿನಲ್ಲಿ ಜಿಲ್ಲಾಡಳಿತ ಕೊರೊನಾ ಮೃತದೇಹಗಳ ಶವಸಂಸ್ಕಾರಕ್ಕೆಂದೆ ನಿಸ್ವಾರ್ಥ ಸ್ವಯಂಸೇವಕರ ತಂಡವನ್ನು ತರಬೇತಿ ನೀಡಿ ಸಜ್ಜುಗೊಳಿಸಿದೆ. ಈ ತಂಡವು ಮೃತಪಟ್ಟವರ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುತ್ತಿದೆ.

ಸರ್ಕಾರ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಕೊರೊನಾದಿಂದ ಮೃತಪಟ್ಟವರನ್ನು ಅಂತ್ಯಸಂಸ್ಕಾರವನ್ನು ಹೇಗೆ ಮಾಡಬೇಕು ಎಂಬ ಮಾರ್ಗಸೂಚಿಗಳನ್ನು ಕೊಟ್ಟಿರುವಾಗ ಜನರು ಮೃತದೇವನ್ನು ಸಂಸ್ಕಾರ ಮಾಡಲು ಹೆದರುವುದರಲ್ಲಿ ಯಾವುದೇ ಅರ್ಥವಿಲ್ಲ.

ಮೃತದೇಹದೊಂದಿಗೆ ನಡೆಯುತ್ತಿರುವ ಈ ಅಮಾನವೀಯ ನಡೆಗೆ ಕೇವಲ ಜನರನ್ನು ದೂರಿದರೆ ಪ್ರಯೋಜನವಿಲ್ಲ. ಏಕೆಂದರೆ ಕೊರೊನಾ ಓಡಿಸಲು ತಟ್ಟೆ ದೀಪ ಇತ್ಯಾದಿಗಳನ್ನು ಬಡಿಯಲು ಭಾರೀ ಪ್ರಮಾಣದಲ್ಲಿ ಪ್ರಚಾರ ಮಾಡಿದ ಸರ್ಕಾರ ಹಾಗೂ ಮಾಧ್ಯಮಗಳು ಮೃತದೇಹದಿಂದ ಸೋಂಕು ಹರಡುವುದಿಲ್ಲ ಎಂದು ಮತ್ತು ಹೇಗೆ ಸಂಸ್ಕಾರ ಮಾಡಬೇಕು ಎಂಬುದನ್ನು ಪ್ರಚಾರ ಮಾಡಲೇ ಇಲ್ಲ.

ಒಟ್ಟಿನಲ್ಲಿ ಕುಬ್ಜನಾಗಿರುವ ಮನುಷ್ಯನನ್ನು ಕೊರೊನಾ ಸಾಂಕ್ರಮಿಕ ರೋಗ ಮತ್ತಷ್ಟು ಕುಬ್ಜನನ್ನಾಗಿಸಿದೆ. ಇದು ನಿಜವಾಗಿಯೂ ಮನುಷ್ಯರು ಮತ್ತಷ್ಟು ವಿಶಾದ ದೃಷ್ಟಿಯಿಂದ, ಮಾನವೀಯತೆಯಿಂದ ವರ್ತಿಸಲು ಕಲಿಯುವುದಕ್ಕೆ ಸದಾವಕಾಶವಾಗಿತ್ತು. ಆದರೆ ಅದನ್ನು ಹೆಚ್ಚಿನವರು ಮಾಡದಿದ್ದರೂ ಕೆಲವರಾದರೂ ನಿಸ್ವಾರ್ಥವಾಗಿ ಮಾಡುತ್ತಾ ನಮಗೆಲ್ಲ ಮಾದರಿಯಾಗಿದ್ದಾರೆ.


ಓದಿ:


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...