Homeಮುಖಪುಟಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

- Advertisement -
- Advertisement -

ಪುಟಕ್ಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್

ಭಾರತದಲ್ಲಿ ಭಗವದ್ಗೀತೆ ಮತ್ತು ಯೋಗವನ್ನು ಪರ ವಿರೋಧಗಳ ನೆಲೆಗಟ್ಟುಗಳಿಂದಲ್ಲದೇ ಮರು ಸಂಶೋಧನೆ ಮಾಡಿದ ವಿದ್ವಾಂಸ ಫುಲ್ಗೇಂದ ಸಿನ್ಹಾ. ಅವರು ಅಮೆರಿಕೆಯಲ್ಲಿ ಸ್ವಯಂ ಯೋಗಾಚಾರ್ಯ ರಾಗಿದ್ದ ಕಾರಣದಿಂದ ಯೋಗದ ಮೂಲವನ್ನು ಹುಡುಕಲು ಹೊರಟ ಅವರು ಅದರ ಜೊತೆಜೊತೆಗೇ ಗೀತೆಯ ಮೂಲವನ್ನೂ ಗುರುತಿಸುವ ಯತ್ನ ಮಾಡಿದರು.

ಇದರಿಂದ ಗೀತಾ- ಯಾಸ್ ಇಟ್ ವಾಸ್ ಎಂಬ ಮಹತ್ವಪೂರ್ಣ ಕೃತಿಯ ರಚನೆಯಾಯ್ತು. ಗೀತಾ – ಯಾಸ್ ಇಟ್ ಈಸ್ ಎಂಬ ಇಸ್ಕಾನ್ ಸಂಸ್ಥಾಪಕರ ಕೃತಿಯೊಂದಿದೆ. ಈ ಕೃತಿಗಳ ನಡುವಿನ ವ್ಯತ್ಯಾಸವೆಂದರೆ, ಇಸ್ಕಾನ್ ಕೃತಿ ಮಂಪರನ್ನು ತರಿಸುತ್ತದೆ. ಸಿನ್ಹಾರವರ ಸಂಶೋಧನಾ ಕೃತಿ ಮಂಪರನ್ನು ಹರಿಸುತ್ತದೆ.

ಸಿನ್ಹಾರವರ ಈ ಕೃತಿ ಮಹತ್ವದ್ದು ಎನಿಸುವುದಕ್ಕೆ ಕಾರಣಗಳಿವೆ. ಯಾವುದೇ ನೆಲದ ಸಾಂಸ್ಕೃತಿಕ ರೂಢಿಗಳು ಮತ್ತು ಧಾರ್ಮಿಕ ನಂಬುಗೆಗಳು ಸಮಾಜದ ಪ್ರಗತಿಗೆ ಅಥವಾ ಅವನತಿಗೆ ಹೇಗೆ ಕಾರಣವಾಗುತ್ತದೆ ಎಂದು ವಿವರಿಸುತ್ತದೆ. ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಹೇಗೆ ಅಲ್ಲ ಎಂದು ಪ್ರತಿಪಾದಿಸುತ್ತದೆ ಮತ್ತು ಅತಿ ಮುಖ್ಯವಾಗಿ ಮೂಲದಲ್ಲಿ ಇದ್ದಂತಹ ಭಗವದ್ಗೀತೆ ಏನು? ಯಾವ್ಯಾವ ಪ್ರಭಾವಗಳಿಂದ ಮತ್ತು ಯಾವ್ಯಾವ ನುಸುಳುವಿಕೆಗಳಿಂದ ಈಗ ನಾವು ಕಾಣುತ್ತಿರುವ ಭಗವದ್ಗೀತೆಯಾಗಿದೆ ಎಂದು ಆಧಾರಸಹಿತ ವಿವರಿಸುತ್ತಾರೆ.

ಚಿಂತನೆ ಮತ್ತು ಭಾವನೆಗಳ ಪ್ರಭಾವವು ದೇಶದ ಪ್ರಗತಿಗೆ ಹೇಗೆ ಕೆಲಸ ಮಾಡುತ್ತದೆ ಎಂದು ಯೋಚಿಸುತ್ತಾರೆ ಸಿನ್ಹಾ. ಕೆಲವು ದೇಶಗಳಿಗೆ ಸಂಪನ್ಮೂಲಗಳ ಕೊರತೆ ಇದ್ದು, ಎಲ್ಲವೂ ವ್ಯತಿರಿಕ್ತವಾಗಿರುವಂತಹ ವಾತಾವರಣವೇ ಇದ್ದರೂ ಔದ್ಯೋಗಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸುತ್ತಾರೆ. ಆದರೆ, ಭಾರತದಂತಹ ದೇಶವು ಎಲ್ಲವೂ ಇದ್ದು ಹಾಗೆ ಸಾಧಿಸಲಾಗದಿರುವುದಕ್ಕೆ ಕಾರಣ ಏನು ಎಂದು ನೋಡುತ್ತಾ, ಸಿನ್ಹಾ ಗೀತೆಯ ಕಡೆ ನೋಡುತ್ತಾರೆ. ಕೆಲಸ ಮಾಡು ಆದರೆ ಪ್ರತಿಫಲವನ್ನು ಅಪೇಕ್ಷಿಸಬೇಡ. ಬಯಕೆ ದುಃಖಕ್ಕೆ ಕಾರಣ, ಬಯಕೆಯನ್ನು ಹೊಂದಬೇಡ. ವಿಧಿ ಲಿಖಿತದಂತೆ ಎಲ್ಲವೂ ನಡೆಯುತ್ತದೆ. ಪ್ರಾಪಂಚಿಕ ವ್ಯವಹಾರ ನಶ್ವರ, ಆಧ್ಯಾತ್ಮಿಕತೆಯೇ ಉನ್ನತ ಮತ್ತು ಅಮರ. ನೀನು ಏನೇ ಮಾಡಿದರೂ ದೇವರು ಅನುಗ್ರಹಿಸದಿದ್ದರೆ ಎಲ್ಲವೂ ವ್ಯರ್ಥ. ದುಃಖ, ಸಂತೋಷ, ಯಶಸ್ಸು ಮತ್ತು ವೈಫಲ್ಯ ಎಲ್ಲವೂ ದೇವರ ಇಚ್ಛೆ. ಬೇರೂರಿರುವ ಇಂತಹ ವಿಚಾರಗಳು ಯಾವ ರೀತಿಯಲ್ಲಿ ಮನುಷ್ಯನ ಸಂಕಲ್ಪ ಮತ್ತು ಸಾಧನೆಗೆ ನ್ಯಾಯ ಸಂದಾಯ ಮಾಡುತ್ತದೆ ಎಂಬುದು ಸಿನ್ಹಾರ ಚಿಂತನೆ. ರಾಷ್ಟ್ರೀಯತೆಯು ಧಾರ್ಮಿಕತೆಯ ಮೇಲೆ ಅವಲಂಬಿತವಾದರೆ ಎಂತಹ ಪ್ರಮಾದಗಳನ್ನು ಮತ್ತು ವೈಫಲ್ಯಗಳನ್ನು ಕಾಣಬೇಕಾಗುತ್ತದೆ ಎಂದು ಎಚ್ಚರಿಸುತ್ತಾರೆ.

ಕಪಿಲ ಪತಂಜಲ ಗೌತಮ ಜಿನರೆಲ್ಲರ ತಾತ್ವಿಕತೆಗಳು ಭಾರತದ ಸಿದ್ಧಾಂತಕ್ಕೆ ಕಾಣ್ಕೆಗಳನ್ನು ನೀಡಿದವು ಎನ್ನುತ್ತಲೇ ವ್ಯಾಸನ ಭಗವದ್ಗೀತೆಯಲ್ಲಿ ಅವೆಲ್ಲವೂ ಹೇಗೆ ನುಸುಳಿದವು ಎಂಬುದು ಒಂದು ಸಸ್ಪೆನ್ಸ್ ಥ್ರಿಲ್ಲರ್.
ಹದಿನೆಂಟು ಅಧ್ಯಾಯಗಳ ಭಗವದ್ಗೀತೆಯಲ್ಲಿ ಹದಿನೈದು ಅಧ್ಯಾಯಗಳೇ ಕಲಬೆರಕೆಯವು ಎಂದರೆ ಮರ್ಮಾಘಾತವಾಗದೇ!

ಮೂಲ ಗೀತ ಮೊದಲನೆಯ ಅಧ್ಯಾಯದ 28ನೇ ಶ್ಲೋಕದಿಂದ ಆರಂಭವಾಗುತ್ತದೆ. ನಂತರ ಮೊದಲ 3 ಅಧ್ಯಾಯಗಳಷ್ಟೇ ಅಸಲಿ ಎನ್ನುತ್ತಾ ಕ್ರಿಶ 800 ರಲ್ಲಿ ಬ್ರಾಹ್ಮಣವಾದವನ್ನು ಮತ್ತು ಅದ್ವೈತ ಸಿದ್ಧಾಂತವನ್ನು ಹೇಗೆ ತರಲಾಯ್ತು ಎಂದು ಕೂಲಂಕುಷವಾಗಿ ವಿವರಿಸುತ್ತಾರೆ.

ಕೊನೆಗೆ ತಿಳಿಯುವುದೇನೆಂದರೆ, ಮೂಲ ಭಗವದ್ಗೀತೆ ಅನೇಕ ಪ್ರಭಾವಗಳನ್ನು, ಬದಲಾವಣೆಗಳನ್ನು ಮತ್ತು ಕಲಬೆರಕೆಗಳನ್ನು ಹೊಂದಿದೆ. ಯೋಗ, ಗೀತೆ ಹಿಂದೂ ಧರ್ಮದ ಅಥವಾ ವೈದಿಕ ಧರ್ಮದ ಕೊಡುಗೆ ಏನಲ್ಲ. ಯೋಗ ದೇಹಕ್ಕೆ ಮತ್ತು ಗೀತೆ ಮನಸ್ಸಿಗೆ ಆರೋಗ್ಯ ಕೊಡುವ ದೃಷ್ಟಿಯನ್ನು ಹೊಂದಿರುವುದರಿಂದ ಪೂರ್ವಾಗ್ರಹಪೀಡಿತರಾಗಿ ತಿರಸ್ಕರಿಸಬಾರದು ಎಂಬುದು. ಒಬ್ಬ ಸತ್ಯಾನ್ವೇಷಿಯು ಪೂರ್ವಾಗ್ರಹಗಳಲ್ಲಿ ಬಂಧಿತನಾದರೆ ಸಂಶೋಧನೆಯಾಗಲಿ, ಅಧ್ಯಯನವಾಗಲಿ ಹೇಗೆ ಸಾಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಹುಜನರಿಗೆ ತಿಳಿದ ವಿಚಾರ. ಇದರಲ್ಲಿ ವಿಶೇಷವಾಗಿ ಏನೂ ಇಲ್ಲ. ಶತಮಾನಗಳಿಂದ ಈ ವಾದ ಇದ್ದದ್ದೇ…‌‌.!!

LEAVE A REPLY

Please enter your comment!
Please enter your name here

- Advertisment -

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...