Homeಕರ್ನಾಟಕಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

- Advertisement -
- Advertisement -

ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ. ಏನೇ ಕಾರಣ ನೀಡಿದರೂ ವಿದ್ಯಾರ್ಥಿನಿಯರ ಕಲಿಯುವ ಹಕ್ಕನ್ನು ಕಸಿಯಲು ಸಾಧ್ಯವಿಲ್ಲ. ಅಮಾಯಕ ವಿದ್ಯಾರ್ಥಿಗಳನ್ನು ಕೋಮು ರಾಜಕಾರಣಕ್ಕೆ ದುರ್ಬಳಕೆ ಮಾಡುವುದನ್ನು ಬಿಜೆಪಿ ಸರ್ಕಾರ ಕೈಬಿಡಬೇಕು. ಕಠಿಣ ನಿರ್ದೇಶನಗಳನ್ನು ನೀಡಿ ಕೂಡಲೇ ಕಾಲೇಜುಗಳಲ್ಲಿ ಶಾಂತಿ-ಸುವ್ಯವಸ್ಥೆ ಮರುಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ಜನಶಕ್ತಿ, “ಕಳೆದ ಕೆಲವು ದಿನಗಳು ಕರ್ನಾಟಕದ ಪ್ರಜ್ಞಾವಂತರನ್ನು ತೀವ್ರವಾದ ಆತಂಕಕ್ಕೆ ದೂಡಿವೆ. ಕ್ಷುಲ್ಲಕ ನೆಪವೊಡ್ಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಗೇಟುಗಳನ್ನು ಮುಚ್ಚುತ್ತಿರುವುದು, ಶಾಲಾ-ಕಾಲೇಜುಗಳಲ್ಲಿ ಎಳೆವಯಸ್ಸಿನ ವಿದ್ಯಾರ್ಥಿಗಳನ್ನು ರಾಜಕಾರಣದ ಕೆಸರಿನೊಳಕ್ಕೆ ಎಳೆದು ತರುತ್ತಿರುವುದು ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದು ಸಮವಸ್ತ್ರದ ಸುತ್ತಲಿನ ಸಮಸ್ಯೆಯೆಂಬಂತೆ ಬಿಂಬಿಸಲಾಗುತ್ತಿದ್ದರೂ, ಇದರ ಹಿಂದೆ ಸಂಘಪರಿವಾರದ ಕೋಮುವಾದಿ ರಾಜಕಾರಣ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿ ಗೋಚರಿಸುತ್ತಿದೆ” ಎಂದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

“ಇದ್ಯಾವುದೂ ಆಕಸ್ಮಿಕವಾಗಿ ಸಂಭವಿಸುತ್ತಿರುವುದೆಂದು ಅಥವಾ ವಿದ್ಯಾರ್ಥಿಗಳು ತಮ್ಮಂತೆ ತಾವೇ ಇಂತಹ ಗದ್ದಲಕ್ಕಿಳಿದಿದ್ದಾರೆಂದು ನಂಬಲು ಸಾಧ್ಯವಿಲ್ಲ. ನಿನ್ನೆ ಮೊನ್ನೆಯಯವರೆಗೆ ವಿದ್ಯಾರ್ಥಿನಿಯರು ಹಿಜಾಬ್ ಅಥವಾ ಬುರ್ಖಾ ಧರಿಸಿ ಬಂದಾಗ ಯಾವುದೇ ಅವಘಡಗಳೂ ನಡೆದಿರಲಿಲ್ಲ. ಧಿಡೀರನೆ ಕೆಲವು ದಿನಗಳೊಳಗಾಗಿ ವಿದ್ಯಾರ್ಥಿಗಳು ಆಕ್ರೋಶಗೊಳ್ಳುವುದು ಸಹಜವಾದ ಬೆಳವಣಿಗೆಯಲ್ಲ. ಇದರ ಹಿಂದೆ ಸರ್ಕಾರದ ಮತ್ತು ಸಂಘಪರಿವಾರದ ನೇರ ಕೈವಾಡ ಇದೆಯೆಂಬ ಬಗ್ಗೆ ಯಾವುದೇ ಅನುಮಾನಕ್ಕೆ ಆಸ್ಪದವಿಲ್ಲ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಇದು ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮತ್ತು ಹಾಗೆಯೇ ಧರ್ಮಾಧಾರಿತವಾದ ದೃವೀಕರಣವನ್ನು ಉಂಟುಮಾಡಿ ಮುಂಬರುವ ಚುನಾವಣೆಗಳಲ್ಲಿ ಲಾಭ ಪಡೆದುಕೊಳ್ಳುವ ಕೀಳುಮಟ್ಟದ ತಂತ್ರಗಾರಿಕೆ. ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಕಾಲೇಜುಗಳಲ್ಲಿ ಬೆಂಕಿ ಹೊತ್ತಿಸುತ್ತಿದೆ. ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಅದಕ್ಕೆ ಎಣ್ಣೆ ಸುರಿಯುತ್ತಿದೆ. ‘ಶಾಲಾ ಕಾಲೇಜುಗಳ ಮೇಲುಸ್ತುವಾರಿ ಸಮಿತಿಗಳು ಹಾಗೂ ಪೋಷಕ-ಶಿಕ್ಷಕ ಸಮಿತಿಗಳು ನಿರ್ಧರಿಸಿದಲ್ಲಿ ಅದಕ್ಕೆ ತಕ್ಕಂತೆ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕಾಗಿರುತ್ತದೆ’ ಎಂಬಂತಹ ಸುತ್ತೋಲೆಯನ್ನು ಹೊರಡಿಸಿ, ಅದರಲ್ಲಿ ತನಗೇನೂ ಪಾತ್ರ ಇಲ್ಲ ಎಂಬಂತೆ ಸರ್ಕಾರ ನಡೆದುಕೊಳ್ಳುತ್ತಿದೆ.

ಸಂಘಪರಿವಾರದ ಕಾಲಾಳುಗಳನ್ನು ಮೇಲುಸ್ತುವಾರಿ ಸಮಿತಿಗಳಲ್ಲಿ ತೂರಿಸಿ, ಅವರುಗಳ ಮೂಲಕ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಹಿಜಾಬ್ ಧರಿಸದಂತೆ ಆದೇಶ ಮಾಡಿಸಿ, ಅದಕ್ಕೆ ಬರುವ ವಿರೋಧವನ್ನು ಬಳಸಿಕೊಂಡು ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಹಾಗೂ ಜನರ ಗಮನವನ್ನು ದಿಕ್ಕುತಪ್ಪಿಸುವ ನೀಚ ಷಡ್ಯಂತ್ರ ರಾಜ್ಯದಲ್ಲಿ ನಡೆಯುತ್ತಿದೆ” ಎಂದು ಕರ್ನಾಟಕ ಜನಶಕ್ತಿ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

“ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನೂ ಸೇರಿಸಿದೆ ಮತ್ತು ಅದರ ಪ್ರಕಾರ ಅಲ್ಪಸಂಖ್ಯಾತ ಸಮುದಾಯಗಳಿಗೆ ತಮ್ಮ ಧಾರ್ಮಿಕ ಅಸ್ಮಿತೆಗಳೊಂದಿಗೆ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದರಲ್ಲಿ ಶಾಲಾ-ಕಾಲೇಜುಗಳ ಸಮವಸ್ತ್ರಗಳಿಗೆ ಸಂಬಂಧಿಸಿದ ನಿರ್ದಿಷ್ಟ ಸೂಚನೆಗಳಿರುವುದಿಲ್ಲವಾದ್ದರಿಂದ ಅದು ಆಯಾ ಸರ್ಕಾರಗಳ ಅಥವಾ ನ್ಯಾಯಾಲಯಗಳ ವಿವೇಚನೆಗೆ ತಕ್ಕಂತೆ ಬೇರೆ ಬೇರೆ ರೀತಿಗಳಲ್ಲಿ ವ್ಯಾಖ್ಯಾನಗೊಂಡಿದೆ. ಇಡೀ ಭಾರತದಲ್ಲಿ ಒಟ್ಟಾರೆಯಾಗಿ ನೋಡುವುದಾದರೆ, ವಿದ್ಯಾರ್ಥಿಗಳು ಸಮವಸ್ತ್ರದ ಜೊತೆಗೆ ತಮ್ಮ ಪಗಡಿ, ರುಮಾಲು, ತಲೆವಸ್ತ್ರ, ದುಪಟ್ಟಾ, ಕುಂಕುಮ, ಬೊಟ್ಟು, ಟೋಪಿ ಮುಂತಾದ ತಮ್ಮ ಸಾಂಸ್ಕೃತಿಕ-ಧಾರ್ಮಿಕ ಗುರುತುಗಳನ್ನು ಬಳಸುವುದು ಯಾವಾಗಿನಿಂದಲೂ ಚಾಲ್ತಿಯಲ್ಲಿದೆ.

ಹಿಂದೂಗಳನ್ನೂ ಒಳಗೊಂಡಂತೆ ಎಲ್ಲಾ ಧರ್ಮದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಅಸ್ಮಿತೆಯ ಭಾಗವಾಗಿ ಇದನ್ನು ಬಳಸುವುದಿದೆ. ಕಳೆದ ಕೆಲವು ವರ್ಷಗಳ ತನಕ ಈ ವಿಚಾರದಲ್ಲಿ ಎಲ್ಲೂ ಗೊಂದಲ, ಗಲಭೆ ಉಂಟಾದ ಉದಾಹರಣೆಗಳಿಲ್ಲ. ವಿದ್ಯಾರ್ಥಿಗಳ ನಡುವೆಯಂತೂ ಇದು ಎಂದೂ ವಿವಾದದ ವಿಚಾರವಾಗಿರಲಿಲ್ಲ. ಆದರೆ ಕೇಂದ್ರದಲ್ಲಿ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಅಸ್ತಿತ್ವಕ್ಕೆ ಬಂದಂತೆಲ್ಲ ಇಂತಹ ಸೂಕ್ಷ್ಮ ವಿಚಾರಗಳು ಅಶಾಂತಿಯ ಕಾರಣಗಳಾಗುತ್ತಿವೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಇಡೀ ಗದ್ದಲದಲ್ಲಿ ವಿದ್ಯಾರ್ಥಿಗಳ, ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳುತ್ತಿದೆಯೆಂಬುದನ್ನು ಗಮನಿಸಬೇಕು. ಒಂದೆಡೆ, ಸಾಚಾರ್ ವರದಿ ಸ್ಪಷ್ಟವಾಗಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸ್ಥಿತಿಗತಿ ಎಷ್ಟು ಶೋಚನೀಯವಾಗಿದೆಯೆಂಬುದನ್ನು ಎತ್ತಿತೋರಿಸಿರುವಾಗ, ಆ ಸಮುದಾಯದ ಹೆಣ್ಣುಮಕ್ಕಳು ಹೇಗೋ ಮಾಡಿ ಕಾಲೇಜಿನ ಮೆಟ್ಟಿಲು ಹತ್ತುತ್ತಿರುವುದನ್ನು ಸ್ವಾಗತಿಸಬೇಕೇ ಹೊರತು ಅವರನ್ನು ಧಾರ್ಮಿಕ ಆಚರಣೆಗಳ ಕಾರಣ ಮುಂದಿಟ್ಟು ಕಾಲೇಜುಗಳ ಗೇಟುಗಳ ಹೊರಗೆ ನಿಲ್ಲಿಸುವುದಲ್ಲ. ಅದೇ ರೀತಿಯಿಂದ ಆ ಹೆಣ್ಣುಮಕ್ಕಳು ಮಾತ್ರವಲ್ಲದೆ ಇಡೀ ವಿದ್ಯಾರ್ಥಿ ಸಮುದಾಯದ ಮೇಲೆ ಅನಿಶ್ಚಿತತೆಯ ಕತ್ತಿ ತೂಗುತ್ತಿದೆ. ಶಾಲಾಕಾಲೇಜುಗಳ ಶೈಕ್ಷಣಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಕೋವಿಡ್‌ನ ಕಾರಣದಿಂದ ಅಪಾರ ಏರುಪೇರುಗಳನ್ನು ಕಂಡಿದ್ದ ಶಿಕ್ಷಣ ವ್ಯವಸ್ಥೆಯು ನಿಧಾನವಾಗಿ ಒಂದಿಷ್ಟು ಚೇತರಿಸಿ ಕೊಳ್ಳುತ್ತಿರುವಂತೆಯೇ ಆರಂಭಿಸಲಾಗಿರುವ ಈ ಗದ್ದಲದಿಂದ ದೂರಗಾಮಿ ದುಷ್ಪರಿಣಾಮಗಳು ಉಂಟಾಗಲಿವೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: ಶಾಲೆ ತೆರೆಯಲು ಹೈಕೋರ್ಟ್ ಮೌಖಿಕ ಆದೇಶ; ಹಿಜಾಬ್‌‌, ಕೇಸರಿ ವಿಚಾರಣೆ ಮುಂದೂಡಿಕೆ

“ದುಬಾರಿ ಫೀಸು ಮತ್ತು ಡೋನೆಷನ್ ಹಾವಳಿ ಬಡ ವಿದ್ಯಾರ್ಥಿಗಳನ್ನು ಹಿಂಡುತ್ತಿದೆ ಮತ್ತು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಹಾಗೆಯೇ ಕಾಲೇಜು ಶಿಕ್ಷಣ ಮುಗಿಸುವ ವಿದ್ಯಾರ್ಥಿಗಳಿಗೆ ತಕ್ಕನಾದ ಸಾಕಷ್ಟು ಉದ್ಯೋಗಾವಕಾಶಗಳಿಲ್ಲದೆ, ಅಭದ್ರ ಉದ್ಯೋಗಗಳಲ್ಲಿ ನಮ್ಮ ಯುವಜನರು ನಲುಗುತ್ತಿದ್ದಾರೆ. ವಸ್ತುಸ್ಥಿತಿ ಹೀಗಿರುವಾಗ, ಯುವಜನರ ಈ ಮೂಲ ಸಮಸ್ಯೆಗಳನ್ನು ಸರ್ಕಾರ ಹಿಜಾಬ್ ಹಿಂದೆ ಮರೆಮಾಚಲು ಹೊರಟಿದೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಪುರುಷಾಧಿಪತ್ಯದ ಪ್ರಶ್ನೆಯನ್ನು ಶಿಕ್ಷಣದ ಹಕ್ಕಿಗೆ ಎದರುಬದರು ನಿಲ್ಲಿಸಬಾರದು. ಎಲ್ಲಾ ಧರ್ಮಗಳಲ್ಲೂ ವಿವಿಧ ಬಗೆಯಲ್ಲಿ ಗಂಡು ಹೆಣ್ಣಿನ ತಾರತಮ್ಯ ಮತ್ತು ಮಹಿಳೆಯರ ಮೇಲಿನ ಕಟ್ಟುಪಾಡುಗಳು ಮುಂದುವರಿಯುತ್ತಿವೆ. ಆದರೆ ಅದರ ಚರ್ಚೆಯನ್ನು ಮಾಡುವ ಸಮಯ ಇದಲ್ಲ. ಹಿಜಾಬ್ ಹಾಕದೆ ಕಾಲೇಜಿಗೆ ಹೆಣ್ಣುಮಕ್ಕಳು ಹೋಗಬಾರದು ಎಂದು ಮೂಲಭೂತವಾದಿಗಳು ಫತ್ವಾ ಹೊರಡಿಸುವುದನ್ನು ನಾವು ಖಂಡಿಸುತ್ತೇವೆ. ಹಾಗೆಯೇ ಹಿಜಾಬ್ ಹಾಕಿದ ಕಾರಣಕ್ಕೆ ಕಾಲೇಜಿಗೆ ಬರಬಾರದು ಎಂದು ಕೋಮುವಾದಿಗಳು ಆಜ್ಞೆ ನೀಡಿದರೆ ಅದನ್ನೂ ನಾವು ತೀವ್ರವಾಗಿ ವಿರೋಧಿಸುತ್ತೇವೆ” ಎಂದು ಅದು ಹೇಳಿದೆ.

“ಈಗ ಇಲ್ಲಿ ನಡೆಯುತ್ತಿರುವುದು ಕೋಮುವಾದಿ ರಾಜಕಾರಣವಾಗಿರುವುದರಿಂದ ಅದನ್ನು ನಾಗರೀಕರೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕು ಮತ್ತು ವಿದ್ಯಾರ್ಥಿನಿಯರ ಕಲಿಕೆಯ ಹಕ್ಕಿನ ಜೊತೆ ನಿಲ್ಲಬೇಕು. ತನ್ನ ಸೋಲುಗಳಿಂದ ಆಕ್ರೋಶಗೊಂಡಿರುವ ಜನಸಾಮಾನ್ಯರನ್ನು ದಿಕ್ಕುತಪ್ಪಿಸಲು ಕಾಲೇಜುಗಳಲ್ಲಿ ಬೆಂಕಿ ಹಚ್ಚುತ್ತಿರುವ ಬಿಜೆಪಿಯ ನೀಚ ತಂತ್ರಗಾರಿಕೆಯನ್ನು ಶಾಂತಿ-ಸಹಬಾಳ್ವೆಯ ತತ್ವದಲ್ಲಿ ನಂಬಿಕೆ ಇರುವ ಈ ನಾಡಿನ ಜನಸಾಮಾನ್ಯರು ಒಗ್ಗೂಡಿ ಸೋಲಿಸಬೇಕು” ಎಂದು ಕರ್ನಾಟಕ ಜನಶಕ್ತಿ ರಾಜ್ಯದ ಜನತೆಗೆ ಕರೆಕೊಟ್ಟಿದೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...