Homeಮುಖಪುಟಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಅಲ್ಲ -ಫುಲ್ಗೇಂದ ಸಿನ್ಹಾ

- Advertisement -
- Advertisement -

ಪುಟಕ್ಕಿಟ್ಟ ಪುಟಗಳು : ಯೋಗೇಶ್ ಮಾಸ್ಟರ್

ಭಾರತದಲ್ಲಿ ಭಗವದ್ಗೀತೆ ಮತ್ತು ಯೋಗವನ್ನು ಪರ ವಿರೋಧಗಳ ನೆಲೆಗಟ್ಟುಗಳಿಂದಲ್ಲದೇ ಮರು ಸಂಶೋಧನೆ ಮಾಡಿದ ವಿದ್ವಾಂಸ ಫುಲ್ಗೇಂದ ಸಿನ್ಹಾ. ಅವರು ಅಮೆರಿಕೆಯಲ್ಲಿ ಸ್ವಯಂ ಯೋಗಾಚಾರ್ಯ ರಾಗಿದ್ದ ಕಾರಣದಿಂದ ಯೋಗದ ಮೂಲವನ್ನು ಹುಡುಕಲು ಹೊರಟ ಅವರು ಅದರ ಜೊತೆಜೊತೆಗೇ ಗೀತೆಯ ಮೂಲವನ್ನೂ ಗುರುತಿಸುವ ಯತ್ನ ಮಾಡಿದರು.

ಇದರಿಂದ ಗೀತಾ- ಯಾಸ್ ಇಟ್ ವಾಸ್ ಎಂಬ ಮಹತ್ವಪೂರ್ಣ ಕೃತಿಯ ರಚನೆಯಾಯ್ತು. ಗೀತಾ – ಯಾಸ್ ಇಟ್ ಈಸ್ ಎಂಬ ಇಸ್ಕಾನ್ ಸಂಸ್ಥಾಪಕರ ಕೃತಿಯೊಂದಿದೆ. ಈ ಕೃತಿಗಳ ನಡುವಿನ ವ್ಯತ್ಯಾಸವೆಂದರೆ, ಇಸ್ಕಾನ್ ಕೃತಿ ಮಂಪರನ್ನು ತರಿಸುತ್ತದೆ. ಸಿನ್ಹಾರವರ ಸಂಶೋಧನಾ ಕೃತಿ ಮಂಪರನ್ನು ಹರಿಸುತ್ತದೆ.

ಸಿನ್ಹಾರವರ ಈ ಕೃತಿ ಮಹತ್ವದ್ದು ಎನಿಸುವುದಕ್ಕೆ ಕಾರಣಗಳಿವೆ. ಯಾವುದೇ ನೆಲದ ಸಾಂಸ್ಕೃತಿಕ ರೂಢಿಗಳು ಮತ್ತು ಧಾರ್ಮಿಕ ನಂಬುಗೆಗಳು ಸಮಾಜದ ಪ್ರಗತಿಗೆ ಅಥವಾ ಅವನತಿಗೆ ಹೇಗೆ ಕಾರಣವಾಗುತ್ತದೆ ಎಂದು ವಿವರಿಸುತ್ತದೆ. ಯೋಗವಾಗಲಿ, ಭಗವದ್ಗೀತೆಯಾಗಲಿ ವೈದಿಕರ ಅಥವಾ ಹಿಂದೂಗಳ ಕೊಡುಗೆ ಹೇಗೆ ಅಲ್ಲ ಎಂದು ಪ್ರತಿಪಾದಿಸುತ್ತದೆ ಮತ್ತು ಅತಿ ಮುಖ್ಯವಾಗಿ ಮೂಲದಲ್ಲಿ ಇದ್ದಂತಹ ಭಗವದ್ಗೀತೆ ಏನು? ಯಾವ್ಯಾವ ಪ್ರಭಾವಗಳಿಂದ ಮತ್ತು ಯಾವ್ಯಾವ ನುಸುಳುವಿಕೆಗಳಿಂದ ಈಗ ನಾವು ಕಾಣುತ್ತಿರುವ ಭಗವದ್ಗೀತೆಯಾಗಿದೆ ಎಂದು ಆಧಾರಸಹಿತ ವಿವರಿಸುತ್ತಾರೆ.

ಚಿಂತನೆ ಮತ್ತು ಭಾವನೆಗಳ ಪ್ರಭಾವವು ದೇಶದ ಪ್ರಗತಿಗೆ ಹೇಗೆ ಕೆಲಸ ಮಾಡುತ್ತದೆ ಎಂದು ಯೋಚಿಸುತ್ತಾರೆ ಸಿನ್ಹಾ. ಕೆಲವು ದೇಶಗಳಿಗೆ ಸಂಪನ್ಮೂಲಗಳ ಕೊರತೆ ಇದ್ದು, ಎಲ್ಲವೂ ವ್ಯತಿರಿಕ್ತವಾಗಿರುವಂತಹ ವಾತಾವರಣವೇ ಇದ್ದರೂ ಔದ್ಯೋಗಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸುತ್ತಾರೆ. ಆದರೆ, ಭಾರತದಂತಹ ದೇಶವು ಎಲ್ಲವೂ ಇದ್ದು ಹಾಗೆ ಸಾಧಿಸಲಾಗದಿರುವುದಕ್ಕೆ ಕಾರಣ ಏನು ಎಂದು ನೋಡುತ್ತಾ, ಸಿನ್ಹಾ ಗೀತೆಯ ಕಡೆ ನೋಡುತ್ತಾರೆ. ಕೆಲಸ ಮಾಡು ಆದರೆ ಪ್ರತಿಫಲವನ್ನು ಅಪೇಕ್ಷಿಸಬೇಡ. ಬಯಕೆ ದುಃಖಕ್ಕೆ ಕಾರಣ, ಬಯಕೆಯನ್ನು ಹೊಂದಬೇಡ. ವಿಧಿ ಲಿಖಿತದಂತೆ ಎಲ್ಲವೂ ನಡೆಯುತ್ತದೆ. ಪ್ರಾಪಂಚಿಕ ವ್ಯವಹಾರ ನಶ್ವರ, ಆಧ್ಯಾತ್ಮಿಕತೆಯೇ ಉನ್ನತ ಮತ್ತು ಅಮರ. ನೀನು ಏನೇ ಮಾಡಿದರೂ ದೇವರು ಅನುಗ್ರಹಿಸದಿದ್ದರೆ ಎಲ್ಲವೂ ವ್ಯರ್ಥ. ದುಃಖ, ಸಂತೋಷ, ಯಶಸ್ಸು ಮತ್ತು ವೈಫಲ್ಯ ಎಲ್ಲವೂ ದೇವರ ಇಚ್ಛೆ. ಬೇರೂರಿರುವ ಇಂತಹ ವಿಚಾರಗಳು ಯಾವ ರೀತಿಯಲ್ಲಿ ಮನುಷ್ಯನ ಸಂಕಲ್ಪ ಮತ್ತು ಸಾಧನೆಗೆ ನ್ಯಾಯ ಸಂದಾಯ ಮಾಡುತ್ತದೆ ಎಂಬುದು ಸಿನ್ಹಾರ ಚಿಂತನೆ. ರಾಷ್ಟ್ರೀಯತೆಯು ಧಾರ್ಮಿಕತೆಯ ಮೇಲೆ ಅವಲಂಬಿತವಾದರೆ ಎಂತಹ ಪ್ರಮಾದಗಳನ್ನು ಮತ್ತು ವೈಫಲ್ಯಗಳನ್ನು ಕಾಣಬೇಕಾಗುತ್ತದೆ ಎಂದು ಎಚ್ಚರಿಸುತ್ತಾರೆ.

ಕಪಿಲ ಪತಂಜಲ ಗೌತಮ ಜಿನರೆಲ್ಲರ ತಾತ್ವಿಕತೆಗಳು ಭಾರತದ ಸಿದ್ಧಾಂತಕ್ಕೆ ಕಾಣ್ಕೆಗಳನ್ನು ನೀಡಿದವು ಎನ್ನುತ್ತಲೇ ವ್ಯಾಸನ ಭಗವದ್ಗೀತೆಯಲ್ಲಿ ಅವೆಲ್ಲವೂ ಹೇಗೆ ನುಸುಳಿದವು ಎಂಬುದು ಒಂದು ಸಸ್ಪೆನ್ಸ್ ಥ್ರಿಲ್ಲರ್.
ಹದಿನೆಂಟು ಅಧ್ಯಾಯಗಳ ಭಗವದ್ಗೀತೆಯಲ್ಲಿ ಹದಿನೈದು ಅಧ್ಯಾಯಗಳೇ ಕಲಬೆರಕೆಯವು ಎಂದರೆ ಮರ್ಮಾಘಾತವಾಗದೇ!

ಮೂಲ ಗೀತ ಮೊದಲನೆಯ ಅಧ್ಯಾಯದ 28ನೇ ಶ್ಲೋಕದಿಂದ ಆರಂಭವಾಗುತ್ತದೆ. ನಂತರ ಮೊದಲ 3 ಅಧ್ಯಾಯಗಳಷ್ಟೇ ಅಸಲಿ ಎನ್ನುತ್ತಾ ಕ್ರಿಶ 800 ರಲ್ಲಿ ಬ್ರಾಹ್ಮಣವಾದವನ್ನು ಮತ್ತು ಅದ್ವೈತ ಸಿದ್ಧಾಂತವನ್ನು ಹೇಗೆ ತರಲಾಯ್ತು ಎಂದು ಕೂಲಂಕುಷವಾಗಿ ವಿವರಿಸುತ್ತಾರೆ.

ಕೊನೆಗೆ ತಿಳಿಯುವುದೇನೆಂದರೆ, ಮೂಲ ಭಗವದ್ಗೀತೆ ಅನೇಕ ಪ್ರಭಾವಗಳನ್ನು, ಬದಲಾವಣೆಗಳನ್ನು ಮತ್ತು ಕಲಬೆರಕೆಗಳನ್ನು ಹೊಂದಿದೆ. ಯೋಗ, ಗೀತೆ ಹಿಂದೂ ಧರ್ಮದ ಅಥವಾ ವೈದಿಕ ಧರ್ಮದ ಕೊಡುಗೆ ಏನಲ್ಲ. ಯೋಗ ದೇಹಕ್ಕೆ ಮತ್ತು ಗೀತೆ ಮನಸ್ಸಿಗೆ ಆರೋಗ್ಯ ಕೊಡುವ ದೃಷ್ಟಿಯನ್ನು ಹೊಂದಿರುವುದರಿಂದ ಪೂರ್ವಾಗ್ರಹಪೀಡಿತರಾಗಿ ತಿರಸ್ಕರಿಸಬಾರದು ಎಂಬುದು. ಒಬ್ಬ ಸತ್ಯಾನ್ವೇಷಿಯು ಪೂರ್ವಾಗ್ರಹಗಳಲ್ಲಿ ಬಂಧಿತನಾದರೆ ಸಂಶೋಧನೆಯಾಗಲಿ, ಅಧ್ಯಯನವಾಗಲಿ ಹೇಗೆ ಸಾಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಹುಜನರಿಗೆ ತಿಳಿದ ವಿಚಾರ. ಇದರಲ್ಲಿ ವಿಶೇಷವಾಗಿ ಏನೂ ಇಲ್ಲ. ಶತಮಾನಗಳಿಂದ ಈ ವಾದ ಇದ್ದದ್ದೇ…‌‌.!!

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...