Homeಕರ್ನಾಟಕಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

- Advertisement -
- Advertisement -

ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ. ಏನೇ ಕಾರಣ ನೀಡಿದರೂ ವಿದ್ಯಾರ್ಥಿನಿಯರ ಕಲಿಯುವ ಹಕ್ಕನ್ನು ಕಸಿಯಲು ಸಾಧ್ಯವಿಲ್ಲ. ಅಮಾಯಕ ವಿದ್ಯಾರ್ಥಿಗಳನ್ನು ಕೋಮು ರಾಜಕಾರಣಕ್ಕೆ ದುರ್ಬಳಕೆ ಮಾಡುವುದನ್ನು ಬಿಜೆಪಿ ಸರ್ಕಾರ ಕೈಬಿಡಬೇಕು. ಕಠಿಣ ನಿರ್ದೇಶನಗಳನ್ನು ನೀಡಿ ಕೂಡಲೇ ಕಾಲೇಜುಗಳಲ್ಲಿ ಶಾಂತಿ-ಸುವ್ಯವಸ್ಥೆ ಮರುಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ಜನಶಕ್ತಿ, “ಕಳೆದ ಕೆಲವು ದಿನಗಳು ಕರ್ನಾಟಕದ ಪ್ರಜ್ಞಾವಂತರನ್ನು ತೀವ್ರವಾದ ಆತಂಕಕ್ಕೆ ದೂಡಿವೆ. ಕ್ಷುಲ್ಲಕ ನೆಪವೊಡ್ಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಗೇಟುಗಳನ್ನು ಮುಚ್ಚುತ್ತಿರುವುದು, ಶಾಲಾ-ಕಾಲೇಜುಗಳಲ್ಲಿ ಎಳೆವಯಸ್ಸಿನ ವಿದ್ಯಾರ್ಥಿಗಳನ್ನು ರಾಜಕಾರಣದ ಕೆಸರಿನೊಳಕ್ಕೆ ಎಳೆದು ತರುತ್ತಿರುವುದು ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದು ಸಮವಸ್ತ್ರದ ಸುತ್ತಲಿನ ಸಮಸ್ಯೆಯೆಂಬಂತೆ ಬಿಂಬಿಸಲಾಗುತ್ತಿದ್ದರೂ, ಇದರ ಹಿಂದೆ ಸಂಘಪರಿವಾರದ ಕೋಮುವಾದಿ ರಾಜಕಾರಣ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿ ಗೋಚರಿಸುತ್ತಿದೆ” ಎಂದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

“ಇದ್ಯಾವುದೂ ಆಕಸ್ಮಿಕವಾಗಿ ಸಂಭವಿಸುತ್ತಿರುವುದೆಂದು ಅಥವಾ ವಿದ್ಯಾರ್ಥಿಗಳು ತಮ್ಮಂತೆ ತಾವೇ ಇಂತಹ ಗದ್ದಲಕ್ಕಿಳಿದಿದ್ದಾರೆಂದು ನಂಬಲು ಸಾಧ್ಯವಿಲ್ಲ. ನಿನ್ನೆ ಮೊನ್ನೆಯಯವರೆಗೆ ವಿದ್ಯಾರ್ಥಿನಿಯರು ಹಿಜಾಬ್ ಅಥವಾ ಬುರ್ಖಾ ಧರಿಸಿ ಬಂದಾಗ ಯಾವುದೇ ಅವಘಡಗಳೂ ನಡೆದಿರಲಿಲ್ಲ. ಧಿಡೀರನೆ ಕೆಲವು ದಿನಗಳೊಳಗಾಗಿ ವಿದ್ಯಾರ್ಥಿಗಳು ಆಕ್ರೋಶಗೊಳ್ಳುವುದು ಸಹಜವಾದ ಬೆಳವಣಿಗೆಯಲ್ಲ. ಇದರ ಹಿಂದೆ ಸರ್ಕಾರದ ಮತ್ತು ಸಂಘಪರಿವಾರದ ನೇರ ಕೈವಾಡ ಇದೆಯೆಂಬ ಬಗ್ಗೆ ಯಾವುದೇ ಅನುಮಾನಕ್ಕೆ ಆಸ್ಪದವಿಲ್ಲ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಇದು ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮತ್ತು ಹಾಗೆಯೇ ಧರ್ಮಾಧಾರಿತವಾದ ದೃವೀಕರಣವನ್ನು ಉಂಟುಮಾಡಿ ಮುಂಬರುವ ಚುನಾವಣೆಗಳಲ್ಲಿ ಲಾಭ ಪಡೆದುಕೊಳ್ಳುವ ಕೀಳುಮಟ್ಟದ ತಂತ್ರಗಾರಿಕೆ. ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಕಾಲೇಜುಗಳಲ್ಲಿ ಬೆಂಕಿ ಹೊತ್ತಿಸುತ್ತಿದೆ. ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಅದಕ್ಕೆ ಎಣ್ಣೆ ಸುರಿಯುತ್ತಿದೆ. ‘ಶಾಲಾ ಕಾಲೇಜುಗಳ ಮೇಲುಸ್ತುವಾರಿ ಸಮಿತಿಗಳು ಹಾಗೂ ಪೋಷಕ-ಶಿಕ್ಷಕ ಸಮಿತಿಗಳು ನಿರ್ಧರಿಸಿದಲ್ಲಿ ಅದಕ್ಕೆ ತಕ್ಕಂತೆ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕಾಗಿರುತ್ತದೆ’ ಎಂಬಂತಹ ಸುತ್ತೋಲೆಯನ್ನು ಹೊರಡಿಸಿ, ಅದರಲ್ಲಿ ತನಗೇನೂ ಪಾತ್ರ ಇಲ್ಲ ಎಂಬಂತೆ ಸರ್ಕಾರ ನಡೆದುಕೊಳ್ಳುತ್ತಿದೆ.

ಸಂಘಪರಿವಾರದ ಕಾಲಾಳುಗಳನ್ನು ಮೇಲುಸ್ತುವಾರಿ ಸಮಿತಿಗಳಲ್ಲಿ ತೂರಿಸಿ, ಅವರುಗಳ ಮೂಲಕ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಹಿಜಾಬ್ ಧರಿಸದಂತೆ ಆದೇಶ ಮಾಡಿಸಿ, ಅದಕ್ಕೆ ಬರುವ ವಿರೋಧವನ್ನು ಬಳಸಿಕೊಂಡು ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಹಾಗೂ ಜನರ ಗಮನವನ್ನು ದಿಕ್ಕುತಪ್ಪಿಸುವ ನೀಚ ಷಡ್ಯಂತ್ರ ರಾಜ್ಯದಲ್ಲಿ ನಡೆಯುತ್ತಿದೆ” ಎಂದು ಕರ್ನಾಟಕ ಜನಶಕ್ತಿ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

“ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನೂ ಸೇರಿಸಿದೆ ಮತ್ತು ಅದರ ಪ್ರಕಾರ ಅಲ್ಪಸಂಖ್ಯಾತ ಸಮುದಾಯಗಳಿಗೆ ತಮ್ಮ ಧಾರ್ಮಿಕ ಅಸ್ಮಿತೆಗಳೊಂದಿಗೆ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದರಲ್ಲಿ ಶಾಲಾ-ಕಾಲೇಜುಗಳ ಸಮವಸ್ತ್ರಗಳಿಗೆ ಸಂಬಂಧಿಸಿದ ನಿರ್ದಿಷ್ಟ ಸೂಚನೆಗಳಿರುವುದಿಲ್ಲವಾದ್ದರಿಂದ ಅದು ಆಯಾ ಸರ್ಕಾರಗಳ ಅಥವಾ ನ್ಯಾಯಾಲಯಗಳ ವಿವೇಚನೆಗೆ ತಕ್ಕಂತೆ ಬೇರೆ ಬೇರೆ ರೀತಿಗಳಲ್ಲಿ ವ್ಯಾಖ್ಯಾನಗೊಂಡಿದೆ. ಇಡೀ ಭಾರತದಲ್ಲಿ ಒಟ್ಟಾರೆಯಾಗಿ ನೋಡುವುದಾದರೆ, ವಿದ್ಯಾರ್ಥಿಗಳು ಸಮವಸ್ತ್ರದ ಜೊತೆಗೆ ತಮ್ಮ ಪಗಡಿ, ರುಮಾಲು, ತಲೆವಸ್ತ್ರ, ದುಪಟ್ಟಾ, ಕುಂಕುಮ, ಬೊಟ್ಟು, ಟೋಪಿ ಮುಂತಾದ ತಮ್ಮ ಸಾಂಸ್ಕೃತಿಕ-ಧಾರ್ಮಿಕ ಗುರುತುಗಳನ್ನು ಬಳಸುವುದು ಯಾವಾಗಿನಿಂದಲೂ ಚಾಲ್ತಿಯಲ್ಲಿದೆ.

ಹಿಂದೂಗಳನ್ನೂ ಒಳಗೊಂಡಂತೆ ಎಲ್ಲಾ ಧರ್ಮದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಅಸ್ಮಿತೆಯ ಭಾಗವಾಗಿ ಇದನ್ನು ಬಳಸುವುದಿದೆ. ಕಳೆದ ಕೆಲವು ವರ್ಷಗಳ ತನಕ ಈ ವಿಚಾರದಲ್ಲಿ ಎಲ್ಲೂ ಗೊಂದಲ, ಗಲಭೆ ಉಂಟಾದ ಉದಾಹರಣೆಗಳಿಲ್ಲ. ವಿದ್ಯಾರ್ಥಿಗಳ ನಡುವೆಯಂತೂ ಇದು ಎಂದೂ ವಿವಾದದ ವಿಚಾರವಾಗಿರಲಿಲ್ಲ. ಆದರೆ ಕೇಂದ್ರದಲ್ಲಿ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಅಸ್ತಿತ್ವಕ್ಕೆ ಬಂದಂತೆಲ್ಲ ಇಂತಹ ಸೂಕ್ಷ್ಮ ವಿಚಾರಗಳು ಅಶಾಂತಿಯ ಕಾರಣಗಳಾಗುತ್ತಿವೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಇಡೀ ಗದ್ದಲದಲ್ಲಿ ವಿದ್ಯಾರ್ಥಿಗಳ, ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳುತ್ತಿದೆಯೆಂಬುದನ್ನು ಗಮನಿಸಬೇಕು. ಒಂದೆಡೆ, ಸಾಚಾರ್ ವರದಿ ಸ್ಪಷ್ಟವಾಗಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸ್ಥಿತಿಗತಿ ಎಷ್ಟು ಶೋಚನೀಯವಾಗಿದೆಯೆಂಬುದನ್ನು ಎತ್ತಿತೋರಿಸಿರುವಾಗ, ಆ ಸಮುದಾಯದ ಹೆಣ್ಣುಮಕ್ಕಳು ಹೇಗೋ ಮಾಡಿ ಕಾಲೇಜಿನ ಮೆಟ್ಟಿಲು ಹತ್ತುತ್ತಿರುವುದನ್ನು ಸ್ವಾಗತಿಸಬೇಕೇ ಹೊರತು ಅವರನ್ನು ಧಾರ್ಮಿಕ ಆಚರಣೆಗಳ ಕಾರಣ ಮುಂದಿಟ್ಟು ಕಾಲೇಜುಗಳ ಗೇಟುಗಳ ಹೊರಗೆ ನಿಲ್ಲಿಸುವುದಲ್ಲ. ಅದೇ ರೀತಿಯಿಂದ ಆ ಹೆಣ್ಣುಮಕ್ಕಳು ಮಾತ್ರವಲ್ಲದೆ ಇಡೀ ವಿದ್ಯಾರ್ಥಿ ಸಮುದಾಯದ ಮೇಲೆ ಅನಿಶ್ಚಿತತೆಯ ಕತ್ತಿ ತೂಗುತ್ತಿದೆ. ಶಾಲಾಕಾಲೇಜುಗಳ ಶೈಕ್ಷಣಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಕೋವಿಡ್‌ನ ಕಾರಣದಿಂದ ಅಪಾರ ಏರುಪೇರುಗಳನ್ನು ಕಂಡಿದ್ದ ಶಿಕ್ಷಣ ವ್ಯವಸ್ಥೆಯು ನಿಧಾನವಾಗಿ ಒಂದಿಷ್ಟು ಚೇತರಿಸಿ ಕೊಳ್ಳುತ್ತಿರುವಂತೆಯೇ ಆರಂಭಿಸಲಾಗಿರುವ ಈ ಗದ್ದಲದಿಂದ ದೂರಗಾಮಿ ದುಷ್ಪರಿಣಾಮಗಳು ಉಂಟಾಗಲಿವೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: ಶಾಲೆ ತೆರೆಯಲು ಹೈಕೋರ್ಟ್ ಮೌಖಿಕ ಆದೇಶ; ಹಿಜಾಬ್‌‌, ಕೇಸರಿ ವಿಚಾರಣೆ ಮುಂದೂಡಿಕೆ

“ದುಬಾರಿ ಫೀಸು ಮತ್ತು ಡೋನೆಷನ್ ಹಾವಳಿ ಬಡ ವಿದ್ಯಾರ್ಥಿಗಳನ್ನು ಹಿಂಡುತ್ತಿದೆ ಮತ್ತು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಹಾಗೆಯೇ ಕಾಲೇಜು ಶಿಕ್ಷಣ ಮುಗಿಸುವ ವಿದ್ಯಾರ್ಥಿಗಳಿಗೆ ತಕ್ಕನಾದ ಸಾಕಷ್ಟು ಉದ್ಯೋಗಾವಕಾಶಗಳಿಲ್ಲದೆ, ಅಭದ್ರ ಉದ್ಯೋಗಗಳಲ್ಲಿ ನಮ್ಮ ಯುವಜನರು ನಲುಗುತ್ತಿದ್ದಾರೆ. ವಸ್ತುಸ್ಥಿತಿ ಹೀಗಿರುವಾಗ, ಯುವಜನರ ಈ ಮೂಲ ಸಮಸ್ಯೆಗಳನ್ನು ಸರ್ಕಾರ ಹಿಜಾಬ್ ಹಿಂದೆ ಮರೆಮಾಚಲು ಹೊರಟಿದೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಪುರುಷಾಧಿಪತ್ಯದ ಪ್ರಶ್ನೆಯನ್ನು ಶಿಕ್ಷಣದ ಹಕ್ಕಿಗೆ ಎದರುಬದರು ನಿಲ್ಲಿಸಬಾರದು. ಎಲ್ಲಾ ಧರ್ಮಗಳಲ್ಲೂ ವಿವಿಧ ಬಗೆಯಲ್ಲಿ ಗಂಡು ಹೆಣ್ಣಿನ ತಾರತಮ್ಯ ಮತ್ತು ಮಹಿಳೆಯರ ಮೇಲಿನ ಕಟ್ಟುಪಾಡುಗಳು ಮುಂದುವರಿಯುತ್ತಿವೆ. ಆದರೆ ಅದರ ಚರ್ಚೆಯನ್ನು ಮಾಡುವ ಸಮಯ ಇದಲ್ಲ. ಹಿಜಾಬ್ ಹಾಕದೆ ಕಾಲೇಜಿಗೆ ಹೆಣ್ಣುಮಕ್ಕಳು ಹೋಗಬಾರದು ಎಂದು ಮೂಲಭೂತವಾದಿಗಳು ಫತ್ವಾ ಹೊರಡಿಸುವುದನ್ನು ನಾವು ಖಂಡಿಸುತ್ತೇವೆ. ಹಾಗೆಯೇ ಹಿಜಾಬ್ ಹಾಕಿದ ಕಾರಣಕ್ಕೆ ಕಾಲೇಜಿಗೆ ಬರಬಾರದು ಎಂದು ಕೋಮುವಾದಿಗಳು ಆಜ್ಞೆ ನೀಡಿದರೆ ಅದನ್ನೂ ನಾವು ತೀವ್ರವಾಗಿ ವಿರೋಧಿಸುತ್ತೇವೆ” ಎಂದು ಅದು ಹೇಳಿದೆ.

“ಈಗ ಇಲ್ಲಿ ನಡೆಯುತ್ತಿರುವುದು ಕೋಮುವಾದಿ ರಾಜಕಾರಣವಾಗಿರುವುದರಿಂದ ಅದನ್ನು ನಾಗರೀಕರೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕು ಮತ್ತು ವಿದ್ಯಾರ್ಥಿನಿಯರ ಕಲಿಕೆಯ ಹಕ್ಕಿನ ಜೊತೆ ನಿಲ್ಲಬೇಕು. ತನ್ನ ಸೋಲುಗಳಿಂದ ಆಕ್ರೋಶಗೊಂಡಿರುವ ಜನಸಾಮಾನ್ಯರನ್ನು ದಿಕ್ಕುತಪ್ಪಿಸಲು ಕಾಲೇಜುಗಳಲ್ಲಿ ಬೆಂಕಿ ಹಚ್ಚುತ್ತಿರುವ ಬಿಜೆಪಿಯ ನೀಚ ತಂತ್ರಗಾರಿಕೆಯನ್ನು ಶಾಂತಿ-ಸಹಬಾಳ್ವೆಯ ತತ್ವದಲ್ಲಿ ನಂಬಿಕೆ ಇರುವ ಈ ನಾಡಿನ ಜನಸಾಮಾನ್ಯರು ಒಗ್ಗೂಡಿ ಸೋಲಿಸಬೇಕು” ಎಂದು ಕರ್ನಾಟಕ ಜನಶಕ್ತಿ ರಾಜ್ಯದ ಜನತೆಗೆ ಕರೆಕೊಟ್ಟಿದೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...