Homeಮುಖಪುಟಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

- Advertisement -
- Advertisement -

ಪುಟಕ್ಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್

ಭಾರತದಲ್ಲಿ ಭಗವದ್ಗೀತೆ ಮತ್ತು ಯೋಗವನ್ನು ಪರ ವಿರೋಧಗಳ ನೆಲೆಗಟ್ಟುಗಳಿಂದಲ್ಲದೇ ಮರು ಸಂಶೋಧನೆ ಮಾಡಿದ ವಿದ್ವಾಂಸ ಫುಲ್ಗೇಂದ ಸಿನ್ಹಾ. ಅವರು ಅಮೆರಿಕೆಯಲ್ಲಿ ಸ್ವಯಂ ಯೋಗಾಚಾರ್ಯ ರಾಗಿದ್ದ ಕಾರಣದಿಂದ ಯೋಗದ ಮೂಲವನ್ನು ಹುಡುಕಲು ಹೊರಟ ಅವರು ಅದರ ಜೊತೆಜೊತೆಗೇ ಗೀತೆಯ ಮೂಲವನ್ನೂ ಗುರುತಿಸುವ ಯತ್ನ ಮಾಡಿದರು.

ಇದರಿಂದ ಗೀತಾ- ಯಾಸ್ ಇಟ್ ವಾಸ್ ಎಂಬ ಮಹತ್ವಪೂರ್ಣ ಕೃತಿಯ ರಚನೆಯಾಯ್ತು. ಗೀತಾ – ಯಾಸ್ ಇಟ್ ಈಸ್ ಎಂಬ ಇಸ್ಕಾನ್ ಸಂಸ್ಥಾಪಕರ ಕೃತಿಯೊಂದಿದೆ. ಈ ಕೃತಿಗಳ ನಡುವಿನ ವ್ಯತ್ಯಾಸವೆಂದರೆ, ಇಸ್ಕಾನ್ ಕೃತಿ ಮಂಪರನ್ನು ತರಿಸುತ್ತದೆ. ಸಿನ್ಹಾರವರ ಸಂಶೋಧನಾ ಕೃತಿ ಮಂಪರನ್ನು ಹರಿಸುತ್ತದೆ.

ಸಿನ್ಹಾರವರ ಈ ಕೃತಿ ಮಹತ್ವದ್ದು ಎನಿಸುವುದಕ್ಕೆ ಕಾರಣಗಳಿವೆ. ಯಾವುದೇ ನೆಲದ ಸಾಂಸ್ಕೃತಿಕ ರೂಢಿಗಳು ಮತ್ತು ಧಾರ್ಮಿಕ ನಂಬುಗೆಗಳು ಸಮಾಜದ ಪ್ರಗತಿಗೆ ಅಥವಾ ಅವನತಿಗೆ ಹೇಗೆ ಕಾರಣವಾಗುತ್ತದೆ ಎಂದು ವಿವರಿಸುತ್ತದೆ. ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಹೇಗೆ ಅಲ್ಲ ಎಂದು ಪ್ರತಿಪಾದಿಸುತ್ತದೆ ಮತ್ತು ಅತಿ ಮುಖ್ಯವಾಗಿ ಮೂಲದಲ್ಲಿ ಇದ್ದಂತಹ ಭಗವದ್ಗೀತೆ ಏನು? ಯಾವ್ಯಾವ ಪ್ರಭಾವಗಳಿಂದ ಮತ್ತು ಯಾವ್ಯಾವ ನುಸುಳುವಿಕೆಗಳಿಂದ ಈಗ ನಾವು ಕಾಣುತ್ತಿರುವ ಭಗವದ್ಗೀತೆಯಾಗಿದೆ ಎಂದು ಆಧಾರಸಹಿತ ವಿವರಿಸುತ್ತಾರೆ.

ಚಿಂತನೆ ಮತ್ತು ಭಾವನೆಗಳ ಪ್ರಭಾವವು ದೇಶದ ಪ್ರಗತಿಗೆ ಹೇಗೆ ಕೆಲಸ ಮಾಡುತ್ತದೆ ಎಂದು ಯೋಚಿಸುತ್ತಾರೆ ಸಿನ್ಹಾ. ಕೆಲವು ದೇಶಗಳಿಗೆ ಸಂಪನ್ಮೂಲಗಳ ಕೊರತೆ ಇದ್ದು, ಎಲ್ಲವೂ ವ್ಯತಿರಿಕ್ತವಾಗಿರುವಂತಹ ವಾತಾವರಣವೇ ಇದ್ದರೂ ಔದ್ಯೋಗಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸುತ್ತಾರೆ. ಆದರೆ, ಭಾರತದಂತಹ ದೇಶವು ಎಲ್ಲವೂ ಇದ್ದು ಹಾಗೆ ಸಾಧಿಸಲಾಗದಿರುವುದಕ್ಕೆ ಕಾರಣ ಏನು ಎಂದು ನೋಡುತ್ತಾ, ಸಿನ್ಹಾ ಗೀತೆಯ ಕಡೆ ನೋಡುತ್ತಾರೆ. ಕೆಲಸ ಮಾಡು ಆದರೆ ಪ್ರತಿಫಲವನ್ನು ಅಪೇಕ್ಷಿಸಬೇಡ. ಬಯಕೆ ದುಃಖಕ್ಕೆ ಕಾರಣ, ಬಯಕೆಯನ್ನು ಹೊಂದಬೇಡ. ವಿಧಿ ಲಿಖಿತದಂತೆ ಎಲ್ಲವೂ ನಡೆಯುತ್ತದೆ. ಪ್ರಾಪಂಚಿಕ ವ್ಯವಹಾರ ನಶ್ವರ, ಆಧ್ಯಾತ್ಮಿಕತೆಯೇ ಉನ್ನತ ಮತ್ತು ಅಮರ. ನೀನು ಏನೇ ಮಾಡಿದರೂ ದೇವರು ಅನುಗ್ರಹಿಸದಿದ್ದರೆ ಎಲ್ಲವೂ ವ್ಯರ್ಥ. ದುಃಖ, ಸಂತೋಷ, ಯಶಸ್ಸು ಮತ್ತು ವೈಫಲ್ಯ ಎಲ್ಲವೂ ದೇವರ ಇಚ್ಛೆ. ಬೇರೂರಿರುವ ಇಂತಹ ವಿಚಾರಗಳು ಯಾವ ರೀತಿಯಲ್ಲಿ ಮನುಷ್ಯನ ಸಂಕಲ್ಪ ಮತ್ತು ಸಾಧನೆಗೆ ನ್ಯಾಯ ಸಂದಾಯ ಮಾಡುತ್ತದೆ ಎಂಬುದು ಸಿನ್ಹಾರ ಚಿಂತನೆ. ರಾಷ್ಟ್ರೀಯತೆಯು ಧಾರ್ಮಿಕತೆಯ ಮೇಲೆ ಅವಲಂಬಿತವಾದರೆ ಎಂತಹ ಪ್ರಮಾದಗಳನ್ನು ಮತ್ತು ವೈಫಲ್ಯಗಳನ್ನು ಕಾಣಬೇಕಾಗುತ್ತದೆ ಎಂದು ಎಚ್ಚರಿಸುತ್ತಾರೆ.

ಕಪಿಲ ಪತಂಜಲ ಗೌತಮ ಜಿನರೆಲ್ಲರ ತಾತ್ವಿಕತೆಗಳು ಭಾರತದ ಸಿದ್ಧಾಂತಕ್ಕೆ ಕಾಣ್ಕೆಗಳನ್ನು ನೀಡಿದವು ಎನ್ನುತ್ತಲೇ ವ್ಯಾಸನ ಭಗವದ್ಗೀತೆಯಲ್ಲಿ ಅವೆಲ್ಲವೂ ಹೇಗೆ ನುಸುಳಿದವು ಎಂಬುದು ಒಂದು ಸಸ್ಪೆನ್ಸ್ ಥ್ರಿಲ್ಲರ್.
ಹದಿನೆಂಟು ಅಧ್ಯಾಯಗಳ ಭಗವದ್ಗೀತೆಯಲ್ಲಿ ಹದಿನೈದು ಅಧ್ಯಾಯಗಳೇ ಕಲಬೆರಕೆಯವು ಎಂದರೆ ಮರ್ಮಾಘಾತವಾಗದೇ!

ಮೂಲ ಗೀತ ಮೊದಲನೆಯ ಅಧ್ಯಾಯದ 28ನೇ ಶ್ಲೋಕದಿಂದ ಆರಂಭವಾಗುತ್ತದೆ. ನಂತರ ಮೊದಲ 3 ಅಧ್ಯಾಯಗಳಷ್ಟೇ ಅಸಲಿ ಎನ್ನುತ್ತಾ ಕ್ರಿಶ 800 ರಲ್ಲಿ ಬ್ರಾಹ್ಮಣವಾದವನ್ನು ಮತ್ತು ಅದ್ವೈತ ಸಿದ್ಧಾಂತವನ್ನು ಹೇಗೆ ತರಲಾಯ್ತು ಎಂದು ಕೂಲಂಕುಷವಾಗಿ ವಿವರಿಸುತ್ತಾರೆ.

ಕೊನೆಗೆ ತಿಳಿಯುವುದೇನೆಂದರೆ, ಮೂಲ ಭಗವದ್ಗೀತೆ ಅನೇಕ ಪ್ರಭಾವಗಳನ್ನು, ಬದಲಾವಣೆಗಳನ್ನು ಮತ್ತು ಕಲಬೆರಕೆಗಳನ್ನು ಹೊಂದಿದೆ. ಯೋಗ, ಗೀತೆ ಹಿಂದೂ ಧರ್ಮದ ಅಥವಾ ವೈದಿಕ ಧರ್ಮದ ಕೊಡುಗೆ ಏನಲ್ಲ. ಯೋಗ ದೇಹಕ್ಕೆ ಮತ್ತು ಗೀತೆ ಮನಸ್ಸಿಗೆ ಆರೋಗ್ಯ ಕೊಡುವ ದೃಷ್ಟಿಯನ್ನು ಹೊಂದಿರುವುದರಿಂದ ಪೂರ್ವಾಗ್ರಹಪೀಡಿತರಾಗಿ ತಿರಸ್ಕರಿಸಬಾರದು ಎಂಬುದು. ಒಬ್ಬ ಸತ್ಯಾನ್ವೇಷಿಯು ಪೂರ್ವಾಗ್ರಹಗಳಲ್ಲಿ ಬಂಧಿತನಾದರೆ ಸಂಶೋಧನೆಯಾಗಲಿ, ಅಧ್ಯಯನವಾಗಲಿ ಹೇಗೆ ಸಾಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಹುಜನರಿಗೆ ತಿಳಿದ ವಿಚಾರ. ಇದರಲ್ಲಿ ವಿಶೇಷವಾಗಿ ಏನೂ ಇಲ್ಲ. ಶತಮಾನಗಳಿಂದ ಈ ವಾದ ಇದ್ದದ್ದೇ…‌‌.!!

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...