Homeಮುಖಪುಟಗೌತಮ್ ಗಂಭೀರ್ ಫೌಂಡೇಶನ್ ಕಾನೂನುಬಾಹಿರವಾಗಿ ಕೋವಿಡ್ ಮೆಡಿಸಿನ್ ಸಂಗ್ರಹಿಸಿ ತಪ್ಪು ಮಾಡಿದೆ

ಗೌತಮ್ ಗಂಭೀರ್ ಫೌಂಡೇಶನ್ ಕಾನೂನುಬಾಹಿರವಾಗಿ ಕೋವಿಡ್ ಮೆಡಿಸಿನ್ ಸಂಗ್ರಹಿಸಿ ತಪ್ಪು ಮಾಡಿದೆ

- Advertisement -
- Advertisement -

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ನಡೆಸುವ ಫೌಂಡೇಶನ್ ಕೋವಿಡ್ ಚಿಕಿತ್ಸೆಯಲ್ಲಿ ಬಳಸಲಾಗುವ ಫ್ಯಾಬ್ಲಿಪೂ ಔಷಧಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದೆ ಮತ್ತು ವಿತರಣೆ ಮಾಡಿ ತಪ್ಪೆಸಗಿದೆ ಎಂದು ದೆಹಲಿ ಹೈಕೋರ್ಟ್‌ಗೆ ದೆಹಲಿ ಸರ್ಕಾರದ ಔಷಧ ನಿಯಂತ್ರಕ ಮಂಡಳಿ ಇಂದು ತಿಳಿಸಿದೆ.

ಗೌತಮ್ ಗಂಭೀರ್ ಫೌಂಡೇಷನ್, ಔಷಧಿ ವಿತರಕರು ಮತ್ತು ಇದಕ್ಕೆ ಸಂಬಂಧಿಸಿದ ಇತರರ ವಿರುದ್ಧ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಸರ್ಕಾರದ ಔಷಧ ನಿಯಂತ್ರಣ ಮಂಡಳಿ ಹೈಕೋರ್ಟಿಗೆ ಸಲ್ಲಿಸಿದ ವಿವರದಲ್ಲಿ ಹೇಳಿದೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.

ಶಾಸಕ ಪ್ರವೀಣ್ ಕುಮಾರ್ ಅವರು ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯಡಿ ಇದೇ ರೀತಿಯ ಅಪರಾಧಗಳಿಗೆ ತಪ್ಪಿತಸ್ಥರೆಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಆರು ವಾರಗಳಲ್ಲಿ ಈ ಪ್ರಕರಣಗಳಲ್ಲಿ ಹೆಚ್ಚಿನ ಪ್ರಗತಿಯ ಕುರಿತು ವರದಿಗಳನ್ನು ಸಲ್ಲಿಸುವಂತೆ ನ್ಯಾಯಾಲಯವು ಔಷಧ ನಿಯಂತ್ರಕ ಮಂಡಳಿಯನ್ನು ಕೇಳಿದೆ ಮತ್ತು ಜುಲೈ 29 ರಂದು ಮುಂದಿನ ವಿಚಾರಣೆ ನಡೆಸಲಿದೆ.

ಗೌತಮ್‌ ಗಂಭೀರ್‌ ಫೌಂಡೇಶನ್‌ ವತಿಯಿಂದ ದೆಹಲಿಯಲ್ಲಿ ಕೊರೋನಾ ವೈರಸ್‌ ಗೆ ಸಂಬಂಧಿಸಿದ ಔಷಧಿಗಳನ್ನು ಸಂಗ್ರಹಿಸಿದ ಮತ್ತು ವಿತರಿಸಿದ ಪ್ರಕರಣವನ್ನು ದೆಹಲಿ ಹೈಕೋರ್ಟ್‌ ಅತ್ಯಂತ ಗಂಭಿರವಾಗಿ ಪರಿಗಣಿಸಿದೆ. ಸಾವಿರಾರು ಜನರು ಔಷಧಗಳಿಲ್ಲದೇ ಸಾಯುತ್ತಿರುವಾಗ ಇಲ್ಲೊಬ್ಬ ನೂರಾರು ಸಂಖ್ಯೆಯಲ್ಲಿ ಔಷಧಿಯನ್ನು ದಾಸ್ತಾನು ಇರಿಸಿಕೊಂಡಿದ್ಧಾನೆ. ಅವರನ್ನು ಜನರ ಜೀವ ರಕ್ಷಿಸುವ ಹೀರೋ ಗಳೆಂದು ಸರ್ಕಾರ ಮತ್ತು ನೀವು ತಿಳಿದಿರಬಹುದು. ಆದರೆ ನ್ಯಾಯಾಲಯ ವಿಪತ್ತಿನ ಸಂದರ್ಭದಲ್ಲಿ ಕಳ್ಳ ಮಾರ್ಗದಲ್ಲಿ ಹೀರೋಗಳಾಗುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಯಸುತ್ತದೆ ಎನ್ನುವ ಮೂಲಕ ಕುಂಟುತ್ತ ಸಾಗುತ್ತಿರುವ ಗೌತಮ್‌ ಗಂಭೀರ್‌ ಫೌಂಢೇಶನ್‌ ವಿರುದ್ಧದ ತನಿಖೆಯ ಕುರಿತು ದೆಹಲಿ ಹೈಕೋರ್ಟ್‌ ಪೀಠ ಮೇ 31 ರಂದು ತೀವ್ರ ಅಸಮಧಾನ ವ್ಯಕ್ತಪಡಿಸಿತ್ತು.


ಇದನ್ನೂ ಓದಿ: ನೀವು ನಮ್ಮ ಮೇಲೆ ಸವಾರಿ ಮಾಡಲು ಸಾಧ್ಯವಿಲ್ಲ: ಗೌತಮ್‌ ಗಂಭೀರ್‌ ವಿರುದ್ಧದ ತನಿಖೆ ಕುರಿತು ದೆಹಲಿ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....