Homeಮುಖಪುಟಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

- Advertisement -
- Advertisement -

ಪುಟಕ್ಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್

ಭಾರತದಲ್ಲಿ ಭಗವದ್ಗೀತೆ ಮತ್ತು ಯೋಗವನ್ನು ಪರ ವಿರೋಧಗಳ ನೆಲೆಗಟ್ಟುಗಳಿಂದಲ್ಲದೇ ಮರು ಸಂಶೋಧನೆ ಮಾಡಿದ ವಿದ್ವಾಂಸ ಫುಲ್ಗೇಂದ ಸಿನ್ಹಾ. ಅವರು ಅಮೆರಿಕೆಯಲ್ಲಿ ಸ್ವಯಂ ಯೋಗಾಚಾರ್ಯ ರಾಗಿದ್ದ ಕಾರಣದಿಂದ ಯೋಗದ ಮೂಲವನ್ನು ಹುಡುಕಲು ಹೊರಟ ಅವರು ಅದರ ಜೊತೆಜೊತೆಗೇ ಗೀತೆಯ ಮೂಲವನ್ನೂ ಗುರುತಿಸುವ ಯತ್ನ ಮಾಡಿದರು.

ಇದರಿಂದ ಗೀತಾ- ಯಾಸ್ ಇಟ್ ವಾಸ್ ಎಂಬ ಮಹತ್ವಪೂರ್ಣ ಕೃತಿಯ ರಚನೆಯಾಯ್ತು. ಗೀತಾ – ಯಾಸ್ ಇಟ್ ಈಸ್ ಎಂಬ ಇಸ್ಕಾನ್ ಸಂಸ್ಥಾಪಕರ ಕೃತಿಯೊಂದಿದೆ. ಈ ಕೃತಿಗಳ ನಡುವಿನ ವ್ಯತ್ಯಾಸವೆಂದರೆ, ಇಸ್ಕಾನ್ ಕೃತಿ ಮಂಪರನ್ನು ತರಿಸುತ್ತದೆ. ಸಿನ್ಹಾರವರ ಸಂಶೋಧನಾ ಕೃತಿ ಮಂಪರನ್ನು ಹರಿಸುತ್ತದೆ.

ಸಿನ್ಹಾರವರ ಈ ಕೃತಿ ಮಹತ್ವದ್ದು ಎನಿಸುವುದಕ್ಕೆ ಕಾರಣಗಳಿವೆ. ಯಾವುದೇ ನೆಲದ ಸಾಂಸ್ಕೃತಿಕ ರೂಢಿಗಳು ಮತ್ತು ಧಾರ್ಮಿಕ ನಂಬುಗೆಗಳು ಸಮಾಜದ ಪ್ರಗತಿಗೆ ಅಥವಾ ಅವನತಿಗೆ ಹೇಗೆ ಕಾರಣವಾಗುತ್ತದೆ ಎಂದು ವಿವರಿಸುತ್ತದೆ. ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಹೇಗೆ ಅಲ್ಲ ಎಂದು ಪ್ರತಿಪಾದಿಸುತ್ತದೆ ಮತ್ತು ಅತಿ ಮುಖ್ಯವಾಗಿ ಮೂಲದಲ್ಲಿ ಇದ್ದಂತಹ ಭಗವದ್ಗೀತೆ ಏನು? ಯಾವ್ಯಾವ ಪ್ರಭಾವಗಳಿಂದ ಮತ್ತು ಯಾವ್ಯಾವ ನುಸುಳುವಿಕೆಗಳಿಂದ ಈಗ ನಾವು ಕಾಣುತ್ತಿರುವ ಭಗವದ್ಗೀತೆಯಾಗಿದೆ ಎಂದು ಆಧಾರಸಹಿತ ವಿವರಿಸುತ್ತಾರೆ.

ಚಿಂತನೆ ಮತ್ತು ಭಾವನೆಗಳ ಪ್ರಭಾವವು ದೇಶದ ಪ್ರಗತಿಗೆ ಹೇಗೆ ಕೆಲಸ ಮಾಡುತ್ತದೆ ಎಂದು ಯೋಚಿಸುತ್ತಾರೆ ಸಿನ್ಹಾ. ಕೆಲವು ದೇಶಗಳಿಗೆ ಸಂಪನ್ಮೂಲಗಳ ಕೊರತೆ ಇದ್ದು, ಎಲ್ಲವೂ ವ್ಯತಿರಿಕ್ತವಾಗಿರುವಂತಹ ವಾತಾವರಣವೇ ಇದ್ದರೂ ಔದ್ಯೋಗಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸುತ್ತಾರೆ. ಆದರೆ, ಭಾರತದಂತಹ ದೇಶವು ಎಲ್ಲವೂ ಇದ್ದು ಹಾಗೆ ಸಾಧಿಸಲಾಗದಿರುವುದಕ್ಕೆ ಕಾರಣ ಏನು ಎಂದು ನೋಡುತ್ತಾ, ಸಿನ್ಹಾ ಗೀತೆಯ ಕಡೆ ನೋಡುತ್ತಾರೆ. ಕೆಲಸ ಮಾಡು ಆದರೆ ಪ್ರತಿಫಲವನ್ನು ಅಪೇಕ್ಷಿಸಬೇಡ. ಬಯಕೆ ದುಃಖಕ್ಕೆ ಕಾರಣ, ಬಯಕೆಯನ್ನು ಹೊಂದಬೇಡ. ವಿಧಿ ಲಿಖಿತದಂತೆ ಎಲ್ಲವೂ ನಡೆಯುತ್ತದೆ. ಪ್ರಾಪಂಚಿಕ ವ್ಯವಹಾರ ನಶ್ವರ, ಆಧ್ಯಾತ್ಮಿಕತೆಯೇ ಉನ್ನತ ಮತ್ತು ಅಮರ. ನೀನು ಏನೇ ಮಾಡಿದರೂ ದೇವರು ಅನುಗ್ರಹಿಸದಿದ್ದರೆ ಎಲ್ಲವೂ ವ್ಯರ್ಥ. ದುಃಖ, ಸಂತೋಷ, ಯಶಸ್ಸು ಮತ್ತು ವೈಫಲ್ಯ ಎಲ್ಲವೂ ದೇವರ ಇಚ್ಛೆ. ಬೇರೂರಿರುವ ಇಂತಹ ವಿಚಾರಗಳು ಯಾವ ರೀತಿಯಲ್ಲಿ ಮನುಷ್ಯನ ಸಂಕಲ್ಪ ಮತ್ತು ಸಾಧನೆಗೆ ನ್ಯಾಯ ಸಂದಾಯ ಮಾಡುತ್ತದೆ ಎಂಬುದು ಸಿನ್ಹಾರ ಚಿಂತನೆ. ರಾಷ್ಟ್ರೀಯತೆಯು ಧಾರ್ಮಿಕತೆಯ ಮೇಲೆ ಅವಲಂಬಿತವಾದರೆ ಎಂತಹ ಪ್ರಮಾದಗಳನ್ನು ಮತ್ತು ವೈಫಲ್ಯಗಳನ್ನು ಕಾಣಬೇಕಾಗುತ್ತದೆ ಎಂದು ಎಚ್ಚರಿಸುತ್ತಾರೆ.

ಕಪಿಲ ಪತಂಜಲ ಗೌತಮ ಜಿನರೆಲ್ಲರ ತಾತ್ವಿಕತೆಗಳು ಭಾರತದ ಸಿದ್ಧಾಂತಕ್ಕೆ ಕಾಣ್ಕೆಗಳನ್ನು ನೀಡಿದವು ಎನ್ನುತ್ತಲೇ ವ್ಯಾಸನ ಭಗವದ್ಗೀತೆಯಲ್ಲಿ ಅವೆಲ್ಲವೂ ಹೇಗೆ ನುಸುಳಿದವು ಎಂಬುದು ಒಂದು ಸಸ್ಪೆನ್ಸ್ ಥ್ರಿಲ್ಲರ್.
ಹದಿನೆಂಟು ಅಧ್ಯಾಯಗಳ ಭಗವದ್ಗೀತೆಯಲ್ಲಿ ಹದಿನೈದು ಅಧ್ಯಾಯಗಳೇ ಕಲಬೆರಕೆಯವು ಎಂದರೆ ಮರ್ಮಾಘಾತವಾಗದೇ!

ಮೂಲ ಗೀತ ಮೊದಲನೆಯ ಅಧ್ಯಾಯದ 28ನೇ ಶ್ಲೋಕದಿಂದ ಆರಂಭವಾಗುತ್ತದೆ. ನಂತರ ಮೊದಲ 3 ಅಧ್ಯಾಯಗಳಷ್ಟೇ ಅಸಲಿ ಎನ್ನುತ್ತಾ ಕ್ರಿಶ 800 ರಲ್ಲಿ ಬ್ರಾಹ್ಮಣವಾದವನ್ನು ಮತ್ತು ಅದ್ವೈತ ಸಿದ್ಧಾಂತವನ್ನು ಹೇಗೆ ತರಲಾಯ್ತು ಎಂದು ಕೂಲಂಕುಷವಾಗಿ ವಿವರಿಸುತ್ತಾರೆ.

ಕೊನೆಗೆ ತಿಳಿಯುವುದೇನೆಂದರೆ, ಮೂಲ ಭಗವದ್ಗೀತೆ ಅನೇಕ ಪ್ರಭಾವಗಳನ್ನು, ಬದಲಾವಣೆಗಳನ್ನು ಮತ್ತು ಕಲಬೆರಕೆಗಳನ್ನು ಹೊಂದಿದೆ. ಯೋಗ, ಗೀತೆ ಹಿಂದೂ ಧರ್ಮದ ಅಥವಾ ವೈದಿಕ ಧರ್ಮದ ಕೊಡುಗೆ ಏನಲ್ಲ. ಯೋಗ ದೇಹಕ್ಕೆ ಮತ್ತು ಗೀತೆ ಮನಸ್ಸಿಗೆ ಆರೋಗ್ಯ ಕೊಡುವ ದೃಷ್ಟಿಯನ್ನು ಹೊಂದಿರುವುದರಿಂದ ಪೂರ್ವಾಗ್ರಹಪೀಡಿತರಾಗಿ ತಿರಸ್ಕರಿಸಬಾರದು ಎಂಬುದು. ಒಬ್ಬ ಸತ್ಯಾನ್ವೇಷಿಯು ಪೂರ್ವಾಗ್ರಹಗಳಲ್ಲಿ ಬಂಧಿತನಾದರೆ ಸಂಶೋಧನೆಯಾಗಲಿ, ಅಧ್ಯಯನವಾಗಲಿ ಹೇಗೆ ಸಾಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಹುಜನರಿಗೆ ತಿಳಿದ ವಿಚಾರ. ಇದರಲ್ಲಿ ವಿಶೇಷವಾಗಿ ಏನೂ ಇಲ್ಲ. ಶತಮಾನಗಳಿಂದ ಈ ವಾದ ಇದ್ದದ್ದೇ…‌‌.!!

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...