Homeಮುಖಪುಟಗೌತಮ್ ಗಂಭೀರ್ ಫೌಂಡೇಶನ್ ಕಾನೂನುಬಾಹಿರವಾಗಿ ಕೋವಿಡ್ ಮೆಡಿಸಿನ್ ಸಂಗ್ರಹಿಸಿ ತಪ್ಪು ಮಾಡಿದೆ

ಗೌತಮ್ ಗಂಭೀರ್ ಫೌಂಡೇಶನ್ ಕಾನೂನುಬಾಹಿರವಾಗಿ ಕೋವಿಡ್ ಮೆಡಿಸಿನ್ ಸಂಗ್ರಹಿಸಿ ತಪ್ಪು ಮಾಡಿದೆ

- Advertisement -
- Advertisement -

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ನಡೆಸುವ ಫೌಂಡೇಶನ್ ಕೋವಿಡ್ ಚಿಕಿತ್ಸೆಯಲ್ಲಿ ಬಳಸಲಾಗುವ ಫ್ಯಾಬ್ಲಿಪೂ ಔಷಧಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದೆ ಮತ್ತು ವಿತರಣೆ ಮಾಡಿ ತಪ್ಪೆಸಗಿದೆ ಎಂದು ದೆಹಲಿ ಹೈಕೋರ್ಟ್‌ಗೆ ದೆಹಲಿ ಸರ್ಕಾರದ ಔಷಧ ನಿಯಂತ್ರಕ ಮಂಡಳಿ ಇಂದು ತಿಳಿಸಿದೆ.

ಗೌತಮ್ ಗಂಭೀರ್ ಫೌಂಡೇಷನ್, ಔಷಧಿ ವಿತರಕರು ಮತ್ತು ಇದಕ್ಕೆ ಸಂಬಂಧಿಸಿದ ಇತರರ ವಿರುದ್ಧ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಸರ್ಕಾರದ ಔಷಧ ನಿಯಂತ್ರಣ ಮಂಡಳಿ ಹೈಕೋರ್ಟಿಗೆ ಸಲ್ಲಿಸಿದ ವಿವರದಲ್ಲಿ ಹೇಳಿದೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.

ಶಾಸಕ ಪ್ರವೀಣ್ ಕುಮಾರ್ ಅವರು ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯಡಿ ಇದೇ ರೀತಿಯ ಅಪರಾಧಗಳಿಗೆ ತಪ್ಪಿತಸ್ಥರೆಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಆರು ವಾರಗಳಲ್ಲಿ ಈ ಪ್ರಕರಣಗಳಲ್ಲಿ ಹೆಚ್ಚಿನ ಪ್ರಗತಿಯ ಕುರಿತು ವರದಿಗಳನ್ನು ಸಲ್ಲಿಸುವಂತೆ ನ್ಯಾಯಾಲಯವು ಔಷಧ ನಿಯಂತ್ರಕ ಮಂಡಳಿಯನ್ನು ಕೇಳಿದೆ ಮತ್ತು ಜುಲೈ 29 ರಂದು ಮುಂದಿನ ವಿಚಾರಣೆ ನಡೆಸಲಿದೆ.

ಗೌತಮ್‌ ಗಂಭೀರ್‌ ಫೌಂಡೇಶನ್‌ ವತಿಯಿಂದ ದೆಹಲಿಯಲ್ಲಿ ಕೊರೋನಾ ವೈರಸ್‌ ಗೆ ಸಂಬಂಧಿಸಿದ ಔಷಧಿಗಳನ್ನು ಸಂಗ್ರಹಿಸಿದ ಮತ್ತು ವಿತರಿಸಿದ ಪ್ರಕರಣವನ್ನು ದೆಹಲಿ ಹೈಕೋರ್ಟ್‌ ಅತ್ಯಂತ ಗಂಭಿರವಾಗಿ ಪರಿಗಣಿಸಿದೆ. ಸಾವಿರಾರು ಜನರು ಔಷಧಗಳಿಲ್ಲದೇ ಸಾಯುತ್ತಿರುವಾಗ ಇಲ್ಲೊಬ್ಬ ನೂರಾರು ಸಂಖ್ಯೆಯಲ್ಲಿ ಔಷಧಿಯನ್ನು ದಾಸ್ತಾನು ಇರಿಸಿಕೊಂಡಿದ್ಧಾನೆ. ಅವರನ್ನು ಜನರ ಜೀವ ರಕ್ಷಿಸುವ ಹೀರೋ ಗಳೆಂದು ಸರ್ಕಾರ ಮತ್ತು ನೀವು ತಿಳಿದಿರಬಹುದು. ಆದರೆ ನ್ಯಾಯಾಲಯ ವಿಪತ್ತಿನ ಸಂದರ್ಭದಲ್ಲಿ ಕಳ್ಳ ಮಾರ್ಗದಲ್ಲಿ ಹೀರೋಗಳಾಗುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಯಸುತ್ತದೆ ಎನ್ನುವ ಮೂಲಕ ಕುಂಟುತ್ತ ಸಾಗುತ್ತಿರುವ ಗೌತಮ್‌ ಗಂಭೀರ್‌ ಫೌಂಢೇಶನ್‌ ವಿರುದ್ಧದ ತನಿಖೆಯ ಕುರಿತು ದೆಹಲಿ ಹೈಕೋರ್ಟ್‌ ಪೀಠ ಮೇ 31 ರಂದು ತೀವ್ರ ಅಸಮಧಾನ ವ್ಯಕ್ತಪಡಿಸಿತ್ತು.


ಇದನ್ನೂ ಓದಿ: ನೀವು ನಮ್ಮ ಮೇಲೆ ಸವಾರಿ ಮಾಡಲು ಸಾಧ್ಯವಿಲ್ಲ: ಗೌತಮ್‌ ಗಂಭೀರ್‌ ವಿರುದ್ಧದ ತನಿಖೆ ಕುರಿತು ದೆಹಲಿ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...