Homeಅಂತರಾಷ್ಟ್ರೀಯಗಾಲ್ವನ್ ಕಣಿವೆ ನಮ್ಮದು, ಭಾರತ ಅತಿಕ್ರಮಣ ಮಾಡಿದೆ : ಚೀನಾ ಪುನರುಚ್ಚಾರ

ಗಾಲ್ವನ್ ಕಣಿವೆ ನಮ್ಮದು, ಭಾರತ ಅತಿಕ್ರಮಣ ಮಾಡಿದೆ : ಚೀನಾ ಪುನರುಚ್ಚಾರ

- Advertisement -
- Advertisement -

ಗಾಲ್ವನ್ ಕಣಿವೆಯು ಚೀನಾ-ಭಾರತ ಗಡಿಯ ವಾಸ್ತವಿಕ ನಿಯಂತ್ರಣ ರೇಖೆಯ ಚೀನಾದ ಪಶ್ಚಿಮ ಭಾಗದಲ್ಲಿದ್ದು ಅದು ನಮ್ಮದು ಎಂದು ಚೀನ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಹೇಳಿದ್ದಾರೆ.

ಈ ಹಿಂದೆ ಪೀಪಲ್ಸ್ ಲಿಬರೇಶನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡ್‌ನ ವಕ್ತಾರರು ಸಹ ಇದೇ ಹಕ್ಕು ಮಂಡಿಸಿದ್ದರು. ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಜಪಾನ್ ಮತ್ತು ಮಾಲ್ಡೀವ್ಸ್ ಸೇರಿದಂತೆ ಹಲವು ದೇಶಗಳ 20 ಭಾರತೀಯ ಸೈನಿಕರ ಹತ್ಯೆಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ ನಂತರ ಚೀನಾದ ಪ್ರತಿಕ್ರಿಯೆ ಬಂದಿದೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಹಲವು ವರ್ಷಗಳಿಂದ ಚೀನಾ ಪಡೆಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ ಮತ್ತು ಕರ್ತವ್ಯ ನಿರ್ವಹಿಸುತ್ತಿವೆ. ಆದರೆ 2020ರ ಏಪ್ರಿಲ್ ತಿಂಗಳಿಂದ ಭಾರತೀಯ ಪಡೆಗಳು ಗಾಲ್ವನ್ ಕಣಿವೆಯ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಏಕಪಕ್ಷೀಯವಾಗಿ ಮತ್ತು ನಿರಂತರವಾಗಿ ರಸ್ತೆಗಳು, ಸೇತುವೆಗಳು ಇತರೆ ಸೌಲಭ್ಯಗಳನ್ನು ನಿರ್ಮಿಸಿವೆ ಎಂದು ಲಿಜಿಯಾನ್ ಆರೋಪಿಸಿದ್ದಾರೆ.

ಭಾರತವು ವಾಸ್ತವಿಕ ನಿಯಂತ್ರಣ ರೇಖೆ ದಾಟಲು ಮತ್ತು ಪ್ರಚೋದನೆಗೆ ಮತ್ತಷ್ಟು ಕುಮ್ಮಕ್ಕು ನೀಡಿದೆ. ಮೇ 6ರಂದು ಬೆಳಗ್ಗೆ  ಮತ್ತು ರಾತ್ರಿ ಸಮಯದಲ್ಲಿ ವಾಸ್ತವಿಕ ನಿಯಂತ್ರಣ ರೇಖೆ ದಾಟಿ ಚೀನಾದ ಭೂಪ್ರದೇಶಕ್ಕೆ ಅತಿಕ್ರಮಣ ಮಾಡಿರುವ ಭಾರತದ ಗಡಿ ಭದ್ರತಾ ಪಡೆಗಳು ಕೋಟೆ ಮತ್ತು ಬ್ಯಾರಿಕೇಡ್ ಗಳನ್ನು ನಿರ್ಮಿಸಿವೆ ಎಂದಿದ್ದಾರೆ.

ಇದು ಚೀನಾ ಯೋಧರು ಗಸ್ತು ತಿರುಗಲು ಅಡ್ಡಿಯಾಗಿದೆ. ನಿಯಂತ್ರಣ ಮತ್ತು ನಿರ್ವಹಣೆಯ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಪ್ರಯತ್ನದಲ್ಲಿ ಭಾರತೀಯ ಪಡೆಗಳು ಉದ್ದೇಶಪೂರಕವಾಗಿ ಪ್ರಚೋದನೆ ಮಾಡಿದರು ಎಂದು ಆರೋಪಿಸಿದ್ದಾರೆ.

ಹಾಂಗ್ ಕಾಂಗ್ ಮತ್ತು ಭಾರತ ಸೇರಿದಂತೆ ಹಲವು ಸ್ಥಳಗಳಲ್ಲಿ ಚೀನಿಯರು ಇತ್ತೀಚೆಗೆ ಕೈಗೊಂಡ ಹಲವಾರು ಕ್ರಮಗಳು “ನಿಜವಾಗಿಯೂ ರಚನಾತ್ಮಕವಾಗಿಲ್ಲ” ಎಂದು ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ವ್ಯವಹಾರಗಳ ಯುಎಸ್ ಸಹಾಯಕ ಕಾರ್ಯದರ್ಶಿ ಡೇವಿಡ್ ಸ್ಟಿಲ್ವೆಲ್ ಹೇಳಿದ್ದಾರೆ.


ಇದನ್ನೂ ಓದಿ: ಚೀನಾ ಯಾವುದೇ ಭಾರತೀಯ ಭೂಪ್ರದೇಶ ವಶಪಡಿಸಿಕೊಂಡಿಲ್ಲ, ಗಡಿಯೊಳಗೆ ಕಾಲಿಟ್ಟಿಲ್ಲ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...