Homeಕರೋನಾ ತಲ್ಲಣಮೇ 16ರಿಂದ ಶೂನ್ಯ ಕೊರೊನಾ ಪ್ರಕರಣಗಳು: ನೀತಿ ಆಯೋಗವನ್ನು ಟ್ರೋಲ್‌ ಮಾಡಿದ ರಾಹುಲ್ ಗಾಂಧಿ

ಮೇ 16ರಿಂದ ಶೂನ್ಯ ಕೊರೊನಾ ಪ್ರಕರಣಗಳು: ನೀತಿ ಆಯೋಗವನ್ನು ಟ್ರೋಲ್‌ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

ನೀತಿ ಆಯೋಗದಲ್ಲಿನ ಬುದ್ದಿವಂತರು ಇದನ್ನು ಸಾಧಿಸಿದ್ದಾರೆ. ನಾಳೆ ಮೇ 16 ರಿಂದ ಯಾವುದೇ ಹೊಸ ಕೊರೊನಾ ಪ್ರಕರಣಗಳಿರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ನೀತಿ ಆಯೋಗವನ್ನು ಕುಟುಕಿದ್ದಾರೆ.

ಈ ಹಿಂದೆ ನೀತಿ ಆಯೋಗದ ಸದಸ್ಯರಾದ ವಿ.ಕೆ. ಪೌಲ್ ಪ್ರಕಟಿಸಿದ್ದ ಭಾರತದಲ್ಲಿ ಕೊರೊನಾ ಬೆಳವಣಿಗೆಯ ರೇಖಾ ಚಿತ್ರವನ್ನು ರಾಹುಲ್ ಗಾಂಧಿ ಇಂದು ಟ್ವಟ್ಟರಿನಲ್ಲಿ ಪ್ರಕಟಿಸಿ ಕುಟುಕಿದ್ದಾರೆ. ಅದರಲ್ಲಿ ಮೇ 16 ರ ರಂದು ಭಾರತದಲ್ಲಿ ಶೂನ್ಯ ಕೊರೊನಾ ಪ್ರಕರಣ ದಾಖಲಾಗುತ್ತದೆ ಎಂದು ಪೌಲ್‌ ಹೇಳಿದ್ದರು.

“ನೀತಿ ಆಯೋಗದಲ್ಲಿನ ಬುದ್ದಿವಂತರು ಇದನ್ನು ಸಾಧಿಸಿದ್ದಾರೆ. ಕೇಂದ್ರ ಸರ್ಕಾರ ಘೋಷಿಸಿದ್ದ ರಾಷ್ಟ್ರವ್ಯಾಪಿ ಲಾಕ್ ಡೌನ್ ನ ಕಾರ್ಯತಂತ್ರವನ್ನು ತೋರಿಸುವ ಅವರ ರೇಖಾ ಚಿತ್ರವನ್ನು ನಾನು ನಿಮಗೆ ನೆನಪಿಸಲು ಬಯಸುತ್ತೇನೆ. ನಾಳೆ ಮೇ 16 ರಿಂದ ಯಾವುದೇ ಹೊಸ ಕೊರೊನಾ ಪ್ರಕರಣಗಳಿರುವುದಿಲ್ಲ” ಎಂದು ರಾಹುಲ್ ಗಾಂಧಿ ಟ್ವಿಟ್ಟರ್‌ನಲ್ಲಿ ಹೇಳಿದ್ದಾರೆ.

ನೀತಿ ಆಯೋಗ ಎಪ್ರಿಲ್ 24 ರಂದು, ಕೊರೊನಾ ಸಂಬಂಧಪಟ್ಟ ಉನ್ನತ ಸಮೀತಿಯ ಅಧ್ಯಕ್ಷ ಹಾಗೂ ನೀತಿ ಆಯೋಗದ ಸಧಸ್ಯರು ಕೂಡಾ ಆಗಿರುವ ವಿ.ಕೆ. ಪೌಲ್ ಅವರು, “ಮೇ 16 ರ ಹೊತ್ತಿಗೆ ಭಾರತದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ಇಳಿಯುತ್ತದೆ” ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ರೇಖಾ ಚಿತ್ರವನ್ನು ಕೂಡಾ ಬಿಡುಗಡೆ ಮಾಡಲಾಗಿತ್ತು.

ಭಾರತದಲ್ಲಿ ಪ್ರಸ್ತುತ 81 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 2,469 ಸಾವುಗಳಾಗಿದೆ. ನಿನ್ನೆಯೆಂದ ಇವತ್ತಿಗೆ 3,900 ಕ್ಕಿಂತಲೂ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಕಳೆದ ದಿನದಿಂದ ಕನಿಷ್ಠ 100 ಜನರು ಸೋಂಕಿನ ಕಾರಣಕ್ಕೆ ಸಾವಿಗೀಡಾಗಿದ್ದಾರೆ.

ಪ್ರಸ್ತುತ ಕೊರೊನಾ ಭಾದಿತರ ಪಟ್ಟಿಯಲ್ಲಿ ಭಾರತ 12 ನೇ ಸ್ಥಾನದಲ್ಲಿದ್ದು, ಕೊರೊನಾ ಪತ್ತೆಯಾದ ಚೀನಾ 11 ನೇ ಸ್ಥಾನದಲ್ಲಿದ್ದು ಭಾರತಕ್ಕಿಂತ ಕೇವಲ 1 ಸಾವಿರ ಅಂತರಲ್ಲಿದೆ.

ನೀತಿ ಆಯೋಗ ಹೇಳಿದ್ದೇನು ವಿಡಿಯೋ ನೋಡಿ


ಓದಿ: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?; ಫ್ಯಾಕ್ಟ್ ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...