Homeಮುಖಪುಟಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

- Advertisement -
- Advertisement -

ಪುಟಕ್ಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್

ಭಾರತದಲ್ಲಿ ಭಗವದ್ಗೀತೆ ಮತ್ತು ಯೋಗವನ್ನು ಪರ ವಿರೋಧಗಳ ನೆಲೆಗಟ್ಟುಗಳಿಂದಲ್ಲದೇ ಮರು ಸಂಶೋಧನೆ ಮಾಡಿದ ವಿದ್ವಾಂಸ ಫುಲ್ಗೇಂದ ಸಿನ್ಹಾ. ಅವರು ಅಮೆರಿಕೆಯಲ್ಲಿ ಸ್ವಯಂ ಯೋಗಾಚಾರ್ಯ ರಾಗಿದ್ದ ಕಾರಣದಿಂದ ಯೋಗದ ಮೂಲವನ್ನು ಹುಡುಕಲು ಹೊರಟ ಅವರು ಅದರ ಜೊತೆಜೊತೆಗೇ ಗೀತೆಯ ಮೂಲವನ್ನೂ ಗುರುತಿಸುವ ಯತ್ನ ಮಾಡಿದರು.

ಇದರಿಂದ ಗೀತಾ- ಯಾಸ್ ಇಟ್ ವಾಸ್ ಎಂಬ ಮಹತ್ವಪೂರ್ಣ ಕೃತಿಯ ರಚನೆಯಾಯ್ತು. ಗೀತಾ – ಯಾಸ್ ಇಟ್ ಈಸ್ ಎಂಬ ಇಸ್ಕಾನ್ ಸಂಸ್ಥಾಪಕರ ಕೃತಿಯೊಂದಿದೆ. ಈ ಕೃತಿಗಳ ನಡುವಿನ ವ್ಯತ್ಯಾಸವೆಂದರೆ, ಇಸ್ಕಾನ್ ಕೃತಿ ಮಂಪರನ್ನು ತರಿಸುತ್ತದೆ. ಸಿನ್ಹಾರವರ ಸಂಶೋಧನಾ ಕೃತಿ ಮಂಪರನ್ನು ಹರಿಸುತ್ತದೆ.

ಸಿನ್ಹಾರವರ ಈ ಕೃತಿ ಮಹತ್ವದ್ದು ಎನಿಸುವುದಕ್ಕೆ ಕಾರಣಗಳಿವೆ. ಯಾವುದೇ ನೆಲದ ಸಾಂಸ್ಕೃತಿಕ ರೂಢಿಗಳು ಮತ್ತು ಧಾರ್ಮಿಕ ನಂಬುಗೆಗಳು ಸಮಾಜದ ಪ್ರಗತಿಗೆ ಅಥವಾ ಅವನತಿಗೆ ಹೇಗೆ ಕಾರಣವಾಗುತ್ತದೆ ಎಂದು ವಿವರಿಸುತ್ತದೆ. ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಹೇಗೆ ಅಲ್ಲ ಎಂದು ಪ್ರತಿಪಾದಿಸುತ್ತದೆ ಮತ್ತು ಅತಿ ಮುಖ್ಯವಾಗಿ ಮೂಲದಲ್ಲಿ ಇದ್ದಂತಹ ಭಗವದ್ಗೀತೆ ಏನು? ಯಾವ್ಯಾವ ಪ್ರಭಾವಗಳಿಂದ ಮತ್ತು ಯಾವ್ಯಾವ ನುಸುಳುವಿಕೆಗಳಿಂದ ಈಗ ನಾವು ಕಾಣುತ್ತಿರುವ ಭಗವದ್ಗೀತೆಯಾಗಿದೆ ಎಂದು ಆಧಾರಸಹಿತ ವಿವರಿಸುತ್ತಾರೆ.

ಚಿಂತನೆ ಮತ್ತು ಭಾವನೆಗಳ ಪ್ರಭಾವವು ದೇಶದ ಪ್ರಗತಿಗೆ ಹೇಗೆ ಕೆಲಸ ಮಾಡುತ್ತದೆ ಎಂದು ಯೋಚಿಸುತ್ತಾರೆ ಸಿನ್ಹಾ. ಕೆಲವು ದೇಶಗಳಿಗೆ ಸಂಪನ್ಮೂಲಗಳ ಕೊರತೆ ಇದ್ದು, ಎಲ್ಲವೂ ವ್ಯತಿರಿಕ್ತವಾಗಿರುವಂತಹ ವಾತಾವರಣವೇ ಇದ್ದರೂ ಔದ್ಯೋಗಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸುತ್ತಾರೆ. ಆದರೆ, ಭಾರತದಂತಹ ದೇಶವು ಎಲ್ಲವೂ ಇದ್ದು ಹಾಗೆ ಸಾಧಿಸಲಾಗದಿರುವುದಕ್ಕೆ ಕಾರಣ ಏನು ಎಂದು ನೋಡುತ್ತಾ, ಸಿನ್ಹಾ ಗೀತೆಯ ಕಡೆ ನೋಡುತ್ತಾರೆ. ಕೆಲಸ ಮಾಡು ಆದರೆ ಪ್ರತಿಫಲವನ್ನು ಅಪೇಕ್ಷಿಸಬೇಡ. ಬಯಕೆ ದುಃಖಕ್ಕೆ ಕಾರಣ, ಬಯಕೆಯನ್ನು ಹೊಂದಬೇಡ. ವಿಧಿ ಲಿಖಿತದಂತೆ ಎಲ್ಲವೂ ನಡೆಯುತ್ತದೆ. ಪ್ರಾಪಂಚಿಕ ವ್ಯವಹಾರ ನಶ್ವರ, ಆಧ್ಯಾತ್ಮಿಕತೆಯೇ ಉನ್ನತ ಮತ್ತು ಅಮರ. ನೀನು ಏನೇ ಮಾಡಿದರೂ ದೇವರು ಅನುಗ್ರಹಿಸದಿದ್ದರೆ ಎಲ್ಲವೂ ವ್ಯರ್ಥ. ದುಃಖ, ಸಂತೋಷ, ಯಶಸ್ಸು ಮತ್ತು ವೈಫಲ್ಯ ಎಲ್ಲವೂ ದೇವರ ಇಚ್ಛೆ. ಬೇರೂರಿರುವ ಇಂತಹ ವಿಚಾರಗಳು ಯಾವ ರೀತಿಯಲ್ಲಿ ಮನುಷ್ಯನ ಸಂಕಲ್ಪ ಮತ್ತು ಸಾಧನೆಗೆ ನ್ಯಾಯ ಸಂದಾಯ ಮಾಡುತ್ತದೆ ಎಂಬುದು ಸಿನ್ಹಾರ ಚಿಂತನೆ. ರಾಷ್ಟ್ರೀಯತೆಯು ಧಾರ್ಮಿಕತೆಯ ಮೇಲೆ ಅವಲಂಬಿತವಾದರೆ ಎಂತಹ ಪ್ರಮಾದಗಳನ್ನು ಮತ್ತು ವೈಫಲ್ಯಗಳನ್ನು ಕಾಣಬೇಕಾಗುತ್ತದೆ ಎಂದು ಎಚ್ಚರಿಸುತ್ತಾರೆ.

ಕಪಿಲ ಪತಂಜಲ ಗೌತಮ ಜಿನರೆಲ್ಲರ ತಾತ್ವಿಕತೆಗಳು ಭಾರತದ ಸಿದ್ಧಾಂತಕ್ಕೆ ಕಾಣ್ಕೆಗಳನ್ನು ನೀಡಿದವು ಎನ್ನುತ್ತಲೇ ವ್ಯಾಸನ ಭಗವದ್ಗೀತೆಯಲ್ಲಿ ಅವೆಲ್ಲವೂ ಹೇಗೆ ನುಸುಳಿದವು ಎಂಬುದು ಒಂದು ಸಸ್ಪೆನ್ಸ್ ಥ್ರಿಲ್ಲರ್.
ಹದಿನೆಂಟು ಅಧ್ಯಾಯಗಳ ಭಗವದ್ಗೀತೆಯಲ್ಲಿ ಹದಿನೈದು ಅಧ್ಯಾಯಗಳೇ ಕಲಬೆರಕೆಯವು ಎಂದರೆ ಮರ್ಮಾಘಾತವಾಗದೇ!

ಮೂಲ ಗೀತ ಮೊದಲನೆಯ ಅಧ್ಯಾಯದ 28ನೇ ಶ್ಲೋಕದಿಂದ ಆರಂಭವಾಗುತ್ತದೆ. ನಂತರ ಮೊದಲ 3 ಅಧ್ಯಾಯಗಳಷ್ಟೇ ಅಸಲಿ ಎನ್ನುತ್ತಾ ಕ್ರಿಶ 800 ರಲ್ಲಿ ಬ್ರಾಹ್ಮಣವಾದವನ್ನು ಮತ್ತು ಅದ್ವೈತ ಸಿದ್ಧಾಂತವನ್ನು ಹೇಗೆ ತರಲಾಯ್ತು ಎಂದು ಕೂಲಂಕುಷವಾಗಿ ವಿವರಿಸುತ್ತಾರೆ.

ಕೊನೆಗೆ ತಿಳಿಯುವುದೇನೆಂದರೆ, ಮೂಲ ಭಗವದ್ಗೀತೆ ಅನೇಕ ಪ್ರಭಾವಗಳನ್ನು, ಬದಲಾವಣೆಗಳನ್ನು ಮತ್ತು ಕಲಬೆರಕೆಗಳನ್ನು ಹೊಂದಿದೆ. ಯೋಗ, ಗೀತೆ ಹಿಂದೂ ಧರ್ಮದ ಅಥವಾ ವೈದಿಕ ಧರ್ಮದ ಕೊಡುಗೆ ಏನಲ್ಲ. ಯೋಗ ದೇಹಕ್ಕೆ ಮತ್ತು ಗೀತೆ ಮನಸ್ಸಿಗೆ ಆರೋಗ್ಯ ಕೊಡುವ ದೃಷ್ಟಿಯನ್ನು ಹೊಂದಿರುವುದರಿಂದ ಪೂರ್ವಾಗ್ರಹಪೀಡಿತರಾಗಿ ತಿರಸ್ಕರಿಸಬಾರದು ಎಂಬುದು. ಒಬ್ಬ ಸತ್ಯಾನ್ವೇಷಿಯು ಪೂರ್ವಾಗ್ರಹಗಳಲ್ಲಿ ಬಂಧಿತನಾದರೆ ಸಂಶೋಧನೆಯಾಗಲಿ, ಅಧ್ಯಯನವಾಗಲಿ ಹೇಗೆ ಸಾಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಹುಜನರಿಗೆ ತಿಳಿದ ವಿಚಾರ. ಇದರಲ್ಲಿ ವಿಶೇಷವಾಗಿ ಏನೂ ಇಲ್ಲ. ಶತಮಾನಗಳಿಂದ ಈ ವಾದ ಇದ್ದದ್ದೇ…‌‌.!!

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...