Homeಕರೋನಾ ತಲ್ಲಣಮೇ 16ರಿಂದ ಶೂನ್ಯ ಕೊರೊನಾ ಪ್ರಕರಣಗಳು: ನೀತಿ ಆಯೋಗವನ್ನು ಟ್ರೋಲ್‌ ಮಾಡಿದ ರಾಹುಲ್ ಗಾಂಧಿ

ಮೇ 16ರಿಂದ ಶೂನ್ಯ ಕೊರೊನಾ ಪ್ರಕರಣಗಳು: ನೀತಿ ಆಯೋಗವನ್ನು ಟ್ರೋಲ್‌ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

ನೀತಿ ಆಯೋಗದಲ್ಲಿನ ಬುದ್ದಿವಂತರು ಇದನ್ನು ಸಾಧಿಸಿದ್ದಾರೆ. ನಾಳೆ ಮೇ 16 ರಿಂದ ಯಾವುದೇ ಹೊಸ ಕೊರೊನಾ ಪ್ರಕರಣಗಳಿರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ನೀತಿ ಆಯೋಗವನ್ನು ಕುಟುಕಿದ್ದಾರೆ.

ಈ ಹಿಂದೆ ನೀತಿ ಆಯೋಗದ ಸದಸ್ಯರಾದ ವಿ.ಕೆ. ಪೌಲ್ ಪ್ರಕಟಿಸಿದ್ದ ಭಾರತದಲ್ಲಿ ಕೊರೊನಾ ಬೆಳವಣಿಗೆಯ ರೇಖಾ ಚಿತ್ರವನ್ನು ರಾಹುಲ್ ಗಾಂಧಿ ಇಂದು ಟ್ವಟ್ಟರಿನಲ್ಲಿ ಪ್ರಕಟಿಸಿ ಕುಟುಕಿದ್ದಾರೆ. ಅದರಲ್ಲಿ ಮೇ 16 ರ ರಂದು ಭಾರತದಲ್ಲಿ ಶೂನ್ಯ ಕೊರೊನಾ ಪ್ರಕರಣ ದಾಖಲಾಗುತ್ತದೆ ಎಂದು ಪೌಲ್‌ ಹೇಳಿದ್ದರು.

“ನೀತಿ ಆಯೋಗದಲ್ಲಿನ ಬುದ್ದಿವಂತರು ಇದನ್ನು ಸಾಧಿಸಿದ್ದಾರೆ. ಕೇಂದ್ರ ಸರ್ಕಾರ ಘೋಷಿಸಿದ್ದ ರಾಷ್ಟ್ರವ್ಯಾಪಿ ಲಾಕ್ ಡೌನ್ ನ ಕಾರ್ಯತಂತ್ರವನ್ನು ತೋರಿಸುವ ಅವರ ರೇಖಾ ಚಿತ್ರವನ್ನು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ನಾಳೆ ಮೇ 16 ರಿಂದ ಯಾವುದೇ ಹೊಸ ಕೊರೊನಾ ಪ್ರಕರಣಗಳಿರುವುದಿಲ್ಲ” ಎಂದು ರಾಹುಲ್ ಗಾಂಧಿ ಟ್ವಿಟ್ಟರ್‌ನಲ್ಲಿ ಹೇಳಿದ್ದಾರೆ.

ನೀತಿ ಆಯೋಗ ಎಪ್ರಿಲ್ 24 ರಂದು, ಕೊರೊನಾ ಸಂಬಂಧಪಟ್ಟ ಉನ್ನತ ಸಮೀತಿಯ ಅಧ್ಯಕ್ಷ ಹಾಗೂ ನೀತಿ ಆಯೋಗದ ಸಧಸ್ಯರು ಕೂಡಾ ಆಗಿರುವ ವಿ.ಕೆ. ಪೌಲ್ ಅವರು, “ಮೇ 16 ರ ಹೊತ್ತಿಗೆ ಭಾರತದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ಇಳಿಯುತ್ತದೆ” ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ರೇಖಾ ಚಿತ್ರವನ್ನು ಕೂಡಾ ಬಿಡುಗಡೆ ಮಾಡಲಾಗಿತ್ತು.

ಭಾರತದಲ್ಲಿ ಪ್ರಸ್ತುತ 81 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 2,469 ಸಾವುಗಳಾಗಿದೆ. ನಿನ್ನೆಯೆಂದ ಇವತ್ತಿಗೆ 3,900 ಕ್ಕಿಂತಲೂ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಕಳೆದ ದಿನದಿಂದ ಕನಿಷ್ಠ 100 ಜನರು ಸೋಂಕಿನ ಕಾರಣಕ್ಕೆ ಸಾವಿಗೀಡಾಗಿದ್ದಾರೆ.

ಪ್ರಸ್ತುತ ಕೊರೊನಾ ಭಾದಿತರ ಪಟ್ಟಿಯಲ್ಲಿ ಭಾರತ 12 ನೇ ಸ್ಥಾನದಲ್ಲಿದ್ದು, ಕೊರೊನಾ ಪತ್ತೆಯಾದ ಚೀನಾ 11 ನೇ ಸ್ಥಾನದಲ್ಲಿದ್ದು ಭಾರತಕ್ಕಿಂತ ಕೇವಲ 1 ಸಾವಿರ ಅಂತರಲ್ಲಿದೆ.

ನೀತಿ ಆಯೋಗ ಹೇಳಿದ್ದೇನು ವಿಡಿಯೋ ನೋಡಿ


ಓದಿ: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?; ಫ್ಯಾಕ್ಟ್ ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...