Homeಮುಖಪುಟಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

- Advertisement -
- Advertisement -

ಪುಟಕ್ಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್

ಭಾರತದಲ್ಲಿ ಭಗವದ್ಗೀತೆ ಮತ್ತು ಯೋಗವನ್ನು ಪರ ವಿರೋಧಗಳ ನೆಲೆಗಟ್ಟುಗಳಿಂದಲ್ಲದೇ ಮರು ಸಂಶೋಧನೆ ಮಾಡಿದ ವಿದ್ವಾಂಸ ಫುಲ್ಗೇಂದ ಸಿನ್ಹಾ. ಅವರು ಅಮೆರಿಕೆಯಲ್ಲಿ ಸ್ವಯಂ ಯೋಗಾಚಾರ್ಯ ರಾಗಿದ್ದ ಕಾರಣದಿಂದ ಯೋಗದ ಮೂಲವನ್ನು ಹುಡುಕಲು ಹೊರಟ ಅವರು ಅದರ ಜೊತೆಜೊತೆಗೇ ಗೀತೆಯ ಮೂಲವನ್ನೂ ಗುರುತಿಸುವ ಯತ್ನ ಮಾಡಿದರು.

ಇದರಿಂದ ಗೀತಾ- ಯಾಸ್ ಇಟ್ ವಾಸ್ ಎಂಬ ಮಹತ್ವಪೂರ್ಣ ಕೃತಿಯ ರಚನೆಯಾಯ್ತು. ಗೀತಾ – ಯಾಸ್ ಇಟ್ ಈಸ್ ಎಂಬ ಇಸ್ಕಾನ್ ಸಂಸ್ಥಾಪಕರ ಕೃತಿಯೊಂದಿದೆ. ಈ ಕೃತಿಗಳ ನಡುವಿನ ವ್ಯತ್ಯಾಸವೆಂದರೆ, ಇಸ್ಕಾನ್ ಕೃತಿ ಮಂಪರನ್ನು ತರಿಸುತ್ತದೆ. ಸಿನ್ಹಾರವರ ಸಂಶೋಧನಾ ಕೃತಿ ಮಂಪರನ್ನು ಹರಿಸುತ್ತದೆ.

ಸಿನ್ಹಾರವರ ಈ ಕೃತಿ ಮಹತ್ವದ್ದು ಎನಿಸುವುದಕ್ಕೆ ಕಾರಣಗಳಿವೆ. ಯಾವುದೇ ನೆಲದ ಸಾಂಸ್ಕೃತಿಕ ರೂಢಿಗಳು ಮತ್ತು ಧಾರ್ಮಿಕ ನಂಬುಗೆಗಳು ಸಮಾಜದ ಪ್ರಗತಿಗೆ ಅಥವಾ ಅವನತಿಗೆ ಹೇಗೆ ಕಾರಣವಾಗುತ್ತದೆ ಎಂದು ವಿವರಿಸುತ್ತದೆ. ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಹೇಗೆ ಅಲ್ಲ ಎಂದು ಪ್ರತಿಪಾದಿಸುತ್ತದೆ ಮತ್ತು ಅತಿ ಮುಖ್ಯವಾಗಿ ಮೂಲದಲ್ಲಿ ಇದ್ದಂತಹ ಭಗವದ್ಗೀತೆ ಏನು? ಯಾವ್ಯಾವ ಪ್ರಭಾವಗಳಿಂದ ಮತ್ತು ಯಾವ್ಯಾವ ನುಸುಳುವಿಕೆಗಳಿಂದ ಈಗ ನಾವು ಕಾಣುತ್ತಿರುವ ಭಗವದ್ಗೀತೆಯಾಗಿದೆ ಎಂದು ಆಧಾರಸಹಿತ ವಿವರಿಸುತ್ತಾರೆ.

ಚಿಂತನೆ ಮತ್ತು ಭಾವನೆಗಳ ಪ್ರಭಾವವು ದೇಶದ ಪ್ರಗತಿಗೆ ಹೇಗೆ ಕೆಲಸ ಮಾಡುತ್ತದೆ ಎಂದು ಯೋಚಿಸುತ್ತಾರೆ ಸಿನ್ಹಾ. ಕೆಲವು ದೇಶಗಳಿಗೆ ಸಂಪನ್ಮೂಲಗಳ ಕೊರತೆ ಇದ್ದು, ಎಲ್ಲವೂ ವ್ಯತಿರಿಕ್ತವಾಗಿರುವಂತಹ ವಾತಾವರಣವೇ ಇದ್ದರೂ ಔದ್ಯೋಗಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸುತ್ತಾರೆ. ಆದರೆ, ಭಾರತದಂತಹ ದೇಶವು ಎಲ್ಲವೂ ಇದ್ದು ಹಾಗೆ ಸಾಧಿಸಲಾಗದಿರುವುದಕ್ಕೆ ಕಾರಣ ಏನು ಎಂದು ನೋಡುತ್ತಾ, ಸಿನ್ಹಾ ಗೀತೆಯ ಕಡೆ ನೋಡುತ್ತಾರೆ. ಕೆಲಸ ಮಾಡು ಆದರೆ ಪ್ರತಿಫಲವನ್ನು ಅಪೇಕ್ಷಿಸಬೇಡ. ಬಯಕೆ ದುಃಖಕ್ಕೆ ಕಾರಣ, ಬಯಕೆಯನ್ನು ಹೊಂದಬೇಡ. ವಿಧಿ ಲಿಖಿತದಂತೆ ಎಲ್ಲವೂ ನಡೆಯುತ್ತದೆ. ಪ್ರಾಪಂಚಿಕ ವ್ಯವಹಾರ ನಶ್ವರ, ಆಧ್ಯಾತ್ಮಿಕತೆಯೇ ಉನ್ನತ ಮತ್ತು ಅಮರ. ನೀನು ಏನೇ ಮಾಡಿದರೂ ದೇವರು ಅನುಗ್ರಹಿಸದಿದ್ದರೆ ಎಲ್ಲವೂ ವ್ಯರ್ಥ. ದುಃಖ, ಸಂತೋಷ, ಯಶಸ್ಸು ಮತ್ತು ವೈಫಲ್ಯ ಎಲ್ಲವೂ ದೇವರ ಇಚ್ಛೆ. ಬೇರೂರಿರುವ ಇಂತಹ ವಿಚಾರಗಳು ಯಾವ ರೀತಿಯಲ್ಲಿ ಮನುಷ್ಯನ ಸಂಕಲ್ಪ ಮತ್ತು ಸಾಧನೆಗೆ ನ್ಯಾಯ ಸಂದಾಯ ಮಾಡುತ್ತದೆ ಎಂಬುದು ಸಿನ್ಹಾರ ಚಿಂತನೆ. ರಾಷ್ಟ್ರೀಯತೆಯು ಧಾರ್ಮಿಕತೆಯ ಮೇಲೆ ಅವಲಂಬಿತವಾದರೆ ಎಂತಹ ಪ್ರಮಾದಗಳನ್ನು ಮತ್ತು ವೈಫಲ್ಯಗಳನ್ನು ಕಾಣಬೇಕಾಗುತ್ತದೆ ಎಂದು ಎಚ್ಚರಿಸುತ್ತಾರೆ.

ಕಪಿಲ ಪತಂಜಲ ಗೌತಮ ಜಿನರೆಲ್ಲರ ತಾತ್ವಿಕತೆಗಳು ಭಾರತದ ಸಿದ್ಧಾಂತಕ್ಕೆ ಕಾಣ್ಕೆಗಳನ್ನು ನೀಡಿದವು ಎನ್ನುತ್ತಲೇ ವ್ಯಾಸನ ಭಗವದ್ಗೀತೆಯಲ್ಲಿ ಅವೆಲ್ಲವೂ ಹೇಗೆ ನುಸುಳಿದವು ಎಂಬುದು ಒಂದು ಸಸ್ಪೆನ್ಸ್ ಥ್ರಿಲ್ಲರ್.
ಹದಿನೆಂಟು ಅಧ್ಯಾಯಗಳ ಭಗವದ್ಗೀತೆಯಲ್ಲಿ ಹದಿನೈದು ಅಧ್ಯಾಯಗಳೇ ಕಲಬೆರಕೆಯವು ಎಂದರೆ ಮರ್ಮಾಘಾತವಾಗದೇ!

ಮೂಲ ಗೀತ ಮೊದಲನೆಯ ಅಧ್ಯಾಯದ 28ನೇ ಶ್ಲೋಕದಿಂದ ಆರಂಭವಾಗುತ್ತದೆ. ನಂತರ ಮೊದಲ 3 ಅಧ್ಯಾಯಗಳಷ್ಟೇ ಅಸಲಿ ಎನ್ನುತ್ತಾ ಕ್ರಿಶ 800 ರಲ್ಲಿ ಬ್ರಾಹ್ಮಣವಾದವನ್ನು ಮತ್ತು ಅದ್ವೈತ ಸಿದ್ಧಾಂತವನ್ನು ಹೇಗೆ ತರಲಾಯ್ತು ಎಂದು ಕೂಲಂಕುಷವಾಗಿ ವಿವರಿಸುತ್ತಾರೆ.

ಕೊನೆಗೆ ತಿಳಿಯುವುದೇನೆಂದರೆ, ಮೂಲ ಭಗವದ್ಗೀತೆ ಅನೇಕ ಪ್ರಭಾವಗಳನ್ನು, ಬದಲಾವಣೆಗಳನ್ನು ಮತ್ತು ಕಲಬೆರಕೆಗಳನ್ನು ಹೊಂದಿದೆ. ಯೋಗ, ಗೀತೆ ಹಿಂದೂ ಧರ್ಮದ ಅಥವಾ ವೈದಿಕ ಧರ್ಮದ ಕೊಡುಗೆ ಏನಲ್ಲ. ಯೋಗ ದೇಹಕ್ಕೆ ಮತ್ತು ಗೀತೆ ಮನಸ್ಸಿಗೆ ಆರೋಗ್ಯ ಕೊಡುವ ದೃಷ್ಟಿಯನ್ನು ಹೊಂದಿರುವುದರಿಂದ ಪೂರ್ವಾಗ್ರಹಪೀಡಿತರಾಗಿ ತಿರಸ್ಕರಿಸಬಾರದು ಎಂಬುದು. ಒಬ್ಬ ಸತ್ಯಾನ್ವೇಷಿಯು ಪೂರ್ವಾಗ್ರಹಗಳಲ್ಲಿ ಬಂಧಿತನಾದರೆ ಸಂಶೋಧನೆಯಾಗಲಿ, ಅಧ್ಯಯನವಾಗಲಿ ಹೇಗೆ ಸಾಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಹುಜನರಿಗೆ ತಿಳಿದ ವಿಚಾರ. ಇದರಲ್ಲಿ ವಿಶೇಷವಾಗಿ ಏನೂ ಇಲ್ಲ. ಶತಮಾನಗಳಿಂದ ಈ ವಾದ ಇದ್ದದ್ದೇ…‌‌.!!

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...